Homeಚಳವಳಿದೆಹಲಿ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ಧರಣಿ ಆರಂಭ: ಭಾರತ್ ಬಂದ್‌ಗೆ ಸಿದ್ದತೆ

ದೆಹಲಿ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ಧರಣಿ ಆರಂಭ: ಭಾರತ್ ಬಂದ್‌ಗೆ ಸಿದ್ದತೆ

ಈ ಪ್ರತಿಭಟನೆಯಲ್ಲಿ ಮಾತನಾಡಿದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್. ನಾಗಮೊಹನ್ ದಾಸ್, "ನಾನೂ ಕೂಡಾ ರೈತನ ಮಗನೆ. ರೈತರಿಗೆ ಆಗಿರುವ ಅನ್ಯಾಯವನ್ನು ನೋಡಿಕೊಂಡು ಇರಲು ನನ್ನಿಂದ ಆಗಲಿಲ್ಲ. ಅದಕ್ಕೆ ನಾನಿಲ್ಲಿದ್ದೀನಿ" ಎಂದು ಹೇಳಿದರು.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕದ ಐಕ್ಯ ಹೋರಾಟ ಸಮಿತಿಯ ವತಿಯಿಂದ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಳೆದ ಬಾರಿಯ ರಾಜ್ಯದ ಅಧಿವೇಶನದ ಸಮಯದಲ್ಲಿ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಒಟ್ಟುಗೂಡಿ ರಚಿಸಿಕೊಂಡಿದ್ದ ಈ ಐಕ್ಯ ಹೋರಾಟ ಸಮಿತಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ದಲಿತ, ಕಾರ್ಮಿಕ ಮತ್ತು ರೈತವಿರೋಧಿ ಕ್ರಮಗಳನ್ನು ವಿರೋಧಿಸುವ ಸಲುವಾಗಿ ಹುಟ್ಟಿಕೊಂಡಿತ್ತು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ತಿದ್ದುಪಡಿಗೆ ಕೇಂದ್ರದ ಒಪ್ಪಿಗೆ: ಹಿಂತೆಗೆದುಕೊಳ್ಳಬೇಕೆಂದು ಪಟ್ಟು ಹಿಡಿದ ರೈತರು!

ಕಳೆದ 12 ದಿನಗಳಿಂದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸರ್ಕಾರವು ನಡೆಸುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ನಾಳೆ ದೇಶದಾದ್ಯಂತ ಹಮ್ಮಿಕೊಂಡಿರುವ ‘ಭಾರತ್ ಬಂದ್’ಗೆ ಬೆಂಬಲ ನೀಡಲು ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗುತ್ತಿದೆ.

ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ವಿರುದ್ಧ ನಾಳೆ ನಡೆಯುವ ಬಂದ್‌ನ ರೂಪುರೇಷೆಗಳ ಕುರಿತು, ರೈತ-ದಲಿತ-ಕಾರ್ಮಿಕ-ಜನಪರ ಸಂಘಟನೆಗಳ ‘ಐಕ್ಯ ಹೋರಾಟ ವೇದಿಕೆ’ಯ ಪತ್ರಿಕಾಗೋಷ್ಠಿ…

ಇದನ್ನೂ ಓದಿ: ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ಈ ಪ್ರತಿಭಟನೆಯಲ್ಲಿ ಮಾತನಾಡಿದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್. ನಾಗಮೊಹನ್ ದಾಸ್, “ನಾನೂ ಕೂಡಾ ರೈತನ ಮಗನೆ. ರೈತರಿಗೆ ಆಗಿರುವ ಅನ್ಯಾಯವನ್ನು ನೋಡಿಕೊಂಡು ಸುಮ್ಮನಿರಲು ನನ್ನಿಂದ ಆಗಲಿಲ್ಲ. ಅದಕ್ಕೆ ನಾನಿಲ್ಲಿದ್ದೀನಿ. ಕಳೆದ ಎಪ್ಪತ್ತು ವರ್ಷಗಳಿಂದ ನಾವು ಕಟ್ಟಿಕೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಗಳು ತಮ್ಮ ಸ್ವಾತಂತ್ರ್ಯ ಮತ್ತು ಮಾನ್ಯತೆಯನ್ನು ಕಳೆದುಕೊಳ್ಳುತ್ತಿವೆ. ಅವುಗಳನ್ನು ಅಪ್ರಸ್ತುತಗೊಳಿಸಲಾಗುತ್ತಿದೆ. ಅಂತಾರಾಷ್ಟ್ರೀಯ ವರದಿಗಳು ಭಾರತ ಅಂತ್ಯಂತ ಭ್ರಷ್ಟ ದೇಶ ಎಂದು ಹೇಳುತ್ತಿದೆ. ನ್ಯಾಯಾಂಗ ಜನರ ನಂಬಿಕೆಗಳನ್ನು ಕಳೆದುಕೊಳ್ಳುತ್ತಿದೆ. ರಿಸರ್ವ್ ಬ್ಯಾಂಕ್, ಚುನಾವಣಾ ಆಯೋಗ, ಸಿಬಿಐ ಸೇರಿದಂತೆ ಎಲ್ಲಾ ಸಂಸ್ಥೆಗಳು ಸ್ವಾತಂತ್ರ್ಯ ಕಳೆದುಕೊಂಡು ಸರ್ಕಾರದ ಕೈಗೊಂಬೆಯಾಗಿದೆ. ಅಪ್ರಜಾಪ್ರಭುತ್ವ ಸುಧಾರಣೆಗಳು ಬರುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ, ಕೃಷಿ ಬಿಕ್ಕಟ್ಟನ್ನು ಸರಿ ಪಡಿಸಿ ರೈತರ ಹಿತವನ್ನು ಕಾಪಾಡಿ ಎಂದರೆ ಅದರ ವಿರುದ್ಧ ಕಾನೂನುಗಳನ್ನು ತರುತ್ತಾ ರೈತರನ್ನು ಗುಲಾಮರನ್ನಾಗಿ ಮಾಡುತ್ತಿದ್ದಾರೆ. ಬದುಕಿಗೆ ಬೇಕಾದ ವಿಷಯಗಳನ್ನು ಬಿಟ್ಟು ಲವ್ ಜಿಹಾದ್, ಗೋಹತ್ಯೆ ವಿಷಯಗಳಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಕಾನೂನು ತರುತ್ತಾರೆ. ಆದರೆ ಹದಿನೈದು ವರ್ಷದಿಂದ ಸ್ವಾಮಿನಾಥನ್ ಆಯೋಗದ ವರದಿ ಚರ್ಚೆಯಿಲ್ಲದೆ ಹಾಗೆ ಬಿದ್ದಿದದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಝೀ ನ್ಯೂಸ್, ರಿಪಬ್ಲಿಕ್ ಟಿವಿ ಮತ್ತು ಆಜ್‌‌ತಕ್‌ ಚಾನೆಲ್‌‌ಗಳನ್ನು ’ಗೋದಿ ಮೀಡಿಯಾ’ ಎಂದ ರೈತರು!

ರೈತ ಹೋರಾಟಗಾರರಾದ ಪ್ರಕಾಶ್ ಕಮ್ಮರಡಿ ಮಾತನಾಡಿ, “ಕೊರೆಯುವ ಚಳಿಯಲ್ಲಿ ದೇಶದ ಅನ್ನದಾತರು ಬೀದಿಗಿಳಿದಿದ್ದಾರೆ. ವಿಶ್ವದಲ್ಲೇ ಅತ್ಯಂತ ಪ್ರಭಲ ಪ್ರತಿಭಟನೆ ನಡೆಯುತ್ತಿದೆ. ಆದರೆ ಆಳುವ ಸರ್ಕಾರಕ್ಕೆ ತಮ್ಮಲ್ಲಿರುವ ಸಂಖ್ಯಾಬಲದ ಭ್ರಮೆಯಿದೆ. ನೇಗಿಲು ಹಿಡಿದ ರೈತರನ್ನು ಭಯೋತ್ಪಾದಕ ಎಂದು ಬಿಂಬಿಸುತ್ತಿದ್ದಾರೆ. ಸಾಂಕ್ರಾಮಿಕದ ಸಮಯದಲ್ಲಿ ದೇಶದ ರೈತರು ಕೈಚೆಲ್ಲಿ ಕುಳಿತಿದ್ದರೆ, ಬೆಲೆ ಏರಿಕೆಯಾಗಿ ಮೋದಿಯ ಆಟವು ನಡೆಯುತ್ತಾ ಇರಲಿಲ್ಲ. ದೇಶದ ಅರ್ಥವ್ಯವಸ್ಥೆಯನ್ನು ರೈತರು ಎತ್ತಿ ಹಿಡಿದಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಕೃತಘ್ನ ಸರ್ಕಾರ ರೈತರ ಆಶೋತ್ತರಗಳನ್ನು ಈಡೇರಿಸಬೇಕಿತ್ತು. ಆದರೆ ಸರ್ಕಾರ ಆಶ್ವಾಸನೆ ಕೂಡಾ ಕೊಡುತ್ತಿಲ್ಲ. ಜೊತೆಗೆ ಯಾವುದೇ ಚರ್ಚೆಯಿಲ್ಲದೆ ರೈತ ವಿರೋಧಿ ಕಾನೂನನ್ನು ಜಾರಿಗೆ ತರುತ್ತಿದ್ದಾರೆ. ಇದು ದ್ರೋಹಿ ಸರ್ಕಾರ” ಎಂದು ಕಿಡಿಕಾರಿದರು.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು!

ಕೇಂದ್ರದ ಬಿಜೆಪಿ ಸರ್ಕಾರವು ಮೂರು ಪ್ರಮುಖ ಕೃಷಿ ಮಸೂದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆ ಜಾರಿಗೊಳಿಸಲು ಮುಂದಾಗಿತ್ತು. ಇದನ್ನು ವಿರೋಧಿಸಿ ದೇಶದಾದ್ಯಂತ ಲಕ್ಷಾಂತರ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಇದೀಗ ಲಕ್ಷಾಂತರ ಪಂಜಾಬ್ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದು 12 ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸಾಕಷ್ಟು ಸುತ್ತಿನ ಮಾತುಕತೆಗಳು ನಡೆದರೂ ಅವುಗಳೆಲ್ಲಾ ವಿಫಲವಾಗಿವೆ.

ರೈತರ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಮಾನವೀಯ ಕ್ರಮಗಳನ್ನು ಕೈಗೊಂಡಿತ್ತು. ಇವುಗಳನ್ನೆಲ್ಲಾ ಲೆಕ್ಕಿಸದ ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರೈತರು ಮೋದಿಗೆ ಕೃತಜ್ಞತೆ ಹೇಳುತ್ತಿದ್ದಾರೆ ಎಂದು ಹಳೆಯ ಫೋಟೋ ಹಂಚಿಕೊಂಡ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...