Homeಮುಖಪುಟಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚ ಭರಿಸಲು ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಕಂಪನಿ ನಿರ್ಧರಿಸಿದೆ.

- Advertisement -
- Advertisement -

“ಸರ್ಕಾರವು ನಮಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಹೀಗಿರುವಾಗ, ಕೇವಲ 20-30ರೂಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಏಕೆ ನೀಡಲು ಸಾಧ್ಯವಿಲ್ಲ?” ಎಂದು ದಿಟ್ಟ ಪ್ರಶ್ನೆ ಎತ್ತಿದ್ದ ಬಿಹಾರದ ವಿದ್ಯಾರ್ಥಿನಿ ರಿಯಾ ಕುಮಾರಿಯವರ ಬೆಂಬಲಕ್ಕೆ ಹಲವರು ಮುಂದೆ ಬಂದಿದ್ದಾರೆ.

ಸೆಪ್ಟಂಬರ್ ಕೊನೆಯ ವಾರದಲ್ಲಿ ಪಾಟ್ನಾದಲ್ಲಿ ನಡೆದ ಯುನಿಸೆಫ್ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸಿದ್ದ ‘ಸಶಕ್ತ ಬೇಟಿ, ಸಮ್ರದ್ದ ಬಿಹಾರ’ ಎಂಬ ಕಾರ್ಯಗಾರದಲ್ಲಿ ರಿಯಾ ಕುಮಾರಿ ಕೇಳಿದ ಪ್ರಶ್ನೆಗೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮ (ಡಬ್ಲ್ಯುಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್‌ ಕೌರ್ ಬಾಮ್ಹ್ರಾ ಮುಂದೆ ನೀವು ಕಾಂಡೋಮ್ ಸಹ ಕೇಳುತ್ತೀರಿ ಎಂದು ಉದ್ಧಟತನದಿಂದ ಉತ್ತರಿಸಿದ್ದರು.

ರಾಜಕಾರಣಿಗಳು ಮತಗಳನ್ನು ಕೇಳುತ್ತಾರೆ, ಹೀಗಿರುವಾಗ ಕೆಲವು ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿನಿ ವಾದಿಸಿದಾಗ, “ಮತ ಹಾಕಬೇಡಿ, ಪಾಕಿಸ್ತಾನ ಮಾಡಿ ಈ ದೇಶವನ್ನು. ಹಣ ಅಥವಾ ಸೌಕರ್ಯಗಳಿಗಾಗಿ ನೀವು ಮತ ​​ಚಲಾಯಿಸುತ್ತೀರಾ?” ಎಂದು ಐಎಎಸ್ ಅಧಿಕಾರಿ ಹೇಳಿ ಆ ಹುಡುಗಿಯ ಬಾಯಿ ಮುಚ್ಚಿಸಿ ವ್ಯಾಪಕ ಟೀಕೆಗೆ ಒಳಗಾಗಿದ್ದರು. ತದ ನಂತರ ತನ್ನ ತಪ್ಪಿಗೆ ಕ್ಷಮೆಯಾಚಿಸಿದ್ದರು.

ಸದ್ಯ ಸಾರ್ವಜನಿಕ ವೇದಿಕೆಯಲ್ಲಿ ಮುಜುಗರ ಎಂದು ಭಾವಿಸಿರುವ ವಿಷಯಗಳ ಕುರಿತು ದಿಟ್ಟವಾಗಿ ಪ್ರಶ್ನಿಸಿದ್ದಕ್ಕೆ ರಿಯಾ ಕುಮಾರಿಗೆ ಹಲವು ಎನ್‌ಜಿಓಗಳು ನೆರವು ನೀಡಲು ಮುಂದಾಗಿವೆ.

20 ವರ್ಷದ ರಿಯಾ ಕುಮಾರಿ ಪಾಟ್ನಾದ ಕಮಲ ನೆಹರು ನಗರ ಕಾಲೋನಿಯ ಸ್ಲಮ್ ನಿವಾಸಿಯಾಗಿದ್ದಾರೆ. ರಘುಪುರ್‌ನ ರಾಮ್ ವಿಲಾಸ್ ರಾಯ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ನಾಲ್ವರು ಸಹೋದರಿಯರು ಮತ್ತು ಮೂವರು ಸಹೋದರರ ದೊಡ್ಡ ಕುಟುಂಬ ಅವರದು. ಅಣ್ಣಂದಿರು ರೈಲುಗಳಲ್ಲಿ ಕೂಲಿಗಳಾಗಿ ಕೆಲಸ ಮಾಡುತ್ತಿದ್ದಾರೆ.

ಭಾರತೀಯ ಸ್ಯಾನಿಟರಿ ನ್ಯಾಪ್ಕಿನ್ ತಯಾರಕ ಪ್ಯಾನ್ ಹೆಲ್ತ್‌ಕೇರ್ ಪ್ರೈ.ಲಿ ಸಂಸ್ಥೆಯು ರಿಯಾಗೆ ಒಂದು ವರ್ಷದ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಒದಗಿಸುವುದಾಗಿ ಹೇಳಿಕೊಂಡಿದೆ.

ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಎಂಬ ದೆಹಲಿ ಮೂಲದ ಹೆಣ್ಣು ಮಕ್ಕಳ ನೈರ್ಮಲ್ಯ ಕಾಪಾಡುವ ಕಂಪನಿಯ ಸಿಇಒ ಹರಿಓಂ ತ್ಯಾಗಿಯವರು, “ಸಾರ್ವಜನಿಕ ವೇದಿಕೆಯಲ್ಲಿ ಬಡ ಹುಡುಗಿಯರು ಮತ್ತು ಸ್ಲಂಗಳಲ್ಲಿ ವಾಸಿಸುವ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ವಿಧಾನಗಳ ಸಮಸ್ಯೆಯನ್ನು ದಿಟ್ಟವಾಗಿ ಪ್ರಶ್ನಿಸಿದಕ್ಕಾಗಿ” ಆ ಹುಡುಗಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

“ಸದ್ಯಕ್ಕೆ ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚವನ್ನು ಕಂಪನಿಯೇ ಭರಿಸಲು ನಿರ್ಧರಿಸಿದೆ. ಭವಿಷ್ಯದಲ್ಲಿ ಅವರು ಯಾವುದೇ ಹೆಚ್ಚಿನ ಸಹಾಯ ಅಥವಾ ಬೆಂಬಲವನ್ನು ಬಯಸಿದರೆ ಅದು ನಿಮ್ಮ ಜೀವನದ ಗುಣಮಟ್ಟವನ್ನು ಸುಧಾರಿಸಲು ನಾವು ನೀಡುವ ಕೊಡುಗೆ ಎಂದು ಭಾವಿಸಿ ಸಹಾಯ ಮಾಡುತ್ತೇವೆ” ಎಂದು ತ್ಯಾಗಿ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಿಯಾ, “ಸ್ಯಾನಿಟರಿ ನ್ಯಾಪ್‌ಕಿನ್ ಬಗೆಗಿನ ನನ್ನ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ. ಈ ಪ್ರಶ್ನೆ ಎತ್ತಿದ್ದು ಕೂಡ ಕೇವಲ ನನಗಾಗಿ ಮಾತ್ರವಲ್ಲ. ನಾನು ಬೇಕಾದರೆ ಹಣ ಕೊಟ್ಟು ಖರೀದಿಸಬಲ್ಲೆ. ಆದರೆ ನಮ್ಮ ಸ್ಲಮ್‌ನಲ್ಲಿನ ಬಹುತೇಕ ಹೆಣ್ಣುಮಕ್ಕಳಿಗೆ ಕೊಳ್ಳುವ ಶಕ್ತಿಯಿಲ್ಲ. ಈ ಬಗ್ಗೆ ದನಿ ಎತ್ತಿದೆ. ನನಗೆ ಸಿಗುವ ಸ್ಯಾನಿಟರಿ ಪ್ಯಾಡ್‌ಗಳನ್ನು ಬೇರೆ ಹೆಣ್ಣು ಮಕ್ಕಳೊಂದಿಗೆ ಹಂಚಿಕೊಳ್ಳುತ್ತೇನೆ. ನನಗೆ ಸಿಗುವ ಶಿಕ್ಷಣವನ್ನು ಉಳಿದವರಿಗೆ ಅರಿವು ಮೂಡಿಸಲು ಬಳುಸತ್ತೇನೆ” ಎಂದಿದ್ದಾರೆ.

ಕ್ವಿಂಟ್ ಜೊತೆ ಮಾತನಾಡಿರುವ ರಿಯಾ, “ನಾನು ಮಕ್ಕಳನ್ನು ಉಳಿಸಿ ಎಂಬ ಎನ್‌ಜಿಓಗೆ ಸ್ವಯಂ ಸೇವಕಿಯಾಗಿ ಕೆಲಸ ಮಾಡುತ್ತಿದ್ದೆ. ಆಗ ಹಲವು ಸ್ಲಂಗಳಿಗೆ ಭೇಟಿ ನೀಡಿ ಮುಟ್ಟಿನ ಬಗ್ಗೆ ಅರಿವು ಮೂಡಿಸುವ ಕೆಲಸ ನನ್ನದಾಗಿತ್ತು. ಕೆಲವು ಸ್ಲಂಗಳಿಗೆ ಹೋದಾಗ ಅಲ್ಲಿನ ಹೆಣ್ಣು ಮಕ್ಕಳ ಸ್ಥಿತಿ ನೋಡಿ ಬೇಸರವಾಯಿತು. ಬಹುತೇಕರು ಸ್ಯಾನಿಟರಿ ನ್ಯಾಪ್‌ಕಿನ್ ಖರೀದಿಸಲು ಸಾಧ್ಯವಾಗದೆ ಇಂದಿಗೂ ಬಟ್ಟೆಗಳನ್ನೆ ಬಳಸುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಕಣ್ಣಾರೆ ಕಂಡ ಕಷ್ಟಗಳನ್ನು ಪ್ರಶ್ನೆಯಾಗಿಸಿದೆ” ಎಂದಿದ್ದಾರೆ.

ಬಹಳಷ್ಟು ಹೆಣ್ಣು ಮಕ್ಕಳು ಮುಟ್ಟಿನ ಸಮಯದಲ್ಲಿ ವಾರಗಟ್ಟಲೆ ಶಾಲೆಗಳಿಗೆ ಹೋಗದೆ ರಜೆ ಹಾಕುತ್ತಾರೆ. ಇದರಿಂದ ಅವರ ಕಲಿಕೆಯು ಕುಂಠಿತಗೊಳ್ಳುತ್ತದೆ. ಅಂತವರಿಗೆ ಅರಿವು ಮತ್ತು ಧೈರ್ಯ ತುಂಬುತ್ತೇನೆ. ಮುಟ್ಟು ಎಂಬುದು ನಾಚಿಕೆಯ ವಿಷಯವಲ್ಲ ಎಂದು ಅವರಿಗೆ ಕಲಿಸಬೇಕಾಗಿದೆ ಎನ್ನುತ್ತಾರೆ ರಿಯಾ.

ಇದನ್ನೂ ಓದಿ: ಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...