Homeಮುಖಪುಟಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

’ರೈತರ ರ್‍ಯಾಲಿಯಿಂದಾಗಿ ನೀವು ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದ್ದೀರಿ. ನಿಮ್ಮ ಗಮನ/ಆದ್ಯತೆ ರೈತರ ಮೇಲೆ ಇಲ್ಲ, ಆದರೆ ನೀವು ಇಂಟರ್ನೆಟ್ ಮೊಬೈಲ್ ಅನ್ನು ಸ್ಥಗಿತ ಮಾಡಿದ್ದಿರಿ’ ಎಂದು ಸಕಾರಕ್ಕೆ ಸುಪ್ರಿಂಕೋರ್ಟ್ ಚಾಟಿ ಬೀಸಿದೆ.

- Advertisement -
- Advertisement -

ಜನರನ್ನು ಹಿಂಸಾಚಾರಕ್ಕೆ ಪ್ರೇರೇಪಿಸುವ ದೂರದರ್ಶನ ಕಾರ್ಯಕ್ರಮಗಳು ಮತ್ತು ಸುದ್ದಿಗಳನ್ನು ಸಕ್ರಿಯವಾಗಿ ನಿಯಂತ್ರಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು (ಗುರುವಾರ) ಸರ್ಕಾರಕ್ಕೆ ತಿಳಿಸಿದೆ. ಇದಕ್ಕೆ ಸಂಬಂಧಿಸಿದ ಕಾನೂನುಗಳನ್ನು ಬಿಗಿಗೊಳಿಸುವಂತೆ ಸೂಚಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪ್ರಚೋದನೆಯ ತಡೆಗಟ್ಟುವಿಕೆ ಒಂದು ಪ್ರಮುಖ ಭಾಗವಾಗಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಏನನ್ನೂ ಮಾಡಿಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಈ ವಿಷಯದ ಬಗ್ಗೆ ಹಲವಾರು ವಿವಾದಗಳು ಘಟಿಸಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಮಾತನ್ನು ಹೇಳಿದೆ.

“ನ್ಯಾಯಯುತ ಮತ್ತು ಸತ್ಯವಾದ ವರದಿಗಾರಿಕೆ ಒಂದು ಸಮಸ್ಯೆಯಲ್ಲ. ಇತರರನ್ನು ಕೆರಳಿಸುವ ರೀತಿಯಲ್ಲಿ ಅದನ್ನು ಯೋಜಿಸಿದಾಗ ಅದು ಒಂದು ಸಮಸ್ಯೆ” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ, ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನು ಒಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ರೈತ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ: ಹೆಚ್​.ಎಸ್​. ದೊರೆಸ್ವಾಮಿ

ಕಳೆದ ವರ್ಷ ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾಅತ್ ಸಭೆಯ ಕುರಿತ ಮಾಧ್ಯಮ ಪ್ರಸಾರಕ್ಕೆ ಸಂಬಂಧಿಸಿದಂತೆ ಜಮಿಯತ್ ಉಲೆಮಾ-ಐ-ಹಿಂದ್, ಪೀಸ್ ಪಾರ್ಟಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಾಲಯವು, ಸರ್ಕಾರ, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಬ್ರಾಡ್‌ಕಾಸ್ಟಿಂಗ್ ಅಸೋಸಿಯೇಷ್‌ನಗಳಿಗೆ ನೋಟಿಸ್ ನೀಡಿದೆ. ತಬ್ಲೀಘೀ ಜಮಾಅತ್‌ ಸಭೆಯನ್ನು ಮಾಧ್ಯಮಗಳ ಒಂದು ಭಾಗವು ಕೋಮುವಾದೀಕರಿಸಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

’ಇಂತಹ ಕೆಲವು ಸಂದರ್ಭಗಳಲ್ಲಿ ಪ್ರಸಾರವನ್ನು ನಿಲ್ಲಿಸಿದೆ’ ಎಂದು ಕೇಂದ್ರ ವಾದಿಸಿದಾಗ, ಮುಖ್ಯ ನ್ಯಾಯಮೂರ್ತಿ ಬೊಬ್ಡೆ, ’ಜನರನ್ನು ಪ್ರಚೋದಿಸುವ ಪರಿಣಾಮವನ್ನು ಹೊಂದಿರುವ ಕಾರ್ಯಕ್ರಮಗಳಿವೆ ಎಂಬುದು ನಿಜ. ನೀವು (ಸರ್ಕಾರ) ಇದರ ಬಗ್ಗೆ ಏನನ್ನೂ ಮಾಡುವುದಿಲ್ಲ. ಅದು ಎರಡೂ ರೀತಿಯಲ್ಲಿ ಸಂಭವಿಸಬಹುದು. ಪ್ರಚೋದನೆಯು ಎರಡೂ ಸಮುದಾಯದ ವಿರುದ್ಧವಾಗಿರಬಹುದು’ ಎಂದು ತಿಳಿಸಿದರು.

ಪ್ರತಿಭಟನಾಕಾರ ರೈತರು ನಡೆಸಿದ ಟ್ರ್ಯಾಕ್ಟರ್ ರ್‍ಯಾಲಿಯ ಹಿಂಸಾಚಾರದ ನಂತರ ಗಣರಾಜ್ಯೋತ್ಸವದಂದು ಇಂಟರ್ನೆಟ್ ಸ್ಥಗಿತಗೊಳಿಸಿದ ಬಗ್ಗೆ ಪ್ರಸ್ತಾಪಿಸಿದ ಮುಖ್ಯ ನ್ಯಾಯಮೂರ್ತಿ, “ರೈತರ ರ್‍ಯಾಲಿಯಿಂದಾಗಿ ನೀವು ಇಂಟರ್ನೆಟ್‌ ಅನ್ನು ಸ್ಥಗಿತಗೊಳಿಸಿದ್ದೀರಿ. ನಿಮ್ಮ ಗಮನ/ಆದ್ಯತೆ ರೈತರ ಮೇಲೆ ಇಲ್ಲ, ಆದರೆ ನೀವು ಇಂಟರ್ನೆಟ್ ಮೊಬೈಲ್ ಅನ್ನು ಸ್ಥಗಿತ ಮಾಡಿದ್ದಿರಿ. ಇವು ಎಲ್ಲೆಡೆ ಉದ್ಭವಿಸಬಹುದಾದ ಸಮಸ್ಯೆಗಳು” ಎಂದರು.

ಇದನ್ನೂ ಓದಿ: ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆಯನ್ನು ಸರ್ಕಾರ ಪರಿಷ್ಕರಿಸಬೇಕೆಂದು ನ್ಯಾಯಾಲಯ ಬಯಸಿದೆ ಎಂದು ನ್ಯಾಯಾಲಯ ಹೇಳಿದೆ. “ಕಾನೂನಿನಲ್ಲಿ ಕೇವಲ ಒಂದು ಸಾಲು ಸೇರಿಸುವುದರಿಂದ ಇದನ್ನು ಮಾಡಬಹುದು” ಎಂದು ನ್ಯಾಯಾಧೀಶರು ಹೇಳಿದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೆಲವು ಸಂದರ್ಭಗಳಲ್ಲಿ ಅಂತಹ ಟೆಲಿವಿಷನ್ ಚಾನೆಲ್ ವಿರುದ್ಧ ಕ್ರಮ ಕೈಗೊಂಡಿದ್ದು, ನ್ಯಾಯಾಲಯದ ಸಲಹೆಗಳನ್ನು ಸರ್ಕಾರಕ್ಕೆ ತಿಳಿಸುತ್ತೇವೆ ಎಂದರು.

“ಸರ್ಕಾರದ ಅಧಿಕಾರವನ್ನು ಎಷ್ಟು ಪ್ರಕರಣಗಳಲ್ಲಿ ಬಳಸಲಾಗಿದೆ ಎಂಬುದರ ಕುರಿತು ನಾವು ವಿವರಗಳನ್ನು ನೀಡಬಹುದು. ಆದರೆ ಲೈವ್ ಚಾಟ್ ಶೋನಲ್ಲಿ ಯಾವುದೇ ನಿಯಂತ್ರಣವಿಲ್ಲ, ಯಾರಾದರೂ ಪ್ರಚೋದನತ್ಮಕವಾಗಿ ಮಾತನಾಡಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಒಂದು ತಂಡ ರಚಿಸಲಾಗಿದೆ, ಇದು ಮೇಲ್ವಿಚಾರಣೆ ನಡೆಸುತ್ತಿದೆ ಮತ್ತು ಕ್ರಮ ಕೈಗೊಂಡಿದೆ, ಕೆಲವು ಸಂದರ್ಭಗಳಲ್ಲಿ ನಾವು ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಪ್ರಸಾರವನ್ನು ನಿಲ್ಲಿಸಿದ್ದೇವೆ “ಎಂದು ತುಷಾರ್ ಮೆಹ್ತಾ ಹೇಳಿದರು.

ಇದನ್ನೂ ಓದಿ: ’ಮೋದಿಯೊಂದಿಗೆ ಯುವಶಕ್ತಿ’ ಹ್ಯಾಶ್‌ಟ್ಯಾಗ್‌ ಟ್ರೆಂಡ್‌‌ ಮಾಡುವಂತೆ ವಿವಿಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...