Homeಮುಖಪುಟಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ರಾಜ್ಯಗಳ ಜಿಎಸ್‌ಟಿ ಪಾಲನ್ನು ಕೇಂದ್ರವೇ ನೀಡುತ್ತಿಲ್ಲ. ಹಾಗಿರುವಾಗ, ಖಾಸಗಿ ಕೃಷಿ-ಉತ್ಪನ್ನ ಖರೀದಿದಾರರು ರೈತರಿಗೆ ಸರಿಯಾಗಿ ಪಾವತಿ ಮಾಡುತ್ತಾರೆ ಎಂದು ನಂಬುವುದು ಹೇಗೆ?

- Advertisement -
- Advertisement -

ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ “ನಾವು ಆತ್ಮನಿರ್ಭರ ಭಾರತದ ಧ್ಯೇಯವನ್ನು ಸಾಕಾರಗೊಳಿಸಲು, ಖಾಸಗಿ ವಲಯಕ್ಕೆ ಅವಕಾಶಗಳನ್ನು ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಅವರ ಭಾಷಣದ ಕುರಿತು ಒಂದಿಷ್ಟು ಪ್ರಶ್ನೆಗಳು

• ‘ಆತ್ಮನಿರ್ಭರ್’ (ಸ್ವಾವಲಂಬಿ ಭಾರತ) ಸಾಧಿಸಲು ಸರ್ಕಾರಗಳು ಖಾಸಗಿ ವಲಯವನ್ನು ಉತ್ತೇಜಿಸಬೇಕು ಎಂಬುದರ ಅರ್ಥವೇನು?
• ಇಲ್ಲಿ ಖಾಸಗಿ ವಲಯವೆಂದರೆ, ದೇಸಿ ಖಾಸಗಿ ವಲಯವಷ್ಟೇಯೇ? ಅಥವಾ ಅದು ವಿದೇಶಿ ಖಾಸಗಿ ವಲಯವನ್ನೂ ಒಳಗೊಂಡಿದಿಯೇ?
• ದೇಸಿ ಖಾಸಗಿ ವಲಯವೆಂದರೇನು? ಅದು ವಿದೇಶಿ ಬಂಡವಾಳದ ಮೇಲೆಯೇ ನಿಂತಿದೆಯಲ್ಲವೆ? ಬಿಎಸ್‌ಎನ್‌ಎಲ್ ಅನ್ನು ನಾಶ ಮಾಡಿ ಜಿಯೋ ಬೆಳೆಯಲು ನೆರವು ನೀಡುವುದು ಆತ್ಮನಿರ್ಭರ್ ಹೇಗಾಗುತ್ತದೆ? ಅದು ‘ಆತ್ಮನಿರ್ಭರ್’ ಎಂಬ ಸುಂದರ ಪದದೊಂದಿಗೆ ಜನರನ್ನು ಮರುಳು ಮಾಡುವ ಸಾಹಸವೇ?
• ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಹಕಾರವಿರಬೇಕು ಎಂದಿದ್ದಾರಲ್ಲ? ರಾಜ್ಯಗಳ ಜಿಎಸ್‌ಟಿ ಪಾಲನ್ನೇ ಕೊಡದ ಮೇಲೆ ಅದೆಂತಹ ಸಹಕಾರ ನಿರೀಕ್ಷಿಸುವುದು?
• ಮುಖ್ಯ ಪ್ರಶ್ನೆ ಎಂದರೆ, ಪ್ರಧಾನಿ ಭಾಷಣದ ಎರಡು ಮುಖ್ಯ ಅಂಶಗಳು: ಆತ್ಮನಿರ್ಭರಕ್ಕಾಗಿ ಖಾಸಗಿಯವರಿಗೆ ಮಣೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಹಕಾರ…ಈ ಎರಡೂ ಅಂಶಗಳನ್ನು ಕೃಷಿ ಕಾಯ್ದೆಗಳು ಮತ್ತು ಅವುಗಳ ರದ್ದತಿಗಾಗಿ ನಡೆಯುತ್ತಿರುವ ಪ್ರತಿಭಟನೆ (ಪ್ರಧಾನಿ ಪ್ರಕಾರ ಆಂದೋಲನ್‌ಜೀವಿಗಳ ಪ್ರತಿಭಟನೆ!)ಯ ಹಿನ್ನೆಲೆಯಲ್ಲಿ ನೋಡೋಣ.

ಮೊದಲನೆದಾಗಿ, ಕೃಷಿ ಕಾಯ್ದೆಗಳ ಪ್ರಕಾರ ಖಾಸಗಿಯವರು ಕೃಷಿ ಕ್ಷೇತ್ರ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಇದು ಖಾಸಗಿಯವರಿಗೆ ಮತ್ತು ಅವರನ್ನು ಬೆಂಬಲಿಸುವ ಸರ್ಕಾರಕ್ಕೆ ಆತ್ಮನಿರ್ಭರ್ ಆಗಿರಬಹುದು, ಆದರೆ ಅದು ರೈತಾಪಿಗಳ ಪಾಲಿಗೆ ಆತ್ಮಹತ್ಯೆಯೇ ಆಗಿದೆ.

ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರ! ಕೃಷಿ ಕಾಯ್ದೆಗಳನ್ನು ರಾಜ್ಯಗಳ ಜೊತೆ ಚರ್ಚಿಸದೇ ಜಾರಿ ಮಾಡುವಾಗ ಇದು ನೆನಪಾಗಲಿಲ್ಲವೆ? ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವ ಈ ಕೇಂದ್ರ ಸರ್ಕಾರ ರಾಜ್ಯಗಳಿಂದ ಸಹಕಾರ ಪಡೆಯುತ್ತಿದೆ, ಆದರೆ ಅದೆ ರಾಜ್ಯ ಸರ್ಕಾರಗಳನ್ನು ವಂಚಿಸುತ್ತಿದೆಯಲ್ಲವೆ?

ಕಳೆದ 6-7 ವರ್ಷಗಳಲ್ಲಿ, ನರೇಂದ್ರ ಮೋದಿಯವರ ಅತಿದೊಡ್ಡ ಕಾರ್ಪೊರೇಟ್ ದಾನಿಗಳಾದ ಅಂಬಾನಿಗಳು ಮತ್ತು ಅದಾನಿ ಗುಂಪುಗಳು ತಮ್ಮ ಪ್ರಭಾವವನ್ನು, ಕಾರ್ಪೊರೇಟ್ ಜಗತ್ತಿನ ಎಲ್ಲ ಪ್ರತಿಸ್ಪರ್ಧಿಗಳಿಗಿಂತ ತಮಗೆ ಹೆಚ್ಚಿನ ಲಾಭವನ್ನು ನೀಡುವ ನೀತಿಗಳನ್ನು ರೂಪಿಸಲು ಬಳಸಿಕೊಂಡಿವೆ. ದೇಶೀ ರಾಜಕಾರಣಿಗಳು ತಮ್ಮ ಜೇಬಿನಲ್ಲಿರುವುದರಿಂದ ಎರಡೂ ಗುಂಪುಗಳು ತಮ್ಮನ್ನು ತಾವು ಹೆಚ್ಚಿನ ವಿದೇಶಿ ಬಿಡ್ಡುದಾರರಿಗೆ ಮಾರಾಟ ಮಾಡಲು ಮುಂದಾಗಿವೆ.

ಮುಕೇಶ್ ಅಂಬಾನಿ ರಿಲಯನ್ಸ್ ಎಂಬುದು ದೇಸಿ ಕಂಪನಿ ಅಲ್ಲವೇ ಅಲ್ಲ.
ಜಿಯೋ ಪ್ಲಾಟ್‌ಫಾರ್ಮ್‌ಗಳಲ್ಲಿ ಫೇಸ್‌ಬುಕ್ 5.5 ಬಿಲಿಯನ್ ಡಾಲರ್ (43,753 ಕೋಟಿ ರೂ.) ಹೂಡುವ ಮೂಲಕ ಅತಿದೊಡ್ಡ ಹೂಡಿಕೆದಾರರಾಗಿದ್ದರೆ, ಗೂಗಲ್ 4.5 ಬಿಲಿಯನ್ ಡಾಲರ್‌ಗಳನ್ನು ಹೂಡಿದೆ. ಸೌದಿ ಅರೇಬಿಯಾದ ಸಾರ್ವಭೌಮ ಸಂಪತ್ತು ನಿಧಿಯಾಗಿರುವ ಪಬ್ಲಿಕ್ ಇನ್‌ವೆಸ್ಟ್ಮೆಂಟ್ ಫಂಡ್ 1.5 ಬಿಲಿಯನ್ ಡಾಲರ್, ಅಮೆರಿಕಾದ ದೊಡ್ಡ ಹೂಡಿಕೆದಾರ ಕಂಪನಿ ಕೆಕೆಆರ್ 1.5 ಬಿಲಿಯನ್ ಡಾಲರ್, ಅಬುದಾಬಿ ಮೂಲದ ಮುಬಡಾಲಾ ಮತ್ತು ಎಡಿಐಎ ಎಂಬ ಎರಡು ಹೂಡಿಕೆ ನಿಧಿ ಕಂಪನಿಗಳು ಕ್ರಮವಾಗಿ 1.2 ಬಿಲಿಯನ್ ಡಾಲರ್ ಮತ್ತು 750 ಮಿಲಿಯನ್ ಡಾಲರ್ ಮತ್ತು ಜಾಗತಿಕ ಆಸ್ತಿ ನಿರ್ವಹಣಾ ಸಂಸ್ಥೆ ಟಿಪಿಜಿ ಕ್ಯಾಪಿಟಲ್ 600 ಮಿಲಿಯನ್ ಡಾಲರ್ ಹಣವನ್ನು ಅಂಬಾನಿ ಕಂಪನಿಯಲ್ಲಿ ಹೂಡಿಕೆ ಮಾಡಿವೆ. ಪಟ್ಟಿ ಇನ್ನೂ ದೊಡ್ಡದಾಗಬಹುದು.

ಹೀಗಾಗಿ ಅಂಬಾನಿ ಹಿತರಕ್ಷಣೆ ಎಂದರೆ ಮೇಲೆ ತಿಳಿಸಿದ ಕಂಪನಿಗಳ ಬಂಡವಾಳದ ರಕ್ಷಣೆಯೂ ಆಗಿದೆಯಲ್ಲವೆ? ಈ ಕಾರಣಕ್ಕೆ ಆತ್ಮನಿರ್ಭರ‌ಕ್ಕಾಗಿ ಖಾಸಗಿಯವರಿಗೆ ಉತ್ತೇಜನ ಎಂಬ ಮಾತನ್ನು ಅರ್ಥೈಸಿಕೊಳ್ಳಬೇಕಾಗಿದೆ.

ಭಾರೀ ವಿರೋಧದ ನಡುವೆಯೂ ಕೃಷಿ ಕಾನೂನುಗಳನ್ನು ಹೇರಲು ಮೋದಿ ಸರ್ಕಾರ ಮುಂದಾದ್ದರ ಹಿಂದಿನ ಬಹಿರಂಗ ರಹಸ್ಯವಿದು. ಕೇವಲ ಭಾರತೀಯ ಕೃಷಿಯಷ್ಟೇ ಅಲ್ಲ, ನಮ್ಮ ಎಲ್ಲ ವಲಯಗಳಿಗೂ ನಿಮಗೆ ಮುಕ್ತ ಸ್ವಾಗತ ಎಂದು ಎಲ್ಲಾ ವಿದೇಶಿ ಹೂಡಿಕೆದಾರರಿಗೆ ಸೂಚಿಸುವ ಒಂದು ಮಾರ್ಗವಾಗಿದೆ ಇದು. ಕೃಷಿ ಕಾನೂನು ಹಿಂಪಡೆಯುವುದಿಲ್ಲ ಎನ್ನುತ್ತಿರುವ ಭಾರತ ಸರ್ಕಾರವು ದೃಢವಾಗಿ ತಮ್ಮ (ವಿದೇಶಿ ಬಂಡವಾಳಿಗರು) ಕಡೆಗಿದೆ ಮತ್ತು ತಮಗೆ ಲಾಭದ ಖಾತ್ರಿ ನೀಡಲು ತನ್ನದೇ ಜನರನ್ನು ಬಲಿ ಕೊಡಲು ಸಿದ್ಧವಾಗಿದೆ ಎಂದು ವಿದೇಶಿ ಹೂಡಿಕೆದಾರರು, ದೇಸಿ ವಂಚಕ ಉದ್ಯಮಪತಿಗಳು ನಂಬಬೇಕೆಂದರೆ ಮೋದಿ ಕೃಷಿ ಕಾಯ್ದೆಗಳ ಪರ ನಿಲ್ಲಲೇಬೇಕು ಅಲ್ಲವೆ?

ಪಿ.ಕೆ. ಮಲ್ಲನಗೌಡರ್

(ಲೇಖಕರು ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕಾಗಿ ಖಾಸಗಿ ವಲಯಕ್ಕೆ ಉತ್ತೇಜನ ನೀಡಿ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...