Homeಚಳವಳಿದೆಹಲಿ ರೈತ ಹೋರಾಟಕ್ಕೆ ನಿವೃತ್ತ IAS, IPS ಸೇರಿದಂತೆ 78 ಮಾಜಿ ಅಧಿಕಾರಿಗಳ ಬೆಂಬಲ

ದೆಹಲಿ ರೈತ ಹೋರಾಟಕ್ಕೆ ನಿವೃತ್ತ IAS, IPS ಸೇರಿದಂತೆ 78 ಮಾಜಿ ಅಧಿಕಾರಿಗಳ ಬೆಂಬಲ

ಅಖಿಲ ಭಾರತ ಮತ್ತು ವಿವಿಧ ರಾಜ್ಯಗಳಲ್ಲಿ ಕೇಂದ್ರ ಸರ್ಕಾರಿ ಸೇವೆಯಲ್ಲಿದ್ದ 78 ಮಂದಿ ನಿವೃತ್ತ ಅಧಿಕಾರಿಗಳಾದ ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಹಾಗೂ ತಟಸ್ಥರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಸಂಸತ್‌ನ ಎರಡೂ ಸದನಗಳಲ್ಲೂ ಯಾವುದೇ ಚರ್ಚೆಗೆ ಎಡೆಮಾಡಿಕೊಡದೆ ಜಾರಿ ಮಾಡಿದ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಭಾರತ ಸರ್ಕಾರ ಸಂವಿಧಾನದ ಮೂಲ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು 78 ಮಂದಿ ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ ಬರೆದು ಖಂಡಿಸಿದ್ದಾರೆ.

ಕೇಂದ್ರ ಸರ್ಕಾರದ ನಾಗರಿಕ ಸೇವೆಯಲ್ಲಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಐಎಎಸ್, ಐಪಿಎಸ್, ಐಆರ್‌ಎಸ್, ಐಇಎಸ್, ಐಎಫ್‌ಎಸ್, ಐಎ ಅಂಡ್ ಐಎಸ್ ಅಧಿಕಾರಿಗಳು ಪತ್ರ ಬರೆದಿರುವುದನ್ನು ಉಲ್ಲೇಖಿಸಿ ದಿವೈರ್.ಇನ್ ವರದಿ ಮಾಡಿದೆ.

ಇದನ್ನೂ ಓದಿ: 17 ದಿನದಲ್ಲಿ 11 ರೈತರು ಬಲಿ: ಇನ್ನೆಷ್ಟು ಬಲಿಯಾಗಬೇಕು..? ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ

ರೈತರು ದೆಹಲಿಯ ಗಡಿಯಲ್ಲಿ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಕಡುಚಳಿಯನ್ನು ಲೆಕ್ಕಿಸದೆ ಸರ್ಕಾರದ ನಡೆಯನ್ನು ಪ್ರಶ್ನಿಸುತ್ತಿದ್ದಾರೆ. ಮೂರು ಹೊಸ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದರೆ ಪ್ರತಿಭಟನೆಯನ್ನು ಹಿಂಪಡೆಯಲು ಒಪ್ಪಿಕೊಳ್ಳುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಸಂಸತ್‌ನಲ್ಲಿ ಯಾವುದೇ ಪ್ರತಿಪಕ್ಷ ಕೃಷಿ ಕಾಯ್ದೆಗಳನ್ನು ಸಂಪೂರ್ಣ ಬದಲಾವಣೆ ಮಾಡಬೇಕೆಂದು ಆಗ್ರಹ ಮಾಡಲಿಲ್ಲ. ಆದರೂ ಕೃಷಿ ಕಾಯ್ದೆಗಳನ್ನು ಸಂಪೂರ್ಣ ಬದಲಾವಣೆ ಮಾಡಿದ್ದು ಏಕೆ? ಎಂದು ನಿವೃತ್ತ ಅಧಿಕಾರಿಗಳು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಸಂವಿಧಾನದ ಮೂಲ ತತ್ವಗಳನ್ನು ಉಲ್ಲಂಘಿಸಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಇದು ಒಕ್ಕೂಟ ವ್ಯವಸ್ಥೆಯ ತತ್ವಗಳ ಮೇಲಿನ ಹಲ್ಲೆಯಾಗಿದೆ. ಕೃಷಿ ರಾಜ್ಯಪಟ್ಟಿಯಲ್ಲಿದ್ದರೂ ಕೇಂದ್ರ ತಾನೇ ಕೃಷಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಬೇಕೆಂದು ಸಂಸತ್ತಿನಲ್ಲಿ ಯಾವುದೇ ಪಕ್ಷದ ಸದಸ್ಯರು ಒತ್ತಡ ಹೇರಲಿಲ್ಲ. ಸಂಸತ್ತಿನ ಉಭಯ ಸದನಗಳಲ್ಲಿ ಕೃಷಿ ಮಸೂದೆಗಳ ಕುರಿತು ಚರ್ಚೆ-ಸಂವಾದ ನಡೆಸಲಿಲ್ಲ. ರಾಜ್ಯಸಭೆಯಲ್ಲಿ ಒಪ್ಪಿಗೆಯನ್ನೂ ಪಡೆದುಕೊಳ್ಳಲಿಲ್ಲ. ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಿ ಗೊಂದಲಕ್ಕೆ ಕಾರಣವಾಗಿದೆ ಎಂದು ನಿವೃತ್ತ ಅಧಿಕಾರಿಗಳು ಸರ್ಕಾರಕ್ಕೆ ಬಹಿರಂಗ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

ಕೇಂದ್ರ ಸರ್ಕಾರ ಇಂತಹ ತೀರ್ಮಾನ ಕೈಗೊಳ್ಳದಿದ್ದರೆ ರೈತರು ಬೀದಿಗೆ ಬರುತ್ತಿರಲಿಲ್ಲ. ಪ್ರತಿಭಟನೆಗೆ ಇಳಿಯುತ್ತಿರಲಿಲ್ಲ. ಕೊರೊನಾ ಸನ್ನಿವೇಶವನ್ನು ದುರುಪಯೋಗ ಮಾಡಿಕೊಂಡು ರೈತರು ಪ್ರತಿಭಟನೆಗೆ ಹೋಗುವುದಿಲ್ಲ. ಹೆಚ್ಚು ಜನರು ಸೇರಲು ಅವಕಾಶ ಇರುವುದಿಲ್ಲ ಎಂಬುದನ್ನು ಖಚಿತ ಮಾಡಿಕೊಂಡ ಸರ್ಕಾರ ಇಂತಹ ಕಾಯ್ದೆಗಳನ್ನು ಜಾರಿಗೆ ತಂದಿದೆ. ನಾವು ಕಾಯ್ದೆಗಳ ಸರಿ-ತಪ್ಪುಗಳ ಕುರಿತು ಚರ್ಚೆ ಮಾಡಲು ಹೋಗುವುದಿಲ್ಲ. ಸಂವಿಧಾನದ ಆಶಯಗಳಂತೆ ನಡೆಯಬೇಕು ಎಂದು ಒತ್ತಾಯಿಸುತ್ತೇವೆ.

ಅಖಿಲ ಭಾರತ ಮತ್ತು ವಿವಿಧ ರಾಜ್ಯಗಳಲ್ಲಿ ಕೇಂದ್ರ ಸರ್ಕಾರಿ ಸೇವೆಯಲ್ಲಿದ್ದ 78 ಮಂದಿ ನಿವೃತ್ತ ಅಧಿಕಾರಿಗಳಾದ ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ. ನೋಂದಣಿ ಮಾಡಿಕೊಂಡಿಲ್ಲ. ತಟಸ್ಥರಾಗಿದ್ದೇವೆ. ಪಕ್ಷಪಾತಕ್ಕೆ ನಮ್ಮಲ್ಲಿ ಅವಕಾಶವಿಲ್ಲ. ಆದರೆ ನಾವು ಸಂವಿಧಾನಕ್ಕೆ ಬದ್ದರಾಗಿ ನಡೆದು ಕೊಳ್ಳುವವರಾಗಿದ್ದೇವೆ. ಹಾಗಾಗಿ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸುತ್ತೇವೆ ಎಂದು ತಿಳಿಸಿದ್ದಾರೆ.

ದೆಹಲಿ ಸಮೀಪದ ಸಿಂಘು ಗಡಿಯಲ್ಲಿ ಬೃಹತ್ ಸಂಖ್ಯೆ ರೈತರು ಪ್ರತಿಭಟನೆಗೆ ಇಳಿದಿರುವುದು ದೇಶ-ವಿದೇಶದ ಗಮನ ಸೆಳೆದಿದೆ. ಈ ಪ್ರತಿಭಟನೆಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯದ ರೈತರು ಇದ್ದಾರೆ. ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಹಲವು ತಿಂಗಗಳುಗಳಿಂದಲೂ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ. ಹೀಗಾಗಿ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ-ಯುವಜನ ಸಂಘಟನೆಗಳು, ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಡಿಸೆಂಬರ್ 8 ರಂದು ಭಾರತ್ ಬಂದ್ ನಡೆಸಿ ಸರ್ಕಾರದ ಮೇಲೆ ಒತ್ತಡ ತರಲಾಯಿತು. ಪ್ರತಿಭಟನಾನಿರತ ರೈತರೊಂದಿಗೆ ಸರ್ಕಾರ ನಡೆಸಿದ ಹಲವು ಸುತ್ತಿನ ಮಾತುಕತೆ ಫಲಪ್ರದವಾಗಿಲ್ಲ. ಇಂತಹ ಸಂದರ್ಭದಲ್ಲಿ ನಾವುಗಳು ಕಾಯ್ದೆಗಳ ಸರಿತಪ್ಪುಗಳ ಕುರಿತು ಚರ್ಚಿಸುವುದಿಲ್ಲ. ಆದರೆ ಸಂವಿಧಾನದ ಮೂಲ ಆಶಯಗಳು, ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಉಲ್ಲಂಘನೆಯಾಗುತ್ತಿದೆ ಎಂಬುದರ ಬಗ್ಗೆ ಗಮನ ಸೆಳೆಯುತ್ತಿದ್ದೇವೆ.

ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಮತ್ತು ಬಹುತ್ವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು. ಕೃಷಿ ಸಂವಿಧಾನದ 7 ಷೆಡ್ಯೂಲ್ ನ ವಿಷಯ ಪಟ್ಟಿಯಲ್ಲಿ 14 ರಲ್ಲಿ ಬರುತ್ತದೆ. ಕೃಷಿ ರಾಜ್ಯಪಟ್ಟಿಯಲ್ಲಿ ಬರುತ್ತದೆ. ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿ ಕಾಯ್ದೆ ಜಾರಿಗೊಳಿಸಿರುವುದರ ವಿರುದ್ಧ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ ಎಂದು ನಿವೃತ್ತ ಅಧಿಕಾರಿಗಳು ಬರೆದಿರುವ ಪತ್ರವನ್ನು ಉಲ್ಲೇಖಿಸಿ ದಿವೈರ್.ಇನ್ ವರದಿ ಮಾಡಿದೆ.

ಯಾವುದೇ ಮಸೂದೆ ಮಂಡನೆಯಾಗುವ ಮೊದಲು ಸಂಸತ್ತಿನ ಸಮಿತಿಗಳಿಗೆ ಕಳಿಸಬೇಕು. ಆದರೆ ಈ ಕಾಯ್ದೆಗಳ ಅಂಗೀಕಾರಕ್ಕೂ ಮೊದಲು ಸಮಿತಿಗಳಿಗೆ ಕಳಿಸುವುದನ್ನು ನಿರಾಕರಿಸಲಾಗಿದೆ. ಯುಪಿಎ-1 ಸರ್ಕಾರ ಇದ್ದಾಗ ಶೇ.60 ಮಸೂದೆಗಳನ್ನು ಸಂಸತ್ ಆಯ್ಕೆ ಸಮಿತಿಗೆ ಕಳಿಸಲಾಗಿತ್ತು. ಯುಪಿಎ-2 ಸರ್ಕಾರದ ಅವಧಿಯಲ್ಲಿ ಶೇ.71ರಷ್ಟು ಮಸೂದೆಗಳನ್ನು ಆಯ್ಕೆ ಸಮಿತಿಗಳ ಒಪ್ಪಿಗೆಗೆ ಕಳಿಸಲಾಗಿತ್ತು. ಎನ್.ಡಿ.ಎ-1 ಸರ್ಕಾರದ ಅವಧಿಯಲ್ಲಿ ಶೇ. 25ರಷ್ಟು ಮಸೂದೆಗಳು ಮಾತ್ರ ಸಂಸತ್ತಿನ ಸಮಿತಿಗಳ ಒಪ್ಪಿಗೆ ಕಳಿಸಲಾಗಿದೆ. ಈ ಸರ್ಕಾರದ ಅವಧಿಯಲ್ಲಿ ಚರ್ಚೆ ಮತ್ತು ಸಂವಾದ ನಡೆಸುವುದನ್ನು ನಿರಾಕರಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ರೈತರ ‘ಬಾಯ್ಕಾಟ್ ರಿಲೆಯನ್ಸ್’ ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಜಲಫಿರಂಗಿ, ಆಶ್ರುವಾಯು ಮತ್ತು ಲಾಟಿ ಪ್ರಹಾರ ನಡೆಸುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿತು. ಪ್ರತಿಭಟನಾನಿರತ ರೈತರನ್ನು ದೇಶದ್ರೋಹಿಗಳು, ಪಾಕಿಸ್ತಾನ ಪರವಾದಿಗಳು, ಪ್ರಶಸ್ತಿ ವಾಪಸ್ಸಿಗಳು, ನಗರ ನಕ್ಸಲರು, ಖಾಲಿಸ್ತಾನಿಗಳು ಎಂದು ಬಿಂಬಿಸುವ ಮೂಲಕ ಕೇಂದ್ರ ಸರ್ಕಾರ ರೈತರೊಂದಿಗೆ ಚರ್ಚೆ, ಸಂವಾದ, ಮಾತುಕತೆಯಿಂದ ದೂರ ಉಳಿಯಲು ಯತ್ನಿಸುತ್ತಿದೆ. ಇದು ಸರಿಯಾದ ನಡೆಯಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಹಕ್ಕುಗಳಿಗಾಗಿ ಶಾಂತಿಯುತ ಪ್ರತಿಭಟನೆ ನಡೆಸುವ ರೈತರು ಸೇರಿ ಯಾರೇ ಆದರೂ ಅವರಿಗೆ ಬೆಂಬಲ ನೀಡುತ್ತೇವೆ. ಈಗಲಾದರೂ ಸರ್ಕಾರ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಈಡೇರಿಸುವ ಕೆಲಸ ಮಾಡಬೇಕು. ಪ್ರಜಾಪ್ರಭುತ್ವದ ರೀತಿಯಲ್ಲಿ ನಡೆಸುತ್ತಿರುವ ಪ್ರತಿಭಟಿಸುವ ಹಕ್ಕುಗಳನ್ನು ಗೌರವಿಸಬೇಕು. ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದು ನಿವೃತ್ತ ಅಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....