Homeಮುಖಪುಟವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

ವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

- Advertisement -
- Advertisement -

ವಕ್ಫ್‌ (ತಿದ್ದುಪಡಿ) ಮಸೂದೆಗೆ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ (ಯುನೈಟೆಡ್) ಸಂಸತ್ತಿನಲ್ಲಿ ಬೆಂಬಲಿಸಿದ್ದನ್ನು ವಿರೋಧಿಸಿ ಪಕ್ಷದ ಇಬ್ಬರು ಹಿರಿಯ ನಾಯಕರು ಗುರುವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಗ್ಗಿನ ಜಾವ 3 ಗಂಟೆಗೆ ಲೋಕಸಭೆಯಲ್ಲಿ, ಶುಕ್ರವಾರ ಬೆಳಗ್ಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಸೂದೆ ಬೆಂಬಲಿಸಿದವರಲ್ಲಿ ಎನ್‌ಡಿಎ ಮಿತ್ರ ಪಕ್ಷವಾದ ಜೆಡಿ(ಯು) ಪಕ್ಷ ಕೂಡಾ ಒಂದಾಗಿದೆ. ವಕ್ಫ್ ಮಸೂದೆಗೆ ಬೆಂಬಲ

ಪಕ್ಷದ ಹಿರಿಯ ನಾಯಕರಾದ ಮೊಹಮ್ಮದ್ ಖಾಸಿಮ್ ಅನ್ಸಾರಿ ಮತ್ತು ಮೊಹಮ್ಮದ್ ನವಾಜ್ ಮಲಿಕ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪ್ರತ್ಯೇಕ ಪತ್ರಗಳಲ್ಲಿ ಬರೆದಿದ್ದು, ಪಕ್ಷವು ಜಾತ್ಯತೀತ ಎಂದು ನಂಬಿದ್ದವು, ಆದರೆ ಇದೀಗ ಪಕ್ಷವು ಮುಸ್ಲಿಮರ “ಎಲ್ಲಾ ನಂಬಿಕೆಯನ್ನು ಕಳೆದುಕೊಂಡಿದೆ” ಎಂದು ಹೇಳಿದ್ದಾರೆ.

“ನನ್ನ ಜೀವನದ ಹಲವಾರು ವರ್ಷಗಳನ್ನು ಪಕ್ಷಕ್ಕೆ ನೀಡಿದ್ದಕ್ಕಾಗಿ ನಾನು ನಿರಾಶೆಗೊಂಡಿದ್ದೇನೆ” ಎಂದು ಅನ್ಸಾರಿ ಬರೆದ ಪತ್ರದಲ್ಲಿ ಹೇಳಿದ್ದಾರೆ. ಮಲಿಕ್ ಅವರು ತನ್ನ ಪತ್ರದಲ್ಲಿ, ವಕ್ಫ್ ಮಸೂದೆಯು ಸಂವಿಧಾನದಲ್ಲಿ ತಿಳಿಸಲಾದ ಅನೇಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

“ನಮ್ಮಂತಹ ಲಕ್ಷಾಂತರ ಭಾರತೀಯ ಮುಸ್ಲಿಮರು ನೀವು ಸಂಪೂರ್ಣವಾಗಿ ಜಾತ್ಯತೀತ ಸಿದ್ಧಾಂತದ ಧ್ವಜವಾಹಕರು ಎಂದು ಅಚಲ ನಂಬಿಕೆಯನ್ನು ಹೊಂದಿದ್ದರು ಎಂದು ನಾನು ಗಂಭೀರವಾಗಿ ಹೇಳಲು ಬಯಸುತ್ತೇನೆ. ಆದರೆ ಈಗ ಈ ನಂಬಿಕೆ ಮುರಿದುಹೋಗಿದೆ. ನಮ್ಮಂತಹ ಲಕ್ಷಾಂತರ ಸಮರ್ಪಿತ ಭಾರತೀಯ ಮುಸ್ಲಿಮರು ಮತ್ತು ಕಾರ್ಯಕರ್ತರು ಜೆಡಿ(ಯು) ನಿಲುವಿನಿಂದ ತೀವ್ರವಾಗಿ ಆಘಾತಕ್ಕೊಳಗಾಗಿದ್ದಾರೆ” ಎಂದು ಅನ್ಸಾರಿ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ವಕ್ಫ್ ಮಸೂದೆಯು ಭಾರತೀಯ ಮುಸ್ಲಿಮರ ವಿರುದ್ಧ ಇದ್ದು, ಅದನ್ನು ಯಾವುದೇ ಸಂದರ್ಭಗಳಲ್ಲಿಯೂ ಸ್ವೀಕರಿಸುವುದಿಲ್ಲ ಎಂದು ಅನ್ಸಾರಿ ಹೇಳಿದ್ದಾರೆ.

“ಈ ಮಸೂದೆಯು ಸಂವಿಧಾನದ ಅನೇಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಮಸೂದೆಯ ಮೂಲಕ, ಭಾರತೀಯ ಮುಸ್ಲಿಮರನ್ನು ಅವಮಾನಿಸಲಾಗುತ್ತಿದೆ… ನೀವು ಅಥವಾ ನಿಮ್ಮ ಪಕ್ಷ ಇದನ್ನು ಅರಿತುಕೊಳ್ಳುತ್ತಿಲ್ಲ. ನಾನು ನನ್ನ ಜೀವನದ ಹಲವು ವರ್ಷಗಳನ್ನು ಪಕ್ಷಕ್ಕೆ ನೀಡಿದ್ದಕ್ಕಾಗಿ ವಿಷಾದಿಸುತ್ತೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಮತ್ತೊಂದೆಡೆ, ಜೆಡಿ(ಯು)ನ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ನವಾಜ್ ಮಲಿಕ್ ಕೂಡ ರಾಜೀನಾಮೆ ನೀಡಿದ್ದಾರೆ, ವಕ್ಫ್ ಮಸೂದೆಗೆ ಪಕ್ಷದ ಬೆಂಬಲದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿತೀಶ್ ಕುಮಾರ್‌ಗೆ ಬರೆದ ರಾಜೀನಾಮೆ ಪತ್ರದಲ್ಲಿ,”ನೀವು ಸಂಪೂರ್ಣವಾಗಿ ಜಾತ್ಯತೀತ ಸಿದ್ಧಾಂತದ ಧ್ವಜವಾಹಕರು ಎಂದು ಲಕ್ಷಾಂತರ ಭಾರತೀಯ ಮುಸ್ಲಿಮರು ಅಚಲ ನಂಬಿಕೆಯನ್ನು ಹೊಂದಿದ್ದರು. ಆದರೆ ಈಗ ಈ ನಂಬಿಕೆ ಮುರಿದುಹೋಗಿದೆ. ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಜೆಡಿ(ಯು) ತೆಗೆದುಕೊಂಡ ನಿಲುವು ಸಮರ್ಪಿತ ಭಾರತೀಯ ಮುಸ್ಲಿಮರು ಮತ್ತು ನಮ್ಮಂತಹ ಪಕ್ಷದ ಕಾರ್ಯಕರ್ತರಿಗೆ ತೀವ್ರವಾಗಿ ನೋವುಂಟು ಮಾಡಿದೆ. ಲಾಲನ್ ಸಿಂಗ್ ಲೋಕಸಭೆಯಲ್ಲಿ ಮಾತನಾಡಿದ ಮತ್ತು ಈ ಮಸೂದೆಯನ್ನು ಬೆಂಬಲಿಸಿದ ರೀತಿ ನಮಗೆ ನಿರಾಶೆಯನ್ನುಂಟು ಮಾಡಿದೆ.” ಎಂದು ನವಾಜ್ ಮಲಿಕ್ ಹೇಳಿದ್ದಾರೆ.

“ವಕ್ಫ್ ಮಸೂದೆ ಭಾರತೀಯ ಮುಸ್ಲಿಮರ ವಿರುದ್ಧವಾಗಿದೆ. ನಾವು ಅದನ್ನು ಯಾವುದೇ ಸಂದರ್ಭದಲ್ಲೂ ಸ್ವೀಕರಿಸಲು ಸಾಧ್ಯವಿಲ್ಲ. ಈ ಮಸೂದೆಯು ಸಂವಿಧಾನದ ಹಲವು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಮಸೂದೆಯ ಮೂಲಕ ಭಾರತೀಯ ಮುಸ್ಲಿಮರನ್ನು ಅವಮಾನಿಸಲಾಗುತ್ತಿದೆ… ನೀವು ಅಥವಾ ನಿಮ್ಮ ಪಕ್ಷ ಇದನ್ನು ಅರಿತುಕೊಳ್ಳುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಜೆಡಿ (ಯು) ನಾಯಕ ರಾಜೀವ್ ರಂಜನ್ ಸಿಂಗ್ ಲೋಕಸಭೆಯಲ್ಲಿ ಮಸೂದೆಯನ್ನು ಸಮರ್ಥಿಸಿಕೊಂಡ ಒಂದೇ ದಿನದಲ್ಲಿ ಈ ರಾಜೀನಾಮೆ ಸರಣಿ ಪ್ರಾರಂಭವಾಗಿದೆ. ರಾಜೀವ್ ರಂಜನ್ ಅವರು ವಕ್ಪ್‌ ತಿದ್ದಪಡಿ ಬಗ್ಗೆ ಮಾತನಾಡುತ್ತಾ, ಇದು ಪಾರದರ್ಶಕತೆಯನ್ನು ತರಲು ಮತ್ತು ಮುಸ್ಲಿಂ ಸಮುದಾಯದ ಎಲ್ಲಾ ವರ್ಗಗಳ ಕಲ್ಯಾಣವನ್ನು ಖಚಿತಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದರು. ಮಸೂದೆಯನ್ನು “ಮುಸ್ಲಿಂ ವಿರೋಧಿ” ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದ್ದು ಎಂದು ಹೇಳಿದ್ದ ಅವರು, ಅಂತಹ ವಾದಗಳನ್ನು ನಿರಾಕರಿಸಿದ್ದರು.

“ವಕ್ಫ್ ಎಂಬುದು ಮುಸ್ಲಿಮರ ಹಿತಾಸಕ್ತಿಗಾಗಿ ಕೆಲಸ ಮಾಡಲು ರಚಿಸಲಾದ ಒಂದು ರೀತಿಯ ಟ್ರಸ್ಟ್ ಆಗಿದೆ. ಇದು ಧಾರ್ಮಿಕ ಸಂಘಟನೆಯಲ್ಲ… ಟ್ರಸ್ಟ್ ಎಲ್ಲಾ ವರ್ಗಗಳ ಮುಸ್ಲಿಮರಿಗೆ ನ್ಯಾಯ ಒದಗಿಸುವ ಹಕ್ಕನ್ನು ಹೊಂದಿದೆ, ಆದರೆ ಅದು ನಡೆಯುತ್ತಿಲ್ಲ… ಇಂದು, ಒಂದು ನಿರೂಪಣೆ ರಚಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಲಾಗುತ್ತಿದೆ. ನಿಮಗೆ ಅವರನ್ನು ಇಷ್ಟವಾಗದಿದ್ದರೆ, ಅವರನ್ನು ನೋಡಬೇಡಿ, ಆದರೆ ಅವರ ಒಳ್ಳೆಯ ಕೆಲಸವನ್ನು ಪ್ರಶಂಸಿಸಿ,” ಎಂದು ರಂಜನ್ ಸಿಂಗ್ ಹೇಳಿದ್ದಾರೆ.

ಪಕ್ಷದ ಇಬ್ಬರು ಹಿರಿಯ ನಾಯಕರಂತೆ ಜೆಡಿಯುನ ಹಲವಾರು ಮುಸ್ಲಿಂ ನಾಯಕರು ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಷಯದ ಬಗ್ಗೆ ಕಾನೂನು ಅಭಿಪ್ರಾಯವನ್ನು ಪಡೆಯುವುದಾಗಿ ಹೇಳಿದ್ದಾರೆ. ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯ ನಂತರ ಅವರು ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಜೆಡಿಯು ಬೆಂಬಲವನ್ನು ನೀಡಿದ ನಂತರ ನಾವು ವಂಚನೆಗೊಳಗಾಗಿದ್ದೇವೆ. ಈಗ ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲದಂತಾಗಿದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಮತ್ತು ಜೆಡಿಯು ಪ್ರಧಾನ ಕಾರ್ಯದರ್ಶಿ ಗುಲಾಂ ರಸೂಲ್ ಬಲ್ಯಾವಿ ಹೇಳಿದ್ದಾರೆ.

ಎರಡಾ-ಎ-ಶರಿಯಾ ಪರವಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) 31 ಪುಟಗಳ ಸಲಹೆಯನ್ನು ಸಲ್ಲಿಸಿದ್ದೆ. ಲೋಕಸಭೆಯಲ್ಲಿ ಮಸೂದೆ ಮಂಡನೆಯಾಗುವ ಮುನ್ನಾ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದ್ದೆ. ಆದರೆ, ಅವರ ಸಲಹೆಗಳಿಗೆ ಜೆಪಿಸಿ ಅಥವಾ ಸಿಎಂ ನಿತೀಶ್‌ ಕಿವಿಗೊಡಲಿಲ್ಲ.

ಈ ಸಂಬಂಧ ಶೀಘ್ರದಲ್ಲೇ ನಾವು ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯನ್ನು ಕರೆಯಲಿದ್ದೇವೆ. ತದನಂತರ ಮುಂದಿನ ಕ್ರಮವನ್ನು ಕೈಗೊಳ್ಳಲಿದ್ದೇವೆ. ಅಲ್ಲದೇ ನ್ಯಾಯಾಲಯದಲ್ಲಿ ಮಸೂದೆಯನ್ನು ಪ್ರಶ್ನಿಸಲು ನಾವು ಕಾನೂನು ತಜ್ಞರೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಅವರು ಗುರುವಾರ ಪಾಟ್ನಾದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

ಬಲ್ಯಾವಿ ಮಾತ್ರವಲ್ಲ. ಜೆಡಿಯು ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಮತ್ತು ಬಿಹಾರ ವಿಧಾನ ಪರಿಷತ್ತಿನ ಉಪಾಧ್ಯಕ್ಷ ಸಲೀಂ ಪರ್ವೇಜ್ ಅವರು ಶೀಘ್ರದಲ್ಲೇ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಮಸೂದೆಯ ಬಗ್ಗೆ ಪಕ್ಷದ ಮುಸ್ಲಿಂ ಮುಖಂಡರ ಅಸಮಾಧಾನವನ್ನು ತಿಳಿಸುವುದಾಗಿ ಹೇಳಿದ್ದಾರೆ.

ಇದಕ್ಕೂ ಮುನ್ನಾ ಮಾತನಾಡಿದ ಜೆಡಿಯು ಎಂಎಲ್ ಸಿ ಗುಲಾಮ್ ಹಾಗೂ ಮಾಜಿ ಸಂಸದ ಅನ್ಸಾಫ್ ಕರಿಮ್ ಅವರು ವಕ್ಫ್ ತಿದ್ದುಪಡಿ ಕುರಿತ ಜೆಡಿಯುನ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಿತೀಶ್ ಕುಮಾರ್ ಅವರ ನಡೆಯಿಂದ ನಾವು ಆಘಾತಗೊಂಡಿದ್ದೇವೆ ಎಂದು ಅವರು ಹೇಳಿದರು. ವಕ್ಫ್ ಮಸೂದೆಗೆ ಬೆಂಬಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...