Homeಮುಖಪುಟಮೊಮ್ಮಗಳ ಶಿಕ್ಷಣಕ್ಕಾಗಿ ಮನೆ ಮಾರಿದ್ದ ದೇಸ್‌ರಾಜ್‌ಗೆ ಬೆಂಬಲ - ಹರಿದು ಬಂತು 24 ಲಕ್ಷ!

ಮೊಮ್ಮಗಳ ಶಿಕ್ಷಣಕ್ಕಾಗಿ ಮನೆ ಮಾರಿದ್ದ ದೇಸ್‌ರಾಜ್‌ಗೆ ಬೆಂಬಲ – ಹರಿದು ಬಂತು 24 ಲಕ್ಷ!

- Advertisement -
- Advertisement -

ಮೊಮ್ಮಗಳ ಶಿಕ್ಷಣಕ್ಕಾಗಿ ತನ್ನ ಮನೆಯನ್ನು ಮಾರಾಟ ಮಾಡಿರುವ ಮುಂಬೈನ ಆಟೋ ಡ್ರೈವರ್ ದೇಸ್‌ರಾಜ್ ಅವರ ಹೃದಯಸ್ಪರ್ಶಿ ಕತೆಗೆ ದೇಶದಾದ್ಯಂತ ಬೆಂಬಲ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕ್ರೌಡ್‌ಫಂಡಿಂಗ್ ಮೂಲಕ ಸುಮಾರು 24 ಲಕ್ಷ ಹಣ ಸಂಗ್ರಹವಾಗಿದೆ.

ಹ್ಯೂಮನ್ಸ್‌ ಆಫ್ ಬಾಂಬೆ ದೇಸ್‌ರಾಜ್ ಅವರ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿತ್ತು. ನಂತರ ಈ ವೀಡಿಯೋ ಸಾಕಷ್ಟು ವೈರಲ್ ಆಗಿತ್ತು.

ಈ ವೀಡಿಯೋದಲ್ಲಿ ದೇಸ್‌ರಾಜ್, “ತನ್ನ ಇಬ್ಬರು ಪುತ್ರರ ಮರಣದ ನಂತರ ಕುಟುಂಬದ ಜವಾಬ್ದಾರಿ ತನ್ನ ಮೇಲಿದೆ. ನನ್ನ ಸೊಸೆಯರು ಮತ್ತು ಅವರ 4 ಜನ ಮಕ್ಕಳ ಜವಾಬ್ದಾರಿಯನ್ನು ನಾನೇ ಹೊತ್ತುಕೊಂಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಕೇರಳ: ಶಬರಿಮಲೆ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲಿನ ಪ್ರಕರಣ ರದ್ದು

“ಕುಟುಂಬ ನಿರ್ವಹಣೆಗಾಗಿ ಹೆಚ್ಚುವರಿಯಾಗಿ ಆಟೋರಿಕ್ಷಾ ಓಡಿಸಲು ಆರಂಭಿಸಿದೆ. ಆದರೆ ಆ ಗಳಿಕೆ ಕೇವಲ ಶಾಲಾ ಶುಲ್ಕಕ್ಕೆ ಸಾಕಾಗುತ್ತಿರಲಿಲ್ಲ. ನಂತರ ನನ್ನ ಮೊಮ್ಮಗಳು 12 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇ. 80 ಅಂಕ ಗಳಿಸಿದಳು. ಉನ್ನತ ಶಿಕ್ಷಣಕ್ಕಾಗಿ ದೆಹಲಿಗೆ ಹೋಗಲು ಅವಳಿಗೆ ಆಸಕ್ತಿಯಿತ್ತು. ಇದಕ್ಕೆ ಸಾಕಷ್ಟು ಹಣ ಬೇಕಾಗಿತ್ತು. ಆದರೆ ನಾನು ಅವಳ ಕನಸನ್ನು ನನಸಾಗಿಸಬೇಕಾಗಿತ್ತು. ಹಾಗಾಗಿ ನನ್ನ ಮನೆಯನ್ನು ಮಾರಿ ಅವಳ ಶುಲ್ಕವನ್ನು ಪಾವತಿಸಿದ್ದೇನೆ” ಎಂದು ದೇಸ್‌ರಾಜ್ ಹೇಳಿದ್ದಾರೆ.

ಈ ಕಥೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಹಲವು ಗಣ್ಯರು, ರಾಜಕೀಯ ವ್ಯಕ್ತಿಗಳು ಕೂಡ ಇದನ್ನು ರೀಟ್ವೀಟ್ ಮಾಡಿ, ಆಟೋ ಡ್ರೈವರ್‌ಗೆ ಸಹಾಯ ಮಾಡುವಂತೆ ಕೋರಿದ್ದರು. ನಂತರ ಗುಂಜನ್ ರಟ್ಟಿ ಎಂಬ ಫೇಸ್‌ಬುಕ್ ಬಳಕೆದಾರರು ದೇಸ್ರಾಜ್‌ಗಾಗಿ ನಿಧಿಸಂಗ್ರಹವನ್ನು ಪ್ರಾರಂಭಿಸಿದರು. ಈಗ ಈ ಸಂಗ್ರಹ 20 ಲಕ್ಷದ ಗುರಿಯನ್ನು ಮೀರಿದೆ.

“ಕ್ರೌಡ್ ಫಂಡಿಂಗ್ ಪ್ರಕ್ರಿಯೆಗೆ ಸಹಕರಿಸಿದ್ದಕ್ಕೆ ಧನ್ಯವಾದಗಳು. ದೇಸ್ರಾಜ್ ₹ 24 ಲಕ್ಷದ ಚೆಕ್ ಸ್ವೀಕರಿಸಿದ್ದಾರೆ” ಎಂದು ಹ್ಯೂಮನ್ಸ್ ಆಫ್ ಬಾಂಬೆ ಹೇಳಿದೆ.

ಇದನ್ನೂ ಓದಿ: ದಿಶಾಗೆ ಜಾಮೀನು: ವ್ಯವಸ್ಥೆಯ ಮೇಲಿನ ನಮ್ಮ ನಂಬಿಕೆ ಬಲಗೊಂಡಿದೆ ಎಂದ ಪೋಷಕರು

“ದೇಸರಾಜ್ ಅವರಿಗೆ ಅಪಾರ ಬೆಂಬಲ ದೊರೆತಿದೆ. ನೀವೆಲ್ಲರೂ ಅವರಿಗೆ ಸಹಾಯ ಮಾಡಿದ್ದರಿಂದ, ಅವರ ತಲೆಯ ಮೇಲೆ ಈಗ ಒಂದು ಸೂರು ನಿರ್ಮಾಣವಾಗಿದೆ. ಜೊತೆಗೆ ಅವರ ಮೊಮ್ಮಗಳಿಗೆ ಶಿಕ್ಷಣ ನೀಡಲು ಸಾಧ್ಯವಾಗುತ್ತಿದೆ” ಎಂದು ಹ್ಯೂಮನ್ಸ್‌ ಆಫ್ ಬಾಂಬೆ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಸರ್ದಾರ್‌ ಪಟೇಲ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಹೆಸರಿಟ್ಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...