Homeಮುಖಪುಟಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚ ಭರಿಸಲು ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಕಂಪನಿ ನಿರ್ಧರಿಸಿದೆ.

- Advertisement -
- Advertisement -

“ಸರ್ಕಾರವು ನಮಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಹೀಗಿರುವಾಗ, ಕೇವಲ 20-30ರೂಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಏಕೆ ನೀಡಲು ಸಾಧ್ಯವಿಲ್ಲ?” ಎಂದು ದಿಟ್ಟ ಪ್ರಶ್ನೆ ಎತ್ತಿದ್ದ ಬಿಹಾರದ ವಿದ್ಯಾರ್ಥಿನಿ ರಿಯಾ ಕುಮಾರಿಯವರ ಬೆಂಬಲಕ್ಕೆ ಹಲವರು ಮುಂದೆ ಬಂದಿದ್ದಾರೆ.

ಸೆಪ್ಟಂಬರ್ ಕೊನೆಯ ವಾರದಲ್ಲಿ ಪಾಟ್ನಾದಲ್ಲಿ ನಡೆದ ಯುನಿಸೆಫ್ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸಿದ್ದ ‘ಸಶಕ್ತ ಬೇಟಿ, ಸಮ್ರದ್ದ ಬಿಹಾರ’ ಎಂಬ ಕಾರ್ಯಗಾರದಲ್ಲಿ ರಿಯಾ ಕುಮಾರಿ ಕೇಳಿದ ಪ್ರಶ್ನೆಗೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮ (ಡಬ್ಲ್ಯುಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್‌ ಕೌರ್ ಬಾಮ್ಹ್ರಾ ಮುಂದೆ ನೀವು ಕಾಂಡೋಮ್ ಸಹ ಕೇಳುತ್ತೀರಿ ಎಂದು ಉದ್ಧಟತನದಿಂದ ಉತ್ತರಿಸಿದ್ದರು.

ರಾಜಕಾರಣಿಗಳು ಮತಗಳನ್ನು ಕೇಳುತ್ತಾರೆ, ಹೀಗಿರುವಾಗ ಕೆಲವು ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿನಿ ವಾದಿಸಿದಾಗ, “ಮತ ಹಾಕಬೇಡಿ, ಪಾಕಿಸ್ತಾನ ಮಾಡಿ ಈ ದೇಶವನ್ನು. ಹಣ ಅಥವಾ ಸೌಕರ್ಯಗಳಿಗಾಗಿ ನೀವು ಮತ ​​ಚಲಾಯಿಸುತ್ತೀರಾ?” ಎಂದು ಐಎಎಸ್ ಅಧಿಕಾರಿ ಹೇಳಿ ಆ ಹುಡುಗಿಯ ಬಾಯಿ ಮುಚ್ಚಿಸಿ ವ್ಯಾಪಕ ಟೀಕೆಗೆ ಒಳಗಾಗಿದ್ದರು. ತದ ನಂತರ ತನ್ನ ತಪ್ಪಿಗೆ ಕ್ಷಮೆಯಾಚಿಸಿದ್ದರು.

ಸದ್ಯ ಸಾರ್ವಜನಿಕ ವೇದಿಕೆಯಲ್ಲಿ ಮುಜುಗರ ಎಂದು ಭಾವಿಸಿರುವ ವಿಷಯಗಳ ಕುರಿತು ದಿಟ್ಟವಾಗಿ ಪ್ರಶ್ನಿಸಿದ್ದಕ್ಕೆ ರಿಯಾ ಕುಮಾರಿಗೆ ಹಲವು ಎನ್‌ಜಿಓಗಳು ನೆರವು ನೀಡಲು ಮುಂದಾಗಿವೆ.

20 ವರ್ಷದ ರಿಯಾ ಕುಮಾರಿ ಪಾಟ್ನಾದ ಕಮಲ ನೆಹರು ನಗರ ಕಾಲೋನಿಯ ಸ್ಲಮ್ ನಿವಾಸಿಯಾಗಿದ್ದಾರೆ. ರಘುಪುರ್‌ನ ರಾಮ್ ವಿಲಾಸ್ ರಾಯ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ನಾಲ್ವರು ಸಹೋದರಿಯರು ಮತ್ತು ಮೂವರು ಸಹೋದರರ ದೊಡ್ಡ ಕುಟುಂಬ ಅವರದು. ಅಣ್ಣಂದಿರು ರೈಲುಗಳಲ್ಲಿ ಕೂಲಿಗಳಾಗಿ ಕೆಲಸ ಮಾಡುತ್ತಿದ್ದಾರೆ.

ಭಾರತೀಯ ಸ್ಯಾನಿಟರಿ ನ್ಯಾಪ್ಕಿನ್ ತಯಾರಕ ಪ್ಯಾನ್ ಹೆಲ್ತ್‌ಕೇರ್ ಪ್ರೈ.ಲಿ ಸಂಸ್ಥೆಯು ರಿಯಾಗೆ ಒಂದು ವರ್ಷದ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಒದಗಿಸುವುದಾಗಿ ಹೇಳಿಕೊಂಡಿದೆ.

ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಎಂಬ ದೆಹಲಿ ಮೂಲದ ಹೆಣ್ಣು ಮಕ್ಕಳ ನೈರ್ಮಲ್ಯ ಕಾಪಾಡುವ ಕಂಪನಿಯ ಸಿಇಒ ಹರಿಓಂ ತ್ಯಾಗಿಯವರು, “ಸಾರ್ವಜನಿಕ ವೇದಿಕೆಯಲ್ಲಿ ಬಡ ಹುಡುಗಿಯರು ಮತ್ತು ಸ್ಲಂಗಳಲ್ಲಿ ವಾಸಿಸುವ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ವಿಧಾನಗಳ ಸಮಸ್ಯೆಯನ್ನು ದಿಟ್ಟವಾಗಿ ಪ್ರಶ್ನಿಸಿದಕ್ಕಾಗಿ” ಆ ಹುಡುಗಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

“ಸದ್ಯಕ್ಕೆ ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚವನ್ನು ಕಂಪನಿಯೇ ಭರಿಸಲು ನಿರ್ಧರಿಸಿದೆ. ಭವಿಷ್ಯದಲ್ಲಿ ಅವರು ಯಾವುದೇ ಹೆಚ್ಚಿನ ಸಹಾಯ ಅಥವಾ ಬೆಂಬಲವನ್ನು ಬಯಸಿದರೆ ಅದು ನಿಮ್ಮ ಜೀವನದ ಗುಣಮಟ್ಟವನ್ನು ಸುಧಾರಿಸಲು ನಾವು ನೀಡುವ ಕೊಡುಗೆ ಎಂದು ಭಾವಿಸಿ ಸಹಾಯ ಮಾಡುತ್ತೇವೆ” ಎಂದು ತ್ಯಾಗಿ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಿಯಾ, “ಸ್ಯಾನಿಟರಿ ನ್ಯಾಪ್‌ಕಿನ್ ಬಗೆಗಿನ ನನ್ನ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ. ಈ ಪ್ರಶ್ನೆ ಎತ್ತಿದ್ದು ಕೂಡ ಕೇವಲ ನನಗಾಗಿ ಮಾತ್ರವಲ್ಲ. ನಾನು ಬೇಕಾದರೆ ಹಣ ಕೊಟ್ಟು ಖರೀದಿಸಬಲ್ಲೆ. ಆದರೆ ನಮ್ಮ ಸ್ಲಮ್‌ನಲ್ಲಿನ ಬಹುತೇಕ ಹೆಣ್ಣುಮಕ್ಕಳಿಗೆ ಕೊಳ್ಳುವ ಶಕ್ತಿಯಿಲ್ಲ. ಈ ಬಗ್ಗೆ ದನಿ ಎತ್ತಿದೆ. ನನಗೆ ಸಿಗುವ ಸ್ಯಾನಿಟರಿ ಪ್ಯಾಡ್‌ಗಳನ್ನು ಬೇರೆ ಹೆಣ್ಣು ಮಕ್ಕಳೊಂದಿಗೆ ಹಂಚಿಕೊಳ್ಳುತ್ತೇನೆ. ನನಗೆ ಸಿಗುವ ಶಿಕ್ಷಣವನ್ನು ಉಳಿದವರಿಗೆ ಅರಿವು ಮೂಡಿಸಲು ಬಳುಸತ್ತೇನೆ” ಎಂದಿದ್ದಾರೆ.

ಕ್ವಿಂಟ್ ಜೊತೆ ಮಾತನಾಡಿರುವ ರಿಯಾ, “ನಾನು ಮಕ್ಕಳನ್ನು ಉಳಿಸಿ ಎಂಬ ಎನ್‌ಜಿಓಗೆ ಸ್ವಯಂ ಸೇವಕಿಯಾಗಿ ಕೆಲಸ ಮಾಡುತ್ತಿದ್ದೆ. ಆಗ ಹಲವು ಸ್ಲಂಗಳಿಗೆ ಭೇಟಿ ನೀಡಿ ಮುಟ್ಟಿನ ಬಗ್ಗೆ ಅರಿವು ಮೂಡಿಸುವ ಕೆಲಸ ನನ್ನದಾಗಿತ್ತು. ಕೆಲವು ಸ್ಲಂಗಳಿಗೆ ಹೋದಾಗ ಅಲ್ಲಿನ ಹೆಣ್ಣು ಮಕ್ಕಳ ಸ್ಥಿತಿ ನೋಡಿ ಬೇಸರವಾಯಿತು. ಬಹುತೇಕರು ಸ್ಯಾನಿಟರಿ ನ್ಯಾಪ್‌ಕಿನ್ ಖರೀದಿಸಲು ಸಾಧ್ಯವಾಗದೆ ಇಂದಿಗೂ ಬಟ್ಟೆಗಳನ್ನೆ ಬಳಸುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಕಣ್ಣಾರೆ ಕಂಡ ಕಷ್ಟಗಳನ್ನು ಪ್ರಶ್ನೆಯಾಗಿಸಿದೆ” ಎಂದಿದ್ದಾರೆ.

ಬಹಳಷ್ಟು ಹೆಣ್ಣು ಮಕ್ಕಳು ಮುಟ್ಟಿನ ಸಮಯದಲ್ಲಿ ವಾರಗಟ್ಟಲೆ ಶಾಲೆಗಳಿಗೆ ಹೋಗದೆ ರಜೆ ಹಾಕುತ್ತಾರೆ. ಇದರಿಂದ ಅವರ ಕಲಿಕೆಯು ಕುಂಠಿತಗೊಳ್ಳುತ್ತದೆ. ಅಂತವರಿಗೆ ಅರಿವು ಮತ್ತು ಧೈರ್ಯ ತುಂಬುತ್ತೇನೆ. ಮುಟ್ಟು ಎಂಬುದು ನಾಚಿಕೆಯ ವಿಷಯವಲ್ಲ ಎಂದು ಅವರಿಗೆ ಕಲಿಸಬೇಕಾಗಿದೆ ಎನ್ನುತ್ತಾರೆ ರಿಯಾ.

ಇದನ್ನೂ ಓದಿ: ಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...