Homeಚಳವಳಿರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ಕೃಷಿ ಕಾನೂನುಗಳ ಹಿಂತೆಗೆತ ಜೊತೆಗೆ ತಮ್ಮ ಇತರ ಬೇಡಿಕೆಗಳಾದ ಆಹಾರ, ಕೆಲಸ, ಆರೋಗ್ಯ ಸೇವೆಗಳು, ಸ್ವಸಹಾಯ ಸಂಘಗಳ ಸಾಲ ಮನ್ನಾಕ್ಕೆ ಮಹಿಳೆಯರು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕಳೆದ ಒಂದು ತಿಂಗಳಿನಿಂದ ಮಾಡುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ, ದೇಶದಾದ್ಯಂತ ಇರುವ ಆರು ಪ್ರಮುಖ ಮಹಿಳಾ ಸಂಘಟನೆಗಳು ಜನವರಿ 18 ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲಿವೆ.

ಕೃಷಿ ಕಾನೂನುಗಳ ಜೊತೆಗೆ ತಮ್ಮ ಇತರ ಬೇಡಿಕೆಗಳಾದ ಆಹಾರ, ಕೆಲಸ, ಆರೋಗ್ಯ ಸೇವೆಗಳು, ಸ್ವಸಹಾಯ ಸಂಘಗಳ ಸಾಲ ಮನ್ನಾ, ಎಂಎಫ್‌ಐಗಳಿಂದ ಕಿರುಕುಳ ವಿರುದ್ಧ ಕ್ರಮ ಸೇರಿದಂತೆ ಮುಂತಾದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ‌ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ್ ಸಂಘಟನ್ (AIMSS) ಸೇರಿದಂತೆ, ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್ (NFIW), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (AIDWA), ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘ (AIPWA), ಪ್ರಗತಿಶೀಲ್ ಮಹಿಳಾ ಸಂಘಟನ್ (PMS), ಅಖಿಲ ಭಾರತ ಅಗ್ರಗಾಮಿ ಮಹಿಳಾ ಸಮಿತಿಗಳು (AIAMS) ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಇದನ್ನೂ ಓದಿ: ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಸಂಯುಕ್ತ ಕಿಸಾನ್‌ ಮೋರ್ಚಾ ನೀಡಿರುವ ʼಮಹಿಳಾ ಕಿಸಾನ್ ದಿವಸ್‌ʼ ಕರೆಯ ಭಾಗವಾಗಿ ಈ ಪ್ರತಿಭಟನೆಗಳು ನಡೆಯಲಿವೆ. ಜನವರಿ 18 ರಂದು ಸಹಸ್ರಾರು ಸಂಖ್ಯೆಯ ಮಹಿಳೆಯರು ಸೇರಿ ರಾಜ್ಯ ರಾಜಧಾನಿಗಳಲ್ಲಿ ರಾಜಭವನಕ್ಕೆ ಮೆರವಣಿಗೆ, ವಿವಿಧ ಭಾಗಗಳಲ್ಲಿ ಧರಣಿ, ಜಿಲ್ಲಾ ಮಟ್ಟಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಿದ್ದಾರೆ.

ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತರು ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ 8 ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ.

ಶುಕ್ರವಾರ (ಜ.8) 8ನೇ ಸುತ್ತಿನ ಮಾತುಕತೆ ನಡೆದಿದ್ದು ಕೇಂದ್ರ ಸರ್ಕಾರದ ಪರವಾಗಿ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪಿಯೂಶ್ ಗೋಯಲ್ ಮತ್ತು ಸೋಮ್‌ಪ್ರಕಾಶ್‌ ಭಾಗವಹಿಸಿದ್ದರು. 40 ರೈತ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದು, ಇಂದು ಸಹ ಸಭೆ ಯಾವುದೇ ತಾರ್ಕಿಕ ತೀರ್ಮಾನಗಳಿಗೆ ಬಂದಿಲ್ಲ. ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಿಲ್ಲವೆಂದು ಹಠ ಹಿಡಿದರೆ, ಹೋರಾಟ ನಿಲ್ಲಿಸುವುದಿಲ್ಲವೆಂದು ರೈತರು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಜನವರಿ 15ಕ್ಕೆ ಮುಂದಿನ ಸಭೆ ನಿಗಧಿಗೊಳಿಸಲಾಗಿದೆ.

ಇದನ್ನೂ ಓದಿ: Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಮಾತುಕತೆಯಲ್ಲಿ ‘ನೀವು ಕಾಯ್ದೆ ವಾಪ್ಸಿ ಮಾಡಿದರೆ ಮಾತ್ರ ನಾವು ಘರ್ ವಾಪ್ಸಿ ಮಾಡುತ್ತೇವೆ’ ಎಂದು ರೈತ ಮುಖಂಡರೊಬ್ಬರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾಗಿ ಪಿಟಿಐ ವರದಿ ಮಾಡಿದೆ.

ರೈತ ಮುಖಂಡರೊಬ್ಬರು “ಒಂದೋ ಗೆಲ್ಲುತ್ತೇವೆ ಇಲ್ಲ ಸಾಯುತ್ತೇವೆ” ಎಂಬ ಫ್ಲಕಾರ್ಡು ಹಿಡಿಯುವ ಮೂಲಕ ಸಭೆಯಲ್ಲಿ ಗಮನ ಸೆಳೆದರು. ಅಂದರೆ ಈ ಮೂಲಕ ಕೃಷಿ ಕಾಯ್ದೆಗಳ ವಿಚಾರದಲ್ಲಿ ರೈತರು ಪಟ್ಟು ಬಿಡುವುದಿಲ್ಲ ಎಂಬ ಎಚ್ಚರಿಕೆ ರವಾನಿಸಿದ್ದಾರೆ.

ಜನವರಿ 4 ರಂದು ನಡೆದ 7 ಸುತ್ತಿನ ಮಾತುಕತೆ ವಿಫಲವಾದಾಗ ರೈತರು ಜನವರಿ 7 ರಂದು ಟ್ರಾಕ್ಟರ್ ರ್ಯಾಲಿ ನಡೆಸುವುದಾಗಿ ಘೋಷಿಸಿ, ಅಂತೆಯೇ ನಡೆಸಿದರು. ಈಗ 8ನೇ ಸುತ್ತಿನ ಮಾತುಕತೆಯೂ ಸಹ ವಿಫಲವಾಗಿದ್ದು ರೈತರು ಯಾವ ರೀತಿಯ ಹೋರಾಟಕ್ಕೆ ಅಣಿಯಾಗುತ್ತಾರೆ ಎಂದು ಕಾದುನೋಡಬೇಕಾಗಿದೆ.


ಇದನ್ನೂ ಓದಿ: ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...