Homeಮುಖಪುಟಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ಸಂಸದ ತೇಜಸ್ವಿ ಸೂರ್ಯನನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರಿಯಾ, ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಯಾರು ಗೊತ್ತೆ ಎಂದು ಕೇಳಿದ್ದಾರೆ

- Advertisement -
- Advertisement -

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಂಸದೆ ಸುಪ್ರಿಯಾ ಸುಲೆ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ತರಾಟಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮ ಬಳಕೆದಾರರು ಸುಪ್ರಿಯಾ ಸುಳೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಳೆದ ವಾರ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಾಡಿದ್ದ ‘ಎರಡು ಭಾರತ’ ಎಂಬ ಭಾಷಣವನ್ನು ಉಲ್ಲೇಖಿಸಿ ಸಂಸದ ತೇಜಸ್ವಿ ಸೂರ್ಯ ಟೀಕಿಸಿದ್ದರು. ಇದರ ನಂತರ ಸುಪ್ರಿಯಾ ಸುಲೆ ಅವರು ಲೋಕಸಭೆಯಲ್ಲಿ ಮಾತನಾಡಿದ್ದು, ತೇಜಸ್ವಿ ಸೂರ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಷ್ಟೇ ಅಲ್ಲದೆ, ರಾಜ್ಯ ಸರ್ಕಾರ ಹಿಜಾಬ್ ನಿಷೇಧ ಮಾಡಿರುವುದನ್ನು ಸಂಸದೆ ಸುಪ್ರಿಯಾ ಸುಲೆ ಖಂಡಿಸಿದ್ದು, “ವ್ಯಕ್ತಿಯೊಬ್ಬರು ಏನು ಧರಿಸಬೇಕು, ಏನು ತಿನ್ನಬೇಕು, ಏನು ಮಾತನಾಡಬೇಕು ಮತ್ತು ಏನು ಯೋಚಿಸಬೇಕು ಎಂಬುದು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ. ಅದನ್ನು ಯಾರೂ ತಡೆಯಬಾರದು. ಕರ್ನಾಟಕ ಸರ್ಕಾರ ಹಿಜಾಬ್ ನಿಷೇಧಿಸಿರುವ ಕ್ರಮವು ಸರ್ವಾಧಿಕಾರಿ ಸ್ವಭಾವದ್ದಾಗಿದೆ” ಎಂದು ಅವರು ಕರೆದಿದ್ದಾರೆ.

“ಕಾಂಗ್ರೆಸ್ ಮತ್ತು ಅದರ ಕುಟುಂಬ ರಾಜಕಾರಣದ ನಾಯಕರು ತಮ್ಮ ರಾಜಕೀಯ ನಿರುದ್ಯೋಗವನ್ನು ದೇಶದ ನಿರುದ್ಯೋಗ ಎಂದು ಗೊಂದಲಗೊಳಿಸುತ್ತಿದ್ದಾರೆ. ಈ ದೇಶದಲ್ಲಿ ನಿರುದ್ಯೋಗಿಯೊಬ್ಬರು ಇದ್ದರೆ ಅದು ಕಾಂಗ್ರೆಸ್ ಪಕ್ಷದ ಯುವರಾಜ ಮತ್ತು ಕಾಂಗ್ರೆಸ್ ಪಕ್ಷದ ವಂಶಸ್ಥರು” ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದರು.

ಇದನ್ನು ಉಲ್ಲೇಖಿಸಿದ ಸುಪ್ರಿಯಾ ಸುಲೆ, ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಅವರೊಂದಿಗೆ ತೇಜಸ್ವಿ ಸೂರ್ಯ ಅವರ ಸಂಬಂಧದ ಬಗ್ಗೆ ಕೇಳಿದ್ದಾರೆ. ಶಾಸಕ ರವಿ ಸುಬ್ರಹ್ಮಣ್ಯ ತೇಜಸ್ವಿ ಸೂರ್ಯ ಅವರ ಸೋದರ ಸಂಬಂಧಿಯಾಗಿದ್ದಾರೆ. ಇಷ್ಟೇ ಅಲ್ಲದೆ, ಪ್ರೀತಮ್ ಮುಂಡೆ, ಪೂನಂ ಮಹಾಜನ್, ಹೀನಾ ಗಾವಿತ್, ರಕ್ಷಾ ಖಡ್ಸೆ, ಸುಜಯ್ ವಿಖೆ ಪಾಟೀಲ್ ಸೇರಿದಂತೆ ರಾಜಕೀಯ ಕುಟುಂಬಗಳಿಗೆ ಸೇರಿದ ಬಿಜೆಪಿ ನಾಯಕರ ಹೆಸರನ್ನು ಪಟ್ಟಿ ಮಾಡಿದ್ದಾರೆ.

“ರವಿ ಸುಬ್ರಹ್ಮಣ್ಯ ಕರ್ನಾಟಕದ ಬಿಜೆಪಿ ಶಾಸಕ. ನಾನು ತೇಜಸ್ವಿ ಸೂರ್ಯ ಅವರನ್ನು ಕೇಳಲು ಬಯಸುತ್ತೇನೆ, ಅವರಿಗೆ ರವಿ ಸುಬ್ರಹ್ಮಣ್ಯ ಅವರ ಬಗ್ಗೆ ತಿಳಿದಿದೆಯೇ. ಒಂದು ವೇಳೆ ಅವರು ಅವರನ್ನು ತಿಳಿದಿದ್ದರೆ, ಅವರು ಆಕಸ್ಮಿಕವಾಗಿ ಯಾವುದೇ ದೂರದ ಸಂಬಂಧ ಹೊಂದಿದ್ದಾರೆಯೇ?” ಸುಪ್ರಿಯಾ ಸುಲೆ ಕೇಳಿದ್ದಾರೆ.

“ನಾವೆಲ್ಲರೂ ರಾಜಕೀಯ ಕುಟುಂಬಗಳಲ್ಲಿ ಹುಟ್ಟಿದ್ದೇವೆ ಎಂಬುದು ಸಾಮಾನ್ಯ ಸಂಗತಿಯಾಗಿದೆ. ನಾನು ರಾಜಕೀಯ ಕುಟುಂಬದಲ್ಲಿ ಹುಟ್ಟಿದ್ದಕ್ಕೆ ನನಗೆ ತುಂಬಾ ಹೆಮ್ಮೆ ಇದೆ. ನಾನು ಯಾರ ಮಗಳು ಎಂಬ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ” ಎಂದು ಸುಪ್ರಿಯಾ ಹೇಳಿದ್ದಾರೆ.

ಮೋದಿ ಬರುವುದಕ್ಕಿಂತ ಮುಂಚೆ ಭಾರತದಲ್ಲಿ ಯಾವುದೇ ಉದ್ದಿಮೆಗಳು ಇರಲಿಲ್ಲ ಎಂಬ ತೇಜಸ್ವಿ ಸೂರ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಸುಪ್ರಿಯಾ, “ವಿಪ್ರೋ ಬಹುಶಃ ಬೆಂಗಳೂರಿನಲ್ಲಿರುವುದಾಗಿದೆ. ಭಾರತದಲ್ಲಿ ಅತಿ ದೊಡ್ಡ ಕಂಪನಿಯಾಗಿರುವ ಇನ್ಫೋಸಿಸ್ ಕೂಡ ಬೆಂಗಳೂರಿನಲ್ಲಿ ತನ್ನ ಅಸ್ತಿತ್ವವನ್ನು ಹೊಂದಿದೆ. ನಮ್ಮ ರಾಜ್ಯದಲ್ಲಿ ಅವರು ಇದ್ದಾರೆ ಎಂಬುದಕ್ಕೆ ತುಂಬಾ ಹೆಮ್ಮೆ ಇದೆ. ಪೂನಾವಾಲರ ಲಸಿಕೆ ಕಂಪನಿಗೆ ಈ ಸರ್ಕಾರ ಪ್ರಶಸ್ತಿ ನೀಡಿತು. ಆ ವ್ಯಕ್ತಿ ಶೂನ್ಯದಿಂದ ಪ್ರಾರಂಭಿಸಿದ್ದರು, ಅವರು ನನ್ನ ತಂದೆಯೊಂದಿಗೆ ಶಾಲೆಗೆ ಹೋದವರಾಗಿದ್ದರು, ಹಾಗಾಗಿ ನನಗೆ ಸಂಪೂರ್ಣ ಹಿನ್ನೆಲೆ ತಿಳಿದಿದೆ” ಎಂದು ಸುಪ್ರಿಯಾ ಸುಲೆ ಅವರು ಹಲವು ಕಂಪೆನಿಗಳ ಪಟ್ಟಿಯನ್ನು ಓದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....