Homeಮುಖಪುಟವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

ವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

- Advertisement -
- Advertisement -

ವಕ್ಫ್‌ (ತಿದ್ದುಪಡಿ) ಮಸೂದೆಗೆ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ (ಯುನೈಟೆಡ್) ಸಂಸತ್ತಿನಲ್ಲಿ ಬೆಂಬಲಿಸಿದ್ದನ್ನು ವಿರೋಧಿಸಿ ಪಕ್ಷದ ಇಬ್ಬರು ಹಿರಿಯ ನಾಯಕರು ಗುರುವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಗ್ಗಿನ ಜಾವ 3 ಗಂಟೆಗೆ ಲೋಕಸಭೆಯಲ್ಲಿ, ಶುಕ್ರವಾರ ಬೆಳಗ್ಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಸೂದೆ ಬೆಂಬಲಿಸಿದವರಲ್ಲಿ ಎನ್‌ಡಿಎ ಮಿತ್ರ ಪಕ್ಷವಾದ ಜೆಡಿ(ಯು) ಪಕ್ಷ ಕೂಡಾ ಒಂದಾಗಿದೆ. ವಕ್ಫ್ ಮಸೂದೆಗೆ ಬೆಂಬಲ

ಪಕ್ಷದ ಹಿರಿಯ ನಾಯಕರಾದ ಮೊಹಮ್ಮದ್ ಖಾಸಿಮ್ ಅನ್ಸಾರಿ ಮತ್ತು ಮೊಹಮ್ಮದ್ ನವಾಜ್ ಮಲಿಕ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪ್ರತ್ಯೇಕ ಪತ್ರಗಳಲ್ಲಿ ಬರೆದಿದ್ದು, ಪಕ್ಷವು ಜಾತ್ಯತೀತ ಎಂದು ನಂಬಿದ್ದವು, ಆದರೆ ಇದೀಗ ಪಕ್ಷವು ಮುಸ್ಲಿಮರ “ಎಲ್ಲಾ ನಂಬಿಕೆಯನ್ನು ಕಳೆದುಕೊಂಡಿದೆ” ಎಂದು ಹೇಳಿದ್ದಾರೆ.

“ನನ್ನ ಜೀವನದ ಹಲವಾರು ವರ್ಷಗಳನ್ನು ಪಕ್ಷಕ್ಕೆ ನೀಡಿದ್ದಕ್ಕಾಗಿ ನಾನು ನಿರಾಶೆಗೊಂಡಿದ್ದೇನೆ” ಎಂದು ಅನ್ಸಾರಿ ಬರೆದ ಪತ್ರದಲ್ಲಿ ಹೇಳಿದ್ದಾರೆ. ಮಲಿಕ್ ಅವರು ತನ್ನ ಪತ್ರದಲ್ಲಿ, ವಕ್ಫ್ ಮಸೂದೆಯು ಸಂವಿಧಾನದಲ್ಲಿ ತಿಳಿಸಲಾದ ಅನೇಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

“ನಮ್ಮಂತಹ ಲಕ್ಷಾಂತರ ಭಾರತೀಯ ಮುಸ್ಲಿಮರು ನೀವು ಸಂಪೂರ್ಣವಾಗಿ ಜಾತ್ಯತೀತ ಸಿದ್ಧಾಂತದ ಧ್ವಜವಾಹಕರು ಎಂದು ಅಚಲ ನಂಬಿಕೆಯನ್ನು ಹೊಂದಿದ್ದರು ಎಂದು ನಾನು ಗಂಭೀರವಾಗಿ ಹೇಳಲು ಬಯಸುತ್ತೇನೆ. ಆದರೆ ಈಗ ಈ ನಂಬಿಕೆ ಮುರಿದುಹೋಗಿದೆ. ನಮ್ಮಂತಹ ಲಕ್ಷಾಂತರ ಸಮರ್ಪಿತ ಭಾರತೀಯ ಮುಸ್ಲಿಮರು ಮತ್ತು ಕಾರ್ಯಕರ್ತರು ಜೆಡಿ(ಯು) ನಿಲುವಿನಿಂದ ತೀವ್ರವಾಗಿ ಆಘಾತಕ್ಕೊಳಗಾಗಿದ್ದಾರೆ” ಎಂದು ಅನ್ಸಾರಿ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ವಕ್ಫ್ ಮಸೂದೆಯು ಭಾರತೀಯ ಮುಸ್ಲಿಮರ ವಿರುದ್ಧ ಇದ್ದು, ಅದನ್ನು ಯಾವುದೇ ಸಂದರ್ಭಗಳಲ್ಲಿಯೂ ಸ್ವೀಕರಿಸುವುದಿಲ್ಲ ಎಂದು ಅನ್ಸಾರಿ ಹೇಳಿದ್ದಾರೆ.

“ಈ ಮಸೂದೆಯು ಸಂವಿಧಾನದ ಅನೇಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಮಸೂದೆಯ ಮೂಲಕ, ಭಾರತೀಯ ಮುಸ್ಲಿಮರನ್ನು ಅವಮಾನಿಸಲಾಗುತ್ತಿದೆ… ನೀವು ಅಥವಾ ನಿಮ್ಮ ಪಕ್ಷ ಇದನ್ನು ಅರಿತುಕೊಳ್ಳುತ್ತಿಲ್ಲ. ನಾನು ನನ್ನ ಜೀವನದ ಹಲವು ವರ್ಷಗಳನ್ನು ಪಕ್ಷಕ್ಕೆ ನೀಡಿದ್ದಕ್ಕಾಗಿ ವಿಷಾದಿಸುತ್ತೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಮತ್ತೊಂದೆಡೆ, ಜೆಡಿ(ಯು)ನ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ನವಾಜ್ ಮಲಿಕ್ ಕೂಡ ರಾಜೀನಾಮೆ ನೀಡಿದ್ದಾರೆ, ವಕ್ಫ್ ಮಸೂದೆಗೆ ಪಕ್ಷದ ಬೆಂಬಲದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿತೀಶ್ ಕುಮಾರ್‌ಗೆ ಬರೆದ ರಾಜೀನಾಮೆ ಪತ್ರದಲ್ಲಿ,”ನೀವು ಸಂಪೂರ್ಣವಾಗಿ ಜಾತ್ಯತೀತ ಸಿದ್ಧಾಂತದ ಧ್ವಜವಾಹಕರು ಎಂದು ಲಕ್ಷಾಂತರ ಭಾರತೀಯ ಮುಸ್ಲಿಮರು ಅಚಲ ನಂಬಿಕೆಯನ್ನು ಹೊಂದಿದ್ದರು. ಆದರೆ ಈಗ ಈ ನಂಬಿಕೆ ಮುರಿದುಹೋಗಿದೆ. ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಜೆಡಿ(ಯು) ತೆಗೆದುಕೊಂಡ ನಿಲುವು ಸಮರ್ಪಿತ ಭಾರತೀಯ ಮುಸ್ಲಿಮರು ಮತ್ತು ನಮ್ಮಂತಹ ಪಕ್ಷದ ಕಾರ್ಯಕರ್ತರಿಗೆ ತೀವ್ರವಾಗಿ ನೋವುಂಟು ಮಾಡಿದೆ. ಲಾಲನ್ ಸಿಂಗ್ ಲೋಕಸಭೆಯಲ್ಲಿ ಮಾತನಾಡಿದ ಮತ್ತು ಈ ಮಸೂದೆಯನ್ನು ಬೆಂಬಲಿಸಿದ ರೀತಿ ನಮಗೆ ನಿರಾಶೆಯನ್ನುಂಟು ಮಾಡಿದೆ.” ಎಂದು ನವಾಜ್ ಮಲಿಕ್ ಹೇಳಿದ್ದಾರೆ.

“ವಕ್ಫ್ ಮಸೂದೆ ಭಾರತೀಯ ಮುಸ್ಲಿಮರ ವಿರುದ್ಧವಾಗಿದೆ. ನಾವು ಅದನ್ನು ಯಾವುದೇ ಸಂದರ್ಭದಲ್ಲೂ ಸ್ವೀಕರಿಸಲು ಸಾಧ್ಯವಿಲ್ಲ. ಈ ಮಸೂದೆಯು ಸಂವಿಧಾನದ ಹಲವು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಮಸೂದೆಯ ಮೂಲಕ ಭಾರತೀಯ ಮುಸ್ಲಿಮರನ್ನು ಅವಮಾನಿಸಲಾಗುತ್ತಿದೆ… ನೀವು ಅಥವಾ ನಿಮ್ಮ ಪಕ್ಷ ಇದನ್ನು ಅರಿತುಕೊಳ್ಳುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಜೆಡಿ (ಯು) ನಾಯಕ ರಾಜೀವ್ ರಂಜನ್ ಸಿಂಗ್ ಲೋಕಸಭೆಯಲ್ಲಿ ಮಸೂದೆಯನ್ನು ಸಮರ್ಥಿಸಿಕೊಂಡ ಒಂದೇ ದಿನದಲ್ಲಿ ಈ ರಾಜೀನಾಮೆ ಸರಣಿ ಪ್ರಾರಂಭವಾಗಿದೆ. ರಾಜೀವ್ ರಂಜನ್ ಅವರು ವಕ್ಪ್‌ ತಿದ್ದಪಡಿ ಬಗ್ಗೆ ಮಾತನಾಡುತ್ತಾ, ಇದು ಪಾರದರ್ಶಕತೆಯನ್ನು ತರಲು ಮತ್ತು ಮುಸ್ಲಿಂ ಸಮುದಾಯದ ಎಲ್ಲಾ ವರ್ಗಗಳ ಕಲ್ಯಾಣವನ್ನು ಖಚಿತಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದರು. ಮಸೂದೆಯನ್ನು “ಮುಸ್ಲಿಂ ವಿರೋಧಿ” ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದ್ದು ಎಂದು ಹೇಳಿದ್ದ ಅವರು, ಅಂತಹ ವಾದಗಳನ್ನು ನಿರಾಕರಿಸಿದ್ದರು.

“ವಕ್ಫ್ ಎಂಬುದು ಮುಸ್ಲಿಮರ ಹಿತಾಸಕ್ತಿಗಾಗಿ ಕೆಲಸ ಮಾಡಲು ರಚಿಸಲಾದ ಒಂದು ರೀತಿಯ ಟ್ರಸ್ಟ್ ಆಗಿದೆ. ಇದು ಧಾರ್ಮಿಕ ಸಂಘಟನೆಯಲ್ಲ… ಟ್ರಸ್ಟ್ ಎಲ್ಲಾ ವರ್ಗಗಳ ಮುಸ್ಲಿಮರಿಗೆ ನ್ಯಾಯ ಒದಗಿಸುವ ಹಕ್ಕನ್ನು ಹೊಂದಿದೆ, ಆದರೆ ಅದು ನಡೆಯುತ್ತಿಲ್ಲ… ಇಂದು, ಒಂದು ನಿರೂಪಣೆ ರಚಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಲಾಗುತ್ತಿದೆ. ನಿಮಗೆ ಅವರನ್ನು ಇಷ್ಟವಾಗದಿದ್ದರೆ, ಅವರನ್ನು ನೋಡಬೇಡಿ, ಆದರೆ ಅವರ ಒಳ್ಳೆಯ ಕೆಲಸವನ್ನು ಪ್ರಶಂಸಿಸಿ,” ಎಂದು ರಂಜನ್ ಸಿಂಗ್ ಹೇಳಿದ್ದಾರೆ.

ಪಕ್ಷದ ಇಬ್ಬರು ಹಿರಿಯ ನಾಯಕರಂತೆ ಜೆಡಿಯುನ ಹಲವಾರು ಮುಸ್ಲಿಂ ನಾಯಕರು ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಷಯದ ಬಗ್ಗೆ ಕಾನೂನು ಅಭಿಪ್ರಾಯವನ್ನು ಪಡೆಯುವುದಾಗಿ ಹೇಳಿದ್ದಾರೆ. ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯ ನಂತರ ಅವರು ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಜೆಡಿಯು ಬೆಂಬಲವನ್ನು ನೀಡಿದ ನಂತರ ನಾವು ವಂಚನೆಗೊಳಗಾಗಿದ್ದೇವೆ. ಈಗ ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲದಂತಾಗಿದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಮತ್ತು ಜೆಡಿಯು ಪ್ರಧಾನ ಕಾರ್ಯದರ್ಶಿ ಗುಲಾಂ ರಸೂಲ್ ಬಲ್ಯಾವಿ ಹೇಳಿದ್ದಾರೆ.

ಎರಡಾ-ಎ-ಶರಿಯಾ ಪರವಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) 31 ಪುಟಗಳ ಸಲಹೆಯನ್ನು ಸಲ್ಲಿಸಿದ್ದೆ. ಲೋಕಸಭೆಯಲ್ಲಿ ಮಸೂದೆ ಮಂಡನೆಯಾಗುವ ಮುನ್ನಾ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದ್ದೆ. ಆದರೆ, ಅವರ ಸಲಹೆಗಳಿಗೆ ಜೆಪಿಸಿ ಅಥವಾ ಸಿಎಂ ನಿತೀಶ್‌ ಕಿವಿಗೊಡಲಿಲ್ಲ.

ಈ ಸಂಬಂಧ ಶೀಘ್ರದಲ್ಲೇ ನಾವು ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯನ್ನು ಕರೆಯಲಿದ್ದೇವೆ. ತದನಂತರ ಮುಂದಿನ ಕ್ರಮವನ್ನು ಕೈಗೊಳ್ಳಲಿದ್ದೇವೆ. ಅಲ್ಲದೇ ನ್ಯಾಯಾಲಯದಲ್ಲಿ ಮಸೂದೆಯನ್ನು ಪ್ರಶ್ನಿಸಲು ನಾವು ಕಾನೂನು ತಜ್ಞರೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಅವರು ಗುರುವಾರ ಪಾಟ್ನಾದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

ಬಲ್ಯಾವಿ ಮಾತ್ರವಲ್ಲ. ಜೆಡಿಯು ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಮತ್ತು ಬಿಹಾರ ವಿಧಾನ ಪರಿಷತ್ತಿನ ಉಪಾಧ್ಯಕ್ಷ ಸಲೀಂ ಪರ್ವೇಜ್ ಅವರು ಶೀಘ್ರದಲ್ಲೇ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಮಸೂದೆಯ ಬಗ್ಗೆ ಪಕ್ಷದ ಮುಸ್ಲಿಂ ಮುಖಂಡರ ಅಸಮಾಧಾನವನ್ನು ತಿಳಿಸುವುದಾಗಿ ಹೇಳಿದ್ದಾರೆ.

ಇದಕ್ಕೂ ಮುನ್ನಾ ಮಾತನಾಡಿದ ಜೆಡಿಯು ಎಂಎಲ್ ಸಿ ಗುಲಾಮ್ ಹಾಗೂ ಮಾಜಿ ಸಂಸದ ಅನ್ಸಾಫ್ ಕರಿಮ್ ಅವರು ವಕ್ಫ್ ತಿದ್ದುಪಡಿ ಕುರಿತ ಜೆಡಿಯುನ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಿತೀಶ್ ಕುಮಾರ್ ಅವರ ನಡೆಯಿಂದ ನಾವು ಆಘಾತಗೊಂಡಿದ್ದೇವೆ ಎಂದು ಅವರು ಹೇಳಿದರು. ವಕ್ಫ್ ಮಸೂದೆಗೆ ಬೆಂಬಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...