Homeಮುಖಪುಟಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ರಾಜ್ಯಗಳ ಜಿಎಸ್‌ಟಿ ಪಾಲನ್ನು ಕೇಂದ್ರವೇ ನೀಡುತ್ತಿಲ್ಲ. ಹಾಗಿರುವಾಗ, ಖಾಸಗಿ ಕೃಷಿ-ಉತ್ಪನ್ನ ಖರೀದಿದಾರರು ರೈತರಿಗೆ ಸರಿಯಾಗಿ ಪಾವತಿ ಮಾಡುತ್ತಾರೆ ಎಂದು ನಂಬುವುದು ಹೇಗೆ?

- Advertisement -
- Advertisement -

ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ “ನಾವು ಆತ್ಮನಿರ್ಭರ ಭಾರತದ ಧ್ಯೇಯವನ್ನು ಸಾಕಾರಗೊಳಿಸಲು, ಖಾಸಗಿ ವಲಯಕ್ಕೆ ಅವಕಾಶಗಳನ್ನು ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಅವರ ಭಾಷಣದ ಕುರಿತು ಒಂದಿಷ್ಟು ಪ್ರಶ್ನೆಗಳು

• ‘ಆತ್ಮನಿರ್ಭರ್’ (ಸ್ವಾವಲಂಬಿ ಭಾರತ) ಸಾಧಿಸಲು ಸರ್ಕಾರಗಳು ಖಾಸಗಿ ವಲಯವನ್ನು ಉತ್ತೇಜಿಸಬೇಕು ಎಂಬುದರ ಅರ್ಥವೇನು?
• ಇಲ್ಲಿ ಖಾಸಗಿ ವಲಯವೆಂದರೆ, ದೇಸಿ ಖಾಸಗಿ ವಲಯವಷ್ಟೇಯೇ? ಅಥವಾ ಅದು ವಿದೇಶಿ ಖಾಸಗಿ ವಲಯವನ್ನೂ ಒಳಗೊಂಡಿದಿಯೇ?
• ದೇಸಿ ಖಾಸಗಿ ವಲಯವೆಂದರೇನು? ಅದು ವಿದೇಶಿ ಬಂಡವಾಳದ ಮೇಲೆಯೇ ನಿಂತಿದೆಯಲ್ಲವೆ? ಬಿಎಸ್‌ಎನ್‌ಎಲ್ ಅನ್ನು ನಾಶ ಮಾಡಿ ಜಿಯೋ ಬೆಳೆಯಲು ನೆರವು ನೀಡುವುದು ಆತ್ಮನಿರ್ಭರ್ ಹೇಗಾಗುತ್ತದೆ? ಅದು ‘ಆತ್ಮನಿರ್ಭರ್’ ಎಂಬ ಸುಂದರ ಪದದೊಂದಿಗೆ ಜನರನ್ನು ಮರುಳು ಮಾಡುವ ಸಾಹಸವೇ?
• ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಹಕಾರವಿರಬೇಕು ಎಂದಿದ್ದಾರಲ್ಲ? ರಾಜ್ಯಗಳ ಜಿಎಸ್‌ಟಿ ಪಾಲನ್ನೇ ಕೊಡದ ಮೇಲೆ ಅದೆಂತಹ ಸಹಕಾರ ನಿರೀಕ್ಷಿಸುವುದು?
• ಮುಖ್ಯ ಪ್ರಶ್ನೆ ಎಂದರೆ, ಪ್ರಧಾನಿ ಭಾಷಣದ ಎರಡು ಮುಖ್ಯ ಅಂಶಗಳು: ಆತ್ಮನಿರ್ಭರಕ್ಕಾಗಿ ಖಾಸಗಿಯವರಿಗೆ ಮಣೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಹಕಾರ…ಈ ಎರಡೂ ಅಂಶಗಳನ್ನು ಕೃಷಿ ಕಾಯ್ದೆಗಳು ಮತ್ತು ಅವುಗಳ ರದ್ದತಿಗಾಗಿ ನಡೆಯುತ್ತಿರುವ ಪ್ರತಿಭಟನೆ (ಪ್ರಧಾನಿ ಪ್ರಕಾರ ಆಂದೋಲನ್‌ಜೀವಿಗಳ ಪ್ರತಿಭಟನೆ!)ಯ ಹಿನ್ನೆಲೆಯಲ್ಲಿ ನೋಡೋಣ.

ಮೊದಲನೆದಾಗಿ, ಕೃಷಿ ಕಾಯ್ದೆಗಳ ಪ್ರಕಾರ ಖಾಸಗಿಯವರು ಕೃಷಿ ಕ್ಷೇತ್ರ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಇದು ಖಾಸಗಿಯವರಿಗೆ ಮತ್ತು ಅವರನ್ನು ಬೆಂಬಲಿಸುವ ಸರ್ಕಾರಕ್ಕೆ ಆತ್ಮನಿರ್ಭರ್ ಆಗಿರಬಹುದು, ಆದರೆ ಅದು ರೈತಾಪಿಗಳ ಪಾಲಿಗೆ ಆತ್ಮಹತ್ಯೆಯೇ ಆಗಿದೆ.

ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರ! ಕೃಷಿ ಕಾಯ್ದೆಗಳನ್ನು ರಾಜ್ಯಗಳ ಜೊತೆ ಚರ್ಚಿಸದೇ ಜಾರಿ ಮಾಡುವಾಗ ಇದು ನೆನಪಾಗಲಿಲ್ಲವೆ? ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವ ಈ ಕೇಂದ್ರ ಸರ್ಕಾರ ರಾಜ್ಯಗಳಿಂದ ಸಹಕಾರ ಪಡೆಯುತ್ತಿದೆ, ಆದರೆ ಅದೆ ರಾಜ್ಯ ಸರ್ಕಾರಗಳನ್ನು ವಂಚಿಸುತ್ತಿದೆಯಲ್ಲವೆ?

ಕಳೆದ 6-7 ವರ್ಷಗಳಲ್ಲಿ, ನರೇಂದ್ರ ಮೋದಿಯವರ ಅತಿದೊಡ್ಡ ಕಾರ್ಪೊರೇಟ್ ದಾನಿಗಳಾದ ಅಂಬಾನಿಗಳು ಮತ್ತು ಅದಾನಿ ಗುಂಪುಗಳು ತಮ್ಮ ಪ್ರಭಾವವನ್ನು, ಕಾರ್ಪೊರೇಟ್ ಜಗತ್ತಿನ ಎಲ್ಲ ಪ್ರತಿಸ್ಪರ್ಧಿಗಳಿಗಿಂತ ತಮಗೆ ಹೆಚ್ಚಿನ ಲಾಭವನ್ನು ನೀಡುವ ನೀತಿಗಳನ್ನು ರೂಪಿಸಲು ಬಳಸಿಕೊಂಡಿವೆ. ದೇಶೀ ರಾಜಕಾರಣಿಗಳು ತಮ್ಮ ಜೇಬಿನಲ್ಲಿರುವುದರಿಂದ ಎರಡೂ ಗುಂಪುಗಳು ತಮ್ಮನ್ನು ತಾವು ಹೆಚ್ಚಿನ ವಿದೇಶಿ ಬಿಡ್ಡುದಾರರಿಗೆ ಮಾರಾಟ ಮಾಡಲು ಮುಂದಾಗಿವೆ.

ಮುಕೇಶ್ ಅಂಬಾನಿ ರಿಲಯನ್ಸ್ ಎಂಬುದು ದೇಸಿ ಕಂಪನಿ ಅಲ್ಲವೇ ಅಲ್ಲ.
ಜಿಯೋ ಪ್ಲಾಟ್‌ಫಾರ್ಮ್‌ಗಳಲ್ಲಿ ಫೇಸ್‌ಬುಕ್ 5.5 ಬಿಲಿಯನ್ ಡಾಲರ್ (43,753 ಕೋಟಿ ರೂ.) ಹೂಡುವ ಮೂಲಕ ಅತಿದೊಡ್ಡ ಹೂಡಿಕೆದಾರರಾಗಿದ್ದರೆ, ಗೂಗಲ್ 4.5 ಬಿಲಿಯನ್ ಡಾಲರ್‌ಗಳನ್ನು ಹೂಡಿದೆ. ಸೌದಿ ಅರೇಬಿಯಾದ ಸಾರ್ವಭೌಮ ಸಂಪತ್ತು ನಿಧಿಯಾಗಿರುವ ಪಬ್ಲಿಕ್ ಇನ್‌ವೆಸ್ಟ್ಮೆಂಟ್ ಫಂಡ್ 1.5 ಬಿಲಿಯನ್ ಡಾಲರ್, ಅಮೆರಿಕಾದ ದೊಡ್ಡ ಹೂಡಿಕೆದಾರ ಕಂಪನಿ ಕೆಕೆಆರ್ 1.5 ಬಿಲಿಯನ್ ಡಾಲರ್, ಅಬುದಾಬಿ ಮೂಲದ ಮುಬಡಾಲಾ ಮತ್ತು ಎಡಿಐಎ ಎಂಬ ಎರಡು ಹೂಡಿಕೆ ನಿಧಿ ಕಂಪನಿಗಳು ಕ್ರಮವಾಗಿ 1.2 ಬಿಲಿಯನ್ ಡಾಲರ್ ಮತ್ತು 750 ಮಿಲಿಯನ್ ಡಾಲರ್ ಮತ್ತು ಜಾಗತಿಕ ಆಸ್ತಿ ನಿರ್ವಹಣಾ ಸಂಸ್ಥೆ ಟಿಪಿಜಿ ಕ್ಯಾಪಿಟಲ್ 600 ಮಿಲಿಯನ್ ಡಾಲರ್ ಹಣವನ್ನು ಅಂಬಾನಿ ಕಂಪನಿಯಲ್ಲಿ ಹೂಡಿಕೆ ಮಾಡಿವೆ. ಪಟ್ಟಿ ಇನ್ನೂ ದೊಡ್ಡದಾಗಬಹುದು.

ಹೀಗಾಗಿ ಅಂಬಾನಿ ಹಿತರಕ್ಷಣೆ ಎಂದರೆ ಮೇಲೆ ತಿಳಿಸಿದ ಕಂಪನಿಗಳ ಬಂಡವಾಳದ ರಕ್ಷಣೆಯೂ ಆಗಿದೆಯಲ್ಲವೆ? ಈ ಕಾರಣಕ್ಕೆ ಆತ್ಮನಿರ್ಭರ‌ಕ್ಕಾಗಿ ಖಾಸಗಿಯವರಿಗೆ ಉತ್ತೇಜನ ಎಂಬ ಮಾತನ್ನು ಅರ್ಥೈಸಿಕೊಳ್ಳಬೇಕಾಗಿದೆ.

ಭಾರೀ ವಿರೋಧದ ನಡುವೆಯೂ ಕೃಷಿ ಕಾನೂನುಗಳನ್ನು ಹೇರಲು ಮೋದಿ ಸರ್ಕಾರ ಮುಂದಾದ್ದರ ಹಿಂದಿನ ಬಹಿರಂಗ ರಹಸ್ಯವಿದು. ಕೇವಲ ಭಾರತೀಯ ಕೃಷಿಯಷ್ಟೇ ಅಲ್ಲ, ನಮ್ಮ ಎಲ್ಲ ವಲಯಗಳಿಗೂ ನಿಮಗೆ ಮುಕ್ತ ಸ್ವಾಗತ ಎಂದು ಎಲ್ಲಾ ವಿದೇಶಿ ಹೂಡಿಕೆದಾರರಿಗೆ ಸೂಚಿಸುವ ಒಂದು ಮಾರ್ಗವಾಗಿದೆ ಇದು. ಕೃಷಿ ಕಾನೂನು ಹಿಂಪಡೆಯುವುದಿಲ್ಲ ಎನ್ನುತ್ತಿರುವ ಭಾರತ ಸರ್ಕಾರವು ದೃಢವಾಗಿ ತಮ್ಮ (ವಿದೇಶಿ ಬಂಡವಾಳಿಗರು) ಕಡೆಗಿದೆ ಮತ್ತು ತಮಗೆ ಲಾಭದ ಖಾತ್ರಿ ನೀಡಲು ತನ್ನದೇ ಜನರನ್ನು ಬಲಿ ಕೊಡಲು ಸಿದ್ಧವಾಗಿದೆ ಎಂದು ವಿದೇಶಿ ಹೂಡಿಕೆದಾರರು, ದೇಸಿ ವಂಚಕ ಉದ್ಯಮಪತಿಗಳು ನಂಬಬೇಕೆಂದರೆ ಮೋದಿ ಕೃಷಿ ಕಾಯ್ದೆಗಳ ಪರ ನಿಲ್ಲಲೇಬೇಕು ಅಲ್ಲವೆ?

ಪಿ.ಕೆ. ಮಲ್ಲನಗೌಡರ್

(ಲೇಖಕರು ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕಾಗಿ ಖಾಸಗಿ ವಲಯಕ್ಕೆ ಉತ್ತೇಜನ ನೀಡಿ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...