Homeಕರ್ನಾಟಕಪ್ರಧಾನಿಯ ಜನತಾ ಕರ್ಫ್ಯೂಗೆ ದೇವೇಗೌಡರಿಂದ ಬೆಂಬಲ

ಪ್ರಧಾನಿಯ ಜನತಾ ಕರ್ಫ್ಯೂಗೆ ದೇವೇಗೌಡರಿಂದ ಬೆಂಬಲ

- Advertisement -
- Advertisement -

ಭಾನುವಾರ ಪ್ರಧಾನ ಮಂತ್ರಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ಮಾಜೀ ಪ್ರಧಾನಮಂತ್ರಿ ದೇವೇಗೌಡ ಬೆಂಬಲ ನೀಡಿದ್ದಾರೆ. ಮಾರ್ಚ್ 22 ರ ಆದಿತ್ಯವಾರದಂದು ಒಂದು ದಿನ ಜನತಾ ಕರ್ಫ್ಯೂಗೆ ಪ್ರಧಾನಿ ಮೋದಿ ನಿನ್ನೆ ಕರೆ ನೀಡಿದ್ದರು.

“ಕೇಂದ್ರ ಸರ್ಕಾರ ಮತ್ತು ದೇಶದ ಎಲ್ಲಾ ರಾಜ್ಯ ಸರ್ಕಾರಗಳು ತೆಗೆದು ಕೊಂಡಿರುವ ಮುನ್ನೆಚ್ಚರಿಕೆಯ ಉಪಕ್ರಮಗಳಿಗಾಗಿ ಅಭಿನಂದಿಸುತ್ತೇನೆ” ಎಂದಿರುವ ದೇವೇಗೌಡರು, “ಪ್ರಧಾನಿಯವರು ಮಾಡಿದ ಭಾಷಣ ಮತ್ತು ಕೊಟ್ಟ ಕರೆ ಅತ್ಯಂತ ಸಮಯೋಚಿತವೂ ಮತ್ತು ಆಚರಣೆ ಯೋಗ್ಯವೂ ಆಗಿದೆ. ಈ ಮಹಾಮಾರಿಗೆ ಮಂತ್ರ ಮತ್ತು ಮದ್ದು ಇಲ್ಲದಾಗ ಅದನ್ನು ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಸಂಕಲ್ಪ ಮತ್ತು ಸಂಯಮದಿಂದಲೇ ಎದುರಿಸಬೇಕೆಂಬ ಪ್ರಧಾನಿಯವರ ಮಾತು ಪಾಲನೆಯೋಗ್ಯವಾಗಿದೆ. ಸಾಮಾಜಿಕ ಕರ್ತವ್ಯದ ದೃಷ್ಟಿಯಿಂದ ಜನತಾ ಕರ್ಫ್ಯೂವನ್ನು ಯಶಸ್ಸೀಗೊಳಿಸಬೇಕೆಂದು ಪ್ರಧಾನಿ ನೀಡಿರುವ ಕರೆಯನ್ನು ಪಾಲಿಸಲೇ ಬೇಕು” ಎಂದು ತನ್ನ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಟ್ವೀಟ್ಟರ್ ಹ್ಯಾಂಡಲ್ ನಲ್ಲಿ ಟ್ವೀಟ್ ಮಾಡಿರುವ ದೇವೇಗೌಡರು “ಕೊರೋನಾ ಮಹಾಮಾರಿಯನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ‌ಸಂಕಲ್ಪ ಹಾಗೂ ಸಂಯಮದಿಂದ ಎದುರಿಸಬೇಕೆಂಬ ಪ್ರಧಾನಿಯವರ ಮಾತು‌ ಪಾಲನಯೋಗ್ಯವಾಗಿದ್ದು, ಮಾರ್ಚ್ 22 ಭಾನುವಾರದಂದು ಪ್ರಧಾನಿ ಕರೆ ನೀಡಿರುವ ‘ಜನತಾ ಕರ್ಫ್ಯೂ’ವನ್ನು ಬೆಂಬಲಿಸುವ ಮೂಲಕ ಸಾಮಾಜಿಕ ಕರ್ತವ್ಯವನ್ನು ಪಾಲಿಸೋಣ” ಎಂದಿದ್ದಾರೆ.

ಅಲ್ಲದೆ, ಪ್ರಾಣವನ್ನೂ ಲೆಕ್ಕಿಸದೆ ಜನಸೇವೆಯಲ್ಲಿ ನಿರತರಾಗಿರುವವರ ಅನುಪಮ ಸೇವೆಗೆ ಮಾರ್ಚ್‌ 22 ರಂದು ಸಂಜೆ 5 ಗಂಟೆಗೆ 5 ನಿಮಿಷಗಳ ಕಾಲ ತಾವಿರುವ ತಾಣದಿಂದಲೇ ಧನ್ಯವಾದಗಳನ್ನು ಸಲ್ಲಿಸಬೇಕೆಂದು ಕೊಟ್ಟಿರುವ ಕರೆಯೂ ಸ್ವಾಗತಾರ್ಹವಾದುದು ಎಂದು ದೇವೇಗೌಡರು ಹೇಳಿದ್ದಾರೆ.

“ಪ್ರಧಾನಿಯವರ ಕರೆಯನ್ನು ಯಾವುದೇ ರಾಜಕೀಯ ಲೇಪ ಹಚ್ಚದೇ ನಾವೆಲ್ಲರೂ ಸ್ವಾಗತಿಸಬೇಕು ಹಾಗೂ ಪಾಲಿಸಬೇಕು. ಅದರ ಜೊತೆಗೆ ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ತೆಗೆದು ಕೊಳ್ಳಬಹುದಾದ ಸಾರ್ವಜನಿಕ ಹಿತಾಸಕ್ತಿ ಹಾಗೂ ನಮ್ಮೆಲ್ಲರ ಸ್ವಾಸ್ಥ್ಯ ಕಾಪಾಡುವ ಉಪಕ್ರಮಗಳಿಗೆ ನಾವೆಲ್ಲರೂ ವೈಯಕ್ತಿಕವಾಗಿ ಬದ್ಧರಾಗಿರಬೇಕು” ಎಂದು ಮಾಜಿ ಪ್ರಧಾನಿ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...