Homeಮುಖಪುಟಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚ ಭರಿಸಲು ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಕಂಪನಿ ನಿರ್ಧರಿಸಿದೆ.

- Advertisement -
- Advertisement -

“ಸರ್ಕಾರವು ನಮಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಹೀಗಿರುವಾಗ, ಕೇವಲ 20-30ರೂಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಏಕೆ ನೀಡಲು ಸಾಧ್ಯವಿಲ್ಲ?” ಎಂದು ದಿಟ್ಟ ಪ್ರಶ್ನೆ ಎತ್ತಿದ್ದ ಬಿಹಾರದ ವಿದ್ಯಾರ್ಥಿನಿ ರಿಯಾ ಕುಮಾರಿಯವರ ಬೆಂಬಲಕ್ಕೆ ಹಲವರು ಮುಂದೆ ಬಂದಿದ್ದಾರೆ.

ಸೆಪ್ಟಂಬರ್ ಕೊನೆಯ ವಾರದಲ್ಲಿ ಪಾಟ್ನಾದಲ್ಲಿ ನಡೆದ ಯುನಿಸೆಫ್ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸಿದ್ದ ‘ಸಶಕ್ತ ಬೇಟಿ, ಸಮ್ರದ್ದ ಬಿಹಾರ’ ಎಂಬ ಕಾರ್ಯಗಾರದಲ್ಲಿ ರಿಯಾ ಕುಮಾರಿ ಕೇಳಿದ ಪ್ರಶ್ನೆಗೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮ (ಡಬ್ಲ್ಯುಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್‌ ಕೌರ್ ಬಾಮ್ಹ್ರಾ ಮುಂದೆ ನೀವು ಕಾಂಡೋಮ್ ಸಹ ಕೇಳುತ್ತೀರಿ ಎಂದು ಉದ್ಧಟತನದಿಂದ ಉತ್ತರಿಸಿದ್ದರು.

ರಾಜಕಾರಣಿಗಳು ಮತಗಳನ್ನು ಕೇಳುತ್ತಾರೆ, ಹೀಗಿರುವಾಗ ಕೆಲವು ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿನಿ ವಾದಿಸಿದಾಗ, “ಮತ ಹಾಕಬೇಡಿ, ಪಾಕಿಸ್ತಾನ ಮಾಡಿ ಈ ದೇಶವನ್ನು. ಹಣ ಅಥವಾ ಸೌಕರ್ಯಗಳಿಗಾಗಿ ನೀವು ಮತ ​​ಚಲಾಯಿಸುತ್ತೀರಾ?” ಎಂದು ಐಎಎಸ್ ಅಧಿಕಾರಿ ಹೇಳಿ ಆ ಹುಡುಗಿಯ ಬಾಯಿ ಮುಚ್ಚಿಸಿ ವ್ಯಾಪಕ ಟೀಕೆಗೆ ಒಳಗಾಗಿದ್ದರು. ತದ ನಂತರ ತನ್ನ ತಪ್ಪಿಗೆ ಕ್ಷಮೆಯಾಚಿಸಿದ್ದರು.

ಸದ್ಯ ಸಾರ್ವಜನಿಕ ವೇದಿಕೆಯಲ್ಲಿ ಮುಜುಗರ ಎಂದು ಭಾವಿಸಿರುವ ವಿಷಯಗಳ ಕುರಿತು ದಿಟ್ಟವಾಗಿ ಪ್ರಶ್ನಿಸಿದ್ದಕ್ಕೆ ರಿಯಾ ಕುಮಾರಿಗೆ ಹಲವು ಎನ್‌ಜಿಓಗಳು ನೆರವು ನೀಡಲು ಮುಂದಾಗಿವೆ.

20 ವರ್ಷದ ರಿಯಾ ಕುಮಾರಿ ಪಾಟ್ನಾದ ಕಮಲ ನೆಹರು ನಗರ ಕಾಲೋನಿಯ ಸ್ಲಮ್ ನಿವಾಸಿಯಾಗಿದ್ದಾರೆ. ರಘುಪುರ್‌ನ ರಾಮ್ ವಿಲಾಸ್ ರಾಯ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ನಾಲ್ವರು ಸಹೋದರಿಯರು ಮತ್ತು ಮೂವರು ಸಹೋದರರ ದೊಡ್ಡ ಕುಟುಂಬ ಅವರದು. ಅಣ್ಣಂದಿರು ರೈಲುಗಳಲ್ಲಿ ಕೂಲಿಗಳಾಗಿ ಕೆಲಸ ಮಾಡುತ್ತಿದ್ದಾರೆ.

ಭಾರತೀಯ ಸ್ಯಾನಿಟರಿ ನ್ಯಾಪ್ಕಿನ್ ತಯಾರಕ ಪ್ಯಾನ್ ಹೆಲ್ತ್‌ಕೇರ್ ಪ್ರೈ.ಲಿ ಸಂಸ್ಥೆಯು ರಿಯಾಗೆ ಒಂದು ವರ್ಷದ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಒದಗಿಸುವುದಾಗಿ ಹೇಳಿಕೊಂಡಿದೆ.

ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಎಂಬ ದೆಹಲಿ ಮೂಲದ ಹೆಣ್ಣು ಮಕ್ಕಳ ನೈರ್ಮಲ್ಯ ಕಾಪಾಡುವ ಕಂಪನಿಯ ಸಿಇಒ ಹರಿಓಂ ತ್ಯಾಗಿಯವರು, “ಸಾರ್ವಜನಿಕ ವೇದಿಕೆಯಲ್ಲಿ ಬಡ ಹುಡುಗಿಯರು ಮತ್ತು ಸ್ಲಂಗಳಲ್ಲಿ ವಾಸಿಸುವ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ವಿಧಾನಗಳ ಸಮಸ್ಯೆಯನ್ನು ದಿಟ್ಟವಾಗಿ ಪ್ರಶ್ನಿಸಿದಕ್ಕಾಗಿ” ಆ ಹುಡುಗಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

“ಸದ್ಯಕ್ಕೆ ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚವನ್ನು ಕಂಪನಿಯೇ ಭರಿಸಲು ನಿರ್ಧರಿಸಿದೆ. ಭವಿಷ್ಯದಲ್ಲಿ ಅವರು ಯಾವುದೇ ಹೆಚ್ಚಿನ ಸಹಾಯ ಅಥವಾ ಬೆಂಬಲವನ್ನು ಬಯಸಿದರೆ ಅದು ನಿಮ್ಮ ಜೀವನದ ಗುಣಮಟ್ಟವನ್ನು ಸುಧಾರಿಸಲು ನಾವು ನೀಡುವ ಕೊಡುಗೆ ಎಂದು ಭಾವಿಸಿ ಸಹಾಯ ಮಾಡುತ್ತೇವೆ” ಎಂದು ತ್ಯಾಗಿ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಿಯಾ, “ಸ್ಯಾನಿಟರಿ ನ್ಯಾಪ್‌ಕಿನ್ ಬಗೆಗಿನ ನನ್ನ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ. ಈ ಪ್ರಶ್ನೆ ಎತ್ತಿದ್ದು ಕೂಡ ಕೇವಲ ನನಗಾಗಿ ಮಾತ್ರವಲ್ಲ. ನಾನು ಬೇಕಾದರೆ ಹಣ ಕೊಟ್ಟು ಖರೀದಿಸಬಲ್ಲೆ. ಆದರೆ ನಮ್ಮ ಸ್ಲಮ್‌ನಲ್ಲಿನ ಬಹುತೇಕ ಹೆಣ್ಣುಮಕ್ಕಳಿಗೆ ಕೊಳ್ಳುವ ಶಕ್ತಿಯಿಲ್ಲ. ಈ ಬಗ್ಗೆ ದನಿ ಎತ್ತಿದೆ. ನನಗೆ ಸಿಗುವ ಸ್ಯಾನಿಟರಿ ಪ್ಯಾಡ್‌ಗಳನ್ನು ಬೇರೆ ಹೆಣ್ಣು ಮಕ್ಕಳೊಂದಿಗೆ ಹಂಚಿಕೊಳ್ಳುತ್ತೇನೆ. ನನಗೆ ಸಿಗುವ ಶಿಕ್ಷಣವನ್ನು ಉಳಿದವರಿಗೆ ಅರಿವು ಮೂಡಿಸಲು ಬಳುಸತ್ತೇನೆ” ಎಂದಿದ್ದಾರೆ.

ಕ್ವಿಂಟ್ ಜೊತೆ ಮಾತನಾಡಿರುವ ರಿಯಾ, “ನಾನು ಮಕ್ಕಳನ್ನು ಉಳಿಸಿ ಎಂಬ ಎನ್‌ಜಿಓಗೆ ಸ್ವಯಂ ಸೇವಕಿಯಾಗಿ ಕೆಲಸ ಮಾಡುತ್ತಿದ್ದೆ. ಆಗ ಹಲವು ಸ್ಲಂಗಳಿಗೆ ಭೇಟಿ ನೀಡಿ ಮುಟ್ಟಿನ ಬಗ್ಗೆ ಅರಿವು ಮೂಡಿಸುವ ಕೆಲಸ ನನ್ನದಾಗಿತ್ತು. ಕೆಲವು ಸ್ಲಂಗಳಿಗೆ ಹೋದಾಗ ಅಲ್ಲಿನ ಹೆಣ್ಣು ಮಕ್ಕಳ ಸ್ಥಿತಿ ನೋಡಿ ಬೇಸರವಾಯಿತು. ಬಹುತೇಕರು ಸ್ಯಾನಿಟರಿ ನ್ಯಾಪ್‌ಕಿನ್ ಖರೀದಿಸಲು ಸಾಧ್ಯವಾಗದೆ ಇಂದಿಗೂ ಬಟ್ಟೆಗಳನ್ನೆ ಬಳಸುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಕಣ್ಣಾರೆ ಕಂಡ ಕಷ್ಟಗಳನ್ನು ಪ್ರಶ್ನೆಯಾಗಿಸಿದೆ” ಎಂದಿದ್ದಾರೆ.

ಬಹಳಷ್ಟು ಹೆಣ್ಣು ಮಕ್ಕಳು ಮುಟ್ಟಿನ ಸಮಯದಲ್ಲಿ ವಾರಗಟ್ಟಲೆ ಶಾಲೆಗಳಿಗೆ ಹೋಗದೆ ರಜೆ ಹಾಕುತ್ತಾರೆ. ಇದರಿಂದ ಅವರ ಕಲಿಕೆಯು ಕುಂಠಿತಗೊಳ್ಳುತ್ತದೆ. ಅಂತವರಿಗೆ ಅರಿವು ಮತ್ತು ಧೈರ್ಯ ತುಂಬುತ್ತೇನೆ. ಮುಟ್ಟು ಎಂಬುದು ನಾಚಿಕೆಯ ವಿಷಯವಲ್ಲ ಎಂದು ಅವರಿಗೆ ಕಲಿಸಬೇಕಾಗಿದೆ ಎನ್ನುತ್ತಾರೆ ರಿಯಾ.

ಇದನ್ನೂ ಓದಿ: ಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...