Homeಮುಖಪುಟಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ಸಂಸದ ತೇಜಸ್ವಿ ಸೂರ್ಯನನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರಿಯಾ, ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಯಾರು ಗೊತ್ತೆ ಎಂದು ಕೇಳಿದ್ದಾರೆ

- Advertisement -
- Advertisement -

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಂಸದೆ ಸುಪ್ರಿಯಾ ಸುಲೆ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ತರಾಟಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮ ಬಳಕೆದಾರರು ಸುಪ್ರಿಯಾ ಸುಳೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಳೆದ ವಾರ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಾಡಿದ್ದ ‘ಎರಡು ಭಾರತ’ ಎಂಬ ಭಾಷಣವನ್ನು ಉಲ್ಲೇಖಿಸಿ ಸಂಸದ ತೇಜಸ್ವಿ ಸೂರ್ಯ ಟೀಕಿಸಿದ್ದರು. ಇದರ ನಂತರ ಸುಪ್ರಿಯಾ ಸುಲೆ ಅವರು ಲೋಕಸಭೆಯಲ್ಲಿ ಮಾತನಾಡಿದ್ದು, ತೇಜಸ್ವಿ ಸೂರ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಷ್ಟೇ ಅಲ್ಲದೆ, ರಾಜ್ಯ ಸರ್ಕಾರ ಹಿಜಾಬ್ ನಿಷೇಧ ಮಾಡಿರುವುದನ್ನು ಸಂಸದೆ ಸುಪ್ರಿಯಾ ಸುಲೆ ಖಂಡಿಸಿದ್ದು, “ವ್ಯಕ್ತಿಯೊಬ್ಬರು ಏನು ಧರಿಸಬೇಕು, ಏನು ತಿನ್ನಬೇಕು, ಏನು ಮಾತನಾಡಬೇಕು ಮತ್ತು ಏನು ಯೋಚಿಸಬೇಕು ಎಂಬುದು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ. ಅದನ್ನು ಯಾರೂ ತಡೆಯಬಾರದು. ಕರ್ನಾಟಕ ಸರ್ಕಾರ ಹಿಜಾಬ್ ನಿಷೇಧಿಸಿರುವ ಕ್ರಮವು ಸರ್ವಾಧಿಕಾರಿ ಸ್ವಭಾವದ್ದಾಗಿದೆ” ಎಂದು ಅವರು ಕರೆದಿದ್ದಾರೆ.

“ಕಾಂಗ್ರೆಸ್ ಮತ್ತು ಅದರ ಕುಟುಂಬ ರಾಜಕಾರಣದ ನಾಯಕರು ತಮ್ಮ ರಾಜಕೀಯ ನಿರುದ್ಯೋಗವನ್ನು ದೇಶದ ನಿರುದ್ಯೋಗ ಎಂದು ಗೊಂದಲಗೊಳಿಸುತ್ತಿದ್ದಾರೆ. ಈ ದೇಶದಲ್ಲಿ ನಿರುದ್ಯೋಗಿಯೊಬ್ಬರು ಇದ್ದರೆ ಅದು ಕಾಂಗ್ರೆಸ್ ಪಕ್ಷದ ಯುವರಾಜ ಮತ್ತು ಕಾಂಗ್ರೆಸ್ ಪಕ್ಷದ ವಂಶಸ್ಥರು” ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದರು.

ಇದನ್ನು ಉಲ್ಲೇಖಿಸಿದ ಸುಪ್ರಿಯಾ ಸುಲೆ, ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಅವರೊಂದಿಗೆ ತೇಜಸ್ವಿ ಸೂರ್ಯ ಅವರ ಸಂಬಂಧದ ಬಗ್ಗೆ ಕೇಳಿದ್ದಾರೆ. ಶಾಸಕ ರವಿ ಸುಬ್ರಹ್ಮಣ್ಯ ತೇಜಸ್ವಿ ಸೂರ್ಯ ಅವರ ಸೋದರ ಸಂಬಂಧಿಯಾಗಿದ್ದಾರೆ. ಇಷ್ಟೇ ಅಲ್ಲದೆ, ಪ್ರೀತಮ್ ಮುಂಡೆ, ಪೂನಂ ಮಹಾಜನ್, ಹೀನಾ ಗಾವಿತ್, ರಕ್ಷಾ ಖಡ್ಸೆ, ಸುಜಯ್ ವಿಖೆ ಪಾಟೀಲ್ ಸೇರಿದಂತೆ ರಾಜಕೀಯ ಕುಟುಂಬಗಳಿಗೆ ಸೇರಿದ ಬಿಜೆಪಿ ನಾಯಕರ ಹೆಸರನ್ನು ಪಟ್ಟಿ ಮಾಡಿದ್ದಾರೆ.

“ರವಿ ಸುಬ್ರಹ್ಮಣ್ಯ ಕರ್ನಾಟಕದ ಬಿಜೆಪಿ ಶಾಸಕ. ನಾನು ತೇಜಸ್ವಿ ಸೂರ್ಯ ಅವರನ್ನು ಕೇಳಲು ಬಯಸುತ್ತೇನೆ, ಅವರಿಗೆ ರವಿ ಸುಬ್ರಹ್ಮಣ್ಯ ಅವರ ಬಗ್ಗೆ ತಿಳಿದಿದೆಯೇ. ಒಂದು ವೇಳೆ ಅವರು ಅವರನ್ನು ತಿಳಿದಿದ್ದರೆ, ಅವರು ಆಕಸ್ಮಿಕವಾಗಿ ಯಾವುದೇ ದೂರದ ಸಂಬಂಧ ಹೊಂದಿದ್ದಾರೆಯೇ?” ಸುಪ್ರಿಯಾ ಸುಲೆ ಕೇಳಿದ್ದಾರೆ.

“ನಾವೆಲ್ಲರೂ ರಾಜಕೀಯ ಕುಟುಂಬಗಳಲ್ಲಿ ಹುಟ್ಟಿದ್ದೇವೆ ಎಂಬುದು ಸಾಮಾನ್ಯ ಸಂಗತಿಯಾಗಿದೆ. ನಾನು ರಾಜಕೀಯ ಕುಟುಂಬದಲ್ಲಿ ಹುಟ್ಟಿದ್ದಕ್ಕೆ ನನಗೆ ತುಂಬಾ ಹೆಮ್ಮೆ ಇದೆ. ನಾನು ಯಾರ ಮಗಳು ಎಂಬ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ” ಎಂದು ಸುಪ್ರಿಯಾ ಹೇಳಿದ್ದಾರೆ.

ಮೋದಿ ಬರುವುದಕ್ಕಿಂತ ಮುಂಚೆ ಭಾರತದಲ್ಲಿ ಯಾವುದೇ ಉದ್ದಿಮೆಗಳು ಇರಲಿಲ್ಲ ಎಂಬ ತೇಜಸ್ವಿ ಸೂರ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಸುಪ್ರಿಯಾ, “ವಿಪ್ರೋ ಬಹುಶಃ ಬೆಂಗಳೂರಿನಲ್ಲಿರುವುದಾಗಿದೆ. ಭಾರತದಲ್ಲಿ ಅತಿ ದೊಡ್ಡ ಕಂಪನಿಯಾಗಿರುವ ಇನ್ಫೋಸಿಸ್ ಕೂಡ ಬೆಂಗಳೂರಿನಲ್ಲಿ ತನ್ನ ಅಸ್ತಿತ್ವವನ್ನು ಹೊಂದಿದೆ. ನಮ್ಮ ರಾಜ್ಯದಲ್ಲಿ ಅವರು ಇದ್ದಾರೆ ಎಂಬುದಕ್ಕೆ ತುಂಬಾ ಹೆಮ್ಮೆ ಇದೆ. ಪೂನಾವಾಲರ ಲಸಿಕೆ ಕಂಪನಿಗೆ ಈ ಸರ್ಕಾರ ಪ್ರಶಸ್ತಿ ನೀಡಿತು. ಆ ವ್ಯಕ್ತಿ ಶೂನ್ಯದಿಂದ ಪ್ರಾರಂಭಿಸಿದ್ದರು, ಅವರು ನನ್ನ ತಂದೆಯೊಂದಿಗೆ ಶಾಲೆಗೆ ಹೋದವರಾಗಿದ್ದರು, ಹಾಗಾಗಿ ನನಗೆ ಸಂಪೂರ್ಣ ಹಿನ್ನೆಲೆ ತಿಳಿದಿದೆ” ಎಂದು ಸುಪ್ರಿಯಾ ಸುಲೆ ಅವರು ಹಲವು ಕಂಪೆನಿಗಳ ಪಟ್ಟಿಯನ್ನು ಓದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...