Homeಮುಖಪುಟಜಿಎಸ್‌ಟಿ ಬೆಂಬಲಿಸಿದ್ದು ನಾವು ಮಾಡಿದ ದೊಡ್ಡ ತಪ್ಪು: ಮಮತಾ ಬ್ಯಾನರ್ಜಿ

ಜಿಎಸ್‌ಟಿ ಬೆಂಬಲಿಸಿದ್ದು ನಾವು ಮಾಡಿದ ದೊಡ್ಡ ತಪ್ಪು: ಮಮತಾ ಬ್ಯಾನರ್ಜಿ

- Advertisement -
- Advertisement -

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅಂಗೀಕಾರವನ್ನು ಬೆಂಬಲಿಸುವ ನಿರ್ಧಾರವು ನಾವು ಮಾಡಿದ ದೊಡ್ಡ ತಪ್ಪು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ವಾಗ್ದಾಳಿ ನಡೆಸಿದರು.

”ಜಿಎಸ್‌ಟಿ ಬಂದರೆ ಎಲ್ಲ ರಾಜ್ಯಗಳಿಗೂ ಲಾಭವಾಗಬಹುದು ಎಂದು ಅದನ್ನು ಬೆಂಬಲಿಸಿದ್ದೆವು ಆದರೆ ಕೇಂದ್ರವು ಎಲ್ಲ ಹಣವನ್ನು ಕಸಿದುಕೊಳ್ಳುತ್ತಿದೆ. ಈಗ ಅವರು ಕೇಂದ್ರದಿಂದ ರಾಜ್ಯಗಳಿಗೆ ಬರಬೇಕಿದ್ದ ಎಲ್ಲಾ ಹಣವನ್ನು ಸ್ಥಗಿತಗೊಳಿಸಿದ್ದಾರೆ” ಎಂದು ಹೇಳಿದರು.

ಹಣಕಾಸು ಆಯೋಗವು ನಿರ್ಧರಿಸಿದ ಸೂತ್ರದ ಆಧಾರದ ಮೇಲೆ ಕೇಂದ್ರವು ರಾಜ್ಯಗಳಿಗೆ ಹಣವನ್ನು ವಿತರಿಸಬೇಕು. ಕೇಂದ್ರವು ಸಂಗ್ರಹಿಸುವ ಎಲ್ಲಾ ತೆರಿಗೆಗಳಲ್ಲಿ ಶೇಕಡಾ 41ರಷ್ಟು ಹಣವನ್ನು ರಾಜ್ಯಗಳಿಗೆ ನೀಡಬೇಕು ಎಂದು ಆಯೋಗವು ನಿರ್ಧರಿಸಿತ್ತು.

ಇದನ್ನೂ ಓದಿ: ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಟಿಎಂಸಿ ನಾಯಕರು ಪ್ರತ್ಯಕ್ಷ; ಕೇಂದ್ರದ ವಿರುದ್ಧ “ಕಪ್ಪು” ಬಟ್ಟೆ ಧರಿಸಿ ಪ್ರತಿಭಟನೆ

22 ಜಿಲ್ಲೆಗಳ 30,000 ಹಳ್ಳಿಗಳಲ್ಲಿ ಮುಂದಿನ ಐದು ತಿಂಗಳಲ್ಲಿ 12,000 ಕಿಲೋಮೀಟರ್‌ಗಿಂತಲೂ ಹೆಚ್ಚು ಗ್ರಾಮೀಣ ರಸ್ತೆಗಳನ್ನು ದುರಸ್ತಿ ಮಾಡುವ ಮತ್ತು ನಿರ್ಮಿಸುವ ಗುರಿ ಹೊಂದಿರುವ ಸರ್ಕಾರದ ಪಥಶ್ರೀ-ರಸ್ತೆಶ್ರೀ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಮತಾ ಬ್ಯಾನರ್ಜಿ ಅವರು ಮಾತನಾಡಿದ್ದಾರೆ.

2024ರ ಲೋಕಸಭಾ ಚುನಾವಣೆಗೆ ಮುನ್ನ ಮುಂದಿನ ತಿಂಗಳು ರಾಜ್ಯದಲ್ಲಿ ಪಂಚಾಯತ್ ಚುನಾವಣೆಯ ನಡೆಯಲಿದೆ. ಇದು ಎಲ್ಲಾ ರಾಜಕೀಯ ಪಕ್ಷಗಳಿಗೆ ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ. ಮುಖ್ಯಮಂತ್ರಿಗಳ ಕಚೇರಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮಗಳ ಸಂದರ್ಭದಲ್ಲಿ, ಹಳ್ಳಿಗಳ ರಸ್ತೆಗಳು ಕಳಪೆಯಾಗಿವೆ ಎನ್ನುವ ದೂರುಗಳೇ ಹೆಚ್ಚಾಗಿ ಬಂದಿವೆ.

ಹಾಗಾಗಿ ವಿವಿಧ ಕಲ್ಯಾಣ ಯೋಜನೆಗಳಿಗೆ ಕೇಂದ್ರದ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮಾರ್ಚ್ 29ರಿಂದ ಮಾರ್ಚ್ 30ರ ಸಂಜೆಯವರೆಗೆ ಕೋಲ್ಕತ್ತಾದ ಬಿಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಧರಣಿ ಪ್ರತಿಭಟನೆ ನಡೆಸುವುದಾಗಿ ಬ್ಯಾನರ್ಜಿ ಘೋಷಿಸಿದ್ದಾರೆ.

ಬುಧವಾರದಿಂದ ಧರಣಿ ಸತ್ಯಾಗ್ರಹ ನಡೆಸುತ್ತೇನೆ. ಕೇಂದ್ರದಿಂದ ಹಣ ಬಿಡುಗಡೆ ಮಾಡಬೇಕು. ಪ್ರಜಾಪ್ರಭುತ್ವವನ್ನು ಏಕೆ ಹತ್ತಿಕ್ಕಲಾಗುತ್ತಿದೆ ಎಂಬುದಕ್ಕೂ ಅವರು ಉತ್ತರಿಸಬೇಕಾಗಿದೆ ಎಂದು ಅವರು ಹೇಳಿದರು.

ಜುಲೈ 1, 2017 ರಂದು GST ಪ್ರಾರಂಭಿಸಲಾಯಿತು. ಆಗ ತೃಣಮೂಲ ಕಾಂಗ್ರೆಸ್ ಈ ಹೊಸ ತೆರಿಗೆ ಪದ್ಧತಿಯ ಪರಿಚಯವನ್ನು ಬೆಂಬಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...