Homeಮುಖಪುಟ‘ಕಾಂಗ್ರೆಸ್ ಸಿಎಂಗೆ ಬೆಂಬಲ’- ಎಐಯುಡಿಎಫ್‌ ಮುಖಂಡ ಬದ್ರುದ್ದೀನ್ ಅಜ್ಮಲ್

‘ಕಾಂಗ್ರೆಸ್ ಸಿಎಂಗೆ ಬೆಂಬಲ’- ಎಐಯುಡಿಎಫ್‌ ಮುಖಂಡ ಬದ್ರುದ್ದೀನ್ ಅಜ್ಮಲ್

- Advertisement -
- Advertisement -

ಅಸ್ಸಾಂನ ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ನ ಮುಖ್ಯಸ್ಥ ಮೌಲಾನಾ ಬದ್ರುದ್ದೀನ್ ಅಜ್ಮಲ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಮಹಾಮೈತ್ರಿ ಅಧಿಕಾರವನ್ನು ಪಡೆದರೆ ತಾನು ಮುಖ್ಯಮಂತ್ರಿ ಕುರ್ಚಿಗೆ ಸ್ಪರ್ಧಿಸುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.

“ಕಾಂಗ್ರೆಸ್ ನೇತೃತ್ವದ ‘ಮಹಾಜೋತ್’ ಮೊದಲ ಹಂತದ ಮತದಾನವನ್ನು ಮುನ್ನಡೆಸಿದ್ದಾರೆ ಎಂದು ಉತ್ತರ ಅಸ್ಸಾಂನಲ್ಲಿರುವ ನನ್ನ ಸ್ನೇಹಿತರಿಂದ ಕೇಳಲು ನನಗೆ ತುಂಬಾ ಸಂತೋಷವಾಗಿದೆ. ಎಐಯುಡಿಎಫ್ ಮೇ 2 ರ ನಂತರ ಕಾಂಗ್ರೆಸ್ ಮುಖ್ಯಮಂತ್ರಿಯನ್ನು ಬೆಂಬಲಿಸಲು ಎದುರು ನೋಡುತ್ತಿದೆ” ಎಂದು ಅಜ್ಮಲ್ ಭಾನುವಾರ ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಅಸ್ಸಾಂ: ಜಾಹೀರಾತನ್ನು ಸುದ್ದಿಯ ರೂಪದಲ್ಲಿ ನೀಡಿದ ಬಿಜೆಪಿ; ಕಾಂಗ್ರೆಸ್‌ನಿಂದ ದೂರು ದಾಖಲು

ತಮ್ಮ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಸಿಎಂ ಅಭ್ಯರ್ಥಿ ಕಾಂಗ್ರೆಸ್‌ನಿಂದ ಆಗಿರುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.

“ಮಹಾಜೋತ್” ಅಧಿಕಾರವನ್ನು ಪಡೆದುಕೊಂಡರೆ ಎಐಯುಡಿಎಫ್ ಮುಖ್ಯಸ್ಥರು ಅಸ್ಸಾಂ ಸಿಎಂ ಆಗುತ್ತಾರೆ ಎಂದು ಹೇಳುವ ಮೂಲಕ ಅಸ್ಸಾಂ ಸಚಿವರು ಮತ್ತು ಬಿಜೆಪಿಯ ಹಿಮಾಂತ ಬಿಸ್ವಾ ಶರ್ಮಾ ಮತದಾರರನ್ನು ಧ್ರುವೀಕರಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ ಅಜ್ಮಲ್ ಅವರ ಈ ಹೇಳಿಕೆಯು ಮಹತ್ವದ್ದಾಗಿದೆ.

ಅಜ್ಮಲ್ ಅವರನ್ನು ಅವರ ಪ್ರತಿಸ್ಪರ್ಧಿಗಳು ಅಕ್ರಮ ಬಾಂಗ್ಲಾದೇಶದ ವಲಸಿಗರ ಸಹಾನುಭೂತಿ ವ್ಯಕ್ತಪಡಿಸುವ ವ್ಯಕ್ತಿ ಎಂದು ಆರೋಪಿಸುತ್ತಾರೆ.

ಮಾರ್ಚ್ 27 ರಂದು ಮೊದಲ ಹಂತದ ಚುನಾವಣೆಗಳು ಉತ್ತರ ಅಸ್ಸಾಂನ 47 ಕ್ಷೇತ್ರಗಳಲ್ಲಿ ನಡೆದಿತ್ತು. ಇಲ್ಲಿ ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ-ಎಜಿಪಿ ಮೈತ್ರಿಯು 47 ಸ್ಥಾನಗಳಲ್ಲಿ 35 ಸ್ಥಾನಗಳನ್ನು ಗೆದ್ದಿತ್ತು. ಈ ಪ್ರದೇಶಗಳಲ್ಲಿ ಚಹಾ ತೋಟದ ಕಾರ್ಮಿಕ ಮತದಾದರು ಗಣನೀಯ ಸಂಖ್ಯೆಯಲ್ಲಿದ್ದಾರೆ.

ಇದನ್ನೂ ಓದಿ: ನಂದಿಗ್ರಾಮ: ವೀಲ್‌ಚೇರ್‌ನಲ್ಲಿಯೇ ರ್‍ಯಾಲಿ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...