Homeಚಳವಳಿದೆಹಲಿ ರೈತ ಹೋರಾಟಕ್ಕೆ ನಿವೃತ್ತ IAS, IPS ಸೇರಿದಂತೆ 78 ಮಾಜಿ ಅಧಿಕಾರಿಗಳ ಬೆಂಬಲ

ದೆಹಲಿ ರೈತ ಹೋರಾಟಕ್ಕೆ ನಿವೃತ್ತ IAS, IPS ಸೇರಿದಂತೆ 78 ಮಾಜಿ ಅಧಿಕಾರಿಗಳ ಬೆಂಬಲ

ಅಖಿಲ ಭಾರತ ಮತ್ತು ವಿವಿಧ ರಾಜ್ಯಗಳಲ್ಲಿ ಕೇಂದ್ರ ಸರ್ಕಾರಿ ಸೇವೆಯಲ್ಲಿದ್ದ 78 ಮಂದಿ ನಿವೃತ್ತ ಅಧಿಕಾರಿಗಳಾದ ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಹಾಗೂ ತಟಸ್ಥರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಸಂಸತ್‌ನ ಎರಡೂ ಸದನಗಳಲ್ಲೂ ಯಾವುದೇ ಚರ್ಚೆಗೆ ಎಡೆಮಾಡಿಕೊಡದೆ ಜಾರಿ ಮಾಡಿದ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಭಾರತ ಸರ್ಕಾರ ಸಂವಿಧಾನದ ಮೂಲ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು 78 ಮಂದಿ ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ ಬರೆದು ಖಂಡಿಸಿದ್ದಾರೆ.

ಕೇಂದ್ರ ಸರ್ಕಾರದ ನಾಗರಿಕ ಸೇವೆಯಲ್ಲಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಐಎಎಸ್, ಐಪಿಎಸ್, ಐಆರ್‌ಎಸ್, ಐಇಎಸ್, ಐಎಫ್‌ಎಸ್, ಐಎ ಅಂಡ್ ಐಎಸ್ ಅಧಿಕಾರಿಗಳು ಪತ್ರ ಬರೆದಿರುವುದನ್ನು ಉಲ್ಲೇಖಿಸಿ ದಿವೈರ್.ಇನ್ ವರದಿ ಮಾಡಿದೆ.

ಇದನ್ನೂ ಓದಿ: 17 ದಿನದಲ್ಲಿ 11 ರೈತರು ಬಲಿ: ಇನ್ನೆಷ್ಟು ಬಲಿಯಾಗಬೇಕು..? ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ

ರೈತರು ದೆಹಲಿಯ ಗಡಿಯಲ್ಲಿ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಕಡುಚಳಿಯನ್ನು ಲೆಕ್ಕಿಸದೆ ಸರ್ಕಾರದ ನಡೆಯನ್ನು ಪ್ರಶ್ನಿಸುತ್ತಿದ್ದಾರೆ. ಮೂರು ಹೊಸ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದರೆ ಪ್ರತಿಭಟನೆಯನ್ನು ಹಿಂಪಡೆಯಲು ಒಪ್ಪಿಕೊಳ್ಳುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಸಂಸತ್‌ನಲ್ಲಿ ಯಾವುದೇ ಪ್ರತಿಪಕ್ಷ ಕೃಷಿ ಕಾಯ್ದೆಗಳನ್ನು ಸಂಪೂರ್ಣ ಬದಲಾವಣೆ ಮಾಡಬೇಕೆಂದು ಆಗ್ರಹ ಮಾಡಲಿಲ್ಲ. ಆದರೂ ಕೃಷಿ ಕಾಯ್ದೆಗಳನ್ನು ಸಂಪೂರ್ಣ ಬದಲಾವಣೆ ಮಾಡಿದ್ದು ಏಕೆ? ಎಂದು ನಿವೃತ್ತ ಅಧಿಕಾರಿಗಳು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಸಂವಿಧಾನದ ಮೂಲ ತತ್ವಗಳನ್ನು ಉಲ್ಲಂಘಿಸಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಇದು ಒಕ್ಕೂಟ ವ್ಯವಸ್ಥೆಯ ತತ್ವಗಳ ಮೇಲಿನ ಹಲ್ಲೆಯಾಗಿದೆ. ಕೃಷಿ ರಾಜ್ಯಪಟ್ಟಿಯಲ್ಲಿದ್ದರೂ ಕೇಂದ್ರ ತಾನೇ ಕೃಷಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಬೇಕೆಂದು ಸಂಸತ್ತಿನಲ್ಲಿ ಯಾವುದೇ ಪಕ್ಷದ ಸದಸ್ಯರು ಒತ್ತಡ ಹೇರಲಿಲ್ಲ. ಸಂಸತ್ತಿನ ಉಭಯ ಸದನಗಳಲ್ಲಿ ಕೃಷಿ ಮಸೂದೆಗಳ ಕುರಿತು ಚರ್ಚೆ-ಸಂವಾದ ನಡೆಸಲಿಲ್ಲ. ರಾಜ್ಯಸಭೆಯಲ್ಲಿ ಒಪ್ಪಿಗೆಯನ್ನೂ ಪಡೆದುಕೊಳ್ಳಲಿಲ್ಲ. ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಿ ಗೊಂದಲಕ್ಕೆ ಕಾರಣವಾಗಿದೆ ಎಂದು ನಿವೃತ್ತ ಅಧಿಕಾರಿಗಳು ಸರ್ಕಾರಕ್ಕೆ ಬಹಿರಂಗ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

ಕೇಂದ್ರ ಸರ್ಕಾರ ಇಂತಹ ತೀರ್ಮಾನ ಕೈಗೊಳ್ಳದಿದ್ದರೆ ರೈತರು ಬೀದಿಗೆ ಬರುತ್ತಿರಲಿಲ್ಲ. ಪ್ರತಿಭಟನೆಗೆ ಇಳಿಯುತ್ತಿರಲಿಲ್ಲ. ಕೊರೊನಾ ಸನ್ನಿವೇಶವನ್ನು ದುರುಪಯೋಗ ಮಾಡಿಕೊಂಡು ರೈತರು ಪ್ರತಿಭಟನೆಗೆ ಹೋಗುವುದಿಲ್ಲ. ಹೆಚ್ಚು ಜನರು ಸೇರಲು ಅವಕಾಶ ಇರುವುದಿಲ್ಲ ಎಂಬುದನ್ನು ಖಚಿತ ಮಾಡಿಕೊಂಡ ಸರ್ಕಾರ ಇಂತಹ ಕಾಯ್ದೆಗಳನ್ನು ಜಾರಿಗೆ ತಂದಿದೆ. ನಾವು ಕಾಯ್ದೆಗಳ ಸರಿ-ತಪ್ಪುಗಳ ಕುರಿತು ಚರ್ಚೆ ಮಾಡಲು ಹೋಗುವುದಿಲ್ಲ. ಸಂವಿಧಾನದ ಆಶಯಗಳಂತೆ ನಡೆಯಬೇಕು ಎಂದು ಒತ್ತಾಯಿಸುತ್ತೇವೆ.

ಅಖಿಲ ಭಾರತ ಮತ್ತು ವಿವಿಧ ರಾಜ್ಯಗಳಲ್ಲಿ ಕೇಂದ್ರ ಸರ್ಕಾರಿ ಸೇವೆಯಲ್ಲಿದ್ದ 78 ಮಂದಿ ನಿವೃತ್ತ ಅಧಿಕಾರಿಗಳಾದ ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ. ನೋಂದಣಿ ಮಾಡಿಕೊಂಡಿಲ್ಲ. ತಟಸ್ಥರಾಗಿದ್ದೇವೆ. ಪಕ್ಷಪಾತಕ್ಕೆ ನಮ್ಮಲ್ಲಿ ಅವಕಾಶವಿಲ್ಲ. ಆದರೆ ನಾವು ಸಂವಿಧಾನಕ್ಕೆ ಬದ್ದರಾಗಿ ನಡೆದು ಕೊಳ್ಳುವವರಾಗಿದ್ದೇವೆ. ಹಾಗಾಗಿ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸುತ್ತೇವೆ ಎಂದು ತಿಳಿಸಿದ್ದಾರೆ.

ದೆಹಲಿ ಸಮೀಪದ ಸಿಂಘು ಗಡಿಯಲ್ಲಿ ಬೃಹತ್ ಸಂಖ್ಯೆ ರೈತರು ಪ್ರತಿಭಟನೆಗೆ ಇಳಿದಿರುವುದು ದೇಶ-ವಿದೇಶದ ಗಮನ ಸೆಳೆದಿದೆ. ಈ ಪ್ರತಿಭಟನೆಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯದ ರೈತರು ಇದ್ದಾರೆ. ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಹಲವು ತಿಂಗಗಳುಗಳಿಂದಲೂ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ. ಹೀಗಾಗಿ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ-ಯುವಜನ ಸಂಘಟನೆಗಳು, ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಡಿಸೆಂಬರ್ 8 ರಂದು ಭಾರತ್ ಬಂದ್ ನಡೆಸಿ ಸರ್ಕಾರದ ಮೇಲೆ ಒತ್ತಡ ತರಲಾಯಿತು. ಪ್ರತಿಭಟನಾನಿರತ ರೈತರೊಂದಿಗೆ ಸರ್ಕಾರ ನಡೆಸಿದ ಹಲವು ಸುತ್ತಿನ ಮಾತುಕತೆ ಫಲಪ್ರದವಾಗಿಲ್ಲ. ಇಂತಹ ಸಂದರ್ಭದಲ್ಲಿ ನಾವುಗಳು ಕಾಯ್ದೆಗಳ ಸರಿತಪ್ಪುಗಳ ಕುರಿತು ಚರ್ಚಿಸುವುದಿಲ್ಲ. ಆದರೆ ಸಂವಿಧಾನದ ಮೂಲ ಆಶಯಗಳು, ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಉಲ್ಲಂಘನೆಯಾಗುತ್ತಿದೆ ಎಂಬುದರ ಬಗ್ಗೆ ಗಮನ ಸೆಳೆಯುತ್ತಿದ್ದೇವೆ.

ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಮತ್ತು ಬಹುತ್ವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು. ಕೃಷಿ ಸಂವಿಧಾನದ 7 ಷೆಡ್ಯೂಲ್ ನ ವಿಷಯ ಪಟ್ಟಿಯಲ್ಲಿ 14 ರಲ್ಲಿ ಬರುತ್ತದೆ. ಕೃಷಿ ರಾಜ್ಯಪಟ್ಟಿಯಲ್ಲಿ ಬರುತ್ತದೆ. ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿ ಕಾಯ್ದೆ ಜಾರಿಗೊಳಿಸಿರುವುದರ ವಿರುದ್ಧ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ ಎಂದು ನಿವೃತ್ತ ಅಧಿಕಾರಿಗಳು ಬರೆದಿರುವ ಪತ್ರವನ್ನು ಉಲ್ಲೇಖಿಸಿ ದಿವೈರ್.ಇನ್ ವರದಿ ಮಾಡಿದೆ.

ಯಾವುದೇ ಮಸೂದೆ ಮಂಡನೆಯಾಗುವ ಮೊದಲು ಸಂಸತ್ತಿನ ಸಮಿತಿಗಳಿಗೆ ಕಳಿಸಬೇಕು. ಆದರೆ ಈ ಕಾಯ್ದೆಗಳ ಅಂಗೀಕಾರಕ್ಕೂ ಮೊದಲು ಸಮಿತಿಗಳಿಗೆ ಕಳಿಸುವುದನ್ನು ನಿರಾಕರಿಸಲಾಗಿದೆ. ಯುಪಿಎ-1 ಸರ್ಕಾರ ಇದ್ದಾಗ ಶೇ.60 ಮಸೂದೆಗಳನ್ನು ಸಂಸತ್ ಆಯ್ಕೆ ಸಮಿತಿಗೆ ಕಳಿಸಲಾಗಿತ್ತು. ಯುಪಿಎ-2 ಸರ್ಕಾರದ ಅವಧಿಯಲ್ಲಿ ಶೇ.71ರಷ್ಟು ಮಸೂದೆಗಳನ್ನು ಆಯ್ಕೆ ಸಮಿತಿಗಳ ಒಪ್ಪಿಗೆಗೆ ಕಳಿಸಲಾಗಿತ್ತು. ಎನ್.ಡಿ.ಎ-1 ಸರ್ಕಾರದ ಅವಧಿಯಲ್ಲಿ ಶೇ. 25ರಷ್ಟು ಮಸೂದೆಗಳು ಮಾತ್ರ ಸಂಸತ್ತಿನ ಸಮಿತಿಗಳ ಒಪ್ಪಿಗೆ ಕಳಿಸಲಾಗಿದೆ. ಈ ಸರ್ಕಾರದ ಅವಧಿಯಲ್ಲಿ ಚರ್ಚೆ ಮತ್ತು ಸಂವಾದ ನಡೆಸುವುದನ್ನು ನಿರಾಕರಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ರೈತರ ‘ಬಾಯ್ಕಾಟ್ ರಿಲೆಯನ್ಸ್’ ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಜಲಫಿರಂಗಿ, ಆಶ್ರುವಾಯು ಮತ್ತು ಲಾಟಿ ಪ್ರಹಾರ ನಡೆಸುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿತು. ಪ್ರತಿಭಟನಾನಿರತ ರೈತರನ್ನು ದೇಶದ್ರೋಹಿಗಳು, ಪಾಕಿಸ್ತಾನ ಪರವಾದಿಗಳು, ಪ್ರಶಸ್ತಿ ವಾಪಸ್ಸಿಗಳು, ನಗರ ನಕ್ಸಲರು, ಖಾಲಿಸ್ತಾನಿಗಳು ಎಂದು ಬಿಂಬಿಸುವ ಮೂಲಕ ಕೇಂದ್ರ ಸರ್ಕಾರ ರೈತರೊಂದಿಗೆ ಚರ್ಚೆ, ಸಂವಾದ, ಮಾತುಕತೆಯಿಂದ ದೂರ ಉಳಿಯಲು ಯತ್ನಿಸುತ್ತಿದೆ. ಇದು ಸರಿಯಾದ ನಡೆಯಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಹಕ್ಕುಗಳಿಗಾಗಿ ಶಾಂತಿಯುತ ಪ್ರತಿಭಟನೆ ನಡೆಸುವ ರೈತರು ಸೇರಿ ಯಾರೇ ಆದರೂ ಅವರಿಗೆ ಬೆಂಬಲ ನೀಡುತ್ತೇವೆ. ಈಗಲಾದರೂ ಸರ್ಕಾರ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಈಡೇರಿಸುವ ಕೆಲಸ ಮಾಡಬೇಕು. ಪ್ರಜಾಪ್ರಭುತ್ವದ ರೀತಿಯಲ್ಲಿ ನಡೆಸುತ್ತಿರುವ ಪ್ರತಿಭಟಿಸುವ ಹಕ್ಕುಗಳನ್ನು ಗೌರವಿಸಬೇಕು. ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದು ನಿವೃತ್ತ ಅಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...