Homeಮುಖಪುಟಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ರಾಜ್ಯಗಳ ಜಿಎಸ್‌ಟಿ ಪಾಲನ್ನು ಕೇಂದ್ರವೇ ನೀಡುತ್ತಿಲ್ಲ. ಹಾಗಿರುವಾಗ, ಖಾಸಗಿ ಕೃಷಿ-ಉತ್ಪನ್ನ ಖರೀದಿದಾರರು ರೈತರಿಗೆ ಸರಿಯಾಗಿ ಪಾವತಿ ಮಾಡುತ್ತಾರೆ ಎಂದು ನಂಬುವುದು ಹೇಗೆ?

- Advertisement -
- Advertisement -

ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ “ನಾವು ಆತ್ಮನಿರ್ಭರ ಭಾರತದ ಧ್ಯೇಯವನ್ನು ಸಾಕಾರಗೊಳಿಸಲು, ಖಾಸಗಿ ವಲಯಕ್ಕೆ ಅವಕಾಶಗಳನ್ನು ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಅವರ ಭಾಷಣದ ಕುರಿತು ಒಂದಿಷ್ಟು ಪ್ರಶ್ನೆಗಳು

• ‘ಆತ್ಮನಿರ್ಭರ್’ (ಸ್ವಾವಲಂಬಿ ಭಾರತ) ಸಾಧಿಸಲು ಸರ್ಕಾರಗಳು ಖಾಸಗಿ ವಲಯವನ್ನು ಉತ್ತೇಜಿಸಬೇಕು ಎಂಬುದರ ಅರ್ಥವೇನು?
• ಇಲ್ಲಿ ಖಾಸಗಿ ವಲಯವೆಂದರೆ, ದೇಸಿ ಖಾಸಗಿ ವಲಯವಷ್ಟೇಯೇ? ಅಥವಾ ಅದು ವಿದೇಶಿ ಖಾಸಗಿ ವಲಯವನ್ನೂ ಒಳಗೊಂಡಿದಿಯೇ?
• ದೇಸಿ ಖಾಸಗಿ ವಲಯವೆಂದರೇನು? ಅದು ವಿದೇಶಿ ಬಂಡವಾಳದ ಮೇಲೆಯೇ ನಿಂತಿದೆಯಲ್ಲವೆ? ಬಿಎಸ್‌ಎನ್‌ಎಲ್ ಅನ್ನು ನಾಶ ಮಾಡಿ ಜಿಯೋ ಬೆಳೆಯಲು ನೆರವು ನೀಡುವುದು ಆತ್ಮನಿರ್ಭರ್ ಹೇಗಾಗುತ್ತದೆ? ಅದು ‘ಆತ್ಮನಿರ್ಭರ್’ ಎಂಬ ಸುಂದರ ಪದದೊಂದಿಗೆ ಜನರನ್ನು ಮರುಳು ಮಾಡುವ ಸಾಹಸವೇ?
• ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಹಕಾರವಿರಬೇಕು ಎಂದಿದ್ದಾರಲ್ಲ? ರಾಜ್ಯಗಳ ಜಿಎಸ್‌ಟಿ ಪಾಲನ್ನೇ ಕೊಡದ ಮೇಲೆ ಅದೆಂತಹ ಸಹಕಾರ ನಿರೀಕ್ಷಿಸುವುದು?
• ಮುಖ್ಯ ಪ್ರಶ್ನೆ ಎಂದರೆ, ಪ್ರಧಾನಿ ಭಾಷಣದ ಎರಡು ಮುಖ್ಯ ಅಂಶಗಳು: ಆತ್ಮನಿರ್ಭರಕ್ಕಾಗಿ ಖಾಸಗಿಯವರಿಗೆ ಮಣೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಹಕಾರ…ಈ ಎರಡೂ ಅಂಶಗಳನ್ನು ಕೃಷಿ ಕಾಯ್ದೆಗಳು ಮತ್ತು ಅವುಗಳ ರದ್ದತಿಗಾಗಿ ನಡೆಯುತ್ತಿರುವ ಪ್ರತಿಭಟನೆ (ಪ್ರಧಾನಿ ಪ್ರಕಾರ ಆಂದೋಲನ್‌ಜೀವಿಗಳ ಪ್ರತಿಭಟನೆ!)ಯ ಹಿನ್ನೆಲೆಯಲ್ಲಿ ನೋಡೋಣ.

ಮೊದಲನೆದಾಗಿ, ಕೃಷಿ ಕಾಯ್ದೆಗಳ ಪ್ರಕಾರ ಖಾಸಗಿಯವರು ಕೃಷಿ ಕ್ಷೇತ್ರ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಇದು ಖಾಸಗಿಯವರಿಗೆ ಮತ್ತು ಅವರನ್ನು ಬೆಂಬಲಿಸುವ ಸರ್ಕಾರಕ್ಕೆ ಆತ್ಮನಿರ್ಭರ್ ಆಗಿರಬಹುದು, ಆದರೆ ಅದು ರೈತಾಪಿಗಳ ಪಾಲಿಗೆ ಆತ್ಮಹತ್ಯೆಯೇ ಆಗಿದೆ.

ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರ! ಕೃಷಿ ಕಾಯ್ದೆಗಳನ್ನು ರಾಜ್ಯಗಳ ಜೊತೆ ಚರ್ಚಿಸದೇ ಜಾರಿ ಮಾಡುವಾಗ ಇದು ನೆನಪಾಗಲಿಲ್ಲವೆ? ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವ ಈ ಕೇಂದ್ರ ಸರ್ಕಾರ ರಾಜ್ಯಗಳಿಂದ ಸಹಕಾರ ಪಡೆಯುತ್ತಿದೆ, ಆದರೆ ಅದೆ ರಾಜ್ಯ ಸರ್ಕಾರಗಳನ್ನು ವಂಚಿಸುತ್ತಿದೆಯಲ್ಲವೆ?

ಕಳೆದ 6-7 ವರ್ಷಗಳಲ್ಲಿ, ನರೇಂದ್ರ ಮೋದಿಯವರ ಅತಿದೊಡ್ಡ ಕಾರ್ಪೊರೇಟ್ ದಾನಿಗಳಾದ ಅಂಬಾನಿಗಳು ಮತ್ತು ಅದಾನಿ ಗುಂಪುಗಳು ತಮ್ಮ ಪ್ರಭಾವವನ್ನು, ಕಾರ್ಪೊರೇಟ್ ಜಗತ್ತಿನ ಎಲ್ಲ ಪ್ರತಿಸ್ಪರ್ಧಿಗಳಿಗಿಂತ ತಮಗೆ ಹೆಚ್ಚಿನ ಲಾಭವನ್ನು ನೀಡುವ ನೀತಿಗಳನ್ನು ರೂಪಿಸಲು ಬಳಸಿಕೊಂಡಿವೆ. ದೇಶೀ ರಾಜಕಾರಣಿಗಳು ತಮ್ಮ ಜೇಬಿನಲ್ಲಿರುವುದರಿಂದ ಎರಡೂ ಗುಂಪುಗಳು ತಮ್ಮನ್ನು ತಾವು ಹೆಚ್ಚಿನ ವಿದೇಶಿ ಬಿಡ್ಡುದಾರರಿಗೆ ಮಾರಾಟ ಮಾಡಲು ಮುಂದಾಗಿವೆ.

ಮುಕೇಶ್ ಅಂಬಾನಿ ರಿಲಯನ್ಸ್ ಎಂಬುದು ದೇಸಿ ಕಂಪನಿ ಅಲ್ಲವೇ ಅಲ್ಲ.
ಜಿಯೋ ಪ್ಲಾಟ್‌ಫಾರ್ಮ್‌ಗಳಲ್ಲಿ ಫೇಸ್‌ಬುಕ್ 5.5 ಬಿಲಿಯನ್ ಡಾಲರ್ (43,753 ಕೋಟಿ ರೂ.) ಹೂಡುವ ಮೂಲಕ ಅತಿದೊಡ್ಡ ಹೂಡಿಕೆದಾರರಾಗಿದ್ದರೆ, ಗೂಗಲ್ 4.5 ಬಿಲಿಯನ್ ಡಾಲರ್‌ಗಳನ್ನು ಹೂಡಿದೆ. ಸೌದಿ ಅರೇಬಿಯಾದ ಸಾರ್ವಭೌಮ ಸಂಪತ್ತು ನಿಧಿಯಾಗಿರುವ ಪಬ್ಲಿಕ್ ಇನ್‌ವೆಸ್ಟ್ಮೆಂಟ್ ಫಂಡ್ 1.5 ಬಿಲಿಯನ್ ಡಾಲರ್, ಅಮೆರಿಕಾದ ದೊಡ್ಡ ಹೂಡಿಕೆದಾರ ಕಂಪನಿ ಕೆಕೆಆರ್ 1.5 ಬಿಲಿಯನ್ ಡಾಲರ್, ಅಬುದಾಬಿ ಮೂಲದ ಮುಬಡಾಲಾ ಮತ್ತು ಎಡಿಐಎ ಎಂಬ ಎರಡು ಹೂಡಿಕೆ ನಿಧಿ ಕಂಪನಿಗಳು ಕ್ರಮವಾಗಿ 1.2 ಬಿಲಿಯನ್ ಡಾಲರ್ ಮತ್ತು 750 ಮಿಲಿಯನ್ ಡಾಲರ್ ಮತ್ತು ಜಾಗತಿಕ ಆಸ್ತಿ ನಿರ್ವಹಣಾ ಸಂಸ್ಥೆ ಟಿಪಿಜಿ ಕ್ಯಾಪಿಟಲ್ 600 ಮಿಲಿಯನ್ ಡಾಲರ್ ಹಣವನ್ನು ಅಂಬಾನಿ ಕಂಪನಿಯಲ್ಲಿ ಹೂಡಿಕೆ ಮಾಡಿವೆ. ಪಟ್ಟಿ ಇನ್ನೂ ದೊಡ್ಡದಾಗಬಹುದು.

ಹೀಗಾಗಿ ಅಂಬಾನಿ ಹಿತರಕ್ಷಣೆ ಎಂದರೆ ಮೇಲೆ ತಿಳಿಸಿದ ಕಂಪನಿಗಳ ಬಂಡವಾಳದ ರಕ್ಷಣೆಯೂ ಆಗಿದೆಯಲ್ಲವೆ? ಈ ಕಾರಣಕ್ಕೆ ಆತ್ಮನಿರ್ಭರ‌ಕ್ಕಾಗಿ ಖಾಸಗಿಯವರಿಗೆ ಉತ್ತೇಜನ ಎಂಬ ಮಾತನ್ನು ಅರ್ಥೈಸಿಕೊಳ್ಳಬೇಕಾಗಿದೆ.

ಭಾರೀ ವಿರೋಧದ ನಡುವೆಯೂ ಕೃಷಿ ಕಾನೂನುಗಳನ್ನು ಹೇರಲು ಮೋದಿ ಸರ್ಕಾರ ಮುಂದಾದ್ದರ ಹಿಂದಿನ ಬಹಿರಂಗ ರಹಸ್ಯವಿದು. ಕೇವಲ ಭಾರತೀಯ ಕೃಷಿಯಷ್ಟೇ ಅಲ್ಲ, ನಮ್ಮ ಎಲ್ಲ ವಲಯಗಳಿಗೂ ನಿಮಗೆ ಮುಕ್ತ ಸ್ವಾಗತ ಎಂದು ಎಲ್ಲಾ ವಿದೇಶಿ ಹೂಡಿಕೆದಾರರಿಗೆ ಸೂಚಿಸುವ ಒಂದು ಮಾರ್ಗವಾಗಿದೆ ಇದು. ಕೃಷಿ ಕಾನೂನು ಹಿಂಪಡೆಯುವುದಿಲ್ಲ ಎನ್ನುತ್ತಿರುವ ಭಾರತ ಸರ್ಕಾರವು ದೃಢವಾಗಿ ತಮ್ಮ (ವಿದೇಶಿ ಬಂಡವಾಳಿಗರು) ಕಡೆಗಿದೆ ಮತ್ತು ತಮಗೆ ಲಾಭದ ಖಾತ್ರಿ ನೀಡಲು ತನ್ನದೇ ಜನರನ್ನು ಬಲಿ ಕೊಡಲು ಸಿದ್ಧವಾಗಿದೆ ಎಂದು ವಿದೇಶಿ ಹೂಡಿಕೆದಾರರು, ದೇಸಿ ವಂಚಕ ಉದ್ಯಮಪತಿಗಳು ನಂಬಬೇಕೆಂದರೆ ಮೋದಿ ಕೃಷಿ ಕಾಯ್ದೆಗಳ ಪರ ನಿಲ್ಲಲೇಬೇಕು ಅಲ್ಲವೆ?

ಪಿ.ಕೆ. ಮಲ್ಲನಗೌಡರ್

(ಲೇಖಕರು ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕಾಗಿ ಖಾಸಗಿ ವಲಯಕ್ಕೆ ಉತ್ತೇಜನ ನೀಡಿ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...