Homeಮುಖಪುಟಚಕ್ಕಾ ಜಾಮ್‌ಗೆ ಬೆಂಬಲ: ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸುತ್ತಿರುವ ದೆಹಲಿ ಪೊಲೀಸರು

ಚಕ್ಕಾ ಜಾಮ್‌ಗೆ ಬೆಂಬಲ: ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸುತ್ತಿರುವ ದೆಹಲಿ ಪೊಲೀಸರು

ಕಾರ್ಮಿಕ ಮುಖಂಡರು ಸಹ ತಮ್ಮ ಪ್ರಜಾತಾಂತ್ರಿಕ ಹೋರಾಟ ನಡೆಸಲು ಬಿಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ 73 ದಿನಗಳಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟಿಸುತ್ತಿರುವ ರೈತರು ಇಂದು ದೇಶಾದ್ಯಾಂತ ಚಕ್ಕಾ ಜಾಮ್ (ಸಂಚಾರ ಸ್ಥಗಿತ ಹೋರಾಟ) ಗೆ ಕರೆ ನೀಡಿದ್ದಾರೆ. ಈ ರೈತ ಹೋರಾಟವನ್ನು ಬೆಂಬಲಿಸಿ ಹತ್ತಾರು ಕಾರ್ಮಿಕ ಸಂಘಟನೆಗಳು ಹೇಳಿಕೆ ನೀಡಿದ್ದವು. ಅಲ್ಲದೇ ಚಕ್ಕಾ ಜಾಮ್‌ನಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ನಿರ್ಣಯಿಸಿದ್ದವು. ಇದನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಶುಕ್ರವಾರ ರಾತ್ರಿಯಿಂದಲೇ ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸಿದ್ದಾರೆ.

ದೆಹಲಿಯ ಐಟಿಒನ ಶಹೀದ್ ಪಾರ್ಕ್‌ನಲ್ಲಿ ಇಂದು ಬೃಹತ್ ಹೋರಾಟ ನಡೆಸಲು ಕಾರ್ಮಿಕ ಸಂಘಟನೆಗಳು ನಿರ್ಧಿರಿಸದ್ದವು. ಈ ಕುರಿತು ದೆಹಲಿ ಪೊಲೀಸರ್ ನೋಟಿಸ್ ಸಹ ನೀಡಲಾಗಿತ್ತು. ಆದರೆ ಕಳೆದ ರಾತ್ರಿಯಿಂದ ಟ್ರೇಡ್ ಯೂನಿಯನ್ ಮುಖಂಡರನ್ನು ಪೊಲೀಸರು ಸಿಕ್ಕ ಸಿಕ್ಕಲ್ಲಿ ಬಂಧಿಸುತ್ತಿದ್ದಾರೆ. ಉತ್ತರ ದೆಹಲಿ ಸಿಐಟಿಯು ಕಾರ್ಯದರ್ಶಿಯಾಗಿರುವ ವಿಪಿನ್ ಅವರನ್ನು ಬದ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಚೌರಾಸಿಯಾ ಅವರನ್ನು ಬುರಾರಿ ಪೊಲೀಸರು ವಶಕ್ಕೆ ಪಡೆದ ನಂತರ ಅವರನ್ನು ಗೃಹಬಂಧನದಲ್ಲಿರಿಸಿದ್ದಾರೆ. ಇಂದು ಬೆಳಿಗ್ಗೆ 5 ಗಂಟೆಗೆ ದೆಹಲಿಯ ಐಎಫ್‌ಟಿಯು ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಅನಿಮೆಶ್ ಅವರನ್ನು ಸಿ.ಆರ್ ಪಾರ್ಕ್‌ನಲ್ಲಿರುವ ಅವರ ಮನೆಯಿಂದ ಬಂಧಿಸಲಾಗಿದೆ. ಐಎಫ್‌ಟಿಯುಗೆ ಸಂಬಂಧಿಸಿದ ಪ್ರಗತಿಶೀಲ್ ಮಹಿಳಾ ಸಂಘಟನ್‌ನ ಪೂನಮ್ ಕೌಶಿಕ್ ರವರನ್ನು ಗೃಹಬಂಧನದಲ್ಲಿಡಲಾಗಿದೆ. ಪೊಲೀಸರು ಅವರ ಮನೆಯ ಹೊರಗೆ ಕಾವಲು ಕಾಯುತ್ತಿದ್ದಾರೆ. ಎಐಸಿಸಿಟಿಯುನ ಸೂರ್ಯ ಪ್ರಕಾಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಜ್ದೂರ್ ಸಹಯೋಗ್ ಕೇಂದ್ರದ ಸಂಚಾಲಕರಾದ ನಯನ್‌ರವರು ಆರೋಪಿಸಿದ್ದಾರೆ.

ಇಂದು ನಾವು ಐಟಿಓದಲ್ಲಿ ಚಕ್ಕಾ ಜಾಮ್ ನಡೆಸುತ್ತಿರಲಿಲ್ಲ. ಬದಲಿಗೆ ಸಾರ್ವಜನಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಇದು ಶಹೀದ್ ಪಾರ್ಕ್ ಒಳಗೆ ನಡೆಯುವ ಶಾಂತಿಯುತ ಪ್ರತಿಭಟನೆಯಾಗಿತ್ತು. ಅಲ್ಲಿ ಸಾಮಾನ್ಯವಾಗಿ ಅನೇಕ ಕಾರ್ಯಕ್ರಮಗಳು ನಡೆಯುತ್ತವೆ. ಆದರೆ ಆ ಕಾರ್ಯಕ್ರಮವನ್ನು ತಡೆಯುವುದಕ್ಕಾಗಿ ಈ ಬಂಧನಗಳನ್ನು ಪೊಲೀಸರು ಮಾಡಿದ್ದಾರೆ. ಅಲ್ಲದೆ ಅದಕ್ಕೆ ಯಾವುದೇ ವಿವರಣೆಯನ್ನು ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಎಲ್ಲಾ ಕಾರ್ಮಿಕ ಸಂಘಗಳು, ವಿದ್ಯಾರ್ಥಿ ಸಂಘಟನೆಗಳು, ಮಹಿಳಾ ಸಂಘಟನೆಗಳು, ಪ್ರಜಾಪ್ರಭುತ್ವ ಹಕ್ಕುಗಳ ಸಂಘಟನೆಗಳ ಜಂಟಿ ಪ್ರತಿಭಟನೆಯಾಗಿತ್ತು. ಇದೇ ರೀತಿಯಾಗಿ ಈಗಾಗಲೇ ದೆಹಲಿ ಫಾರ್ ಫಾರ್ಮರ್ಸ್ ಹೆಸರಿನಲ್ಲಿ ಈಗಾಗಲೇ ಹಲವಾರು ಕಾರ್ಯಕ್ರಮಗಳು ನಡೆದಿವೆ. ಅವುಗಳೆಲ್ಲದರ ಸಮಾರೋಪ ಕಾರ್ಯಕ್ರಮವಾಗಿ ಇಂದು ನಾವು ಶಹೀದ್ ಪಾರ್ಕ್‌ನ ಒಳಗೆ ಕಾರ್ಯಕ್ರಮ ನಡೆಸಲು ಯೋಜಿಸಿದ್ದೆವು. ಆದರೆ ಪೊಲೀಸರು ಸಹ ಅಡ್ಡಿಪಡಿಸುತ್ತಿದ್ದಾರೆ ಮತ್ತು ನಮಗೆ ಅವಕಾಶ ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ.

ದೆಹಲಿಯಲ್ಲಿ ಇಂದು ಸುಮಾರು 50 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ರಸ್ತೆಗಳಿಗೆ ಮುಳ್ಳಿನ ಸರಳುಗಳನ್ನು ನೆಡುವುದು, ಕಾಂಕ್ರೀಟ್ ಗೋಡೆಗಳನ್ನು ಕಟ್ಟುವುದು, ಮುಳ್ಳು ತಂತಿ ಬೇಲಿ ಮತ್ತು ದೊಡ್ಡ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಸರ್ಕಾರದ ಈ ದಮನ ಕ್ರಮಕ್ಕೆ ಪ್ರಪಂಚಾದ್ಯಂತ ಟೀಕೆ ವ್ಯಕ್ತವಾಗಿತ್ತು. ಈಗ ಪೊಲೀಸರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಕಾರ್ಮಿಕ ಮುಖಂಡರು ಸಹ ತಮ್ಮ ಪ್ರಜಾತಾಂತ್ರಿಕ ಹೋರಾಟ ನಡೆಸಲು ಬಿಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.


ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...