Homeಮುಖಪುಟಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚ ಭರಿಸಲು ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಕಂಪನಿ ನಿರ್ಧರಿಸಿದೆ.

- Advertisement -
- Advertisement -

“ಸರ್ಕಾರವು ನಮಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಹೀಗಿರುವಾಗ, ಕೇವಲ 20-30ರೂಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಏಕೆ ನೀಡಲು ಸಾಧ್ಯವಿಲ್ಲ?” ಎಂದು ದಿಟ್ಟ ಪ್ರಶ್ನೆ ಎತ್ತಿದ್ದ ಬಿಹಾರದ ವಿದ್ಯಾರ್ಥಿನಿ ರಿಯಾ ಕುಮಾರಿಯವರ ಬೆಂಬಲಕ್ಕೆ ಹಲವರು ಮುಂದೆ ಬಂದಿದ್ದಾರೆ.

ಸೆಪ್ಟಂಬರ್ ಕೊನೆಯ ವಾರದಲ್ಲಿ ಪಾಟ್ನಾದಲ್ಲಿ ನಡೆದ ಯುನಿಸೆಫ್ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸಿದ್ದ ‘ಸಶಕ್ತ ಬೇಟಿ, ಸಮ್ರದ್ದ ಬಿಹಾರ’ ಎಂಬ ಕಾರ್ಯಗಾರದಲ್ಲಿ ರಿಯಾ ಕುಮಾರಿ ಕೇಳಿದ ಪ್ರಶ್ನೆಗೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮ (ಡಬ್ಲ್ಯುಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್‌ ಕೌರ್ ಬಾಮ್ಹ್ರಾ ಮುಂದೆ ನೀವು ಕಾಂಡೋಮ್ ಸಹ ಕೇಳುತ್ತೀರಿ ಎಂದು ಉದ್ಧಟತನದಿಂದ ಉತ್ತರಿಸಿದ್ದರು.

ರಾಜಕಾರಣಿಗಳು ಮತಗಳನ್ನು ಕೇಳುತ್ತಾರೆ, ಹೀಗಿರುವಾಗ ಕೆಲವು ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿನಿ ವಾದಿಸಿದಾಗ, “ಮತ ಹಾಕಬೇಡಿ, ಪಾಕಿಸ್ತಾನ ಮಾಡಿ ಈ ದೇಶವನ್ನು. ಹಣ ಅಥವಾ ಸೌಕರ್ಯಗಳಿಗಾಗಿ ನೀವು ಮತ ​​ಚಲಾಯಿಸುತ್ತೀರಾ?” ಎಂದು ಐಎಎಸ್ ಅಧಿಕಾರಿ ಹೇಳಿ ಆ ಹುಡುಗಿಯ ಬಾಯಿ ಮುಚ್ಚಿಸಿ ವ್ಯಾಪಕ ಟೀಕೆಗೆ ಒಳಗಾಗಿದ್ದರು. ತದ ನಂತರ ತನ್ನ ತಪ್ಪಿಗೆ ಕ್ಷಮೆಯಾಚಿಸಿದ್ದರು.

ಸದ್ಯ ಸಾರ್ವಜನಿಕ ವೇದಿಕೆಯಲ್ಲಿ ಮುಜುಗರ ಎಂದು ಭಾವಿಸಿರುವ ವಿಷಯಗಳ ಕುರಿತು ದಿಟ್ಟವಾಗಿ ಪ್ರಶ್ನಿಸಿದ್ದಕ್ಕೆ ರಿಯಾ ಕುಮಾರಿಗೆ ಹಲವು ಎನ್‌ಜಿಓಗಳು ನೆರವು ನೀಡಲು ಮುಂದಾಗಿವೆ.

20 ವರ್ಷದ ರಿಯಾ ಕುಮಾರಿ ಪಾಟ್ನಾದ ಕಮಲ ನೆಹರು ನಗರ ಕಾಲೋನಿಯ ಸ್ಲಮ್ ನಿವಾಸಿಯಾಗಿದ್ದಾರೆ. ರಘುಪುರ್‌ನ ರಾಮ್ ವಿಲಾಸ್ ರಾಯ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ನಾಲ್ವರು ಸಹೋದರಿಯರು ಮತ್ತು ಮೂವರು ಸಹೋದರರ ದೊಡ್ಡ ಕುಟುಂಬ ಅವರದು. ಅಣ್ಣಂದಿರು ರೈಲುಗಳಲ್ಲಿ ಕೂಲಿಗಳಾಗಿ ಕೆಲಸ ಮಾಡುತ್ತಿದ್ದಾರೆ.

ಭಾರತೀಯ ಸ್ಯಾನಿಟರಿ ನ್ಯಾಪ್ಕಿನ್ ತಯಾರಕ ಪ್ಯಾನ್ ಹೆಲ್ತ್‌ಕೇರ್ ಪ್ರೈ.ಲಿ ಸಂಸ್ಥೆಯು ರಿಯಾಗೆ ಒಂದು ವರ್ಷದ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಒದಗಿಸುವುದಾಗಿ ಹೇಳಿಕೊಂಡಿದೆ.

ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಎಂಬ ದೆಹಲಿ ಮೂಲದ ಹೆಣ್ಣು ಮಕ್ಕಳ ನೈರ್ಮಲ್ಯ ಕಾಪಾಡುವ ಕಂಪನಿಯ ಸಿಇಒ ಹರಿಓಂ ತ್ಯಾಗಿಯವರು, “ಸಾರ್ವಜನಿಕ ವೇದಿಕೆಯಲ್ಲಿ ಬಡ ಹುಡುಗಿಯರು ಮತ್ತು ಸ್ಲಂಗಳಲ್ಲಿ ವಾಸಿಸುವ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ವಿಧಾನಗಳ ಸಮಸ್ಯೆಯನ್ನು ದಿಟ್ಟವಾಗಿ ಪ್ರಶ್ನಿಸಿದಕ್ಕಾಗಿ” ಆ ಹುಡುಗಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

“ಸದ್ಯಕ್ಕೆ ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚವನ್ನು ಕಂಪನಿಯೇ ಭರಿಸಲು ನಿರ್ಧರಿಸಿದೆ. ಭವಿಷ್ಯದಲ್ಲಿ ಅವರು ಯಾವುದೇ ಹೆಚ್ಚಿನ ಸಹಾಯ ಅಥವಾ ಬೆಂಬಲವನ್ನು ಬಯಸಿದರೆ ಅದು ನಿಮ್ಮ ಜೀವನದ ಗುಣಮಟ್ಟವನ್ನು ಸುಧಾರಿಸಲು ನಾವು ನೀಡುವ ಕೊಡುಗೆ ಎಂದು ಭಾವಿಸಿ ಸಹಾಯ ಮಾಡುತ್ತೇವೆ” ಎಂದು ತ್ಯಾಗಿ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಿಯಾ, “ಸ್ಯಾನಿಟರಿ ನ್ಯಾಪ್‌ಕಿನ್ ಬಗೆಗಿನ ನನ್ನ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ. ಈ ಪ್ರಶ್ನೆ ಎತ್ತಿದ್ದು ಕೂಡ ಕೇವಲ ನನಗಾಗಿ ಮಾತ್ರವಲ್ಲ. ನಾನು ಬೇಕಾದರೆ ಹಣ ಕೊಟ್ಟು ಖರೀದಿಸಬಲ್ಲೆ. ಆದರೆ ನಮ್ಮ ಸ್ಲಮ್‌ನಲ್ಲಿನ ಬಹುತೇಕ ಹೆಣ್ಣುಮಕ್ಕಳಿಗೆ ಕೊಳ್ಳುವ ಶಕ್ತಿಯಿಲ್ಲ. ಈ ಬಗ್ಗೆ ದನಿ ಎತ್ತಿದೆ. ನನಗೆ ಸಿಗುವ ಸ್ಯಾನಿಟರಿ ಪ್ಯಾಡ್‌ಗಳನ್ನು ಬೇರೆ ಹೆಣ್ಣು ಮಕ್ಕಳೊಂದಿಗೆ ಹಂಚಿಕೊಳ್ಳುತ್ತೇನೆ. ನನಗೆ ಸಿಗುವ ಶಿಕ್ಷಣವನ್ನು ಉಳಿದವರಿಗೆ ಅರಿವು ಮೂಡಿಸಲು ಬಳುಸತ್ತೇನೆ” ಎಂದಿದ್ದಾರೆ.

ಕ್ವಿಂಟ್ ಜೊತೆ ಮಾತನಾಡಿರುವ ರಿಯಾ, “ನಾನು ಮಕ್ಕಳನ್ನು ಉಳಿಸಿ ಎಂಬ ಎನ್‌ಜಿಓಗೆ ಸ್ವಯಂ ಸೇವಕಿಯಾಗಿ ಕೆಲಸ ಮಾಡುತ್ತಿದ್ದೆ. ಆಗ ಹಲವು ಸ್ಲಂಗಳಿಗೆ ಭೇಟಿ ನೀಡಿ ಮುಟ್ಟಿನ ಬಗ್ಗೆ ಅರಿವು ಮೂಡಿಸುವ ಕೆಲಸ ನನ್ನದಾಗಿತ್ತು. ಕೆಲವು ಸ್ಲಂಗಳಿಗೆ ಹೋದಾಗ ಅಲ್ಲಿನ ಹೆಣ್ಣು ಮಕ್ಕಳ ಸ್ಥಿತಿ ನೋಡಿ ಬೇಸರವಾಯಿತು. ಬಹುತೇಕರು ಸ್ಯಾನಿಟರಿ ನ್ಯಾಪ್‌ಕಿನ್ ಖರೀದಿಸಲು ಸಾಧ್ಯವಾಗದೆ ಇಂದಿಗೂ ಬಟ್ಟೆಗಳನ್ನೆ ಬಳಸುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಕಣ್ಣಾರೆ ಕಂಡ ಕಷ್ಟಗಳನ್ನು ಪ್ರಶ್ನೆಯಾಗಿಸಿದೆ” ಎಂದಿದ್ದಾರೆ.

ಬಹಳಷ್ಟು ಹೆಣ್ಣು ಮಕ್ಕಳು ಮುಟ್ಟಿನ ಸಮಯದಲ್ಲಿ ವಾರಗಟ್ಟಲೆ ಶಾಲೆಗಳಿಗೆ ಹೋಗದೆ ರಜೆ ಹಾಕುತ್ತಾರೆ. ಇದರಿಂದ ಅವರ ಕಲಿಕೆಯು ಕುಂಠಿತಗೊಳ್ಳುತ್ತದೆ. ಅಂತವರಿಗೆ ಅರಿವು ಮತ್ತು ಧೈರ್ಯ ತುಂಬುತ್ತೇನೆ. ಮುಟ್ಟು ಎಂಬುದು ನಾಚಿಕೆಯ ವಿಷಯವಲ್ಲ ಎಂದು ಅವರಿಗೆ ಕಲಿಸಬೇಕಾಗಿದೆ ಎನ್ನುತ್ತಾರೆ ರಿಯಾ.

ಇದನ್ನೂ ಓದಿ: ಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...