Homeಮುಖಪುಟಯಾರನ್ನೂ ಬೆಂಬಲಿಸುವುದಿಲ್ಲ | ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ಯೂ ಟರ್ನ್!

ಯಾರನ್ನೂ ಬೆಂಬಲಿಸುವುದಿಲ್ಲ | ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ಯೂ ಟರ್ನ್!

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳನ್ನು ಬೆಂಬಲಿಸುವುದಿಲ್ಲ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಸೋಮವಾರ ಘೋಷಿಸಿದ್ದಾರೆ. ನಾಮಪತ್ರ ಸಲ್ಲಿಸಿರುವ ತಮ್ಮ ಬೆಂಬಲಿಗರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯುವಂತೆ ಅವರು ಒತ್ತಾಯಿಸಿದ್ದಾರೆ.

ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿನವಾಗಿದೆ. ನವೆಂಬರ್ 20 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಸೋಮವಾರ ಜಾರಂಗೆ ಅವರು ಈ ಘೋಷಣೆ ಮಾಡಿದ್ದರಾದರೂ, ಈ ಹಿಂದೆ ಕೆಲವು ಕ್ಷೇತ್ರಗಳು ಮತ್ತು ಅಭ್ಯರ್ಥಿಗಳ ಪರವಾಗಿ ಬೆಂಬಲ ಸೂಚಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೋಮವಾರ ಬೆಳಗ್ಗೆ ಅಂತರವಾಳಿ ಸಾರಥಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಂಗೆ, ‘‘ಬಹಳ ಸಮಾಲೋಚನೆಯ ನಂತರ ರಾಜ್ಯದಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದ್ದೇನೆ. ಯಾರನ್ನು ಸೋಲಿಸಬೇಕು, ಯಾರನ್ನು ಆರಿಸಬೇಕು ಎಂಬುದನ್ನು ಮರಾಠ ಸಮುದಾಯವು ತಾನೇ ನಿರ್ಧರಿಸುತ್ತದೆ. ನಾನು ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದೊಂದಿಗೆ ಯಾವುದೇ ಸಂಬಂಧ ಅಥವಾ ಬೆಂಬಲವನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ಇದೇ ಅವರು ಆಡಳಿತಾರೂಢ ಮಹಾಯುತಿ ಒಕ್ಕೂಟ ಅಥವಾ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಯಿಂದ ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ ಎಂದು ಒತ್ತಿ ಹೇಳಿದ್ದಾರೆ.

“ನಾನು ಯಾರ ಒತ್ತಡಕ್ಕೂ ಒಳಗಾಗಿಲ್ಲ. ಮರಾಠಾ ಮೀಸಲಾತಿ ಹೋರಾಟಕ್ಕಾಗಿ ಅವರ ಬದ್ಧತೆಯ ಆಧಾರದ ಮೇಲೆ ಯಾರನ್ನು ಬೆಂಬಲಿಸಬೇಕೆಂದು ಸಮುದಾಯವೇ ನಿರ್ಧರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಮರಾಠಾ ಹಿತಾಸಕ್ತಿಗಳಿಗೆ ತಮ್ಮ ಬೆಂಬಲದ ಬಗ್ಗೆ ಅಭ್ಯರ್ಥಿಗಳಿಂದ ಲಿಖಿತ ಅಥವಾ ವೀಡಿಯೊ ಮೂಲಕ ಭರವಸೆಗಳನ್ನು ಪಡೆಯುವಂತೆ ಅವರು ಮತದಾರರನ್ನು ಕೇಳಿದ್ದಾರೆ.

“ಮರಾಠರ ಬೆಂಬಲವಿಲ್ಲದೆ ಈ ರಾಜ್ಯದಲ್ಲಿ ಯಾರೂ ಆಯ್ಕೆಯಾಗಲು ಸಾಧ್ಯವಿಲ್ಲ” ಎಂದು ಹೇಳಿರುವ ಅವರು, ಮರಾಠಾ ಸಮುದಾಯದ ಸದಸ್ಯರು ರಾಜಕೀಯ ರ್ಯಾಲಿಗಳಲ್ಲಿ ಪಾಲ್ಗೊಳ್ಳುವುದನ್ನು ತಪ್ಪಿಸಬೇಕು ಮತ್ತು ಯಾವುದೇ ಪಕ್ಷಗಳಿಗೆ ಮಣಿಯಬಾರದು ಎಂದು ಅವರು ಹೇಳಿದ್ದಾರೆ. ಮರಾಠಾ ಸಮುದಾಯಕ್ಕೆ ಅನ್ಯಾಯ ಮಾಡಿದವರಿಗೆ ಅಥವಾ ಕಿರುಕುಳ ನೀಡಿದವರಿಗೆ ಮತದಾನದ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಇತರ ಹಿಂದುಳಿದ ವರ್ಗಗಳ (ಒಬಿಸಿ) ವರ್ಗದ ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿಯನ್ನು ಪಡೆಯುವ ತನ್ನ ಬದ್ಧತೆಯನ್ನು ಜಾರಂಗೆ ಪುನರುಚ್ಚರಿಸಿದ್ದಾರೆ. ಮೀಸಲಾತಿಗಾಗಿ ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ. ಅವರು ಒಂದು ದಿನದ ಹಿಂದೆಯಷ್ಟೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪರ್ವತಿ ಮತ್ತು ದೌಂಡ್‌ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳನ್ನು ಬೆಂಬಲಿಸುವ ಬಗ್ಗೆ ಘೋಷಿಸಿದ್ದರು, ಆದರೆ ಅವರು ಅವರ ಹೆಸರನ್ನು ಬಹಿರಂಗಪಡಿಸಿರಲಿಲ್ಲ.

ಪ್ರಸ್ತುತ ಈ ಎರಡು ಕ್ಷೇತ್ರಗಳು ಬಿಜೆಪಿ ವಶದಲ್ಲಿದ್ದು, ಮರಾಠಾ ಮೀಸಲಾತಿಯನ್ನು ಅವರು ವಿರೋಧಿಸುತ್ತಿದ್ದಾರೆ ಎಂದು ಜಾರಂಗೇ ಆಗಾಗ್ಗೆ ಆರೋಪಿಸುತ್ತಿದ್ದಾರೆ. ಈ ಹಿಂದೆ, ಅವರು ಫೂಲಂಬ್ರಿ, ಕನ್ನಡ (ಛತ್ರಪತಿ ಸಂಭಾಜಿನಗರ), ಹಿಂಗೋಲಿ, ಪಠಾರಿ (ಪರ್ಭಾನಿ), ಮತ್ತು ಹಡಗಾಂವ್ (ನಾಂದೇಡ್‌) ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಸೂಚಿಸಿದ್ದರು.

ಅಲ್ಲದೆ, ಭೋಕರ್ದನ್ (ಜಲ್ನಾ), ಗಂಗಾಪುರ (ಛತ್ರಪತಿ ಸಂಭಾಜಿನಗರ), ಕಲಂನೂರಿ (ಹಿಂಗೋಲಿ), ಗಂಗಾಖೇಡ್, ಜಿಂಟೂರ್ (ಪರ್ಭಾನಿ), ಮತ್ತು ಔಸಾ (ಲಾತೂರ್) ನ ಮಹಾಯುತಿ ಸರ್ಕಾರದ ಹಾಲಿ ಶಾಸಕರನ್ನು ಸೋಲಿಸುವ ಬಗ್ಗೆ ಅವರು ಉಲ್ಲೇಖಿಸಿದ್ದರು. ಮರಾಠ ಮೀಸಲಾತಿ

ಇದನ್ನೂ ಓದಿ: ‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...