Homeಮುಖಪುಟಕೇಜ್ರಿವಾಲ್‌ಗೆ ಬೆಂಬಲ: ದೆಹಲಿ ಮಸೂದೆ ಸೋಲಿಸಲು ಹಾರಿಬರುತ್ತಿರುವ ಟಿಎಂಸಿ ಸಂಸದರು!

ಕೇಜ್ರಿವಾಲ್‌ಗೆ ಬೆಂಬಲ: ದೆಹಲಿ ಮಸೂದೆ ಸೋಲಿಸಲು ಹಾರಿಬರುತ್ತಿರುವ ಟಿಎಂಸಿ ಸಂಸದರು!

- Advertisement -
- Advertisement -

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಸಂಸತ್ತಿನಲ್ಲಿ “ಸೋಲಿಸಲು” ತಮ್ಮ ಪಕ್ಷದ ರಾಜ್ಯಸಭಾ ಸಂಸದರು ದೆಹಲಿಗೆ ‘ಹಾರಿ ಬರುತ್ತಿದ್ದಾರೆ’ ಎಂದು ತೃಣಮೂಲ ಕಾಂಗ್ರೆಸ್ ಮುಖಂಡ ಡೆರೆಕ್ ಒ’ಬ್ರಿಯೆನ್ ತಿಳಿಸಿದ್ದಾರೆ.

ದೆಹಲಿಯ ರಾಷ್ಟ್ರೀಯ ರಾಜಧಾನಿ (ತಿದ್ದುಪಡಿ) ಮಸೂದೆ 2021 ಅನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ಈಗ ರಾಜ್ಯಸಭೆಯಲ್ಲಿ ಅಂಗೀಕಾರವಾಗಬೇಕಾಗಿದೆ. ಯೋಜಿತ ಕಾನೂನು ಚುನಾಯಿತ ಸರ್ಕಾರಕ್ಕೆ ಹೋಲಿಸಿದರೆ ದೆಹಲಿಯ ಕೇಂದ್ರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ.

ಬಂಗಾಳ ಮತ್ತು ಇತರ ರಾಜ್ಯಗಳಲ್ಲಿನ ಚುನಾವಣೆ ಮುಗಿಯುವವರೆಗೆ ಮಸೂದೆಯ ಬಗ್ಗೆ ಚರ್ಚೆಯನ್ನು ಮುಂದೂಡಬೇಕೆಂದು ಕೇಳಿಕೊಂಡು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿರುವ ಓ’ಬ್ರಿಯೆನ್, ಇದನ್ನು “ಪ್ರಜಾಪ್ರಭುತ್ವದ, ಸಂವಿಧಾನ ಮತ್ತು ಸಂಸತ್ತುಗಳ ಹೃದಯಕ್ಕೆ ತಿವಿದ ಚೂರಿ’ ಎಂದು ಟ್ವೀಟ್ ಮಾಡಿದ್ದಾರೆ.

“ಐದು ರಾಜ್ಯಗಳಲ್ಲಿ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿವೆ. ಆದರೂ ಚುನಾಯಿತ ದೆಹಲಿ ಸರ್ಕಾರವನ್ನು ನಿರುತ್ಸಾಹಗೊಳಿಸುವ #ಜಿಎನ್‌ಸಿಟಿ ಮಸೂದೆಯನ್ನು ಒತ್ತಾಯದಿಂದ ಹೇರುವುದುನ್ನು (ಬುಲ್ಡೊಜಿಂಗ್) ನಿಲ್ಲಿಸಲು ತೃಣಮೂಲ ರಾಜ್ಯಸಭಾ ಸಂಸದರು ದೆಹಲಿಗೆ ವಿಮಾನದ ಮೂಲಕ ಧಾವಿಸಿ ಬರುತ್ತಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸಂಸತ್ತುಗಳ ಹೃದಯಕ್ಕೆ ಮತ್ತೊಂದು ಚೂರಿ ಹಾಕುವ ಯತ್ನವಿದು. ಗೃಹ ಸಚಿವರು ಚುನಾಚಣೆಯಲ್ಲಿ ಬ್ಯೂಸಿ. ಅವರಿಗೆ ಮಸೂದೆ ಮಂಡಿಸಲೂ ಟೈಮಿಲ್ಲ, ಇದು ಪ್ರಜಾಪ್ರಭುತ್ವದ ಕ್ರೂರ ವ್ಯಂಗ್ಯ” ಎಂದು ತೃಣಮೂಲ ರಾಜ್ಯಸಭಾ ಸದಸ್ಯ ಟ್ವೀಟ್ ಮಾಡಿದ್ದಾರೆ.

ಮಸೂದೆಯು “ಅತ್ಯಂತ ಮಹತ್ವದ ಶಾಸನ” ವಾಗಿದ್ದು, ಇದು ಭಾರತದ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ ಮತ್ತು ಅದು “ನ್ಯಾಯದ ಸಂಪೂರ್ಣ ಗರ್ಭಪಾತ” ಎಂದು ಒ’ಬ್ರಿಯೆನ್ ಮಂಗಳವಾರ ರಾಜ್ಯಸಭಾ ಅಧ್ಯಕ್ಷರಿಗೆ ತಿಳಿಸಿದ್ದಾರೆ.

ಶನಿವಾರದಿಂದ ಪ್ರಾರಂಭವಾಗುತ್ತಿರುವ ಬಂಗಾಳ ಚುನಾವಣೆಯಿಂದಾಗಿ ತೃಣಮೂಲ ಸದಸ್ಯರು ಸಂಸತ್ತಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಅವರು ಮಂಗಳವಾರ ಹೇಳಿದ್ದರು. ಆದರೆ ಇಂದು ಅವರು ರಾಜ್ಯಸಭಾ ಸದಸ್ಯರಿಗೆ ತುರ್ತಾಗಿ ದೆಹಲಿ ತಲುಪಿ ರಾಜ್ಯಸಭೆಯಲ್ಲಿ ಮಸೂದೆ ಸೋಲಿಸಲು ಟಿಎಂಸಿ ಕರೆ ನಿಡಿದೆ.


ಇದನ್ನೂ ಓದಿ: ‘ಪ್ರಜಾಪ್ರಭುತ್ವ ನಾಶ ಮಾಡುವ ಮಸೂದೆ’: ದೆಹಲಿ ಮಸೂದೆ ವಿರುದ್ಧ ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....