Homeಮುಖಪುಟಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಯ ಭಾಷಣ ಬಹಿಷ್ಕರಿಸಲಿರುವ 16 ಪ್ರಮುಖ ಪಕ್ಷಗಳು

ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಯ ಭಾಷಣ ಬಹಿಷ್ಕರಿಸಲಿರುವ 16 ಪ್ರಮುಖ ಪಕ್ಷಗಳು

ದೆಹಲಿ ಪೊಲೀಸರು ಗುರುವಾರ ರೈತ ಮುಖಂಡರ ವಿರುದ್ಧ ಸುತ್ತೋಲೆ ಹೊರಡಿಸಿದ್ದು, ಪಾಸ್‌ಪೋರ್ಟ್‌ಗಳನ್ನು ಒಪ್ಪಿಸುವಂತೆ ಕೇಳಿಕೊಂಡಿದ್ದಾರೆ.

- Advertisement -
- Advertisement -

ಬಜೆಟ್ ಅಧಿವೇಶನ ಪ್ರಾರಂಭವಾಗುವ ಮುನ್ನ ಜನವರಿ 29 ರಂದು ರಾಷ್ಟ್ರಪತಿ ಸಂಸತ್ತಿನಲ್ಲಿ ಮಾಡುವ ಭಾಷಣವನ್ನು ಬಹಿಷ್ಕರಿಸುವುದಾಗಿ 16 ವಿರೋಧ ಪಕ್ಷಗಳ ನಾಯಕರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ತಮ್ಮ ಬೇಡಿಕೆಯನ್ನು ಈ ನಾಯಕರು ಪುನರುಚ್ಚರಿಸಿದ್ದು, ಪ್ರತಿಭಟನಾ ನಿರತ ರೈತರೊಂದಿಗೆ ತಾವು ಒಗ್ಗಟ್ಟಿನಲ್ಲಿ ನಿಂತಿದ್ದೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್, ಎನ್‌ಸಿಪಿ, ಡಿಎಂಕೆ, ಟಿಎಂಸಿ, ಶಿವಸೇನೆ, ಸಮಾಜವಾದಿ ಪಕ್ಷ, ಆರ್‌ಜೆಡಿ, ಸಿಪಿಐ, ಸಿಪಿಐ (ಎಂ) ಮತ್ತು ಪಿಡಿಪಿ ಸೇರಿದಂತೆ 16 ಪ್ರಮುಖ ಪಕ್ಷಗಳ ನಾಯಕರು, ಈ ಕೃಷಿ ಕಾನೂನುಗಳು “ರಾಜ್ಯಗಳ ಹಕ್ಕುಗಳ ಮೇಲಿನ ಆಕ್ರಮಣ ಮಾಡಿದೆ ಮತ್ತು ಸಂವಿಧಾನಾತ್ಮಕ ಒಕ್ಕೂಟ ವ್ಯವಸ್ಥೆಯನ್ನು ಉಲ್ಲಂಘಿಸಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಘಟನೆ ದುರದೃಷ್ಟಕರ ಆದರೆ ರೈತ ಹೋರಾಟ ಕೊನೆಗೊಳ್ಳುವುದಿಲ್ಲ: ಕೇಜ್ರಿವಾಲ್

ಈ ಕಾನೂನುಗಳನ್ನು ಯಾವುದೇ ಸಮಾಲೋಚನೆಗಳಿಲ್ಲದೆ ತರಲಾಗಿದ್ದು, ಕಾನೂನಿನಲ್ಲಿ ರಾಷ್ಟ್ರೀಯ ಒಮ್ಮತದ ಕೊರತೆಯಿದೆ. ಅಲ್ಲದೆ ಪ್ರತಿಪಕ್ಷವನ್ನು ಗೊಂದಲಗೊಳಿಸಿ, ಸಂಸತ್ತಿನ ಪರಿಶೀಲನೆಯಿಲ್ಲದೆ ಕಾನೂನನ್ನು ಬೈಪಾಸ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ ದೆಹಲಿ ರೈತರ ಗಣರಾಜ್ಯೋತ್ಸವದಲ್ಲಿ ಉಂಟಾದ ಅಹಿತಕರ ಘಟನೆಗೆ ಸಂಬಂಧಿಸಿದಂತೆ 25 ಎಫ್‌ಐಆರ್‌ಗಳು ದಾಖಲಾಗಿದೆ. ದೆಹಲಿ ಪೊಲೀಸರು ಗುರುವಾರ ರೈತ ಮುಖಂಡರ ವಿರುದ್ಧ ಸುತ್ತೋಲೆ ಹೊರಡಿಸಿದ್ದು, ಪಾಸ್‌ಪೋರ್ಟ್‌ಗಳನ್ನು ಒಪ್ಪಿಸುವಂತೆ ಕೇಳಿಕೊಂಡಿದ್ದಾರೆ. ಇನ್ನೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯ ಎರಡು ಆಸ್ಪತ್ರೆಗಳಿಗೆ ತೆರಳಿ, ಘಟನೆಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಭೇಟಿ ಮಾಡಿದರು.

ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ವಿಡಿಯೋ ನೋಡಿ►► ಗೋವಿಂದಣ್ಣ ಗೋವಿಂದ ರೈತರ ಬದುಕು ಗೋವಿಂದ.. ಕೃಷಿ ಕಾನೂನುಗಳ ಕುರಿತ ವೈರಲ್ ಹಾಡು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...