Homeಚಳವಳಿದೆಹಲಿ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ಧರಣಿ ಆರಂಭ: ಭಾರತ್ ಬಂದ್‌ಗೆ ಸಿದ್ದತೆ

ದೆಹಲಿ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ಧರಣಿ ಆರಂಭ: ಭಾರತ್ ಬಂದ್‌ಗೆ ಸಿದ್ದತೆ

ಈ ಪ್ರತಿಭಟನೆಯಲ್ಲಿ ಮಾತನಾಡಿದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್. ನಾಗಮೊಹನ್ ದಾಸ್, "ನಾನೂ ಕೂಡಾ ರೈತನ ಮಗನೆ. ರೈತರಿಗೆ ಆಗಿರುವ ಅನ್ಯಾಯವನ್ನು ನೋಡಿಕೊಂಡು ಇರಲು ನನ್ನಿಂದ ಆಗಲಿಲ್ಲ. ಅದಕ್ಕೆ ನಾನಿಲ್ಲಿದ್ದೀನಿ" ಎಂದು ಹೇಳಿದರು.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕದ ಐಕ್ಯ ಹೋರಾಟ ಸಮಿತಿಯ ವತಿಯಿಂದ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಳೆದ ಬಾರಿಯ ರಾಜ್ಯದ ಅಧಿವೇಶನದ ಸಮಯದಲ್ಲಿ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಒಟ್ಟುಗೂಡಿ ರಚಿಸಿಕೊಂಡಿದ್ದ ಈ ಐಕ್ಯ ಹೋರಾಟ ಸಮಿತಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ದಲಿತ, ಕಾರ್ಮಿಕ ಮತ್ತು ರೈತವಿರೋಧಿ ಕ್ರಮಗಳನ್ನು ವಿರೋಧಿಸುವ ಸಲುವಾಗಿ ಹುಟ್ಟಿಕೊಂಡಿತ್ತು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ತಿದ್ದುಪಡಿಗೆ ಕೇಂದ್ರದ ಒಪ್ಪಿಗೆ: ಹಿಂತೆಗೆದುಕೊಳ್ಳಬೇಕೆಂದು ಪಟ್ಟು ಹಿಡಿದ ರೈತರು!

ಕಳೆದ 12 ದಿನಗಳಿಂದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸರ್ಕಾರವು ನಡೆಸುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ನಾಳೆ ದೇಶದಾದ್ಯಂತ ಹಮ್ಮಿಕೊಂಡಿರುವ ‘ಭಾರತ್ ಬಂದ್’ಗೆ ಬೆಂಬಲ ನೀಡಲು ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗುತ್ತಿದೆ.

ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ವಿರುದ್ಧ ನಾಳೆ ನಡೆಯುವ ಬಂದ್‌ನ ರೂಪುರೇಷೆಗಳ ಕುರಿತು, ರೈತ-ದಲಿತ-ಕಾರ್ಮಿಕ-ಜನಪರ ಸಂಘಟನೆಗಳ ‘ಐಕ್ಯ ಹೋರಾಟ ವೇದಿಕೆ’ಯ ಪತ್ರಿಕಾಗೋಷ್ಠಿ…

ಇದನ್ನೂ ಓದಿ: ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ಈ ಪ್ರತಿಭಟನೆಯಲ್ಲಿ ಮಾತನಾಡಿದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್. ನಾಗಮೊಹನ್ ದಾಸ್, “ನಾನೂ ಕೂಡಾ ರೈತನ ಮಗನೆ. ರೈತರಿಗೆ ಆಗಿರುವ ಅನ್ಯಾಯವನ್ನು ನೋಡಿಕೊಂಡು ಸುಮ್ಮನಿರಲು ನನ್ನಿಂದ ಆಗಲಿಲ್ಲ. ಅದಕ್ಕೆ ನಾನಿಲ್ಲಿದ್ದೀನಿ. ಕಳೆದ ಎಪ್ಪತ್ತು ವರ್ಷಗಳಿಂದ ನಾವು ಕಟ್ಟಿಕೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಗಳು ತಮ್ಮ ಸ್ವಾತಂತ್ರ್ಯ ಮತ್ತು ಮಾನ್ಯತೆಯನ್ನು ಕಳೆದುಕೊಳ್ಳುತ್ತಿವೆ. ಅವುಗಳನ್ನು ಅಪ್ರಸ್ತುತಗೊಳಿಸಲಾಗುತ್ತಿದೆ. ಅಂತಾರಾಷ್ಟ್ರೀಯ ವರದಿಗಳು ಭಾರತ ಅಂತ್ಯಂತ ಭ್ರಷ್ಟ ದೇಶ ಎಂದು ಹೇಳುತ್ತಿದೆ. ನ್ಯಾಯಾಂಗ ಜನರ ನಂಬಿಕೆಗಳನ್ನು ಕಳೆದುಕೊಳ್ಳುತ್ತಿದೆ. ರಿಸರ್ವ್ ಬ್ಯಾಂಕ್, ಚುನಾವಣಾ ಆಯೋಗ, ಸಿಬಿಐ ಸೇರಿದಂತೆ ಎಲ್ಲಾ ಸಂಸ್ಥೆಗಳು ಸ್ವಾತಂತ್ರ್ಯ ಕಳೆದುಕೊಂಡು ಸರ್ಕಾರದ ಕೈಗೊಂಬೆಯಾಗಿದೆ. ಅಪ್ರಜಾಪ್ರಭುತ್ವ ಸುಧಾರಣೆಗಳು ಬರುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ, ಕೃಷಿ ಬಿಕ್ಕಟ್ಟನ್ನು ಸರಿ ಪಡಿಸಿ ರೈತರ ಹಿತವನ್ನು ಕಾಪಾಡಿ ಎಂದರೆ ಅದರ ವಿರುದ್ಧ ಕಾನೂನುಗಳನ್ನು ತರುತ್ತಾ ರೈತರನ್ನು ಗುಲಾಮರನ್ನಾಗಿ ಮಾಡುತ್ತಿದ್ದಾರೆ. ಬದುಕಿಗೆ ಬೇಕಾದ ವಿಷಯಗಳನ್ನು ಬಿಟ್ಟು ಲವ್ ಜಿಹಾದ್, ಗೋಹತ್ಯೆ ವಿಷಯಗಳಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಕಾನೂನು ತರುತ್ತಾರೆ. ಆದರೆ ಹದಿನೈದು ವರ್ಷದಿಂದ ಸ್ವಾಮಿನಾಥನ್ ಆಯೋಗದ ವರದಿ ಚರ್ಚೆಯಿಲ್ಲದೆ ಹಾಗೆ ಬಿದ್ದಿದದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಝೀ ನ್ಯೂಸ್, ರಿಪಬ್ಲಿಕ್ ಟಿವಿ ಮತ್ತು ಆಜ್‌‌ತಕ್‌ ಚಾನೆಲ್‌‌ಗಳನ್ನು ’ಗೋದಿ ಮೀಡಿಯಾ’ ಎಂದ ರೈತರು!

ರೈತ ಹೋರಾಟಗಾರರಾದ ಪ್ರಕಾಶ್ ಕಮ್ಮರಡಿ ಮಾತನಾಡಿ, “ಕೊರೆಯುವ ಚಳಿಯಲ್ಲಿ ದೇಶದ ಅನ್ನದಾತರು ಬೀದಿಗಿಳಿದಿದ್ದಾರೆ. ವಿಶ್ವದಲ್ಲೇ ಅತ್ಯಂತ ಪ್ರಭಲ ಪ್ರತಿಭಟನೆ ನಡೆಯುತ್ತಿದೆ. ಆದರೆ ಆಳುವ ಸರ್ಕಾರಕ್ಕೆ ತಮ್ಮಲ್ಲಿರುವ ಸಂಖ್ಯಾಬಲದ ಭ್ರಮೆಯಿದೆ. ನೇಗಿಲು ಹಿಡಿದ ರೈತರನ್ನು ಭಯೋತ್ಪಾದಕ ಎಂದು ಬಿಂಬಿಸುತ್ತಿದ್ದಾರೆ. ಸಾಂಕ್ರಾಮಿಕದ ಸಮಯದಲ್ಲಿ ದೇಶದ ರೈತರು ಕೈಚೆಲ್ಲಿ ಕುಳಿತಿದ್ದರೆ, ಬೆಲೆ ಏರಿಕೆಯಾಗಿ ಮೋದಿಯ ಆಟವು ನಡೆಯುತ್ತಾ ಇರಲಿಲ್ಲ. ದೇಶದ ಅರ್ಥವ್ಯವಸ್ಥೆಯನ್ನು ರೈತರು ಎತ್ತಿ ಹಿಡಿದಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಕೃತಘ್ನ ಸರ್ಕಾರ ರೈತರ ಆಶೋತ್ತರಗಳನ್ನು ಈಡೇರಿಸಬೇಕಿತ್ತು. ಆದರೆ ಸರ್ಕಾರ ಆಶ್ವಾಸನೆ ಕೂಡಾ ಕೊಡುತ್ತಿಲ್ಲ. ಜೊತೆಗೆ ಯಾವುದೇ ಚರ್ಚೆಯಿಲ್ಲದೆ ರೈತ ವಿರೋಧಿ ಕಾನೂನನ್ನು ಜಾರಿಗೆ ತರುತ್ತಿದ್ದಾರೆ. ಇದು ದ್ರೋಹಿ ಸರ್ಕಾರ” ಎಂದು ಕಿಡಿಕಾರಿದರು.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು!

ಕೇಂದ್ರದ ಬಿಜೆಪಿ ಸರ್ಕಾರವು ಮೂರು ಪ್ರಮುಖ ಕೃಷಿ ಮಸೂದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆ ಜಾರಿಗೊಳಿಸಲು ಮುಂದಾಗಿತ್ತು. ಇದನ್ನು ವಿರೋಧಿಸಿ ದೇಶದಾದ್ಯಂತ ಲಕ್ಷಾಂತರ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಇದೀಗ ಲಕ್ಷಾಂತರ ಪಂಜಾಬ್ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದು 12 ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸಾಕಷ್ಟು ಸುತ್ತಿನ ಮಾತುಕತೆಗಳು ನಡೆದರೂ ಅವುಗಳೆಲ್ಲಾ ವಿಫಲವಾಗಿವೆ.

ರೈತರ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಮಾನವೀಯ ಕ್ರಮಗಳನ್ನು ಕೈಗೊಂಡಿತ್ತು. ಇವುಗಳನ್ನೆಲ್ಲಾ ಲೆಕ್ಕಿಸದ ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರೈತರು ಮೋದಿಗೆ ಕೃತಜ್ಞತೆ ಹೇಳುತ್ತಿದ್ದಾರೆ ಎಂದು ಹಳೆಯ ಫೋಟೋ ಹಂಚಿಕೊಂಡ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...