Homeಮುಖಪುಟಯಾರನ್ನೂ ಬೆಂಬಲಿಸುವುದಿಲ್ಲ | ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ಯೂ ಟರ್ನ್!

ಯಾರನ್ನೂ ಬೆಂಬಲಿಸುವುದಿಲ್ಲ | ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ಯೂ ಟರ್ನ್!

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳನ್ನು ಬೆಂಬಲಿಸುವುದಿಲ್ಲ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಸೋಮವಾರ ಘೋಷಿಸಿದ್ದಾರೆ. ನಾಮಪತ್ರ ಸಲ್ಲಿಸಿರುವ ತಮ್ಮ ಬೆಂಬಲಿಗರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯುವಂತೆ ಅವರು ಒತ್ತಾಯಿಸಿದ್ದಾರೆ.

ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿನವಾಗಿದೆ. ನವೆಂಬರ್ 20 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಸೋಮವಾರ ಜಾರಂಗೆ ಅವರು ಈ ಘೋಷಣೆ ಮಾಡಿದ್ದರಾದರೂ, ಈ ಹಿಂದೆ ಕೆಲವು ಕ್ಷೇತ್ರಗಳು ಮತ್ತು ಅಭ್ಯರ್ಥಿಗಳ ಪರವಾಗಿ ಬೆಂಬಲ ಸೂಚಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೋಮವಾರ ಬೆಳಗ್ಗೆ ಅಂತರವಾಳಿ ಸಾರಥಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಂಗೆ, ‘‘ಬಹಳ ಸಮಾಲೋಚನೆಯ ನಂತರ ರಾಜ್ಯದಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದ್ದೇನೆ. ಯಾರನ್ನು ಸೋಲಿಸಬೇಕು, ಯಾರನ್ನು ಆರಿಸಬೇಕು ಎಂಬುದನ್ನು ಮರಾಠ ಸಮುದಾಯವು ತಾನೇ ನಿರ್ಧರಿಸುತ್ತದೆ. ನಾನು ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದೊಂದಿಗೆ ಯಾವುದೇ ಸಂಬಂಧ ಅಥವಾ ಬೆಂಬಲವನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ಇದೇ ಅವರು ಆಡಳಿತಾರೂಢ ಮಹಾಯುತಿ ಒಕ್ಕೂಟ ಅಥವಾ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಯಿಂದ ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ ಎಂದು ಒತ್ತಿ ಹೇಳಿದ್ದಾರೆ.

“ನಾನು ಯಾರ ಒತ್ತಡಕ್ಕೂ ಒಳಗಾಗಿಲ್ಲ. ಮರಾಠಾ ಮೀಸಲಾತಿ ಹೋರಾಟಕ್ಕಾಗಿ ಅವರ ಬದ್ಧತೆಯ ಆಧಾರದ ಮೇಲೆ ಯಾರನ್ನು ಬೆಂಬಲಿಸಬೇಕೆಂದು ಸಮುದಾಯವೇ ನಿರ್ಧರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಮರಾಠಾ ಹಿತಾಸಕ್ತಿಗಳಿಗೆ ತಮ್ಮ ಬೆಂಬಲದ ಬಗ್ಗೆ ಅಭ್ಯರ್ಥಿಗಳಿಂದ ಲಿಖಿತ ಅಥವಾ ವೀಡಿಯೊ ಮೂಲಕ ಭರವಸೆಗಳನ್ನು ಪಡೆಯುವಂತೆ ಅವರು ಮತದಾರರನ್ನು ಕೇಳಿದ್ದಾರೆ.

“ಮರಾಠರ ಬೆಂಬಲವಿಲ್ಲದೆ ಈ ರಾಜ್ಯದಲ್ಲಿ ಯಾರೂ ಆಯ್ಕೆಯಾಗಲು ಸಾಧ್ಯವಿಲ್ಲ” ಎಂದು ಹೇಳಿರುವ ಅವರು, ಮರಾಠಾ ಸಮುದಾಯದ ಸದಸ್ಯರು ರಾಜಕೀಯ ರ್ಯಾಲಿಗಳಲ್ಲಿ ಪಾಲ್ಗೊಳ್ಳುವುದನ್ನು ತಪ್ಪಿಸಬೇಕು ಮತ್ತು ಯಾವುದೇ ಪಕ್ಷಗಳಿಗೆ ಮಣಿಯಬಾರದು ಎಂದು ಅವರು ಹೇಳಿದ್ದಾರೆ. ಮರಾಠಾ ಸಮುದಾಯಕ್ಕೆ ಅನ್ಯಾಯ ಮಾಡಿದವರಿಗೆ ಅಥವಾ ಕಿರುಕುಳ ನೀಡಿದವರಿಗೆ ಮತದಾನದ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಇತರ ಹಿಂದುಳಿದ ವರ್ಗಗಳ (ಒಬಿಸಿ) ವರ್ಗದ ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿಯನ್ನು ಪಡೆಯುವ ತನ್ನ ಬದ್ಧತೆಯನ್ನು ಜಾರಂಗೆ ಪುನರುಚ್ಚರಿಸಿದ್ದಾರೆ. ಮೀಸಲಾತಿಗಾಗಿ ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ. ಅವರು ಒಂದು ದಿನದ ಹಿಂದೆಯಷ್ಟೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪರ್ವತಿ ಮತ್ತು ದೌಂಡ್‌ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳನ್ನು ಬೆಂಬಲಿಸುವ ಬಗ್ಗೆ ಘೋಷಿಸಿದ್ದರು, ಆದರೆ ಅವರು ಅವರ ಹೆಸರನ್ನು ಬಹಿರಂಗಪಡಿಸಿರಲಿಲ್ಲ.

ಪ್ರಸ್ತುತ ಈ ಎರಡು ಕ್ಷೇತ್ರಗಳು ಬಿಜೆಪಿ ವಶದಲ್ಲಿದ್ದು, ಮರಾಠಾ ಮೀಸಲಾತಿಯನ್ನು ಅವರು ವಿರೋಧಿಸುತ್ತಿದ್ದಾರೆ ಎಂದು ಜಾರಂಗೇ ಆಗಾಗ್ಗೆ ಆರೋಪಿಸುತ್ತಿದ್ದಾರೆ. ಈ ಹಿಂದೆ, ಅವರು ಫೂಲಂಬ್ರಿ, ಕನ್ನಡ (ಛತ್ರಪತಿ ಸಂಭಾಜಿನಗರ), ಹಿಂಗೋಲಿ, ಪಠಾರಿ (ಪರ್ಭಾನಿ), ಮತ್ತು ಹಡಗಾಂವ್ (ನಾಂದೇಡ್‌) ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಸೂಚಿಸಿದ್ದರು.

ಅಲ್ಲದೆ, ಭೋಕರ್ದನ್ (ಜಲ್ನಾ), ಗಂಗಾಪುರ (ಛತ್ರಪತಿ ಸಂಭಾಜಿನಗರ), ಕಲಂನೂರಿ (ಹಿಂಗೋಲಿ), ಗಂಗಾಖೇಡ್, ಜಿಂಟೂರ್ (ಪರ್ಭಾನಿ), ಮತ್ತು ಔಸಾ (ಲಾತೂರ್) ನ ಮಹಾಯುತಿ ಸರ್ಕಾರದ ಹಾಲಿ ಶಾಸಕರನ್ನು ಸೋಲಿಸುವ ಬಗ್ಗೆ ಅವರು ಉಲ್ಲೇಖಿಸಿದ್ದರು. ಮರಾಠ ಮೀಸಲಾತಿ

ಇದನ್ನೂ ಓದಿ: ‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...