Homeಮುಖಪುಟವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

ವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

- Advertisement -
- Advertisement -

ವಕ್ಫ್‌ (ತಿದ್ದುಪಡಿ) ಮಸೂದೆಗೆ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ (ಯುನೈಟೆಡ್) ಸಂಸತ್ತಿನಲ್ಲಿ ಬೆಂಬಲಿಸಿದ್ದನ್ನು ವಿರೋಧಿಸಿ ಪಕ್ಷದ ಇಬ್ಬರು ಹಿರಿಯ ನಾಯಕರು ಗುರುವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಗ್ಗಿನ ಜಾವ 3 ಗಂಟೆಗೆ ಲೋಕಸಭೆಯಲ್ಲಿ, ಶುಕ್ರವಾರ ಬೆಳಗ್ಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಸೂದೆ ಬೆಂಬಲಿಸಿದವರಲ್ಲಿ ಎನ್‌ಡಿಎ ಮಿತ್ರ ಪಕ್ಷವಾದ ಜೆಡಿ(ಯು) ಪಕ್ಷ ಕೂಡಾ ಒಂದಾಗಿದೆ. ವಕ್ಫ್ ಮಸೂದೆಗೆ ಬೆಂಬಲ

ಪಕ್ಷದ ಹಿರಿಯ ನಾಯಕರಾದ ಮೊಹಮ್ಮದ್ ಖಾಸಿಮ್ ಅನ್ಸಾರಿ ಮತ್ತು ಮೊಹಮ್ಮದ್ ನವಾಜ್ ಮಲಿಕ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪ್ರತ್ಯೇಕ ಪತ್ರಗಳಲ್ಲಿ ಬರೆದಿದ್ದು, ಪಕ್ಷವು ಜಾತ್ಯತೀತ ಎಂದು ನಂಬಿದ್ದವು, ಆದರೆ ಇದೀಗ ಪಕ್ಷವು ಮುಸ್ಲಿಮರ “ಎಲ್ಲಾ ನಂಬಿಕೆಯನ್ನು ಕಳೆದುಕೊಂಡಿದೆ” ಎಂದು ಹೇಳಿದ್ದಾರೆ.

“ನನ್ನ ಜೀವನದ ಹಲವಾರು ವರ್ಷಗಳನ್ನು ಪಕ್ಷಕ್ಕೆ ನೀಡಿದ್ದಕ್ಕಾಗಿ ನಾನು ನಿರಾಶೆಗೊಂಡಿದ್ದೇನೆ” ಎಂದು ಅನ್ಸಾರಿ ಬರೆದ ಪತ್ರದಲ್ಲಿ ಹೇಳಿದ್ದಾರೆ. ಮಲಿಕ್ ಅವರು ತನ್ನ ಪತ್ರದಲ್ಲಿ, ವಕ್ಫ್ ಮಸೂದೆಯು ಸಂವಿಧಾನದಲ್ಲಿ ತಿಳಿಸಲಾದ ಅನೇಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

“ನಮ್ಮಂತಹ ಲಕ್ಷಾಂತರ ಭಾರತೀಯ ಮುಸ್ಲಿಮರು ನೀವು ಸಂಪೂರ್ಣವಾಗಿ ಜಾತ್ಯತೀತ ಸಿದ್ಧಾಂತದ ಧ್ವಜವಾಹಕರು ಎಂದು ಅಚಲ ನಂಬಿಕೆಯನ್ನು ಹೊಂದಿದ್ದರು ಎಂದು ನಾನು ಗಂಭೀರವಾಗಿ ಹೇಳಲು ಬಯಸುತ್ತೇನೆ. ಆದರೆ ಈಗ ಈ ನಂಬಿಕೆ ಮುರಿದುಹೋಗಿದೆ. ನಮ್ಮಂತಹ ಲಕ್ಷಾಂತರ ಸಮರ್ಪಿತ ಭಾರತೀಯ ಮುಸ್ಲಿಮರು ಮತ್ತು ಕಾರ್ಯಕರ್ತರು ಜೆಡಿ(ಯು) ನಿಲುವಿನಿಂದ ತೀವ್ರವಾಗಿ ಆಘಾತಕ್ಕೊಳಗಾಗಿದ್ದಾರೆ” ಎಂದು ಅನ್ಸಾರಿ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ವಕ್ಫ್ ಮಸೂದೆಯು ಭಾರತೀಯ ಮುಸ್ಲಿಮರ ವಿರುದ್ಧ ಇದ್ದು, ಅದನ್ನು ಯಾವುದೇ ಸಂದರ್ಭಗಳಲ್ಲಿಯೂ ಸ್ವೀಕರಿಸುವುದಿಲ್ಲ ಎಂದು ಅನ್ಸಾರಿ ಹೇಳಿದ್ದಾರೆ.

“ಈ ಮಸೂದೆಯು ಸಂವಿಧಾನದ ಅನೇಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಮಸೂದೆಯ ಮೂಲಕ, ಭಾರತೀಯ ಮುಸ್ಲಿಮರನ್ನು ಅವಮಾನಿಸಲಾಗುತ್ತಿದೆ… ನೀವು ಅಥವಾ ನಿಮ್ಮ ಪಕ್ಷ ಇದನ್ನು ಅರಿತುಕೊಳ್ಳುತ್ತಿಲ್ಲ. ನಾನು ನನ್ನ ಜೀವನದ ಹಲವು ವರ್ಷಗಳನ್ನು ಪಕ್ಷಕ್ಕೆ ನೀಡಿದ್ದಕ್ಕಾಗಿ ವಿಷಾದಿಸುತ್ತೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಮತ್ತೊಂದೆಡೆ, ಜೆಡಿ(ಯು)ನ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ನವಾಜ್ ಮಲಿಕ್ ಕೂಡ ರಾಜೀನಾಮೆ ನೀಡಿದ್ದಾರೆ, ವಕ್ಫ್ ಮಸೂದೆಗೆ ಪಕ್ಷದ ಬೆಂಬಲದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿತೀಶ್ ಕುಮಾರ್‌ಗೆ ಬರೆದ ರಾಜೀನಾಮೆ ಪತ್ರದಲ್ಲಿ,”ನೀವು ಸಂಪೂರ್ಣವಾಗಿ ಜಾತ್ಯತೀತ ಸಿದ್ಧಾಂತದ ಧ್ವಜವಾಹಕರು ಎಂದು ಲಕ್ಷಾಂತರ ಭಾರತೀಯ ಮುಸ್ಲಿಮರು ಅಚಲ ನಂಬಿಕೆಯನ್ನು ಹೊಂದಿದ್ದರು. ಆದರೆ ಈಗ ಈ ನಂಬಿಕೆ ಮುರಿದುಹೋಗಿದೆ. ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಜೆಡಿ(ಯು) ತೆಗೆದುಕೊಂಡ ನಿಲುವು ಸಮರ್ಪಿತ ಭಾರತೀಯ ಮುಸ್ಲಿಮರು ಮತ್ತು ನಮ್ಮಂತಹ ಪಕ್ಷದ ಕಾರ್ಯಕರ್ತರಿಗೆ ತೀವ್ರವಾಗಿ ನೋವುಂಟು ಮಾಡಿದೆ. ಲಾಲನ್ ಸಿಂಗ್ ಲೋಕಸಭೆಯಲ್ಲಿ ಮಾತನಾಡಿದ ಮತ್ತು ಈ ಮಸೂದೆಯನ್ನು ಬೆಂಬಲಿಸಿದ ರೀತಿ ನಮಗೆ ನಿರಾಶೆಯನ್ನುಂಟು ಮಾಡಿದೆ.” ಎಂದು ನವಾಜ್ ಮಲಿಕ್ ಹೇಳಿದ್ದಾರೆ.

“ವಕ್ಫ್ ಮಸೂದೆ ಭಾರತೀಯ ಮುಸ್ಲಿಮರ ವಿರುದ್ಧವಾಗಿದೆ. ನಾವು ಅದನ್ನು ಯಾವುದೇ ಸಂದರ್ಭದಲ್ಲೂ ಸ್ವೀಕರಿಸಲು ಸಾಧ್ಯವಿಲ್ಲ. ಈ ಮಸೂದೆಯು ಸಂವಿಧಾನದ ಹಲವು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಮಸೂದೆಯ ಮೂಲಕ ಭಾರತೀಯ ಮುಸ್ಲಿಮರನ್ನು ಅವಮಾನಿಸಲಾಗುತ್ತಿದೆ… ನೀವು ಅಥವಾ ನಿಮ್ಮ ಪಕ್ಷ ಇದನ್ನು ಅರಿತುಕೊಳ್ಳುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಜೆಡಿ (ಯು) ನಾಯಕ ರಾಜೀವ್ ರಂಜನ್ ಸಿಂಗ್ ಲೋಕಸಭೆಯಲ್ಲಿ ಮಸೂದೆಯನ್ನು ಸಮರ್ಥಿಸಿಕೊಂಡ ಒಂದೇ ದಿನದಲ್ಲಿ ಈ ರಾಜೀನಾಮೆ ಸರಣಿ ಪ್ರಾರಂಭವಾಗಿದೆ. ರಾಜೀವ್ ರಂಜನ್ ಅವರು ವಕ್ಪ್‌ ತಿದ್ದಪಡಿ ಬಗ್ಗೆ ಮಾತನಾಡುತ್ತಾ, ಇದು ಪಾರದರ್ಶಕತೆಯನ್ನು ತರಲು ಮತ್ತು ಮುಸ್ಲಿಂ ಸಮುದಾಯದ ಎಲ್ಲಾ ವರ್ಗಗಳ ಕಲ್ಯಾಣವನ್ನು ಖಚಿತಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದರು. ಮಸೂದೆಯನ್ನು “ಮುಸ್ಲಿಂ ವಿರೋಧಿ” ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದ್ದು ಎಂದು ಹೇಳಿದ್ದ ಅವರು, ಅಂತಹ ವಾದಗಳನ್ನು ನಿರಾಕರಿಸಿದ್ದರು.

“ವಕ್ಫ್ ಎಂಬುದು ಮುಸ್ಲಿಮರ ಹಿತಾಸಕ್ತಿಗಾಗಿ ಕೆಲಸ ಮಾಡಲು ರಚಿಸಲಾದ ಒಂದು ರೀತಿಯ ಟ್ರಸ್ಟ್ ಆಗಿದೆ. ಇದು ಧಾರ್ಮಿಕ ಸಂಘಟನೆಯಲ್ಲ… ಟ್ರಸ್ಟ್ ಎಲ್ಲಾ ವರ್ಗಗಳ ಮುಸ್ಲಿಮರಿಗೆ ನ್ಯಾಯ ಒದಗಿಸುವ ಹಕ್ಕನ್ನು ಹೊಂದಿದೆ, ಆದರೆ ಅದು ನಡೆಯುತ್ತಿಲ್ಲ… ಇಂದು, ಒಂದು ನಿರೂಪಣೆ ರಚಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಲಾಗುತ್ತಿದೆ. ನಿಮಗೆ ಅವರನ್ನು ಇಷ್ಟವಾಗದಿದ್ದರೆ, ಅವರನ್ನು ನೋಡಬೇಡಿ, ಆದರೆ ಅವರ ಒಳ್ಳೆಯ ಕೆಲಸವನ್ನು ಪ್ರಶಂಸಿಸಿ,” ಎಂದು ರಂಜನ್ ಸಿಂಗ್ ಹೇಳಿದ್ದಾರೆ.

ಪಕ್ಷದ ಇಬ್ಬರು ಹಿರಿಯ ನಾಯಕರಂತೆ ಜೆಡಿಯುನ ಹಲವಾರು ಮುಸ್ಲಿಂ ನಾಯಕರು ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಷಯದ ಬಗ್ಗೆ ಕಾನೂನು ಅಭಿಪ್ರಾಯವನ್ನು ಪಡೆಯುವುದಾಗಿ ಹೇಳಿದ್ದಾರೆ. ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯ ನಂತರ ಅವರು ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಜೆಡಿಯು ಬೆಂಬಲವನ್ನು ನೀಡಿದ ನಂತರ ನಾವು ವಂಚನೆಗೊಳಗಾಗಿದ್ದೇವೆ. ಈಗ ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲದಂತಾಗಿದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಮತ್ತು ಜೆಡಿಯು ಪ್ರಧಾನ ಕಾರ್ಯದರ್ಶಿ ಗುಲಾಂ ರಸೂಲ್ ಬಲ್ಯಾವಿ ಹೇಳಿದ್ದಾರೆ.

ಎರಡಾ-ಎ-ಶರಿಯಾ ಪರವಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) 31 ಪುಟಗಳ ಸಲಹೆಯನ್ನು ಸಲ್ಲಿಸಿದ್ದೆ. ಲೋಕಸಭೆಯಲ್ಲಿ ಮಸೂದೆ ಮಂಡನೆಯಾಗುವ ಮುನ್ನಾ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದ್ದೆ. ಆದರೆ, ಅವರ ಸಲಹೆಗಳಿಗೆ ಜೆಪಿಸಿ ಅಥವಾ ಸಿಎಂ ನಿತೀಶ್‌ ಕಿವಿಗೊಡಲಿಲ್ಲ.

ಈ ಸಂಬಂಧ ಶೀಘ್ರದಲ್ಲೇ ನಾವು ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯನ್ನು ಕರೆಯಲಿದ್ದೇವೆ. ತದನಂತರ ಮುಂದಿನ ಕ್ರಮವನ್ನು ಕೈಗೊಳ್ಳಲಿದ್ದೇವೆ. ಅಲ್ಲದೇ ನ್ಯಾಯಾಲಯದಲ್ಲಿ ಮಸೂದೆಯನ್ನು ಪ್ರಶ್ನಿಸಲು ನಾವು ಕಾನೂನು ತಜ್ಞರೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಅವರು ಗುರುವಾರ ಪಾಟ್ನಾದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

ಬಲ್ಯಾವಿ ಮಾತ್ರವಲ್ಲ. ಜೆಡಿಯು ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಮತ್ತು ಬಿಹಾರ ವಿಧಾನ ಪರಿಷತ್ತಿನ ಉಪಾಧ್ಯಕ್ಷ ಸಲೀಂ ಪರ್ವೇಜ್ ಅವರು ಶೀಘ್ರದಲ್ಲೇ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಮಸೂದೆಯ ಬಗ್ಗೆ ಪಕ್ಷದ ಮುಸ್ಲಿಂ ಮುಖಂಡರ ಅಸಮಾಧಾನವನ್ನು ತಿಳಿಸುವುದಾಗಿ ಹೇಳಿದ್ದಾರೆ.

ಇದಕ್ಕೂ ಮುನ್ನಾ ಮಾತನಾಡಿದ ಜೆಡಿಯು ಎಂಎಲ್ ಸಿ ಗುಲಾಮ್ ಹಾಗೂ ಮಾಜಿ ಸಂಸದ ಅನ್ಸಾಫ್ ಕರಿಮ್ ಅವರು ವಕ್ಫ್ ತಿದ್ದುಪಡಿ ಕುರಿತ ಜೆಡಿಯುನ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಿತೀಶ್ ಕುಮಾರ್ ಅವರ ನಡೆಯಿಂದ ನಾವು ಆಘಾತಗೊಂಡಿದ್ದೇವೆ ಎಂದು ಅವರು ಹೇಳಿದರು. ವಕ್ಫ್ ಮಸೂದೆಗೆ ಬೆಂಬಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...