Homeಮುಖಪುಟಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ರಾಜ್ಯಗಳ ಜಿಎಸ್‌ಟಿ ಪಾಲನ್ನು ಕೇಂದ್ರವೇ ನೀಡುತ್ತಿಲ್ಲ. ಹಾಗಿರುವಾಗ, ಖಾಸಗಿ ಕೃಷಿ-ಉತ್ಪನ್ನ ಖರೀದಿದಾರರು ರೈತರಿಗೆ ಸರಿಯಾಗಿ ಪಾವತಿ ಮಾಡುತ್ತಾರೆ ಎಂದು ನಂಬುವುದು ಹೇಗೆ?

- Advertisement -
- Advertisement -

ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ “ನಾವು ಆತ್ಮನಿರ್ಭರ ಭಾರತದ ಧ್ಯೇಯವನ್ನು ಸಾಕಾರಗೊಳಿಸಲು, ಖಾಸಗಿ ವಲಯಕ್ಕೆ ಅವಕಾಶಗಳನ್ನು ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಅವರ ಭಾಷಣದ ಕುರಿತು ಒಂದಿಷ್ಟು ಪ್ರಶ್ನೆಗಳು

• ‘ಆತ್ಮನಿರ್ಭರ್’ (ಸ್ವಾವಲಂಬಿ ಭಾರತ) ಸಾಧಿಸಲು ಸರ್ಕಾರಗಳು ಖಾಸಗಿ ವಲಯವನ್ನು ಉತ್ತೇಜಿಸಬೇಕು ಎಂಬುದರ ಅರ್ಥವೇನು?
• ಇಲ್ಲಿ ಖಾಸಗಿ ವಲಯವೆಂದರೆ, ದೇಸಿ ಖಾಸಗಿ ವಲಯವಷ್ಟೇಯೇ? ಅಥವಾ ಅದು ವಿದೇಶಿ ಖಾಸಗಿ ವಲಯವನ್ನೂ ಒಳಗೊಂಡಿದಿಯೇ?
• ದೇಸಿ ಖಾಸಗಿ ವಲಯವೆಂದರೇನು? ಅದು ವಿದೇಶಿ ಬಂಡವಾಳದ ಮೇಲೆಯೇ ನಿಂತಿದೆಯಲ್ಲವೆ? ಬಿಎಸ್‌ಎನ್‌ಎಲ್ ಅನ್ನು ನಾಶ ಮಾಡಿ ಜಿಯೋ ಬೆಳೆಯಲು ನೆರವು ನೀಡುವುದು ಆತ್ಮನಿರ್ಭರ್ ಹೇಗಾಗುತ್ತದೆ? ಅದು ‘ಆತ್ಮನಿರ್ಭರ್’ ಎಂಬ ಸುಂದರ ಪದದೊಂದಿಗೆ ಜನರನ್ನು ಮರುಳು ಮಾಡುವ ಸಾಹಸವೇ?
• ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಹಕಾರವಿರಬೇಕು ಎಂದಿದ್ದಾರಲ್ಲ? ರಾಜ್ಯಗಳ ಜಿಎಸ್‌ಟಿ ಪಾಲನ್ನೇ ಕೊಡದ ಮೇಲೆ ಅದೆಂತಹ ಸಹಕಾರ ನಿರೀಕ್ಷಿಸುವುದು?
• ಮುಖ್ಯ ಪ್ರಶ್ನೆ ಎಂದರೆ, ಪ್ರಧಾನಿ ಭಾಷಣದ ಎರಡು ಮುಖ್ಯ ಅಂಶಗಳು: ಆತ್ಮನಿರ್ಭರಕ್ಕಾಗಿ ಖಾಸಗಿಯವರಿಗೆ ಮಣೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಹಕಾರ…ಈ ಎರಡೂ ಅಂಶಗಳನ್ನು ಕೃಷಿ ಕಾಯ್ದೆಗಳು ಮತ್ತು ಅವುಗಳ ರದ್ದತಿಗಾಗಿ ನಡೆಯುತ್ತಿರುವ ಪ್ರತಿಭಟನೆ (ಪ್ರಧಾನಿ ಪ್ರಕಾರ ಆಂದೋಲನ್‌ಜೀವಿಗಳ ಪ್ರತಿಭಟನೆ!)ಯ ಹಿನ್ನೆಲೆಯಲ್ಲಿ ನೋಡೋಣ.

ಮೊದಲನೆದಾಗಿ, ಕೃಷಿ ಕಾಯ್ದೆಗಳ ಪ್ರಕಾರ ಖಾಸಗಿಯವರು ಕೃಷಿ ಕ್ಷೇತ್ರ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಇದು ಖಾಸಗಿಯವರಿಗೆ ಮತ್ತು ಅವರನ್ನು ಬೆಂಬಲಿಸುವ ಸರ್ಕಾರಕ್ಕೆ ಆತ್ಮನಿರ್ಭರ್ ಆಗಿರಬಹುದು, ಆದರೆ ಅದು ರೈತಾಪಿಗಳ ಪಾಲಿಗೆ ಆತ್ಮಹತ್ಯೆಯೇ ಆಗಿದೆ.

ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರ! ಕೃಷಿ ಕಾಯ್ದೆಗಳನ್ನು ರಾಜ್ಯಗಳ ಜೊತೆ ಚರ್ಚಿಸದೇ ಜಾರಿ ಮಾಡುವಾಗ ಇದು ನೆನಪಾಗಲಿಲ್ಲವೆ? ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವ ಈ ಕೇಂದ್ರ ಸರ್ಕಾರ ರಾಜ್ಯಗಳಿಂದ ಸಹಕಾರ ಪಡೆಯುತ್ತಿದೆ, ಆದರೆ ಅದೆ ರಾಜ್ಯ ಸರ್ಕಾರಗಳನ್ನು ವಂಚಿಸುತ್ತಿದೆಯಲ್ಲವೆ?

ಕಳೆದ 6-7 ವರ್ಷಗಳಲ್ಲಿ, ನರೇಂದ್ರ ಮೋದಿಯವರ ಅತಿದೊಡ್ಡ ಕಾರ್ಪೊರೇಟ್ ದಾನಿಗಳಾದ ಅಂಬಾನಿಗಳು ಮತ್ತು ಅದಾನಿ ಗುಂಪುಗಳು ತಮ್ಮ ಪ್ರಭಾವವನ್ನು, ಕಾರ್ಪೊರೇಟ್ ಜಗತ್ತಿನ ಎಲ್ಲ ಪ್ರತಿಸ್ಪರ್ಧಿಗಳಿಗಿಂತ ತಮಗೆ ಹೆಚ್ಚಿನ ಲಾಭವನ್ನು ನೀಡುವ ನೀತಿಗಳನ್ನು ರೂಪಿಸಲು ಬಳಸಿಕೊಂಡಿವೆ. ದೇಶೀ ರಾಜಕಾರಣಿಗಳು ತಮ್ಮ ಜೇಬಿನಲ್ಲಿರುವುದರಿಂದ ಎರಡೂ ಗುಂಪುಗಳು ತಮ್ಮನ್ನು ತಾವು ಹೆಚ್ಚಿನ ವಿದೇಶಿ ಬಿಡ್ಡುದಾರರಿಗೆ ಮಾರಾಟ ಮಾಡಲು ಮುಂದಾಗಿವೆ.

ಮುಕೇಶ್ ಅಂಬಾನಿ ರಿಲಯನ್ಸ್ ಎಂಬುದು ದೇಸಿ ಕಂಪನಿ ಅಲ್ಲವೇ ಅಲ್ಲ.
ಜಿಯೋ ಪ್ಲಾಟ್‌ಫಾರ್ಮ್‌ಗಳಲ್ಲಿ ಫೇಸ್‌ಬುಕ್ 5.5 ಬಿಲಿಯನ್ ಡಾಲರ್ (43,753 ಕೋಟಿ ರೂ.) ಹೂಡುವ ಮೂಲಕ ಅತಿದೊಡ್ಡ ಹೂಡಿಕೆದಾರರಾಗಿದ್ದರೆ, ಗೂಗಲ್ 4.5 ಬಿಲಿಯನ್ ಡಾಲರ್‌ಗಳನ್ನು ಹೂಡಿದೆ. ಸೌದಿ ಅರೇಬಿಯಾದ ಸಾರ್ವಭೌಮ ಸಂಪತ್ತು ನಿಧಿಯಾಗಿರುವ ಪಬ್ಲಿಕ್ ಇನ್‌ವೆಸ್ಟ್ಮೆಂಟ್ ಫಂಡ್ 1.5 ಬಿಲಿಯನ್ ಡಾಲರ್, ಅಮೆರಿಕಾದ ದೊಡ್ಡ ಹೂಡಿಕೆದಾರ ಕಂಪನಿ ಕೆಕೆಆರ್ 1.5 ಬಿಲಿಯನ್ ಡಾಲರ್, ಅಬುದಾಬಿ ಮೂಲದ ಮುಬಡಾಲಾ ಮತ್ತು ಎಡಿಐಎ ಎಂಬ ಎರಡು ಹೂಡಿಕೆ ನಿಧಿ ಕಂಪನಿಗಳು ಕ್ರಮವಾಗಿ 1.2 ಬಿಲಿಯನ್ ಡಾಲರ್ ಮತ್ತು 750 ಮಿಲಿಯನ್ ಡಾಲರ್ ಮತ್ತು ಜಾಗತಿಕ ಆಸ್ತಿ ನಿರ್ವಹಣಾ ಸಂಸ್ಥೆ ಟಿಪಿಜಿ ಕ್ಯಾಪಿಟಲ್ 600 ಮಿಲಿಯನ್ ಡಾಲರ್ ಹಣವನ್ನು ಅಂಬಾನಿ ಕಂಪನಿಯಲ್ಲಿ ಹೂಡಿಕೆ ಮಾಡಿವೆ. ಪಟ್ಟಿ ಇನ್ನೂ ದೊಡ್ಡದಾಗಬಹುದು.

ಹೀಗಾಗಿ ಅಂಬಾನಿ ಹಿತರಕ್ಷಣೆ ಎಂದರೆ ಮೇಲೆ ತಿಳಿಸಿದ ಕಂಪನಿಗಳ ಬಂಡವಾಳದ ರಕ್ಷಣೆಯೂ ಆಗಿದೆಯಲ್ಲವೆ? ಈ ಕಾರಣಕ್ಕೆ ಆತ್ಮನಿರ್ಭರ‌ಕ್ಕಾಗಿ ಖಾಸಗಿಯವರಿಗೆ ಉತ್ತೇಜನ ಎಂಬ ಮಾತನ್ನು ಅರ್ಥೈಸಿಕೊಳ್ಳಬೇಕಾಗಿದೆ.

ಭಾರೀ ವಿರೋಧದ ನಡುವೆಯೂ ಕೃಷಿ ಕಾನೂನುಗಳನ್ನು ಹೇರಲು ಮೋದಿ ಸರ್ಕಾರ ಮುಂದಾದ್ದರ ಹಿಂದಿನ ಬಹಿರಂಗ ರಹಸ್ಯವಿದು. ಕೇವಲ ಭಾರತೀಯ ಕೃಷಿಯಷ್ಟೇ ಅಲ್ಲ, ನಮ್ಮ ಎಲ್ಲ ವಲಯಗಳಿಗೂ ನಿಮಗೆ ಮುಕ್ತ ಸ್ವಾಗತ ಎಂದು ಎಲ್ಲಾ ವಿದೇಶಿ ಹೂಡಿಕೆದಾರರಿಗೆ ಸೂಚಿಸುವ ಒಂದು ಮಾರ್ಗವಾಗಿದೆ ಇದು. ಕೃಷಿ ಕಾನೂನು ಹಿಂಪಡೆಯುವುದಿಲ್ಲ ಎನ್ನುತ್ತಿರುವ ಭಾರತ ಸರ್ಕಾರವು ದೃಢವಾಗಿ ತಮ್ಮ (ವಿದೇಶಿ ಬಂಡವಾಳಿಗರು) ಕಡೆಗಿದೆ ಮತ್ತು ತಮಗೆ ಲಾಭದ ಖಾತ್ರಿ ನೀಡಲು ತನ್ನದೇ ಜನರನ್ನು ಬಲಿ ಕೊಡಲು ಸಿದ್ಧವಾಗಿದೆ ಎಂದು ವಿದೇಶಿ ಹೂಡಿಕೆದಾರರು, ದೇಸಿ ವಂಚಕ ಉದ್ಯಮಪತಿಗಳು ನಂಬಬೇಕೆಂದರೆ ಮೋದಿ ಕೃಷಿ ಕಾಯ್ದೆಗಳ ಪರ ನಿಲ್ಲಲೇಬೇಕು ಅಲ್ಲವೆ?

ಪಿ.ಕೆ. ಮಲ್ಲನಗೌಡರ್

(ಲೇಖಕರು ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕಾಗಿ ಖಾಸಗಿ ವಲಯಕ್ಕೆ ಉತ್ತೇಜನ ನೀಡಿ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...