Homeಮುಖಪುಟಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ರಾಜ್ಯಗಳ ಜಿಎಸ್‌ಟಿ ಪಾಲನ್ನು ಕೇಂದ್ರವೇ ನೀಡುತ್ತಿಲ್ಲ. ಹಾಗಿರುವಾಗ, ಖಾಸಗಿ ಕೃಷಿ-ಉತ್ಪನ್ನ ಖರೀದಿದಾರರು ರೈತರಿಗೆ ಸರಿಯಾಗಿ ಪಾವತಿ ಮಾಡುತ್ತಾರೆ ಎಂದು ನಂಬುವುದು ಹೇಗೆ?

- Advertisement -
- Advertisement -

ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ “ನಾವು ಆತ್ಮನಿರ್ಭರ ಭಾರತದ ಧ್ಯೇಯವನ್ನು ಸಾಕಾರಗೊಳಿಸಲು, ಖಾಸಗಿ ವಲಯಕ್ಕೆ ಅವಕಾಶಗಳನ್ನು ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಅವರ ಭಾಷಣದ ಕುರಿತು ಒಂದಿಷ್ಟು ಪ್ರಶ್ನೆಗಳು

• ‘ಆತ್ಮನಿರ್ಭರ್’ (ಸ್ವಾವಲಂಬಿ ಭಾರತ) ಸಾಧಿಸಲು ಸರ್ಕಾರಗಳು ಖಾಸಗಿ ವಲಯವನ್ನು ಉತ್ತೇಜಿಸಬೇಕು ಎಂಬುದರ ಅರ್ಥವೇನು?
• ಇಲ್ಲಿ ಖಾಸಗಿ ವಲಯವೆಂದರೆ, ದೇಸಿ ಖಾಸಗಿ ವಲಯವಷ್ಟೇಯೇ? ಅಥವಾ ಅದು ವಿದೇಶಿ ಖಾಸಗಿ ವಲಯವನ್ನೂ ಒಳಗೊಂಡಿದಿಯೇ?
• ದೇಸಿ ಖಾಸಗಿ ವಲಯವೆಂದರೇನು? ಅದು ವಿದೇಶಿ ಬಂಡವಾಳದ ಮೇಲೆಯೇ ನಿಂತಿದೆಯಲ್ಲವೆ? ಬಿಎಸ್‌ಎನ್‌ಎಲ್ ಅನ್ನು ನಾಶ ಮಾಡಿ ಜಿಯೋ ಬೆಳೆಯಲು ನೆರವು ನೀಡುವುದು ಆತ್ಮನಿರ್ಭರ್ ಹೇಗಾಗುತ್ತದೆ? ಅದು ‘ಆತ್ಮನಿರ್ಭರ್’ ಎಂಬ ಸುಂದರ ಪದದೊಂದಿಗೆ ಜನರನ್ನು ಮರುಳು ಮಾಡುವ ಸಾಹಸವೇ?
• ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಹಕಾರವಿರಬೇಕು ಎಂದಿದ್ದಾರಲ್ಲ? ರಾಜ್ಯಗಳ ಜಿಎಸ್‌ಟಿ ಪಾಲನ್ನೇ ಕೊಡದ ಮೇಲೆ ಅದೆಂತಹ ಸಹಕಾರ ನಿರೀಕ್ಷಿಸುವುದು?
• ಮುಖ್ಯ ಪ್ರಶ್ನೆ ಎಂದರೆ, ಪ್ರಧಾನಿ ಭಾಷಣದ ಎರಡು ಮುಖ್ಯ ಅಂಶಗಳು: ಆತ್ಮನಿರ್ಭರಕ್ಕಾಗಿ ಖಾಸಗಿಯವರಿಗೆ ಮಣೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಹಕಾರ…ಈ ಎರಡೂ ಅಂಶಗಳನ್ನು ಕೃಷಿ ಕಾಯ್ದೆಗಳು ಮತ್ತು ಅವುಗಳ ರದ್ದತಿಗಾಗಿ ನಡೆಯುತ್ತಿರುವ ಪ್ರತಿಭಟನೆ (ಪ್ರಧಾನಿ ಪ್ರಕಾರ ಆಂದೋಲನ್‌ಜೀವಿಗಳ ಪ್ರತಿಭಟನೆ!)ಯ ಹಿನ್ನೆಲೆಯಲ್ಲಿ ನೋಡೋಣ.

ಮೊದಲನೆದಾಗಿ, ಕೃಷಿ ಕಾಯ್ದೆಗಳ ಪ್ರಕಾರ ಖಾಸಗಿಯವರು ಕೃಷಿ ಕ್ಷೇತ್ರ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಇದು ಖಾಸಗಿಯವರಿಗೆ ಮತ್ತು ಅವರನ್ನು ಬೆಂಬಲಿಸುವ ಸರ್ಕಾರಕ್ಕೆ ಆತ್ಮನಿರ್ಭರ್ ಆಗಿರಬಹುದು, ಆದರೆ ಅದು ರೈತಾಪಿಗಳ ಪಾಲಿಗೆ ಆತ್ಮಹತ್ಯೆಯೇ ಆಗಿದೆ.

ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರ! ಕೃಷಿ ಕಾಯ್ದೆಗಳನ್ನು ರಾಜ್ಯಗಳ ಜೊತೆ ಚರ್ಚಿಸದೇ ಜಾರಿ ಮಾಡುವಾಗ ಇದು ನೆನಪಾಗಲಿಲ್ಲವೆ? ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವ ಈ ಕೇಂದ್ರ ಸರ್ಕಾರ ರಾಜ್ಯಗಳಿಂದ ಸಹಕಾರ ಪಡೆಯುತ್ತಿದೆ, ಆದರೆ ಅದೆ ರಾಜ್ಯ ಸರ್ಕಾರಗಳನ್ನು ವಂಚಿಸುತ್ತಿದೆಯಲ್ಲವೆ?

ಕಳೆದ 6-7 ವರ್ಷಗಳಲ್ಲಿ, ನರೇಂದ್ರ ಮೋದಿಯವರ ಅತಿದೊಡ್ಡ ಕಾರ್ಪೊರೇಟ್ ದಾನಿಗಳಾದ ಅಂಬಾನಿಗಳು ಮತ್ತು ಅದಾನಿ ಗುಂಪುಗಳು ತಮ್ಮ ಪ್ರಭಾವವನ್ನು, ಕಾರ್ಪೊರೇಟ್ ಜಗತ್ತಿನ ಎಲ್ಲ ಪ್ರತಿಸ್ಪರ್ಧಿಗಳಿಗಿಂತ ತಮಗೆ ಹೆಚ್ಚಿನ ಲಾಭವನ್ನು ನೀಡುವ ನೀತಿಗಳನ್ನು ರೂಪಿಸಲು ಬಳಸಿಕೊಂಡಿವೆ. ದೇಶೀ ರಾಜಕಾರಣಿಗಳು ತಮ್ಮ ಜೇಬಿನಲ್ಲಿರುವುದರಿಂದ ಎರಡೂ ಗುಂಪುಗಳು ತಮ್ಮನ್ನು ತಾವು ಹೆಚ್ಚಿನ ವಿದೇಶಿ ಬಿಡ್ಡುದಾರರಿಗೆ ಮಾರಾಟ ಮಾಡಲು ಮುಂದಾಗಿವೆ.

ಮುಕೇಶ್ ಅಂಬಾನಿ ರಿಲಯನ್ಸ್ ಎಂಬುದು ದೇಸಿ ಕಂಪನಿ ಅಲ್ಲವೇ ಅಲ್ಲ.
ಜಿಯೋ ಪ್ಲಾಟ್‌ಫಾರ್ಮ್‌ಗಳಲ್ಲಿ ಫೇಸ್‌ಬುಕ್ 5.5 ಬಿಲಿಯನ್ ಡಾಲರ್ (43,753 ಕೋಟಿ ರೂ.) ಹೂಡುವ ಮೂಲಕ ಅತಿದೊಡ್ಡ ಹೂಡಿಕೆದಾರರಾಗಿದ್ದರೆ, ಗೂಗಲ್ 4.5 ಬಿಲಿಯನ್ ಡಾಲರ್‌ಗಳನ್ನು ಹೂಡಿದೆ. ಸೌದಿ ಅರೇಬಿಯಾದ ಸಾರ್ವಭೌಮ ಸಂಪತ್ತು ನಿಧಿಯಾಗಿರುವ ಪಬ್ಲಿಕ್ ಇನ್‌ವೆಸ್ಟ್ಮೆಂಟ್ ಫಂಡ್ 1.5 ಬಿಲಿಯನ್ ಡಾಲರ್, ಅಮೆರಿಕಾದ ದೊಡ್ಡ ಹೂಡಿಕೆದಾರ ಕಂಪನಿ ಕೆಕೆಆರ್ 1.5 ಬಿಲಿಯನ್ ಡಾಲರ್, ಅಬುದಾಬಿ ಮೂಲದ ಮುಬಡಾಲಾ ಮತ್ತು ಎಡಿಐಎ ಎಂಬ ಎರಡು ಹೂಡಿಕೆ ನಿಧಿ ಕಂಪನಿಗಳು ಕ್ರಮವಾಗಿ 1.2 ಬಿಲಿಯನ್ ಡಾಲರ್ ಮತ್ತು 750 ಮಿಲಿಯನ್ ಡಾಲರ್ ಮತ್ತು ಜಾಗತಿಕ ಆಸ್ತಿ ನಿರ್ವಹಣಾ ಸಂಸ್ಥೆ ಟಿಪಿಜಿ ಕ್ಯಾಪಿಟಲ್ 600 ಮಿಲಿಯನ್ ಡಾಲರ್ ಹಣವನ್ನು ಅಂಬಾನಿ ಕಂಪನಿಯಲ್ಲಿ ಹೂಡಿಕೆ ಮಾಡಿವೆ. ಪಟ್ಟಿ ಇನ್ನೂ ದೊಡ್ಡದಾಗಬಹುದು.

ಹೀಗಾಗಿ ಅಂಬಾನಿ ಹಿತರಕ್ಷಣೆ ಎಂದರೆ ಮೇಲೆ ತಿಳಿಸಿದ ಕಂಪನಿಗಳ ಬಂಡವಾಳದ ರಕ್ಷಣೆಯೂ ಆಗಿದೆಯಲ್ಲವೆ? ಈ ಕಾರಣಕ್ಕೆ ಆತ್ಮನಿರ್ಭರ‌ಕ್ಕಾಗಿ ಖಾಸಗಿಯವರಿಗೆ ಉತ್ತೇಜನ ಎಂಬ ಮಾತನ್ನು ಅರ್ಥೈಸಿಕೊಳ್ಳಬೇಕಾಗಿದೆ.

ಭಾರೀ ವಿರೋಧದ ನಡುವೆಯೂ ಕೃಷಿ ಕಾನೂನುಗಳನ್ನು ಹೇರಲು ಮೋದಿ ಸರ್ಕಾರ ಮುಂದಾದ್ದರ ಹಿಂದಿನ ಬಹಿರಂಗ ರಹಸ್ಯವಿದು. ಕೇವಲ ಭಾರತೀಯ ಕೃಷಿಯಷ್ಟೇ ಅಲ್ಲ, ನಮ್ಮ ಎಲ್ಲ ವಲಯಗಳಿಗೂ ನಿಮಗೆ ಮುಕ್ತ ಸ್ವಾಗತ ಎಂದು ಎಲ್ಲಾ ವಿದೇಶಿ ಹೂಡಿಕೆದಾರರಿಗೆ ಸೂಚಿಸುವ ಒಂದು ಮಾರ್ಗವಾಗಿದೆ ಇದು. ಕೃಷಿ ಕಾನೂನು ಹಿಂಪಡೆಯುವುದಿಲ್ಲ ಎನ್ನುತ್ತಿರುವ ಭಾರತ ಸರ್ಕಾರವು ದೃಢವಾಗಿ ತಮ್ಮ (ವಿದೇಶಿ ಬಂಡವಾಳಿಗರು) ಕಡೆಗಿದೆ ಮತ್ತು ತಮಗೆ ಲಾಭದ ಖಾತ್ರಿ ನೀಡಲು ತನ್ನದೇ ಜನರನ್ನು ಬಲಿ ಕೊಡಲು ಸಿದ್ಧವಾಗಿದೆ ಎಂದು ವಿದೇಶಿ ಹೂಡಿಕೆದಾರರು, ದೇಸಿ ವಂಚಕ ಉದ್ಯಮಪತಿಗಳು ನಂಬಬೇಕೆಂದರೆ ಮೋದಿ ಕೃಷಿ ಕಾಯ್ದೆಗಳ ಪರ ನಿಲ್ಲಲೇಬೇಕು ಅಲ್ಲವೆ?

ಪಿ.ಕೆ. ಮಲ್ಲನಗೌಡರ್

(ಲೇಖಕರು ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕಾಗಿ ಖಾಸಗಿ ವಲಯಕ್ಕೆ ಉತ್ತೇಜನ ನೀಡಿ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...