Homeಮುಖಪುಟಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

’ರೈತರ ರ್‍ಯಾಲಿಯಿಂದಾಗಿ ನೀವು ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದ್ದೀರಿ. ನಿಮ್ಮ ಗಮನ/ಆದ್ಯತೆ ರೈತರ ಮೇಲೆ ಇಲ್ಲ, ಆದರೆ ನೀವು ಇಂಟರ್ನೆಟ್ ಮೊಬೈಲ್ ಅನ್ನು ಸ್ಥಗಿತ ಮಾಡಿದ್ದಿರಿ’ ಎಂದು ಸಕಾರಕ್ಕೆ ಸುಪ್ರಿಂಕೋರ್ಟ್ ಚಾಟಿ ಬೀಸಿದೆ.

- Advertisement -
- Advertisement -

ಜನರನ್ನು ಹಿಂಸಾಚಾರಕ್ಕೆ ಪ್ರೇರೇಪಿಸುವ ದೂರದರ್ಶನ ಕಾರ್ಯಕ್ರಮಗಳು ಮತ್ತು ಸುದ್ದಿಗಳನ್ನು ಸಕ್ರಿಯವಾಗಿ ನಿಯಂತ್ರಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು (ಗುರುವಾರ) ಸರ್ಕಾರಕ್ಕೆ ತಿಳಿಸಿದೆ. ಇದಕ್ಕೆ ಸಂಬಂಧಿಸಿದ ಕಾನೂನುಗಳನ್ನು ಬಿಗಿಗೊಳಿಸುವಂತೆ ಸೂಚಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪ್ರಚೋದನೆಯ ತಡೆಗಟ್ಟುವಿಕೆ ಒಂದು ಪ್ರಮುಖ ಭಾಗವಾಗಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಏನನ್ನೂ ಮಾಡಿಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಈ ವಿಷಯದ ಬಗ್ಗೆ ಹಲವಾರು ವಿವಾದಗಳು ಘಟಿಸಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಮಾತನ್ನು ಹೇಳಿದೆ.

“ನ್ಯಾಯಯುತ ಮತ್ತು ಸತ್ಯವಾದ ವರದಿಗಾರಿಕೆ ಒಂದು ಸಮಸ್ಯೆಯಲ್ಲ. ಇತರರನ್ನು ಕೆರಳಿಸುವ ರೀತಿಯಲ್ಲಿ ಅದನ್ನು ಯೋಜಿಸಿದಾಗ ಅದು ಒಂದು ಸಮಸ್ಯೆ” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ, ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನು ಒಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ರೈತ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ: ಹೆಚ್​.ಎಸ್​. ದೊರೆಸ್ವಾಮಿ

ಕಳೆದ ವರ್ಷ ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾಅತ್ ಸಭೆಯ ಕುರಿತ ಮಾಧ್ಯಮ ಪ್ರಸಾರಕ್ಕೆ ಸಂಬಂಧಿಸಿದಂತೆ ಜಮಿಯತ್ ಉಲೆಮಾ-ಐ-ಹಿಂದ್, ಪೀಸ್ ಪಾರ್ಟಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಾಲಯವು, ಸರ್ಕಾರ, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಬ್ರಾಡ್‌ಕಾಸ್ಟಿಂಗ್ ಅಸೋಸಿಯೇಷ್‌ನಗಳಿಗೆ ನೋಟಿಸ್ ನೀಡಿದೆ. ತಬ್ಲೀಘೀ ಜಮಾಅತ್‌ ಸಭೆಯನ್ನು ಮಾಧ್ಯಮಗಳ ಒಂದು ಭಾಗವು ಕೋಮುವಾದೀಕರಿಸಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

’ಇಂತಹ ಕೆಲವು ಸಂದರ್ಭಗಳಲ್ಲಿ ಪ್ರಸಾರವನ್ನು ನಿಲ್ಲಿಸಿದೆ’ ಎಂದು ಕೇಂದ್ರ ವಾದಿಸಿದಾಗ, ಮುಖ್ಯ ನ್ಯಾಯಮೂರ್ತಿ ಬೊಬ್ಡೆ, ’ಜನರನ್ನು ಪ್ರಚೋದಿಸುವ ಪರಿಣಾಮವನ್ನು ಹೊಂದಿರುವ ಕಾರ್ಯಕ್ರಮಗಳಿವೆ ಎಂಬುದು ನಿಜ. ನೀವು (ಸರ್ಕಾರ) ಇದರ ಬಗ್ಗೆ ಏನನ್ನೂ ಮಾಡುವುದಿಲ್ಲ. ಅದು ಎರಡೂ ರೀತಿಯಲ್ಲಿ ಸಂಭವಿಸಬಹುದು. ಪ್ರಚೋದನೆಯು ಎರಡೂ ಸಮುದಾಯದ ವಿರುದ್ಧವಾಗಿರಬಹುದು’ ಎಂದು ತಿಳಿಸಿದರು.

ಪ್ರತಿಭಟನಾಕಾರ ರೈತರು ನಡೆಸಿದ ಟ್ರ್ಯಾಕ್ಟರ್ ರ್‍ಯಾಲಿಯ ಹಿಂಸಾಚಾರದ ನಂತರ ಗಣರಾಜ್ಯೋತ್ಸವದಂದು ಇಂಟರ್ನೆಟ್ ಸ್ಥಗಿತಗೊಳಿಸಿದ ಬಗ್ಗೆ ಪ್ರಸ್ತಾಪಿಸಿದ ಮುಖ್ಯ ನ್ಯಾಯಮೂರ್ತಿ, “ರೈತರ ರ್‍ಯಾಲಿಯಿಂದಾಗಿ ನೀವು ಇಂಟರ್ನೆಟ್‌ ಅನ್ನು ಸ್ಥಗಿತಗೊಳಿಸಿದ್ದೀರಿ. ನಿಮ್ಮ ಗಮನ/ಆದ್ಯತೆ ರೈತರ ಮೇಲೆ ಇಲ್ಲ, ಆದರೆ ನೀವು ಇಂಟರ್ನೆಟ್ ಮೊಬೈಲ್ ಅನ್ನು ಸ್ಥಗಿತ ಮಾಡಿದ್ದಿರಿ. ಇವು ಎಲ್ಲೆಡೆ ಉದ್ಭವಿಸಬಹುದಾದ ಸಮಸ್ಯೆಗಳು” ಎಂದರು.

ಇದನ್ನೂ ಓದಿ: ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆಯನ್ನು ಸರ್ಕಾರ ಪರಿಷ್ಕರಿಸಬೇಕೆಂದು ನ್ಯಾಯಾಲಯ ಬಯಸಿದೆ ಎಂದು ನ್ಯಾಯಾಲಯ ಹೇಳಿದೆ. “ಕಾನೂನಿನಲ್ಲಿ ಕೇವಲ ಒಂದು ಸಾಲು ಸೇರಿಸುವುದರಿಂದ ಇದನ್ನು ಮಾಡಬಹುದು” ಎಂದು ನ್ಯಾಯಾಧೀಶರು ಹೇಳಿದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೆಲವು ಸಂದರ್ಭಗಳಲ್ಲಿ ಅಂತಹ ಟೆಲಿವಿಷನ್ ಚಾನೆಲ್ ವಿರುದ್ಧ ಕ್ರಮ ಕೈಗೊಂಡಿದ್ದು, ನ್ಯಾಯಾಲಯದ ಸಲಹೆಗಳನ್ನು ಸರ್ಕಾರಕ್ಕೆ ತಿಳಿಸುತ್ತೇವೆ ಎಂದರು.

“ಸರ್ಕಾರದ ಅಧಿಕಾರವನ್ನು ಎಷ್ಟು ಪ್ರಕರಣಗಳಲ್ಲಿ ಬಳಸಲಾಗಿದೆ ಎಂಬುದರ ಕುರಿತು ನಾವು ವಿವರಗಳನ್ನು ನೀಡಬಹುದು. ಆದರೆ ಲೈವ್ ಚಾಟ್ ಶೋನಲ್ಲಿ ಯಾವುದೇ ನಿಯಂತ್ರಣವಿಲ್ಲ, ಯಾರಾದರೂ ಪ್ರಚೋದನತ್ಮಕವಾಗಿ ಮಾತನಾಡಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಒಂದು ತಂಡ ರಚಿಸಲಾಗಿದೆ, ಇದು ಮೇಲ್ವಿಚಾರಣೆ ನಡೆಸುತ್ತಿದೆ ಮತ್ತು ಕ್ರಮ ಕೈಗೊಂಡಿದೆ, ಕೆಲವು ಸಂದರ್ಭಗಳಲ್ಲಿ ನಾವು ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಪ್ರಸಾರವನ್ನು ನಿಲ್ಲಿಸಿದ್ದೇವೆ “ಎಂದು ತುಷಾರ್ ಮೆಹ್ತಾ ಹೇಳಿದರು.

ಇದನ್ನೂ ಓದಿ: ’ಮೋದಿಯೊಂದಿಗೆ ಯುವಶಕ್ತಿ’ ಹ್ಯಾಶ್‌ಟ್ಯಾಗ್‌ ಟ್ರೆಂಡ್‌‌ ಮಾಡುವಂತೆ ವಿವಿಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...