Homeಮುಖಪುಟಮೊಮ್ಮಗಳ ಶಿಕ್ಷಣಕ್ಕಾಗಿ ಮನೆ ಮಾರಿದ್ದ ದೇಸ್‌ರಾಜ್‌ಗೆ ಬೆಂಬಲ - ಹರಿದು ಬಂತು 24 ಲಕ್ಷ!

ಮೊಮ್ಮಗಳ ಶಿಕ್ಷಣಕ್ಕಾಗಿ ಮನೆ ಮಾರಿದ್ದ ದೇಸ್‌ರಾಜ್‌ಗೆ ಬೆಂಬಲ – ಹರಿದು ಬಂತು 24 ಲಕ್ಷ!

- Advertisement -
- Advertisement -

ಮೊಮ್ಮಗಳ ಶಿಕ್ಷಣಕ್ಕಾಗಿ ತನ್ನ ಮನೆಯನ್ನು ಮಾರಾಟ ಮಾಡಿರುವ ಮುಂಬೈನ ಆಟೋ ಡ್ರೈವರ್ ದೇಸ್‌ರಾಜ್ ಅವರ ಹೃದಯಸ್ಪರ್ಶಿ ಕತೆಗೆ ದೇಶದಾದ್ಯಂತ ಬೆಂಬಲ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕ್ರೌಡ್‌ಫಂಡಿಂಗ್ ಮೂಲಕ ಸುಮಾರು 24 ಲಕ್ಷ ಹಣ ಸಂಗ್ರಹವಾಗಿದೆ.

ಹ್ಯೂಮನ್ಸ್‌ ಆಫ್ ಬಾಂಬೆ ದೇಸ್‌ರಾಜ್ ಅವರ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿತ್ತು. ನಂತರ ಈ ವೀಡಿಯೋ ಸಾಕಷ್ಟು ವೈರಲ್ ಆಗಿತ್ತು.

ಈ ವೀಡಿಯೋದಲ್ಲಿ ದೇಸ್‌ರಾಜ್, “ತನ್ನ ಇಬ್ಬರು ಪುತ್ರರ ಮರಣದ ನಂತರ ಕುಟುಂಬದ ಜವಾಬ್ದಾರಿ ತನ್ನ ಮೇಲಿದೆ. ನನ್ನ ಸೊಸೆಯರು ಮತ್ತು ಅವರ 4 ಜನ ಮಕ್ಕಳ ಜವಾಬ್ದಾರಿಯನ್ನು ನಾನೇ ಹೊತ್ತುಕೊಂಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಕೇರಳ: ಶಬರಿಮಲೆ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲಿನ ಪ್ರಕರಣ ರದ್ದು

“ಕುಟುಂಬ ನಿರ್ವಹಣೆಗಾಗಿ ಹೆಚ್ಚುವರಿಯಾಗಿ ಆಟೋರಿಕ್ಷಾ ಓಡಿಸಲು ಆರಂಭಿಸಿದೆ. ಆದರೆ ಆ ಗಳಿಕೆ ಕೇವಲ ಶಾಲಾ ಶುಲ್ಕಕ್ಕೆ ಸಾಕಾಗುತ್ತಿರಲಿಲ್ಲ. ನಂತರ ನನ್ನ ಮೊಮ್ಮಗಳು 12 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇ. 80 ಅಂಕ ಗಳಿಸಿದಳು. ಉನ್ನತ ಶಿಕ್ಷಣಕ್ಕಾಗಿ ದೆಹಲಿಗೆ ಹೋಗಲು ಅವಳಿಗೆ ಆಸಕ್ತಿಯಿತ್ತು. ಇದಕ್ಕೆ ಸಾಕಷ್ಟು ಹಣ ಬೇಕಾಗಿತ್ತು. ಆದರೆ ನಾನು ಅವಳ ಕನಸನ್ನು ನನಸಾಗಿಸಬೇಕಾಗಿತ್ತು. ಹಾಗಾಗಿ ನನ್ನ ಮನೆಯನ್ನು ಮಾರಿ ಅವಳ ಶುಲ್ಕವನ್ನು ಪಾವತಿಸಿದ್ದೇನೆ” ಎಂದು ದೇಸ್‌ರಾಜ್ ಹೇಳಿದ್ದಾರೆ.

ಈ ಕಥೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಹಲವು ಗಣ್ಯರು, ರಾಜಕೀಯ ವ್ಯಕ್ತಿಗಳು ಕೂಡ ಇದನ್ನು ರೀಟ್ವೀಟ್ ಮಾಡಿ, ಆಟೋ ಡ್ರೈವರ್‌ಗೆ ಸಹಾಯ ಮಾಡುವಂತೆ ಕೋರಿದ್ದರು. ನಂತರ ಗುಂಜನ್ ರಟ್ಟಿ ಎಂಬ ಫೇಸ್‌ಬುಕ್ ಬಳಕೆದಾರರು ದೇಸ್ರಾಜ್‌ಗಾಗಿ ನಿಧಿಸಂಗ್ರಹವನ್ನು ಪ್ರಾರಂಭಿಸಿದರು. ಈಗ ಈ ಸಂಗ್ರಹ 20 ಲಕ್ಷದ ಗುರಿಯನ್ನು ಮೀರಿದೆ.

“ಕ್ರೌಡ್ ಫಂಡಿಂಗ್ ಪ್ರಕ್ರಿಯೆಗೆ ಸಹಕರಿಸಿದ್ದಕ್ಕೆ ಧನ್ಯವಾದಗಳು. ದೇಸ್ರಾಜ್ ₹ 24 ಲಕ್ಷದ ಚೆಕ್ ಸ್ವೀಕರಿಸಿದ್ದಾರೆ” ಎಂದು ಹ್ಯೂಮನ್ಸ್ ಆಫ್ ಬಾಂಬೆ ಹೇಳಿದೆ.

ಇದನ್ನೂ ಓದಿ: ದಿಶಾಗೆ ಜಾಮೀನು: ವ್ಯವಸ್ಥೆಯ ಮೇಲಿನ ನಮ್ಮ ನಂಬಿಕೆ ಬಲಗೊಂಡಿದೆ ಎಂದ ಪೋಷಕರು

“ದೇಸರಾಜ್ ಅವರಿಗೆ ಅಪಾರ ಬೆಂಬಲ ದೊರೆತಿದೆ. ನೀವೆಲ್ಲರೂ ಅವರಿಗೆ ಸಹಾಯ ಮಾಡಿದ್ದರಿಂದ, ಅವರ ತಲೆಯ ಮೇಲೆ ಈಗ ಒಂದು ಸೂರು ನಿರ್ಮಾಣವಾಗಿದೆ. ಜೊತೆಗೆ ಅವರ ಮೊಮ್ಮಗಳಿಗೆ ಶಿಕ್ಷಣ ನೀಡಲು ಸಾಧ್ಯವಾಗುತ್ತಿದೆ” ಎಂದು ಹ್ಯೂಮನ್ಸ್‌ ಆಫ್ ಬಾಂಬೆ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಸರ್ದಾರ್‌ ಪಟೇಲ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಹೆಸರಿಟ್ಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...