Homeಚಳವಳಿರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ಕೃಷಿ ಕಾನೂನುಗಳ ಹಿಂತೆಗೆತ ಜೊತೆಗೆ ತಮ್ಮ ಇತರ ಬೇಡಿಕೆಗಳಾದ ಆಹಾರ, ಕೆಲಸ, ಆರೋಗ್ಯ ಸೇವೆಗಳು, ಸ್ವಸಹಾಯ ಸಂಘಗಳ ಸಾಲ ಮನ್ನಾಕ್ಕೆ ಮಹಿಳೆಯರು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕಳೆದ ಒಂದು ತಿಂಗಳಿನಿಂದ ಮಾಡುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ, ದೇಶದಾದ್ಯಂತ ಇರುವ ಆರು ಪ್ರಮುಖ ಮಹಿಳಾ ಸಂಘಟನೆಗಳು ಜನವರಿ 18 ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲಿವೆ.

ಕೃಷಿ ಕಾನೂನುಗಳ ಜೊತೆಗೆ ತಮ್ಮ ಇತರ ಬೇಡಿಕೆಗಳಾದ ಆಹಾರ, ಕೆಲಸ, ಆರೋಗ್ಯ ಸೇವೆಗಳು, ಸ್ವಸಹಾಯ ಸಂಘಗಳ ಸಾಲ ಮನ್ನಾ, ಎಂಎಫ್‌ಐಗಳಿಂದ ಕಿರುಕುಳ ವಿರುದ್ಧ ಕ್ರಮ ಸೇರಿದಂತೆ ಮುಂತಾದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ‌ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ್ ಸಂಘಟನ್ (AIMSS) ಸೇರಿದಂತೆ, ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್ (NFIW), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (AIDWA), ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘ (AIPWA), ಪ್ರಗತಿಶೀಲ್ ಮಹಿಳಾ ಸಂಘಟನ್ (PMS), ಅಖಿಲ ಭಾರತ ಅಗ್ರಗಾಮಿ ಮಹಿಳಾ ಸಮಿತಿಗಳು (AIAMS) ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಇದನ್ನೂ ಓದಿ: ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಸಂಯುಕ್ತ ಕಿಸಾನ್‌ ಮೋರ್ಚಾ ನೀಡಿರುವ ʼಮಹಿಳಾ ಕಿಸಾನ್ ದಿವಸ್‌ʼ ಕರೆಯ ಭಾಗವಾಗಿ ಈ ಪ್ರತಿಭಟನೆಗಳು ನಡೆಯಲಿವೆ. ಜನವರಿ 18 ರಂದು ಸಹಸ್ರಾರು ಸಂಖ್ಯೆಯ ಮಹಿಳೆಯರು ಸೇರಿ ರಾಜ್ಯ ರಾಜಧಾನಿಗಳಲ್ಲಿ ರಾಜಭವನಕ್ಕೆ ಮೆರವಣಿಗೆ, ವಿವಿಧ ಭಾಗಗಳಲ್ಲಿ ಧರಣಿ, ಜಿಲ್ಲಾ ಮಟ್ಟಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಿದ್ದಾರೆ.

ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತರು ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ 8 ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ.

ಶುಕ್ರವಾರ (ಜ.8) 8ನೇ ಸುತ್ತಿನ ಮಾತುಕತೆ ನಡೆದಿದ್ದು ಕೇಂದ್ರ ಸರ್ಕಾರದ ಪರವಾಗಿ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪಿಯೂಶ್ ಗೋಯಲ್ ಮತ್ತು ಸೋಮ್‌ಪ್ರಕಾಶ್‌ ಭಾಗವಹಿಸಿದ್ದರು. 40 ರೈತ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದು, ಇಂದು ಸಹ ಸಭೆ ಯಾವುದೇ ತಾರ್ಕಿಕ ತೀರ್ಮಾನಗಳಿಗೆ ಬಂದಿಲ್ಲ. ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಿಲ್ಲವೆಂದು ಹಠ ಹಿಡಿದರೆ, ಹೋರಾಟ ನಿಲ್ಲಿಸುವುದಿಲ್ಲವೆಂದು ರೈತರು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಜನವರಿ 15ಕ್ಕೆ ಮುಂದಿನ ಸಭೆ ನಿಗಧಿಗೊಳಿಸಲಾಗಿದೆ.

ಇದನ್ನೂ ಓದಿ: Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಮಾತುಕತೆಯಲ್ಲಿ ‘ನೀವು ಕಾಯ್ದೆ ವಾಪ್ಸಿ ಮಾಡಿದರೆ ಮಾತ್ರ ನಾವು ಘರ್ ವಾಪ್ಸಿ ಮಾಡುತ್ತೇವೆ’ ಎಂದು ರೈತ ಮುಖಂಡರೊಬ್ಬರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾಗಿ ಪಿಟಿಐ ವರದಿ ಮಾಡಿದೆ.

ರೈತ ಮುಖಂಡರೊಬ್ಬರು “ಒಂದೋ ಗೆಲ್ಲುತ್ತೇವೆ ಇಲ್ಲ ಸಾಯುತ್ತೇವೆ” ಎಂಬ ಫ್ಲಕಾರ್ಡು ಹಿಡಿಯುವ ಮೂಲಕ ಸಭೆಯಲ್ಲಿ ಗಮನ ಸೆಳೆದರು. ಅಂದರೆ ಈ ಮೂಲಕ ಕೃಷಿ ಕಾಯ್ದೆಗಳ ವಿಚಾರದಲ್ಲಿ ರೈತರು ಪಟ್ಟು ಬಿಡುವುದಿಲ್ಲ ಎಂಬ ಎಚ್ಚರಿಕೆ ರವಾನಿಸಿದ್ದಾರೆ.

ಜನವರಿ 4 ರಂದು ನಡೆದ 7 ಸುತ್ತಿನ ಮಾತುಕತೆ ವಿಫಲವಾದಾಗ ರೈತರು ಜನವರಿ 7 ರಂದು ಟ್ರಾಕ್ಟರ್ ರ್ಯಾಲಿ ನಡೆಸುವುದಾಗಿ ಘೋಷಿಸಿ, ಅಂತೆಯೇ ನಡೆಸಿದರು. ಈಗ 8ನೇ ಸುತ್ತಿನ ಮಾತುಕತೆಯೂ ಸಹ ವಿಫಲವಾಗಿದ್ದು ರೈತರು ಯಾವ ರೀತಿಯ ಹೋರಾಟಕ್ಕೆ ಅಣಿಯಾಗುತ್ತಾರೆ ಎಂದು ಕಾದುನೋಡಬೇಕಾಗಿದೆ.


ಇದನ್ನೂ ಓದಿ: ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...