Homeಮುಖಪುಟಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ಸಂಸದ ತೇಜಸ್ವಿ ಸೂರ್ಯನನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರಿಯಾ, ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಯಾರು ಗೊತ್ತೆ ಎಂದು ಕೇಳಿದ್ದಾರೆ

- Advertisement -
- Advertisement -

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಂಸದೆ ಸುಪ್ರಿಯಾ ಸುಲೆ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ತರಾಟಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮ ಬಳಕೆದಾರರು ಸುಪ್ರಿಯಾ ಸುಳೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಳೆದ ವಾರ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಾಡಿದ್ದ ‘ಎರಡು ಭಾರತ’ ಎಂಬ ಭಾಷಣವನ್ನು ಉಲ್ಲೇಖಿಸಿ ಸಂಸದ ತೇಜಸ್ವಿ ಸೂರ್ಯ ಟೀಕಿಸಿದ್ದರು. ಇದರ ನಂತರ ಸುಪ್ರಿಯಾ ಸುಲೆ ಅವರು ಲೋಕಸಭೆಯಲ್ಲಿ ಮಾತನಾಡಿದ್ದು, ತೇಜಸ್ವಿ ಸೂರ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಷ್ಟೇ ಅಲ್ಲದೆ, ರಾಜ್ಯ ಸರ್ಕಾರ ಹಿಜಾಬ್ ನಿಷೇಧ ಮಾಡಿರುವುದನ್ನು ಸಂಸದೆ ಸುಪ್ರಿಯಾ ಸುಲೆ ಖಂಡಿಸಿದ್ದು, “ವ್ಯಕ್ತಿಯೊಬ್ಬರು ಏನು ಧರಿಸಬೇಕು, ಏನು ತಿನ್ನಬೇಕು, ಏನು ಮಾತನಾಡಬೇಕು ಮತ್ತು ಏನು ಯೋಚಿಸಬೇಕು ಎಂಬುದು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ. ಅದನ್ನು ಯಾರೂ ತಡೆಯಬಾರದು. ಕರ್ನಾಟಕ ಸರ್ಕಾರ ಹಿಜಾಬ್ ನಿಷೇಧಿಸಿರುವ ಕ್ರಮವು ಸರ್ವಾಧಿಕಾರಿ ಸ್ವಭಾವದ್ದಾಗಿದೆ” ಎಂದು ಅವರು ಕರೆದಿದ್ದಾರೆ.

“ಕಾಂಗ್ರೆಸ್ ಮತ್ತು ಅದರ ಕುಟುಂಬ ರಾಜಕಾರಣದ ನಾಯಕರು ತಮ್ಮ ರಾಜಕೀಯ ನಿರುದ್ಯೋಗವನ್ನು ದೇಶದ ನಿರುದ್ಯೋಗ ಎಂದು ಗೊಂದಲಗೊಳಿಸುತ್ತಿದ್ದಾರೆ. ಈ ದೇಶದಲ್ಲಿ ನಿರುದ್ಯೋಗಿಯೊಬ್ಬರು ಇದ್ದರೆ ಅದು ಕಾಂಗ್ರೆಸ್ ಪಕ್ಷದ ಯುವರಾಜ ಮತ್ತು ಕಾಂಗ್ರೆಸ್ ಪಕ್ಷದ ವಂಶಸ್ಥರು” ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದರು.

ಇದನ್ನು ಉಲ್ಲೇಖಿಸಿದ ಸುಪ್ರಿಯಾ ಸುಲೆ, ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಅವರೊಂದಿಗೆ ತೇಜಸ್ವಿ ಸೂರ್ಯ ಅವರ ಸಂಬಂಧದ ಬಗ್ಗೆ ಕೇಳಿದ್ದಾರೆ. ಶಾಸಕ ರವಿ ಸುಬ್ರಹ್ಮಣ್ಯ ತೇಜಸ್ವಿ ಸೂರ್ಯ ಅವರ ಸೋದರ ಸಂಬಂಧಿಯಾಗಿದ್ದಾರೆ. ಇಷ್ಟೇ ಅಲ್ಲದೆ, ಪ್ರೀತಮ್ ಮುಂಡೆ, ಪೂನಂ ಮಹಾಜನ್, ಹೀನಾ ಗಾವಿತ್, ರಕ್ಷಾ ಖಡ್ಸೆ, ಸುಜಯ್ ವಿಖೆ ಪಾಟೀಲ್ ಸೇರಿದಂತೆ ರಾಜಕೀಯ ಕುಟುಂಬಗಳಿಗೆ ಸೇರಿದ ಬಿಜೆಪಿ ನಾಯಕರ ಹೆಸರನ್ನು ಪಟ್ಟಿ ಮಾಡಿದ್ದಾರೆ.

“ರವಿ ಸುಬ್ರಹ್ಮಣ್ಯ ಕರ್ನಾಟಕದ ಬಿಜೆಪಿ ಶಾಸಕ. ನಾನು ತೇಜಸ್ವಿ ಸೂರ್ಯ ಅವರನ್ನು ಕೇಳಲು ಬಯಸುತ್ತೇನೆ, ಅವರಿಗೆ ರವಿ ಸುಬ್ರಹ್ಮಣ್ಯ ಅವರ ಬಗ್ಗೆ ತಿಳಿದಿದೆಯೇ. ಒಂದು ವೇಳೆ ಅವರು ಅವರನ್ನು ತಿಳಿದಿದ್ದರೆ, ಅವರು ಆಕಸ್ಮಿಕವಾಗಿ ಯಾವುದೇ ದೂರದ ಸಂಬಂಧ ಹೊಂದಿದ್ದಾರೆಯೇ?” ಸುಪ್ರಿಯಾ ಸುಲೆ ಕೇಳಿದ್ದಾರೆ.

“ನಾವೆಲ್ಲರೂ ರಾಜಕೀಯ ಕುಟುಂಬಗಳಲ್ಲಿ ಹುಟ್ಟಿದ್ದೇವೆ ಎಂಬುದು ಸಾಮಾನ್ಯ ಸಂಗತಿಯಾಗಿದೆ. ನಾನು ರಾಜಕೀಯ ಕುಟುಂಬದಲ್ಲಿ ಹುಟ್ಟಿದ್ದಕ್ಕೆ ನನಗೆ ತುಂಬಾ ಹೆಮ್ಮೆ ಇದೆ. ನಾನು ಯಾರ ಮಗಳು ಎಂಬ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ” ಎಂದು ಸುಪ್ರಿಯಾ ಹೇಳಿದ್ದಾರೆ.

ಮೋದಿ ಬರುವುದಕ್ಕಿಂತ ಮುಂಚೆ ಭಾರತದಲ್ಲಿ ಯಾವುದೇ ಉದ್ದಿಮೆಗಳು ಇರಲಿಲ್ಲ ಎಂಬ ತೇಜಸ್ವಿ ಸೂರ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಸುಪ್ರಿಯಾ, “ವಿಪ್ರೋ ಬಹುಶಃ ಬೆಂಗಳೂರಿನಲ್ಲಿರುವುದಾಗಿದೆ. ಭಾರತದಲ್ಲಿ ಅತಿ ದೊಡ್ಡ ಕಂಪನಿಯಾಗಿರುವ ಇನ್ಫೋಸಿಸ್ ಕೂಡ ಬೆಂಗಳೂರಿನಲ್ಲಿ ತನ್ನ ಅಸ್ತಿತ್ವವನ್ನು ಹೊಂದಿದೆ. ನಮ್ಮ ರಾಜ್ಯದಲ್ಲಿ ಅವರು ಇದ್ದಾರೆ ಎಂಬುದಕ್ಕೆ ತುಂಬಾ ಹೆಮ್ಮೆ ಇದೆ. ಪೂನಾವಾಲರ ಲಸಿಕೆ ಕಂಪನಿಗೆ ಈ ಸರ್ಕಾರ ಪ್ರಶಸ್ತಿ ನೀಡಿತು. ಆ ವ್ಯಕ್ತಿ ಶೂನ್ಯದಿಂದ ಪ್ರಾರಂಭಿಸಿದ್ದರು, ಅವರು ನನ್ನ ತಂದೆಯೊಂದಿಗೆ ಶಾಲೆಗೆ ಹೋದವರಾಗಿದ್ದರು, ಹಾಗಾಗಿ ನನಗೆ ಸಂಪೂರ್ಣ ಹಿನ್ನೆಲೆ ತಿಳಿದಿದೆ” ಎಂದು ಸುಪ್ರಿಯಾ ಸುಲೆ ಅವರು ಹಲವು ಕಂಪೆನಿಗಳ ಪಟ್ಟಿಯನ್ನು ಓದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...