Homeಮುಖಪುಟಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

’ರೈತರ ರ್‍ಯಾಲಿಯಿಂದಾಗಿ ನೀವು ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದ್ದೀರಿ. ನಿಮ್ಮ ಗಮನ/ಆದ್ಯತೆ ರೈತರ ಮೇಲೆ ಇಲ್ಲ, ಆದರೆ ನೀವು ಇಂಟರ್ನೆಟ್ ಮೊಬೈಲ್ ಅನ್ನು ಸ್ಥಗಿತ ಮಾಡಿದ್ದಿರಿ’ ಎಂದು ಸಕಾರಕ್ಕೆ ಸುಪ್ರಿಂಕೋರ್ಟ್ ಚಾಟಿ ಬೀಸಿದೆ.

- Advertisement -
- Advertisement -

ಜನರನ್ನು ಹಿಂಸಾಚಾರಕ್ಕೆ ಪ್ರೇರೇಪಿಸುವ ದೂರದರ್ಶನ ಕಾರ್ಯಕ್ರಮಗಳು ಮತ್ತು ಸುದ್ದಿಗಳನ್ನು ಸಕ್ರಿಯವಾಗಿ ನಿಯಂತ್ರಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು (ಗುರುವಾರ) ಸರ್ಕಾರಕ್ಕೆ ತಿಳಿಸಿದೆ. ಇದಕ್ಕೆ ಸಂಬಂಧಿಸಿದ ಕಾನೂನುಗಳನ್ನು ಬಿಗಿಗೊಳಿಸುವಂತೆ ಸೂಚಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪ್ರಚೋದನೆಯ ತಡೆಗಟ್ಟುವಿಕೆ ಒಂದು ಪ್ರಮುಖ ಭಾಗವಾಗಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಏನನ್ನೂ ಮಾಡಿಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಈ ವಿಷಯದ ಬಗ್ಗೆ ಹಲವಾರು ವಿವಾದಗಳು ಘಟಿಸಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಮಾತನ್ನು ಹೇಳಿದೆ.

“ನ್ಯಾಯಯುತ ಮತ್ತು ಸತ್ಯವಾದ ವರದಿಗಾರಿಕೆ ಒಂದು ಸಮಸ್ಯೆಯಲ್ಲ. ಇತರರನ್ನು ಕೆರಳಿಸುವ ರೀತಿಯಲ್ಲಿ ಅದನ್ನು ಯೋಜಿಸಿದಾಗ ಅದು ಒಂದು ಸಮಸ್ಯೆ” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ, ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನು ಒಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ರೈತ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ: ಹೆಚ್​.ಎಸ್​. ದೊರೆಸ್ವಾಮಿ

ಕಳೆದ ವರ್ಷ ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾಅತ್ ಸಭೆಯ ಕುರಿತ ಮಾಧ್ಯಮ ಪ್ರಸಾರಕ್ಕೆ ಸಂಬಂಧಿಸಿದಂತೆ ಜಮಿಯತ್ ಉಲೆಮಾ-ಐ-ಹಿಂದ್, ಪೀಸ್ ಪಾರ್ಟಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಾಲಯವು, ಸರ್ಕಾರ, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಬ್ರಾಡ್‌ಕಾಸ್ಟಿಂಗ್ ಅಸೋಸಿಯೇಷ್‌ನಗಳಿಗೆ ನೋಟಿಸ್ ನೀಡಿದೆ. ತಬ್ಲೀಘೀ ಜಮಾಅತ್‌ ಸಭೆಯನ್ನು ಮಾಧ್ಯಮಗಳ ಒಂದು ಭಾಗವು ಕೋಮುವಾದೀಕರಿಸಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

’ಇಂತಹ ಕೆಲವು ಸಂದರ್ಭಗಳಲ್ಲಿ ಪ್ರಸಾರವನ್ನು ನಿಲ್ಲಿಸಿದೆ’ ಎಂದು ಕೇಂದ್ರ ವಾದಿಸಿದಾಗ, ಮುಖ್ಯ ನ್ಯಾಯಮೂರ್ತಿ ಬೊಬ್ಡೆ, ’ಜನರನ್ನು ಪ್ರಚೋದಿಸುವ ಪರಿಣಾಮವನ್ನು ಹೊಂದಿರುವ ಕಾರ್ಯಕ್ರಮಗಳಿವೆ ಎಂಬುದು ನಿಜ. ನೀವು (ಸರ್ಕಾರ) ಇದರ ಬಗ್ಗೆ ಏನನ್ನೂ ಮಾಡುವುದಿಲ್ಲ. ಅದು ಎರಡೂ ರೀತಿಯಲ್ಲಿ ಸಂಭವಿಸಬಹುದು. ಪ್ರಚೋದನೆಯು ಎರಡೂ ಸಮುದಾಯದ ವಿರುದ್ಧವಾಗಿರಬಹುದು’ ಎಂದು ತಿಳಿಸಿದರು.

ಪ್ರತಿಭಟನಾಕಾರ ರೈತರು ನಡೆಸಿದ ಟ್ರ್ಯಾಕ್ಟರ್ ರ್‍ಯಾಲಿಯ ಹಿಂಸಾಚಾರದ ನಂತರ ಗಣರಾಜ್ಯೋತ್ಸವದಂದು ಇಂಟರ್ನೆಟ್ ಸ್ಥಗಿತಗೊಳಿಸಿದ ಬಗ್ಗೆ ಪ್ರಸ್ತಾಪಿಸಿದ ಮುಖ್ಯ ನ್ಯಾಯಮೂರ್ತಿ, “ರೈತರ ರ್‍ಯಾಲಿಯಿಂದಾಗಿ ನೀವು ಇಂಟರ್ನೆಟ್‌ ಅನ್ನು ಸ್ಥಗಿತಗೊಳಿಸಿದ್ದೀರಿ. ನಿಮ್ಮ ಗಮನ/ಆದ್ಯತೆ ರೈತರ ಮೇಲೆ ಇಲ್ಲ, ಆದರೆ ನೀವು ಇಂಟರ್ನೆಟ್ ಮೊಬೈಲ್ ಅನ್ನು ಸ್ಥಗಿತ ಮಾಡಿದ್ದಿರಿ. ಇವು ಎಲ್ಲೆಡೆ ಉದ್ಭವಿಸಬಹುದಾದ ಸಮಸ್ಯೆಗಳು” ಎಂದರು.

ಇದನ್ನೂ ಓದಿ: ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆಯನ್ನು ಸರ್ಕಾರ ಪರಿಷ್ಕರಿಸಬೇಕೆಂದು ನ್ಯಾಯಾಲಯ ಬಯಸಿದೆ ಎಂದು ನ್ಯಾಯಾಲಯ ಹೇಳಿದೆ. “ಕಾನೂನಿನಲ್ಲಿ ಕೇವಲ ಒಂದು ಸಾಲು ಸೇರಿಸುವುದರಿಂದ ಇದನ್ನು ಮಾಡಬಹುದು” ಎಂದು ನ್ಯಾಯಾಧೀಶರು ಹೇಳಿದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೆಲವು ಸಂದರ್ಭಗಳಲ್ಲಿ ಅಂತಹ ಟೆಲಿವಿಷನ್ ಚಾನೆಲ್ ವಿರುದ್ಧ ಕ್ರಮ ಕೈಗೊಂಡಿದ್ದು, ನ್ಯಾಯಾಲಯದ ಸಲಹೆಗಳನ್ನು ಸರ್ಕಾರಕ್ಕೆ ತಿಳಿಸುತ್ತೇವೆ ಎಂದರು.

“ಸರ್ಕಾರದ ಅಧಿಕಾರವನ್ನು ಎಷ್ಟು ಪ್ರಕರಣಗಳಲ್ಲಿ ಬಳಸಲಾಗಿದೆ ಎಂಬುದರ ಕುರಿತು ನಾವು ವಿವರಗಳನ್ನು ನೀಡಬಹುದು. ಆದರೆ ಲೈವ್ ಚಾಟ್ ಶೋನಲ್ಲಿ ಯಾವುದೇ ನಿಯಂತ್ರಣವಿಲ್ಲ, ಯಾರಾದರೂ ಪ್ರಚೋದನತ್ಮಕವಾಗಿ ಮಾತನಾಡಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಒಂದು ತಂಡ ರಚಿಸಲಾಗಿದೆ, ಇದು ಮೇಲ್ವಿಚಾರಣೆ ನಡೆಸುತ್ತಿದೆ ಮತ್ತು ಕ್ರಮ ಕೈಗೊಂಡಿದೆ, ಕೆಲವು ಸಂದರ್ಭಗಳಲ್ಲಿ ನಾವು ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಪ್ರಸಾರವನ್ನು ನಿಲ್ಲಿಸಿದ್ದೇವೆ “ಎಂದು ತುಷಾರ್ ಮೆಹ್ತಾ ಹೇಳಿದರು.

ಇದನ್ನೂ ಓದಿ: ’ಮೋದಿಯೊಂದಿಗೆ ಯುವಶಕ್ತಿ’ ಹ್ಯಾಶ್‌ಟ್ಯಾಗ್‌ ಟ್ರೆಂಡ್‌‌ ಮಾಡುವಂತೆ ವಿವಿಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...