Homeಚಳವಳಿರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ಕೃಷಿ ಕಾನೂನುಗಳ ಹಿಂತೆಗೆತ ಜೊತೆಗೆ ತಮ್ಮ ಇತರ ಬೇಡಿಕೆಗಳಾದ ಆಹಾರ, ಕೆಲಸ, ಆರೋಗ್ಯ ಸೇವೆಗಳು, ಸ್ವಸಹಾಯ ಸಂಘಗಳ ಸಾಲ ಮನ್ನಾಕ್ಕೆ ಮಹಿಳೆಯರು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕಳೆದ ಒಂದು ತಿಂಗಳಿನಿಂದ ಮಾಡುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ, ದೇಶದಾದ್ಯಂತ ಇರುವ ಆರು ಪ್ರಮುಖ ಮಹಿಳಾ ಸಂಘಟನೆಗಳು ಜನವರಿ 18 ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲಿವೆ.

ಕೃಷಿ ಕಾನೂನುಗಳ ಜೊತೆಗೆ ತಮ್ಮ ಇತರ ಬೇಡಿಕೆಗಳಾದ ಆಹಾರ, ಕೆಲಸ, ಆರೋಗ್ಯ ಸೇವೆಗಳು, ಸ್ವಸಹಾಯ ಸಂಘಗಳ ಸಾಲ ಮನ್ನಾ, ಎಂಎಫ್‌ಐಗಳಿಂದ ಕಿರುಕುಳ ವಿರುದ್ಧ ಕ್ರಮ ಸೇರಿದಂತೆ ಮುಂತಾದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ‌ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ್ ಸಂಘಟನ್ (AIMSS) ಸೇರಿದಂತೆ, ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್ (NFIW), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (AIDWA), ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘ (AIPWA), ಪ್ರಗತಿಶೀಲ್ ಮಹಿಳಾ ಸಂಘಟನ್ (PMS), ಅಖಿಲ ಭಾರತ ಅಗ್ರಗಾಮಿ ಮಹಿಳಾ ಸಮಿತಿಗಳು (AIAMS) ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಇದನ್ನೂ ಓದಿ: ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಸಂಯುಕ್ತ ಕಿಸಾನ್‌ ಮೋರ್ಚಾ ನೀಡಿರುವ ʼಮಹಿಳಾ ಕಿಸಾನ್ ದಿವಸ್‌ʼ ಕರೆಯ ಭಾಗವಾಗಿ ಈ ಪ್ರತಿಭಟನೆಗಳು ನಡೆಯಲಿವೆ. ಜನವರಿ 18 ರಂದು ಸಹಸ್ರಾರು ಸಂಖ್ಯೆಯ ಮಹಿಳೆಯರು ಸೇರಿ ರಾಜ್ಯ ರಾಜಧಾನಿಗಳಲ್ಲಿ ರಾಜಭವನಕ್ಕೆ ಮೆರವಣಿಗೆ, ವಿವಿಧ ಭಾಗಗಳಲ್ಲಿ ಧರಣಿ, ಜಿಲ್ಲಾ ಮಟ್ಟಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಿದ್ದಾರೆ.

ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತರು ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ 8 ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ.

ಶುಕ್ರವಾರ (ಜ.8) 8ನೇ ಸುತ್ತಿನ ಮಾತುಕತೆ ನಡೆದಿದ್ದು ಕೇಂದ್ರ ಸರ್ಕಾರದ ಪರವಾಗಿ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪಿಯೂಶ್ ಗೋಯಲ್ ಮತ್ತು ಸೋಮ್‌ಪ್ರಕಾಶ್‌ ಭಾಗವಹಿಸಿದ್ದರು. 40 ರೈತ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದು, ಇಂದು ಸಹ ಸಭೆ ಯಾವುದೇ ತಾರ್ಕಿಕ ತೀರ್ಮಾನಗಳಿಗೆ ಬಂದಿಲ್ಲ. ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಿಲ್ಲವೆಂದು ಹಠ ಹಿಡಿದರೆ, ಹೋರಾಟ ನಿಲ್ಲಿಸುವುದಿಲ್ಲವೆಂದು ರೈತರು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಜನವರಿ 15ಕ್ಕೆ ಮುಂದಿನ ಸಭೆ ನಿಗಧಿಗೊಳಿಸಲಾಗಿದೆ.

ಇದನ್ನೂ ಓದಿ: Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಮಾತುಕತೆಯಲ್ಲಿ ‘ನೀವು ಕಾಯ್ದೆ ವಾಪ್ಸಿ ಮಾಡಿದರೆ ಮಾತ್ರ ನಾವು ಘರ್ ವಾಪ್ಸಿ ಮಾಡುತ್ತೇವೆ’ ಎಂದು ರೈತ ಮುಖಂಡರೊಬ್ಬರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾಗಿ ಪಿಟಿಐ ವರದಿ ಮಾಡಿದೆ.

ರೈತ ಮುಖಂಡರೊಬ್ಬರು “ಒಂದೋ ಗೆಲ್ಲುತ್ತೇವೆ ಇಲ್ಲ ಸಾಯುತ್ತೇವೆ” ಎಂಬ ಫ್ಲಕಾರ್ಡು ಹಿಡಿಯುವ ಮೂಲಕ ಸಭೆಯಲ್ಲಿ ಗಮನ ಸೆಳೆದರು. ಅಂದರೆ ಈ ಮೂಲಕ ಕೃಷಿ ಕಾಯ್ದೆಗಳ ವಿಚಾರದಲ್ಲಿ ರೈತರು ಪಟ್ಟು ಬಿಡುವುದಿಲ್ಲ ಎಂಬ ಎಚ್ಚರಿಕೆ ರವಾನಿಸಿದ್ದಾರೆ.

ಜನವರಿ 4 ರಂದು ನಡೆದ 7 ಸುತ್ತಿನ ಮಾತುಕತೆ ವಿಫಲವಾದಾಗ ರೈತರು ಜನವರಿ 7 ರಂದು ಟ್ರಾಕ್ಟರ್ ರ್ಯಾಲಿ ನಡೆಸುವುದಾಗಿ ಘೋಷಿಸಿ, ಅಂತೆಯೇ ನಡೆಸಿದರು. ಈಗ 8ನೇ ಸುತ್ತಿನ ಮಾತುಕತೆಯೂ ಸಹ ವಿಫಲವಾಗಿದ್ದು ರೈತರು ಯಾವ ರೀತಿಯ ಹೋರಾಟಕ್ಕೆ ಅಣಿಯಾಗುತ್ತಾರೆ ಎಂದು ಕಾದುನೋಡಬೇಕಾಗಿದೆ.


ಇದನ್ನೂ ಓದಿ: ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...