Homeಚಳವಳಿದೆಹಲಿ ರೈತ ಹೋರಾಟಕ್ಕೆ ನಿವೃತ್ತ IAS, IPS ಸೇರಿದಂತೆ 78 ಮಾಜಿ ಅಧಿಕಾರಿಗಳ ಬೆಂಬಲ

ದೆಹಲಿ ರೈತ ಹೋರಾಟಕ್ಕೆ ನಿವೃತ್ತ IAS, IPS ಸೇರಿದಂತೆ 78 ಮಾಜಿ ಅಧಿಕಾರಿಗಳ ಬೆಂಬಲ

ಅಖಿಲ ಭಾರತ ಮತ್ತು ವಿವಿಧ ರಾಜ್ಯಗಳಲ್ಲಿ ಕೇಂದ್ರ ಸರ್ಕಾರಿ ಸೇವೆಯಲ್ಲಿದ್ದ 78 ಮಂದಿ ನಿವೃತ್ತ ಅಧಿಕಾರಿಗಳಾದ ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಹಾಗೂ ತಟಸ್ಥರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಸಂಸತ್‌ನ ಎರಡೂ ಸದನಗಳಲ್ಲೂ ಯಾವುದೇ ಚರ್ಚೆಗೆ ಎಡೆಮಾಡಿಕೊಡದೆ ಜಾರಿ ಮಾಡಿದ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಭಾರತ ಸರ್ಕಾರ ಸಂವಿಧಾನದ ಮೂಲ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು 78 ಮಂದಿ ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ ಬರೆದು ಖಂಡಿಸಿದ್ದಾರೆ.

ಕೇಂದ್ರ ಸರ್ಕಾರದ ನಾಗರಿಕ ಸೇವೆಯಲ್ಲಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಐಎಎಸ್, ಐಪಿಎಸ್, ಐಆರ್‌ಎಸ್, ಐಇಎಸ್, ಐಎಫ್‌ಎಸ್, ಐಎ ಅಂಡ್ ಐಎಸ್ ಅಧಿಕಾರಿಗಳು ಪತ್ರ ಬರೆದಿರುವುದನ್ನು ಉಲ್ಲೇಖಿಸಿ ದಿವೈರ್.ಇನ್ ವರದಿ ಮಾಡಿದೆ.

ಇದನ್ನೂ ಓದಿ: 17 ದಿನದಲ್ಲಿ 11 ರೈತರು ಬಲಿ: ಇನ್ನೆಷ್ಟು ಬಲಿಯಾಗಬೇಕು..? ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ

ರೈತರು ದೆಹಲಿಯ ಗಡಿಯಲ್ಲಿ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಕಡುಚಳಿಯನ್ನು ಲೆಕ್ಕಿಸದೆ ಸರ್ಕಾರದ ನಡೆಯನ್ನು ಪ್ರಶ್ನಿಸುತ್ತಿದ್ದಾರೆ. ಮೂರು ಹೊಸ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದರೆ ಪ್ರತಿಭಟನೆಯನ್ನು ಹಿಂಪಡೆಯಲು ಒಪ್ಪಿಕೊಳ್ಳುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಸಂಸತ್‌ನಲ್ಲಿ ಯಾವುದೇ ಪ್ರತಿಪಕ್ಷ ಕೃಷಿ ಕಾಯ್ದೆಗಳನ್ನು ಸಂಪೂರ್ಣ ಬದಲಾವಣೆ ಮಾಡಬೇಕೆಂದು ಆಗ್ರಹ ಮಾಡಲಿಲ್ಲ. ಆದರೂ ಕೃಷಿ ಕಾಯ್ದೆಗಳನ್ನು ಸಂಪೂರ್ಣ ಬದಲಾವಣೆ ಮಾಡಿದ್ದು ಏಕೆ? ಎಂದು ನಿವೃತ್ತ ಅಧಿಕಾರಿಗಳು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಸಂವಿಧಾನದ ಮೂಲ ತತ್ವಗಳನ್ನು ಉಲ್ಲಂಘಿಸಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಇದು ಒಕ್ಕೂಟ ವ್ಯವಸ್ಥೆಯ ತತ್ವಗಳ ಮೇಲಿನ ಹಲ್ಲೆಯಾಗಿದೆ. ಕೃಷಿ ರಾಜ್ಯಪಟ್ಟಿಯಲ್ಲಿದ್ದರೂ ಕೇಂದ್ರ ತಾನೇ ಕೃಷಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಬೇಕೆಂದು ಸಂಸತ್ತಿನಲ್ಲಿ ಯಾವುದೇ ಪಕ್ಷದ ಸದಸ್ಯರು ಒತ್ತಡ ಹೇರಲಿಲ್ಲ. ಸಂಸತ್ತಿನ ಉಭಯ ಸದನಗಳಲ್ಲಿ ಕೃಷಿ ಮಸೂದೆಗಳ ಕುರಿತು ಚರ್ಚೆ-ಸಂವಾದ ನಡೆಸಲಿಲ್ಲ. ರಾಜ್ಯಸಭೆಯಲ್ಲಿ ಒಪ್ಪಿಗೆಯನ್ನೂ ಪಡೆದುಕೊಳ್ಳಲಿಲ್ಲ. ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಿ ಗೊಂದಲಕ್ಕೆ ಕಾರಣವಾಗಿದೆ ಎಂದು ನಿವೃತ್ತ ಅಧಿಕಾರಿಗಳು ಸರ್ಕಾರಕ್ಕೆ ಬಹಿರಂಗ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

ಕೇಂದ್ರ ಸರ್ಕಾರ ಇಂತಹ ತೀರ್ಮಾನ ಕೈಗೊಳ್ಳದಿದ್ದರೆ ರೈತರು ಬೀದಿಗೆ ಬರುತ್ತಿರಲಿಲ್ಲ. ಪ್ರತಿಭಟನೆಗೆ ಇಳಿಯುತ್ತಿರಲಿಲ್ಲ. ಕೊರೊನಾ ಸನ್ನಿವೇಶವನ್ನು ದುರುಪಯೋಗ ಮಾಡಿಕೊಂಡು ರೈತರು ಪ್ರತಿಭಟನೆಗೆ ಹೋಗುವುದಿಲ್ಲ. ಹೆಚ್ಚು ಜನರು ಸೇರಲು ಅವಕಾಶ ಇರುವುದಿಲ್ಲ ಎಂಬುದನ್ನು ಖಚಿತ ಮಾಡಿಕೊಂಡ ಸರ್ಕಾರ ಇಂತಹ ಕಾಯ್ದೆಗಳನ್ನು ಜಾರಿಗೆ ತಂದಿದೆ. ನಾವು ಕಾಯ್ದೆಗಳ ಸರಿ-ತಪ್ಪುಗಳ ಕುರಿತು ಚರ್ಚೆ ಮಾಡಲು ಹೋಗುವುದಿಲ್ಲ. ಸಂವಿಧಾನದ ಆಶಯಗಳಂತೆ ನಡೆಯಬೇಕು ಎಂದು ಒತ್ತಾಯಿಸುತ್ತೇವೆ.

ಅಖಿಲ ಭಾರತ ಮತ್ತು ವಿವಿಧ ರಾಜ್ಯಗಳಲ್ಲಿ ಕೇಂದ್ರ ಸರ್ಕಾರಿ ಸೇವೆಯಲ್ಲಿದ್ದ 78 ಮಂದಿ ನಿವೃತ್ತ ಅಧಿಕಾರಿಗಳಾದ ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ. ನೋಂದಣಿ ಮಾಡಿಕೊಂಡಿಲ್ಲ. ತಟಸ್ಥರಾಗಿದ್ದೇವೆ. ಪಕ್ಷಪಾತಕ್ಕೆ ನಮ್ಮಲ್ಲಿ ಅವಕಾಶವಿಲ್ಲ. ಆದರೆ ನಾವು ಸಂವಿಧಾನಕ್ಕೆ ಬದ್ದರಾಗಿ ನಡೆದು ಕೊಳ್ಳುವವರಾಗಿದ್ದೇವೆ. ಹಾಗಾಗಿ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸುತ್ತೇವೆ ಎಂದು ತಿಳಿಸಿದ್ದಾರೆ.

ದೆಹಲಿ ಸಮೀಪದ ಸಿಂಘು ಗಡಿಯಲ್ಲಿ ಬೃಹತ್ ಸಂಖ್ಯೆ ರೈತರು ಪ್ರತಿಭಟನೆಗೆ ಇಳಿದಿರುವುದು ದೇಶ-ವಿದೇಶದ ಗಮನ ಸೆಳೆದಿದೆ. ಈ ಪ್ರತಿಭಟನೆಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯದ ರೈತರು ಇದ್ದಾರೆ. ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಹಲವು ತಿಂಗಗಳುಗಳಿಂದಲೂ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ. ಹೀಗಾಗಿ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ-ಯುವಜನ ಸಂಘಟನೆಗಳು, ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಡಿಸೆಂಬರ್ 8 ರಂದು ಭಾರತ್ ಬಂದ್ ನಡೆಸಿ ಸರ್ಕಾರದ ಮೇಲೆ ಒತ್ತಡ ತರಲಾಯಿತು. ಪ್ರತಿಭಟನಾನಿರತ ರೈತರೊಂದಿಗೆ ಸರ್ಕಾರ ನಡೆಸಿದ ಹಲವು ಸುತ್ತಿನ ಮಾತುಕತೆ ಫಲಪ್ರದವಾಗಿಲ್ಲ. ಇಂತಹ ಸಂದರ್ಭದಲ್ಲಿ ನಾವುಗಳು ಕಾಯ್ದೆಗಳ ಸರಿತಪ್ಪುಗಳ ಕುರಿತು ಚರ್ಚಿಸುವುದಿಲ್ಲ. ಆದರೆ ಸಂವಿಧಾನದ ಮೂಲ ಆಶಯಗಳು, ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಉಲ್ಲಂಘನೆಯಾಗುತ್ತಿದೆ ಎಂಬುದರ ಬಗ್ಗೆ ಗಮನ ಸೆಳೆಯುತ್ತಿದ್ದೇವೆ.

ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಮತ್ತು ಬಹುತ್ವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು. ಕೃಷಿ ಸಂವಿಧಾನದ 7 ಷೆಡ್ಯೂಲ್ ನ ವಿಷಯ ಪಟ್ಟಿಯಲ್ಲಿ 14 ರಲ್ಲಿ ಬರುತ್ತದೆ. ಕೃಷಿ ರಾಜ್ಯಪಟ್ಟಿಯಲ್ಲಿ ಬರುತ್ತದೆ. ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿ ಕಾಯ್ದೆ ಜಾರಿಗೊಳಿಸಿರುವುದರ ವಿರುದ್ಧ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ ಎಂದು ನಿವೃತ್ತ ಅಧಿಕಾರಿಗಳು ಬರೆದಿರುವ ಪತ್ರವನ್ನು ಉಲ್ಲೇಖಿಸಿ ದಿವೈರ್.ಇನ್ ವರದಿ ಮಾಡಿದೆ.

ಯಾವುದೇ ಮಸೂದೆ ಮಂಡನೆಯಾಗುವ ಮೊದಲು ಸಂಸತ್ತಿನ ಸಮಿತಿಗಳಿಗೆ ಕಳಿಸಬೇಕು. ಆದರೆ ಈ ಕಾಯ್ದೆಗಳ ಅಂಗೀಕಾರಕ್ಕೂ ಮೊದಲು ಸಮಿತಿಗಳಿಗೆ ಕಳಿಸುವುದನ್ನು ನಿರಾಕರಿಸಲಾಗಿದೆ. ಯುಪಿಎ-1 ಸರ್ಕಾರ ಇದ್ದಾಗ ಶೇ.60 ಮಸೂದೆಗಳನ್ನು ಸಂಸತ್ ಆಯ್ಕೆ ಸಮಿತಿಗೆ ಕಳಿಸಲಾಗಿತ್ತು. ಯುಪಿಎ-2 ಸರ್ಕಾರದ ಅವಧಿಯಲ್ಲಿ ಶೇ.71ರಷ್ಟು ಮಸೂದೆಗಳನ್ನು ಆಯ್ಕೆ ಸಮಿತಿಗಳ ಒಪ್ಪಿಗೆಗೆ ಕಳಿಸಲಾಗಿತ್ತು. ಎನ್.ಡಿ.ಎ-1 ಸರ್ಕಾರದ ಅವಧಿಯಲ್ಲಿ ಶೇ. 25ರಷ್ಟು ಮಸೂದೆಗಳು ಮಾತ್ರ ಸಂಸತ್ತಿನ ಸಮಿತಿಗಳ ಒಪ್ಪಿಗೆ ಕಳಿಸಲಾಗಿದೆ. ಈ ಸರ್ಕಾರದ ಅವಧಿಯಲ್ಲಿ ಚರ್ಚೆ ಮತ್ತು ಸಂವಾದ ನಡೆಸುವುದನ್ನು ನಿರಾಕರಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ರೈತರ ‘ಬಾಯ್ಕಾಟ್ ರಿಲೆಯನ್ಸ್’ ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಜಲಫಿರಂಗಿ, ಆಶ್ರುವಾಯು ಮತ್ತು ಲಾಟಿ ಪ್ರಹಾರ ನಡೆಸುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿತು. ಪ್ರತಿಭಟನಾನಿರತ ರೈತರನ್ನು ದೇಶದ್ರೋಹಿಗಳು, ಪಾಕಿಸ್ತಾನ ಪರವಾದಿಗಳು, ಪ್ರಶಸ್ತಿ ವಾಪಸ್ಸಿಗಳು, ನಗರ ನಕ್ಸಲರು, ಖಾಲಿಸ್ತಾನಿಗಳು ಎಂದು ಬಿಂಬಿಸುವ ಮೂಲಕ ಕೇಂದ್ರ ಸರ್ಕಾರ ರೈತರೊಂದಿಗೆ ಚರ್ಚೆ, ಸಂವಾದ, ಮಾತುಕತೆಯಿಂದ ದೂರ ಉಳಿಯಲು ಯತ್ನಿಸುತ್ತಿದೆ. ಇದು ಸರಿಯಾದ ನಡೆಯಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಹಕ್ಕುಗಳಿಗಾಗಿ ಶಾಂತಿಯುತ ಪ್ರತಿಭಟನೆ ನಡೆಸುವ ರೈತರು ಸೇರಿ ಯಾರೇ ಆದರೂ ಅವರಿಗೆ ಬೆಂಬಲ ನೀಡುತ್ತೇವೆ. ಈಗಲಾದರೂ ಸರ್ಕಾರ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಈಡೇರಿಸುವ ಕೆಲಸ ಮಾಡಬೇಕು. ಪ್ರಜಾಪ್ರಭುತ್ವದ ರೀತಿಯಲ್ಲಿ ನಡೆಸುತ್ತಿರುವ ಪ್ರತಿಭಟಿಸುವ ಹಕ್ಕುಗಳನ್ನು ಗೌರವಿಸಬೇಕು. ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದು ನಿವೃತ್ತ ಅಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...