Homeಮುಖಪುಟಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

- Advertisement -
- Advertisement -

ಕಿರಿಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌‌ಬರ್ಗ್ ಮೇಲೆ “ಕ್ರಿಮಿನಲ್ ಪಿತೂರಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ” ಎಂದು ಆರೋಪಿಸಿ ದೆಹಲಿ ಪೊಲೀಸರು ದೂರು ದಾಖಲಿಸಿದ್ದಾರೆ. ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಒಂದು ದಿನದ ಹಿಂದೆಯಷ್ಟೆ ಟ್ವೀಟ್ ಮಾಡಿದ್ದರು.

ಇವರಿಗಿಂತಲು ಮೊದಲು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ರೈತರನ್ನು ಬೆಂಬಲಿಸಿದ್ದರು. ಇದಾದ ನಂತರ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ಹಲವು ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ವಿಶ್ವದ ಗಮನ ಸೆಳೆದಿದ್ದು, ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ ಸಿಗುವಂತಾಗಿದೆ.

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಗ್ರೇಟಾ ಥನ್‌‌ಬರ್ಗ್‌ ತನ್ನ ಟ್ವೀಟ್‌ನಲ್ಲಿ, “ಭಾರತೀಯ ರೈತರ ಹೋರಾಟದ ಜೊತೆ ನಾವು ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ” ಎಂದು ಎಂದು ಸಿಎನ್‌ಎನ್‌ ವರದಿಯನ್ನು ಹಂಚಿಕೊಂಡಿದ್ದರು.

ಇಷ್ಟೇ ಅಲ್ಲದೆ ಗೇಟಾ ಥನ್‌ಬರ್ಗ್ ಇಂದು, ರೈತ ಹೋರಾಟಕ್ಕೆ ಹೇಗೆ ಬೆಂಬಲ ನೀಡಬಹುದು ಎಂಬ ಮಾಹಿತಿಯಿರುವ “ಟೂಲ್‌‌ಕಿಟ್” ಅನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

ಟೂಲ್‌ಕಿಟ್‌ ರೈತ ಆಂದೋಲನವನ್ನು ಬೆಂಬಲಿಸಲು ಏಳು ಮಾರ್ಗಗಳನ್ನು ಸೂಚಿಸಿದೆ. ಫೆಬ್ರವರಿ 13 ಮತ್ತು 14 ರಂದು ಹತ್ತಿರದ ಭಾರತೀಯ ರಾಯಭಾರ ಕಚೇರಿಯ ಬಳಿ ಪ್ರತಿಭಟನೆಗಳನ್ನು ಆಯೋಜಿಸಲು ಅವರು ಸಲಹೆ ನೀಡಿದ್ದಾರೆ.

ಈ ನಡುವೆ ಗ್ರೇಟಾ ಥನ್‌‌ಬರ್ಗ್ ಮತ್ತೇ ರೈತರ ಹೋರಾಟವನ್ನು ಬೆಂಬಲಿಸಿದ್ದಾರೆ. ಈಗಷ್ಟೇ ಹಾಕಿದ ಟ್ವೀಟ್‌‌ನಲ್ಲಿ, “ನಾನಿನ್ನೂ ರೈತರನ್ನು ಬೆಂಬಲಿಸುತ್ತೇನೆ ಹಾಗೂ ಅವರ ಶಾಂತಿಯುತ ಹೋರಾಟವನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ನನ್ನ ನಿಲುವನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ನಿನ್ನೆಯಿಂದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯ ಬೆಂಬಲ ಹೆಚ್ಚುತ್ತಿದ್ದು, ಇದರಿಂದಾಗಿ ತೀವ್ರ ಮುಜುಗರಕ್ಕೊಳಗಾಗಿರುವ ಕೇಂದ್ರ ಸರ್ಕಾರ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.

ಇದನ್ನೂ ಓದಿ: ’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. how can you call Greta a climate activist. Please publish an article if you can about the number of trees she has planted and carried a campaign against use of one use plastic bags. Just by reading a statement written by somebody in a conference does not make her a climate activist. We have Salumara Thimmkka, Sukri Bommanagowda in India. They are climate activists. Not Thunberg

  2. ಗ್ರೇಟಾ ತನ್ಬರ್ಗ್ ವಿರುದ್ದ ಎಫ್.ಐ.ಆರ್.!
    ಇದು ಮೂರ್ಕತನದ ಪರಮಾವದಿ.
    ಎಫ್.ಐ.ಆರ್. ದಾಕಲಿಸಿ ಯಾರನ್ನು ಬೇಕಾದರೂ ಹೆದರಿಸಿ, ಸುಮ್ಮನಿರಿಸಬಹುದೆಂದು ಆಡಳಿತಾರೂಢರು ತಿಳಿದಿರುವಂತಿದೆ.
    ಆದರೆ ಅಸಲಿ ಹೋರಾಟಗಾರರು ಎಫ್. ಐ.ಆರ್.ಗೆ ಹೆದರುವುದಿಲ್ಲ ಎಂಬುದನ್ನು ಈ ಅಯೋಗ್ಯರು ತಿಳಿಯುವುದೊಳಿತು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...