Homeಮುಖಪುಟವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

ವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

- Advertisement -
- Advertisement -

ವಕ್ಫ್‌ (ತಿದ್ದುಪಡಿ) ಮಸೂದೆಗೆ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ (ಯುನೈಟೆಡ್) ಸಂಸತ್ತಿನಲ್ಲಿ ಬೆಂಬಲಿಸಿದ್ದನ್ನು ವಿರೋಧಿಸಿ ಪಕ್ಷದ ಇಬ್ಬರು ಹಿರಿಯ ನಾಯಕರು ಗುರುವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಗ್ಗಿನ ಜಾವ 3 ಗಂಟೆಗೆ ಲೋಕಸಭೆಯಲ್ಲಿ, ಶುಕ್ರವಾರ ಬೆಳಗ್ಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಸೂದೆ ಬೆಂಬಲಿಸಿದವರಲ್ಲಿ ಎನ್‌ಡಿಎ ಮಿತ್ರ ಪಕ್ಷವಾದ ಜೆಡಿ(ಯು) ಪಕ್ಷ ಕೂಡಾ ಒಂದಾಗಿದೆ. ವಕ್ಫ್ ಮಸೂದೆಗೆ ಬೆಂಬಲ

ಪಕ್ಷದ ಹಿರಿಯ ನಾಯಕರಾದ ಮೊಹಮ್ಮದ್ ಖಾಸಿಮ್ ಅನ್ಸಾರಿ ಮತ್ತು ಮೊಹಮ್ಮದ್ ನವಾಜ್ ಮಲಿಕ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪ್ರತ್ಯೇಕ ಪತ್ರಗಳಲ್ಲಿ ಬರೆದಿದ್ದು, ಪಕ್ಷವು ಜಾತ್ಯತೀತ ಎಂದು ನಂಬಿದ್ದವು, ಆದರೆ ಇದೀಗ ಪಕ್ಷವು ಮುಸ್ಲಿಮರ “ಎಲ್ಲಾ ನಂಬಿಕೆಯನ್ನು ಕಳೆದುಕೊಂಡಿದೆ” ಎಂದು ಹೇಳಿದ್ದಾರೆ.

“ನನ್ನ ಜೀವನದ ಹಲವಾರು ವರ್ಷಗಳನ್ನು ಪಕ್ಷಕ್ಕೆ ನೀಡಿದ್ದಕ್ಕಾಗಿ ನಾನು ನಿರಾಶೆಗೊಂಡಿದ್ದೇನೆ” ಎಂದು ಅನ್ಸಾರಿ ಬರೆದ ಪತ್ರದಲ್ಲಿ ಹೇಳಿದ್ದಾರೆ. ಮಲಿಕ್ ಅವರು ತನ್ನ ಪತ್ರದಲ್ಲಿ, ವಕ್ಫ್ ಮಸೂದೆಯು ಸಂವಿಧಾನದಲ್ಲಿ ತಿಳಿಸಲಾದ ಅನೇಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

“ನಮ್ಮಂತಹ ಲಕ್ಷಾಂತರ ಭಾರತೀಯ ಮುಸ್ಲಿಮರು ನೀವು ಸಂಪೂರ್ಣವಾಗಿ ಜಾತ್ಯತೀತ ಸಿದ್ಧಾಂತದ ಧ್ವಜವಾಹಕರು ಎಂದು ಅಚಲ ನಂಬಿಕೆಯನ್ನು ಹೊಂದಿದ್ದರು ಎಂದು ನಾನು ಗಂಭೀರವಾಗಿ ಹೇಳಲು ಬಯಸುತ್ತೇನೆ. ಆದರೆ ಈಗ ಈ ನಂಬಿಕೆ ಮುರಿದುಹೋಗಿದೆ. ನಮ್ಮಂತಹ ಲಕ್ಷಾಂತರ ಸಮರ್ಪಿತ ಭಾರತೀಯ ಮುಸ್ಲಿಮರು ಮತ್ತು ಕಾರ್ಯಕರ್ತರು ಜೆಡಿ(ಯು) ನಿಲುವಿನಿಂದ ತೀವ್ರವಾಗಿ ಆಘಾತಕ್ಕೊಳಗಾಗಿದ್ದಾರೆ” ಎಂದು ಅನ್ಸಾರಿ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ವಕ್ಫ್ ಮಸೂದೆಯು ಭಾರತೀಯ ಮುಸ್ಲಿಮರ ವಿರುದ್ಧ ಇದ್ದು, ಅದನ್ನು ಯಾವುದೇ ಸಂದರ್ಭಗಳಲ್ಲಿಯೂ ಸ್ವೀಕರಿಸುವುದಿಲ್ಲ ಎಂದು ಅನ್ಸಾರಿ ಹೇಳಿದ್ದಾರೆ.

“ಈ ಮಸೂದೆಯು ಸಂವಿಧಾನದ ಅನೇಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಮಸೂದೆಯ ಮೂಲಕ, ಭಾರತೀಯ ಮುಸ್ಲಿಮರನ್ನು ಅವಮಾನಿಸಲಾಗುತ್ತಿದೆ… ನೀವು ಅಥವಾ ನಿಮ್ಮ ಪಕ್ಷ ಇದನ್ನು ಅರಿತುಕೊಳ್ಳುತ್ತಿಲ್ಲ. ನಾನು ನನ್ನ ಜೀವನದ ಹಲವು ವರ್ಷಗಳನ್ನು ಪಕ್ಷಕ್ಕೆ ನೀಡಿದ್ದಕ್ಕಾಗಿ ವಿಷಾದಿಸುತ್ತೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಮತ್ತೊಂದೆಡೆ, ಜೆಡಿ(ಯು)ನ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ನವಾಜ್ ಮಲಿಕ್ ಕೂಡ ರಾಜೀನಾಮೆ ನೀಡಿದ್ದಾರೆ, ವಕ್ಫ್ ಮಸೂದೆಗೆ ಪಕ್ಷದ ಬೆಂಬಲದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿತೀಶ್ ಕುಮಾರ್‌ಗೆ ಬರೆದ ರಾಜೀನಾಮೆ ಪತ್ರದಲ್ಲಿ,”ನೀವು ಸಂಪೂರ್ಣವಾಗಿ ಜಾತ್ಯತೀತ ಸಿದ್ಧಾಂತದ ಧ್ವಜವಾಹಕರು ಎಂದು ಲಕ್ಷಾಂತರ ಭಾರತೀಯ ಮುಸ್ಲಿಮರು ಅಚಲ ನಂಬಿಕೆಯನ್ನು ಹೊಂದಿದ್ದರು. ಆದರೆ ಈಗ ಈ ನಂಬಿಕೆ ಮುರಿದುಹೋಗಿದೆ. ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಜೆಡಿ(ಯು) ತೆಗೆದುಕೊಂಡ ನಿಲುವು ಸಮರ್ಪಿತ ಭಾರತೀಯ ಮುಸ್ಲಿಮರು ಮತ್ತು ನಮ್ಮಂತಹ ಪಕ್ಷದ ಕಾರ್ಯಕರ್ತರಿಗೆ ತೀವ್ರವಾಗಿ ನೋವುಂಟು ಮಾಡಿದೆ. ಲಾಲನ್ ಸಿಂಗ್ ಲೋಕಸಭೆಯಲ್ಲಿ ಮಾತನಾಡಿದ ಮತ್ತು ಈ ಮಸೂದೆಯನ್ನು ಬೆಂಬಲಿಸಿದ ರೀತಿ ನಮಗೆ ನಿರಾಶೆಯನ್ನುಂಟು ಮಾಡಿದೆ.” ಎಂದು ನವಾಜ್ ಮಲಿಕ್ ಹೇಳಿದ್ದಾರೆ.

“ವಕ್ಫ್ ಮಸೂದೆ ಭಾರತೀಯ ಮುಸ್ಲಿಮರ ವಿರುದ್ಧವಾಗಿದೆ. ನಾವು ಅದನ್ನು ಯಾವುದೇ ಸಂದರ್ಭದಲ್ಲೂ ಸ್ವೀಕರಿಸಲು ಸಾಧ್ಯವಿಲ್ಲ. ಈ ಮಸೂದೆಯು ಸಂವಿಧಾನದ ಹಲವು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಮಸೂದೆಯ ಮೂಲಕ ಭಾರತೀಯ ಮುಸ್ಲಿಮರನ್ನು ಅವಮಾನಿಸಲಾಗುತ್ತಿದೆ… ನೀವು ಅಥವಾ ನಿಮ್ಮ ಪಕ್ಷ ಇದನ್ನು ಅರಿತುಕೊಳ್ಳುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಜೆಡಿ (ಯು) ನಾಯಕ ರಾಜೀವ್ ರಂಜನ್ ಸಿಂಗ್ ಲೋಕಸಭೆಯಲ್ಲಿ ಮಸೂದೆಯನ್ನು ಸಮರ್ಥಿಸಿಕೊಂಡ ಒಂದೇ ದಿನದಲ್ಲಿ ಈ ರಾಜೀನಾಮೆ ಸರಣಿ ಪ್ರಾರಂಭವಾಗಿದೆ. ರಾಜೀವ್ ರಂಜನ್ ಅವರು ವಕ್ಪ್‌ ತಿದ್ದಪಡಿ ಬಗ್ಗೆ ಮಾತನಾಡುತ್ತಾ, ಇದು ಪಾರದರ್ಶಕತೆಯನ್ನು ತರಲು ಮತ್ತು ಮುಸ್ಲಿಂ ಸಮುದಾಯದ ಎಲ್ಲಾ ವರ್ಗಗಳ ಕಲ್ಯಾಣವನ್ನು ಖಚಿತಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದರು. ಮಸೂದೆಯನ್ನು “ಮುಸ್ಲಿಂ ವಿರೋಧಿ” ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದ್ದು ಎಂದು ಹೇಳಿದ್ದ ಅವರು, ಅಂತಹ ವಾದಗಳನ್ನು ನಿರಾಕರಿಸಿದ್ದರು.

“ವಕ್ಫ್ ಎಂಬುದು ಮುಸ್ಲಿಮರ ಹಿತಾಸಕ್ತಿಗಾಗಿ ಕೆಲಸ ಮಾಡಲು ರಚಿಸಲಾದ ಒಂದು ರೀತಿಯ ಟ್ರಸ್ಟ್ ಆಗಿದೆ. ಇದು ಧಾರ್ಮಿಕ ಸಂಘಟನೆಯಲ್ಲ… ಟ್ರಸ್ಟ್ ಎಲ್ಲಾ ವರ್ಗಗಳ ಮುಸ್ಲಿಮರಿಗೆ ನ್ಯಾಯ ಒದಗಿಸುವ ಹಕ್ಕನ್ನು ಹೊಂದಿದೆ, ಆದರೆ ಅದು ನಡೆಯುತ್ತಿಲ್ಲ… ಇಂದು, ಒಂದು ನಿರೂಪಣೆ ರಚಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಲಾಗುತ್ತಿದೆ. ನಿಮಗೆ ಅವರನ್ನು ಇಷ್ಟವಾಗದಿದ್ದರೆ, ಅವರನ್ನು ನೋಡಬೇಡಿ, ಆದರೆ ಅವರ ಒಳ್ಳೆಯ ಕೆಲಸವನ್ನು ಪ್ರಶಂಸಿಸಿ,” ಎಂದು ರಂಜನ್ ಸಿಂಗ್ ಹೇಳಿದ್ದಾರೆ.

ಪಕ್ಷದ ಇಬ್ಬರು ಹಿರಿಯ ನಾಯಕರಂತೆ ಜೆಡಿಯುನ ಹಲವಾರು ಮುಸ್ಲಿಂ ನಾಯಕರು ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಷಯದ ಬಗ್ಗೆ ಕಾನೂನು ಅಭಿಪ್ರಾಯವನ್ನು ಪಡೆಯುವುದಾಗಿ ಹೇಳಿದ್ದಾರೆ. ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯ ನಂತರ ಅವರು ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಜೆಡಿಯು ಬೆಂಬಲವನ್ನು ನೀಡಿದ ನಂತರ ನಾವು ವಂಚನೆಗೊಳಗಾಗಿದ್ದೇವೆ. ಈಗ ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲದಂತಾಗಿದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಮತ್ತು ಜೆಡಿಯು ಪ್ರಧಾನ ಕಾರ್ಯದರ್ಶಿ ಗುಲಾಂ ರಸೂಲ್ ಬಲ್ಯಾವಿ ಹೇಳಿದ್ದಾರೆ.

ಎರಡಾ-ಎ-ಶರಿಯಾ ಪರವಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) 31 ಪುಟಗಳ ಸಲಹೆಯನ್ನು ಸಲ್ಲಿಸಿದ್ದೆ. ಲೋಕಸಭೆಯಲ್ಲಿ ಮಸೂದೆ ಮಂಡನೆಯಾಗುವ ಮುನ್ನಾ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದ್ದೆ. ಆದರೆ, ಅವರ ಸಲಹೆಗಳಿಗೆ ಜೆಪಿಸಿ ಅಥವಾ ಸಿಎಂ ನಿತೀಶ್‌ ಕಿವಿಗೊಡಲಿಲ್ಲ.

ಈ ಸಂಬಂಧ ಶೀಘ್ರದಲ್ಲೇ ನಾವು ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯನ್ನು ಕರೆಯಲಿದ್ದೇವೆ. ತದನಂತರ ಮುಂದಿನ ಕ್ರಮವನ್ನು ಕೈಗೊಳ್ಳಲಿದ್ದೇವೆ. ಅಲ್ಲದೇ ನ್ಯಾಯಾಲಯದಲ್ಲಿ ಮಸೂದೆಯನ್ನು ಪ್ರಶ್ನಿಸಲು ನಾವು ಕಾನೂನು ತಜ್ಞರೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಅವರು ಗುರುವಾರ ಪಾಟ್ನಾದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

ಬಲ್ಯಾವಿ ಮಾತ್ರವಲ್ಲ. ಜೆಡಿಯು ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಮತ್ತು ಬಿಹಾರ ವಿಧಾನ ಪರಿಷತ್ತಿನ ಉಪಾಧ್ಯಕ್ಷ ಸಲೀಂ ಪರ್ವೇಜ್ ಅವರು ಶೀಘ್ರದಲ್ಲೇ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಮಸೂದೆಯ ಬಗ್ಗೆ ಪಕ್ಷದ ಮುಸ್ಲಿಂ ಮುಖಂಡರ ಅಸಮಾಧಾನವನ್ನು ತಿಳಿಸುವುದಾಗಿ ಹೇಳಿದ್ದಾರೆ.

ಇದಕ್ಕೂ ಮುನ್ನಾ ಮಾತನಾಡಿದ ಜೆಡಿಯು ಎಂಎಲ್ ಸಿ ಗುಲಾಮ್ ಹಾಗೂ ಮಾಜಿ ಸಂಸದ ಅನ್ಸಾಫ್ ಕರಿಮ್ ಅವರು ವಕ್ಫ್ ತಿದ್ದುಪಡಿ ಕುರಿತ ಜೆಡಿಯುನ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಿತೀಶ್ ಕುಮಾರ್ ಅವರ ನಡೆಯಿಂದ ನಾವು ಆಘಾತಗೊಂಡಿದ್ದೇವೆ ಎಂದು ಅವರು ಹೇಳಿದರು. ವಕ್ಫ್ ಮಸೂದೆಗೆ ಬೆಂಬಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...