Homeಮುಖಪುಟಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ರಾಜ್ಯಗಳ ಜಿಎಸ್‌ಟಿ ಪಾಲನ್ನು ಕೇಂದ್ರವೇ ನೀಡುತ್ತಿಲ್ಲ. ಹಾಗಿರುವಾಗ, ಖಾಸಗಿ ಕೃಷಿ-ಉತ್ಪನ್ನ ಖರೀದಿದಾರರು ರೈತರಿಗೆ ಸರಿಯಾಗಿ ಪಾವತಿ ಮಾಡುತ್ತಾರೆ ಎಂದು ನಂಬುವುದು ಹೇಗೆ?

- Advertisement -
- Advertisement -

ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ “ನಾವು ಆತ್ಮನಿರ್ಭರ ಭಾರತದ ಧ್ಯೇಯವನ್ನು ಸಾಕಾರಗೊಳಿಸಲು, ಖಾಸಗಿ ವಲಯಕ್ಕೆ ಅವಕಾಶಗಳನ್ನು ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಅವರ ಭಾಷಣದ ಕುರಿತು ಒಂದಿಷ್ಟು ಪ್ರಶ್ನೆಗಳು

• ‘ಆತ್ಮನಿರ್ಭರ್’ (ಸ್ವಾವಲಂಬಿ ಭಾರತ) ಸಾಧಿಸಲು ಸರ್ಕಾರಗಳು ಖಾಸಗಿ ವಲಯವನ್ನು ಉತ್ತೇಜಿಸಬೇಕು ಎಂಬುದರ ಅರ್ಥವೇನು?
• ಇಲ್ಲಿ ಖಾಸಗಿ ವಲಯವೆಂದರೆ, ದೇಸಿ ಖಾಸಗಿ ವಲಯವಷ್ಟೇಯೇ? ಅಥವಾ ಅದು ವಿದೇಶಿ ಖಾಸಗಿ ವಲಯವನ್ನೂ ಒಳಗೊಂಡಿದಿಯೇ?
• ದೇಸಿ ಖಾಸಗಿ ವಲಯವೆಂದರೇನು? ಅದು ವಿದೇಶಿ ಬಂಡವಾಳದ ಮೇಲೆಯೇ ನಿಂತಿದೆಯಲ್ಲವೆ? ಬಿಎಸ್‌ಎನ್‌ಎಲ್ ಅನ್ನು ನಾಶ ಮಾಡಿ ಜಿಯೋ ಬೆಳೆಯಲು ನೆರವು ನೀಡುವುದು ಆತ್ಮನಿರ್ಭರ್ ಹೇಗಾಗುತ್ತದೆ? ಅದು ‘ಆತ್ಮನಿರ್ಭರ್’ ಎಂಬ ಸುಂದರ ಪದದೊಂದಿಗೆ ಜನರನ್ನು ಮರುಳು ಮಾಡುವ ಸಾಹಸವೇ?
• ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಹಕಾರವಿರಬೇಕು ಎಂದಿದ್ದಾರಲ್ಲ? ರಾಜ್ಯಗಳ ಜಿಎಸ್‌ಟಿ ಪಾಲನ್ನೇ ಕೊಡದ ಮೇಲೆ ಅದೆಂತಹ ಸಹಕಾರ ನಿರೀಕ್ಷಿಸುವುದು?
• ಮುಖ್ಯ ಪ್ರಶ್ನೆ ಎಂದರೆ, ಪ್ರಧಾನಿ ಭಾಷಣದ ಎರಡು ಮುಖ್ಯ ಅಂಶಗಳು: ಆತ್ಮನಿರ್ಭರಕ್ಕಾಗಿ ಖಾಸಗಿಯವರಿಗೆ ಮಣೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಹಕಾರ…ಈ ಎರಡೂ ಅಂಶಗಳನ್ನು ಕೃಷಿ ಕಾಯ್ದೆಗಳು ಮತ್ತು ಅವುಗಳ ರದ್ದತಿಗಾಗಿ ನಡೆಯುತ್ತಿರುವ ಪ್ರತಿಭಟನೆ (ಪ್ರಧಾನಿ ಪ್ರಕಾರ ಆಂದೋಲನ್‌ಜೀವಿಗಳ ಪ್ರತಿಭಟನೆ!)ಯ ಹಿನ್ನೆಲೆಯಲ್ಲಿ ನೋಡೋಣ.

ಮೊದಲನೆದಾಗಿ, ಕೃಷಿ ಕಾಯ್ದೆಗಳ ಪ್ರಕಾರ ಖಾಸಗಿಯವರು ಕೃಷಿ ಕ್ಷೇತ್ರ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಇದು ಖಾಸಗಿಯವರಿಗೆ ಮತ್ತು ಅವರನ್ನು ಬೆಂಬಲಿಸುವ ಸರ್ಕಾರಕ್ಕೆ ಆತ್ಮನಿರ್ಭರ್ ಆಗಿರಬಹುದು, ಆದರೆ ಅದು ರೈತಾಪಿಗಳ ಪಾಲಿಗೆ ಆತ್ಮಹತ್ಯೆಯೇ ಆಗಿದೆ.

ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರ! ಕೃಷಿ ಕಾಯ್ದೆಗಳನ್ನು ರಾಜ್ಯಗಳ ಜೊತೆ ಚರ್ಚಿಸದೇ ಜಾರಿ ಮಾಡುವಾಗ ಇದು ನೆನಪಾಗಲಿಲ್ಲವೆ? ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವ ಈ ಕೇಂದ್ರ ಸರ್ಕಾರ ರಾಜ್ಯಗಳಿಂದ ಸಹಕಾರ ಪಡೆಯುತ್ತಿದೆ, ಆದರೆ ಅದೆ ರಾಜ್ಯ ಸರ್ಕಾರಗಳನ್ನು ವಂಚಿಸುತ್ತಿದೆಯಲ್ಲವೆ?

ಕಳೆದ 6-7 ವರ್ಷಗಳಲ್ಲಿ, ನರೇಂದ್ರ ಮೋದಿಯವರ ಅತಿದೊಡ್ಡ ಕಾರ್ಪೊರೇಟ್ ದಾನಿಗಳಾದ ಅಂಬಾನಿಗಳು ಮತ್ತು ಅದಾನಿ ಗುಂಪುಗಳು ತಮ್ಮ ಪ್ರಭಾವವನ್ನು, ಕಾರ್ಪೊರೇಟ್ ಜಗತ್ತಿನ ಎಲ್ಲ ಪ್ರತಿಸ್ಪರ್ಧಿಗಳಿಗಿಂತ ತಮಗೆ ಹೆಚ್ಚಿನ ಲಾಭವನ್ನು ನೀಡುವ ನೀತಿಗಳನ್ನು ರೂಪಿಸಲು ಬಳಸಿಕೊಂಡಿವೆ. ದೇಶೀ ರಾಜಕಾರಣಿಗಳು ತಮ್ಮ ಜೇಬಿನಲ್ಲಿರುವುದರಿಂದ ಎರಡೂ ಗುಂಪುಗಳು ತಮ್ಮನ್ನು ತಾವು ಹೆಚ್ಚಿನ ವಿದೇಶಿ ಬಿಡ್ಡುದಾರರಿಗೆ ಮಾರಾಟ ಮಾಡಲು ಮುಂದಾಗಿವೆ.

ಮುಕೇಶ್ ಅಂಬಾನಿ ರಿಲಯನ್ಸ್ ಎಂಬುದು ದೇಸಿ ಕಂಪನಿ ಅಲ್ಲವೇ ಅಲ್ಲ.
ಜಿಯೋ ಪ್ಲಾಟ್‌ಫಾರ್ಮ್‌ಗಳಲ್ಲಿ ಫೇಸ್‌ಬುಕ್ 5.5 ಬಿಲಿಯನ್ ಡಾಲರ್ (43,753 ಕೋಟಿ ರೂ.) ಹೂಡುವ ಮೂಲಕ ಅತಿದೊಡ್ಡ ಹೂಡಿಕೆದಾರರಾಗಿದ್ದರೆ, ಗೂಗಲ್ 4.5 ಬಿಲಿಯನ್ ಡಾಲರ್‌ಗಳನ್ನು ಹೂಡಿದೆ. ಸೌದಿ ಅರೇಬಿಯಾದ ಸಾರ್ವಭೌಮ ಸಂಪತ್ತು ನಿಧಿಯಾಗಿರುವ ಪಬ್ಲಿಕ್ ಇನ್‌ವೆಸ್ಟ್ಮೆಂಟ್ ಫಂಡ್ 1.5 ಬಿಲಿಯನ್ ಡಾಲರ್, ಅಮೆರಿಕಾದ ದೊಡ್ಡ ಹೂಡಿಕೆದಾರ ಕಂಪನಿ ಕೆಕೆಆರ್ 1.5 ಬಿಲಿಯನ್ ಡಾಲರ್, ಅಬುದಾಬಿ ಮೂಲದ ಮುಬಡಾಲಾ ಮತ್ತು ಎಡಿಐಎ ಎಂಬ ಎರಡು ಹೂಡಿಕೆ ನಿಧಿ ಕಂಪನಿಗಳು ಕ್ರಮವಾಗಿ 1.2 ಬಿಲಿಯನ್ ಡಾಲರ್ ಮತ್ತು 750 ಮಿಲಿಯನ್ ಡಾಲರ್ ಮತ್ತು ಜಾಗತಿಕ ಆಸ್ತಿ ನಿರ್ವಹಣಾ ಸಂಸ್ಥೆ ಟಿಪಿಜಿ ಕ್ಯಾಪಿಟಲ್ 600 ಮಿಲಿಯನ್ ಡಾಲರ್ ಹಣವನ್ನು ಅಂಬಾನಿ ಕಂಪನಿಯಲ್ಲಿ ಹೂಡಿಕೆ ಮಾಡಿವೆ. ಪಟ್ಟಿ ಇನ್ನೂ ದೊಡ್ಡದಾಗಬಹುದು.

ಹೀಗಾಗಿ ಅಂಬಾನಿ ಹಿತರಕ್ಷಣೆ ಎಂದರೆ ಮೇಲೆ ತಿಳಿಸಿದ ಕಂಪನಿಗಳ ಬಂಡವಾಳದ ರಕ್ಷಣೆಯೂ ಆಗಿದೆಯಲ್ಲವೆ? ಈ ಕಾರಣಕ್ಕೆ ಆತ್ಮನಿರ್ಭರ‌ಕ್ಕಾಗಿ ಖಾಸಗಿಯವರಿಗೆ ಉತ್ತೇಜನ ಎಂಬ ಮಾತನ್ನು ಅರ್ಥೈಸಿಕೊಳ್ಳಬೇಕಾಗಿದೆ.

ಭಾರೀ ವಿರೋಧದ ನಡುವೆಯೂ ಕೃಷಿ ಕಾನೂನುಗಳನ್ನು ಹೇರಲು ಮೋದಿ ಸರ್ಕಾರ ಮುಂದಾದ್ದರ ಹಿಂದಿನ ಬಹಿರಂಗ ರಹಸ್ಯವಿದು. ಕೇವಲ ಭಾರತೀಯ ಕೃಷಿಯಷ್ಟೇ ಅಲ್ಲ, ನಮ್ಮ ಎಲ್ಲ ವಲಯಗಳಿಗೂ ನಿಮಗೆ ಮುಕ್ತ ಸ್ವಾಗತ ಎಂದು ಎಲ್ಲಾ ವಿದೇಶಿ ಹೂಡಿಕೆದಾರರಿಗೆ ಸೂಚಿಸುವ ಒಂದು ಮಾರ್ಗವಾಗಿದೆ ಇದು. ಕೃಷಿ ಕಾನೂನು ಹಿಂಪಡೆಯುವುದಿಲ್ಲ ಎನ್ನುತ್ತಿರುವ ಭಾರತ ಸರ್ಕಾರವು ದೃಢವಾಗಿ ತಮ್ಮ (ವಿದೇಶಿ ಬಂಡವಾಳಿಗರು) ಕಡೆಗಿದೆ ಮತ್ತು ತಮಗೆ ಲಾಭದ ಖಾತ್ರಿ ನೀಡಲು ತನ್ನದೇ ಜನರನ್ನು ಬಲಿ ಕೊಡಲು ಸಿದ್ಧವಾಗಿದೆ ಎಂದು ವಿದೇಶಿ ಹೂಡಿಕೆದಾರರು, ದೇಸಿ ವಂಚಕ ಉದ್ಯಮಪತಿಗಳು ನಂಬಬೇಕೆಂದರೆ ಮೋದಿ ಕೃಷಿ ಕಾಯ್ದೆಗಳ ಪರ ನಿಲ್ಲಲೇಬೇಕು ಅಲ್ಲವೆ?

ಪಿ.ಕೆ. ಮಲ್ಲನಗೌಡರ್

(ಲೇಖಕರು ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕಾಗಿ ಖಾಸಗಿ ವಲಯಕ್ಕೆ ಉತ್ತೇಜನ ನೀಡಿ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...