Homeಮುಖಪುಟಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ಸಂಸದ ತೇಜಸ್ವಿ ಸೂರ್ಯನನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರಿಯಾ, ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಯಾರು ಗೊತ್ತೆ ಎಂದು ಕೇಳಿದ್ದಾರೆ

- Advertisement -
- Advertisement -

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಂಸದೆ ಸುಪ್ರಿಯಾ ಸುಲೆ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ತರಾಟಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮ ಬಳಕೆದಾರರು ಸುಪ್ರಿಯಾ ಸುಳೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಳೆದ ವಾರ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಾಡಿದ್ದ ‘ಎರಡು ಭಾರತ’ ಎಂಬ ಭಾಷಣವನ್ನು ಉಲ್ಲೇಖಿಸಿ ಸಂಸದ ತೇಜಸ್ವಿ ಸೂರ್ಯ ಟೀಕಿಸಿದ್ದರು. ಇದರ ನಂತರ ಸುಪ್ರಿಯಾ ಸುಲೆ ಅವರು ಲೋಕಸಭೆಯಲ್ಲಿ ಮಾತನಾಡಿದ್ದು, ತೇಜಸ್ವಿ ಸೂರ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಷ್ಟೇ ಅಲ್ಲದೆ, ರಾಜ್ಯ ಸರ್ಕಾರ ಹಿಜಾಬ್ ನಿಷೇಧ ಮಾಡಿರುವುದನ್ನು ಸಂಸದೆ ಸುಪ್ರಿಯಾ ಸುಲೆ ಖಂಡಿಸಿದ್ದು, “ವ್ಯಕ್ತಿಯೊಬ್ಬರು ಏನು ಧರಿಸಬೇಕು, ಏನು ತಿನ್ನಬೇಕು, ಏನು ಮಾತನಾಡಬೇಕು ಮತ್ತು ಏನು ಯೋಚಿಸಬೇಕು ಎಂಬುದು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ. ಅದನ್ನು ಯಾರೂ ತಡೆಯಬಾರದು. ಕರ್ನಾಟಕ ಸರ್ಕಾರ ಹಿಜಾಬ್ ನಿಷೇಧಿಸಿರುವ ಕ್ರಮವು ಸರ್ವಾಧಿಕಾರಿ ಸ್ವಭಾವದ್ದಾಗಿದೆ” ಎಂದು ಅವರು ಕರೆದಿದ್ದಾರೆ.

“ಕಾಂಗ್ರೆಸ್ ಮತ್ತು ಅದರ ಕುಟುಂಬ ರಾಜಕಾರಣದ ನಾಯಕರು ತಮ್ಮ ರಾಜಕೀಯ ನಿರುದ್ಯೋಗವನ್ನು ದೇಶದ ನಿರುದ್ಯೋಗ ಎಂದು ಗೊಂದಲಗೊಳಿಸುತ್ತಿದ್ದಾರೆ. ಈ ದೇಶದಲ್ಲಿ ನಿರುದ್ಯೋಗಿಯೊಬ್ಬರು ಇದ್ದರೆ ಅದು ಕಾಂಗ್ರೆಸ್ ಪಕ್ಷದ ಯುವರಾಜ ಮತ್ತು ಕಾಂಗ್ರೆಸ್ ಪಕ್ಷದ ವಂಶಸ್ಥರು” ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದರು.

ಇದನ್ನು ಉಲ್ಲೇಖಿಸಿದ ಸುಪ್ರಿಯಾ ಸುಲೆ, ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಅವರೊಂದಿಗೆ ತೇಜಸ್ವಿ ಸೂರ್ಯ ಅವರ ಸಂಬಂಧದ ಬಗ್ಗೆ ಕೇಳಿದ್ದಾರೆ. ಶಾಸಕ ರವಿ ಸುಬ್ರಹ್ಮಣ್ಯ ತೇಜಸ್ವಿ ಸೂರ್ಯ ಅವರ ಸೋದರ ಸಂಬಂಧಿಯಾಗಿದ್ದಾರೆ. ಇಷ್ಟೇ ಅಲ್ಲದೆ, ಪ್ರೀತಮ್ ಮುಂಡೆ, ಪೂನಂ ಮಹಾಜನ್, ಹೀನಾ ಗಾವಿತ್, ರಕ್ಷಾ ಖಡ್ಸೆ, ಸುಜಯ್ ವಿಖೆ ಪಾಟೀಲ್ ಸೇರಿದಂತೆ ರಾಜಕೀಯ ಕುಟುಂಬಗಳಿಗೆ ಸೇರಿದ ಬಿಜೆಪಿ ನಾಯಕರ ಹೆಸರನ್ನು ಪಟ್ಟಿ ಮಾಡಿದ್ದಾರೆ.

“ರವಿ ಸುಬ್ರಹ್ಮಣ್ಯ ಕರ್ನಾಟಕದ ಬಿಜೆಪಿ ಶಾಸಕ. ನಾನು ತೇಜಸ್ವಿ ಸೂರ್ಯ ಅವರನ್ನು ಕೇಳಲು ಬಯಸುತ್ತೇನೆ, ಅವರಿಗೆ ರವಿ ಸುಬ್ರಹ್ಮಣ್ಯ ಅವರ ಬಗ್ಗೆ ತಿಳಿದಿದೆಯೇ. ಒಂದು ವೇಳೆ ಅವರು ಅವರನ್ನು ತಿಳಿದಿದ್ದರೆ, ಅವರು ಆಕಸ್ಮಿಕವಾಗಿ ಯಾವುದೇ ದೂರದ ಸಂಬಂಧ ಹೊಂದಿದ್ದಾರೆಯೇ?” ಸುಪ್ರಿಯಾ ಸುಲೆ ಕೇಳಿದ್ದಾರೆ.

“ನಾವೆಲ್ಲರೂ ರಾಜಕೀಯ ಕುಟುಂಬಗಳಲ್ಲಿ ಹುಟ್ಟಿದ್ದೇವೆ ಎಂಬುದು ಸಾಮಾನ್ಯ ಸಂಗತಿಯಾಗಿದೆ. ನಾನು ರಾಜಕೀಯ ಕುಟುಂಬದಲ್ಲಿ ಹುಟ್ಟಿದ್ದಕ್ಕೆ ನನಗೆ ತುಂಬಾ ಹೆಮ್ಮೆ ಇದೆ. ನಾನು ಯಾರ ಮಗಳು ಎಂಬ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ” ಎಂದು ಸುಪ್ರಿಯಾ ಹೇಳಿದ್ದಾರೆ.

ಮೋದಿ ಬರುವುದಕ್ಕಿಂತ ಮುಂಚೆ ಭಾರತದಲ್ಲಿ ಯಾವುದೇ ಉದ್ದಿಮೆಗಳು ಇರಲಿಲ್ಲ ಎಂಬ ತೇಜಸ್ವಿ ಸೂರ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಸುಪ್ರಿಯಾ, “ವಿಪ್ರೋ ಬಹುಶಃ ಬೆಂಗಳೂರಿನಲ್ಲಿರುವುದಾಗಿದೆ. ಭಾರತದಲ್ಲಿ ಅತಿ ದೊಡ್ಡ ಕಂಪನಿಯಾಗಿರುವ ಇನ್ಫೋಸಿಸ್ ಕೂಡ ಬೆಂಗಳೂರಿನಲ್ಲಿ ತನ್ನ ಅಸ್ತಿತ್ವವನ್ನು ಹೊಂದಿದೆ. ನಮ್ಮ ರಾಜ್ಯದಲ್ಲಿ ಅವರು ಇದ್ದಾರೆ ಎಂಬುದಕ್ಕೆ ತುಂಬಾ ಹೆಮ್ಮೆ ಇದೆ. ಪೂನಾವಾಲರ ಲಸಿಕೆ ಕಂಪನಿಗೆ ಈ ಸರ್ಕಾರ ಪ್ರಶಸ್ತಿ ನೀಡಿತು. ಆ ವ್ಯಕ್ತಿ ಶೂನ್ಯದಿಂದ ಪ್ರಾರಂಭಿಸಿದ್ದರು, ಅವರು ನನ್ನ ತಂದೆಯೊಂದಿಗೆ ಶಾಲೆಗೆ ಹೋದವರಾಗಿದ್ದರು, ಹಾಗಾಗಿ ನನಗೆ ಸಂಪೂರ್ಣ ಹಿನ್ನೆಲೆ ತಿಳಿದಿದೆ” ಎಂದು ಸುಪ್ರಿಯಾ ಸುಲೆ ಅವರು ಹಲವು ಕಂಪೆನಿಗಳ ಪಟ್ಟಿಯನ್ನು ಓದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...