Homeಮುಖಪುಟಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

’ರೈತರ ರ್‍ಯಾಲಿಯಿಂದಾಗಿ ನೀವು ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದ್ದೀರಿ. ನಿಮ್ಮ ಗಮನ/ಆದ್ಯತೆ ರೈತರ ಮೇಲೆ ಇಲ್ಲ, ಆದರೆ ನೀವು ಇಂಟರ್ನೆಟ್ ಮೊಬೈಲ್ ಅನ್ನು ಸ್ಥಗಿತ ಮಾಡಿದ್ದಿರಿ’ ಎಂದು ಸಕಾರಕ್ಕೆ ಸುಪ್ರಿಂಕೋರ್ಟ್ ಚಾಟಿ ಬೀಸಿದೆ.

- Advertisement -
- Advertisement -

ಜನರನ್ನು ಹಿಂಸಾಚಾರಕ್ಕೆ ಪ್ರೇರೇಪಿಸುವ ದೂರದರ್ಶನ ಕಾರ್ಯಕ್ರಮಗಳು ಮತ್ತು ಸುದ್ದಿಗಳನ್ನು ಸಕ್ರಿಯವಾಗಿ ನಿಯಂತ್ರಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು (ಗುರುವಾರ) ಸರ್ಕಾರಕ್ಕೆ ತಿಳಿಸಿದೆ. ಇದಕ್ಕೆ ಸಂಬಂಧಿಸಿದ ಕಾನೂನುಗಳನ್ನು ಬಿಗಿಗೊಳಿಸುವಂತೆ ಸೂಚಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪ್ರಚೋದನೆಯ ತಡೆಗಟ್ಟುವಿಕೆ ಒಂದು ಪ್ರಮುಖ ಭಾಗವಾಗಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಏನನ್ನೂ ಮಾಡಿಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಈ ವಿಷಯದ ಬಗ್ಗೆ ಹಲವಾರು ವಿವಾದಗಳು ಘಟಿಸಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಮಾತನ್ನು ಹೇಳಿದೆ.

“ನ್ಯಾಯಯುತ ಮತ್ತು ಸತ್ಯವಾದ ವರದಿಗಾರಿಕೆ ಒಂದು ಸಮಸ್ಯೆಯಲ್ಲ. ಇತರರನ್ನು ಕೆರಳಿಸುವ ರೀತಿಯಲ್ಲಿ ಅದನ್ನು ಯೋಜಿಸಿದಾಗ ಅದು ಒಂದು ಸಮಸ್ಯೆ” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ, ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನು ಒಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ರೈತ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ: ಹೆಚ್​.ಎಸ್​. ದೊರೆಸ್ವಾಮಿ

ಕಳೆದ ವರ್ಷ ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾಅತ್ ಸಭೆಯ ಕುರಿತ ಮಾಧ್ಯಮ ಪ್ರಸಾರಕ್ಕೆ ಸಂಬಂಧಿಸಿದಂತೆ ಜಮಿಯತ್ ಉಲೆಮಾ-ಐ-ಹಿಂದ್, ಪೀಸ್ ಪಾರ್ಟಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಾಲಯವು, ಸರ್ಕಾರ, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಬ್ರಾಡ್‌ಕಾಸ್ಟಿಂಗ್ ಅಸೋಸಿಯೇಷ್‌ನಗಳಿಗೆ ನೋಟಿಸ್ ನೀಡಿದೆ. ತಬ್ಲೀಘೀ ಜಮಾಅತ್‌ ಸಭೆಯನ್ನು ಮಾಧ್ಯಮಗಳ ಒಂದು ಭಾಗವು ಕೋಮುವಾದೀಕರಿಸಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

’ಇಂತಹ ಕೆಲವು ಸಂದರ್ಭಗಳಲ್ಲಿ ಪ್ರಸಾರವನ್ನು ನಿಲ್ಲಿಸಿದೆ’ ಎಂದು ಕೇಂದ್ರ ವಾದಿಸಿದಾಗ, ಮುಖ್ಯ ನ್ಯಾಯಮೂರ್ತಿ ಬೊಬ್ಡೆ, ’ಜನರನ್ನು ಪ್ರಚೋದಿಸುವ ಪರಿಣಾಮವನ್ನು ಹೊಂದಿರುವ ಕಾರ್ಯಕ್ರಮಗಳಿವೆ ಎಂಬುದು ನಿಜ. ನೀವು (ಸರ್ಕಾರ) ಇದರ ಬಗ್ಗೆ ಏನನ್ನೂ ಮಾಡುವುದಿಲ್ಲ. ಅದು ಎರಡೂ ರೀತಿಯಲ್ಲಿ ಸಂಭವಿಸಬಹುದು. ಪ್ರಚೋದನೆಯು ಎರಡೂ ಸಮುದಾಯದ ವಿರುದ್ಧವಾಗಿರಬಹುದು’ ಎಂದು ತಿಳಿಸಿದರು.

ಪ್ರತಿಭಟನಾಕಾರ ರೈತರು ನಡೆಸಿದ ಟ್ರ್ಯಾಕ್ಟರ್ ರ್‍ಯಾಲಿಯ ಹಿಂಸಾಚಾರದ ನಂತರ ಗಣರಾಜ್ಯೋತ್ಸವದಂದು ಇಂಟರ್ನೆಟ್ ಸ್ಥಗಿತಗೊಳಿಸಿದ ಬಗ್ಗೆ ಪ್ರಸ್ತಾಪಿಸಿದ ಮುಖ್ಯ ನ್ಯಾಯಮೂರ್ತಿ, “ರೈತರ ರ್‍ಯಾಲಿಯಿಂದಾಗಿ ನೀವು ಇಂಟರ್ನೆಟ್‌ ಅನ್ನು ಸ್ಥಗಿತಗೊಳಿಸಿದ್ದೀರಿ. ನಿಮ್ಮ ಗಮನ/ಆದ್ಯತೆ ರೈತರ ಮೇಲೆ ಇಲ್ಲ, ಆದರೆ ನೀವು ಇಂಟರ್ನೆಟ್ ಮೊಬೈಲ್ ಅನ್ನು ಸ್ಥಗಿತ ಮಾಡಿದ್ದಿರಿ. ಇವು ಎಲ್ಲೆಡೆ ಉದ್ಭವಿಸಬಹುದಾದ ಸಮಸ್ಯೆಗಳು” ಎಂದರು.

ಇದನ್ನೂ ಓದಿ: ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆಯನ್ನು ಸರ್ಕಾರ ಪರಿಷ್ಕರಿಸಬೇಕೆಂದು ನ್ಯಾಯಾಲಯ ಬಯಸಿದೆ ಎಂದು ನ್ಯಾಯಾಲಯ ಹೇಳಿದೆ. “ಕಾನೂನಿನಲ್ಲಿ ಕೇವಲ ಒಂದು ಸಾಲು ಸೇರಿಸುವುದರಿಂದ ಇದನ್ನು ಮಾಡಬಹುದು” ಎಂದು ನ್ಯಾಯಾಧೀಶರು ಹೇಳಿದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೆಲವು ಸಂದರ್ಭಗಳಲ್ಲಿ ಅಂತಹ ಟೆಲಿವಿಷನ್ ಚಾನೆಲ್ ವಿರುದ್ಧ ಕ್ರಮ ಕೈಗೊಂಡಿದ್ದು, ನ್ಯಾಯಾಲಯದ ಸಲಹೆಗಳನ್ನು ಸರ್ಕಾರಕ್ಕೆ ತಿಳಿಸುತ್ತೇವೆ ಎಂದರು.

“ಸರ್ಕಾರದ ಅಧಿಕಾರವನ್ನು ಎಷ್ಟು ಪ್ರಕರಣಗಳಲ್ಲಿ ಬಳಸಲಾಗಿದೆ ಎಂಬುದರ ಕುರಿತು ನಾವು ವಿವರಗಳನ್ನು ನೀಡಬಹುದು. ಆದರೆ ಲೈವ್ ಚಾಟ್ ಶೋನಲ್ಲಿ ಯಾವುದೇ ನಿಯಂತ್ರಣವಿಲ್ಲ, ಯಾರಾದರೂ ಪ್ರಚೋದನತ್ಮಕವಾಗಿ ಮಾತನಾಡಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಒಂದು ತಂಡ ರಚಿಸಲಾಗಿದೆ, ಇದು ಮೇಲ್ವಿಚಾರಣೆ ನಡೆಸುತ್ತಿದೆ ಮತ್ತು ಕ್ರಮ ಕೈಗೊಂಡಿದೆ, ಕೆಲವು ಸಂದರ್ಭಗಳಲ್ಲಿ ನಾವು ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಪ್ರಸಾರವನ್ನು ನಿಲ್ಲಿಸಿದ್ದೇವೆ “ಎಂದು ತುಷಾರ್ ಮೆಹ್ತಾ ಹೇಳಿದರು.

ಇದನ್ನೂ ಓದಿ: ’ಮೋದಿಯೊಂದಿಗೆ ಯುವಶಕ್ತಿ’ ಹ್ಯಾಶ್‌ಟ್ಯಾಗ್‌ ಟ್ರೆಂಡ್‌‌ ಮಾಡುವಂತೆ ವಿವಿಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...