Homeಅಂತರಾಷ್ಟ್ರೀಯರಫೇಲ್ ರಾದ್ಧಾಂತ: ಮೋದಿ ಭವಿಷ್ಯದ ಮೇಲೆ `ಸುಪ್ರೀಂ' ಹೊಸ ತೀರ್ಪಿನ ಪರಿಣಾಮ ಹೇಗಿರಲಿದೆ ಗೊತ್ತಾ?

ರಫೇಲ್ ರಾದ್ಧಾಂತ: ಮೋದಿ ಭವಿಷ್ಯದ ಮೇಲೆ `ಸುಪ್ರೀಂ’ ಹೊಸ ತೀರ್ಪಿನ ಪರಿಣಾಮ ಹೇಗಿರಲಿದೆ ಗೊತ್ತಾ?

- Advertisement -
- Advertisement -
| ಗಿರೀಶ್ ತಾಳಿಕಟ್ಟೆ |
ಸುಪ್ರೀಂ ಕೋರ್ಟ್ ರಫೇಲ್ ವ್ಯವಹಾರದ ಕುರಿತು ಮಹತ್ವದ ತೀರ್ಪು ಹೊರಹಾಕಿದೆ. ತಮ್ಮನ್ನು ನೇರ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವಷ್ಟು ಸಮರ್ಥವಾಗಿರುವ, ಯಾವ ದಾಖಲೆಗಳ ವಿರುದ್ಧ ಕೇಂದ್ರ ಸರ್ಕಾರ ತನ್ನ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಮೂಲಕ ‘ಕದ್ದ ದಾಖಲೆ’ಗಳು ಎಂದು ಆರೋಪಿಸಿತ್ತೊ ಆ ಮೂರೂ ದಾಖಲೆಗಳನ್ನು ಸರ್ವೋಚ್ಛ ನ್ಯಾಯಾಲಯ ಗಂಭೀರ ‘ಸಾಕ್ಷ್ಯ’ಗಳಾಗಿ ಪರಿಗಣಿಸಲು ನಿರ್ಧರಿಸಿದೆ. ಇದರಿಂದಾಗಿ 2018ರ ಡಿಸೆಂಬರ್ 14ರಂದು ‘ಮುಚ್ಚಿದ ಲಕೋಟೆ’ಯೊಳಗಿನ ಮಾಹಿತಿಯನ್ನು ಆಧರಿಸಿ ತಾನೇ, ಕೇಂದ್ರ ಸರ್ಕಾರಕ್ಕೆ ಕ್ಲೀನ್‌ಚಿಟ್ ನೀಡಿದ್ದ ರಫೇಲ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮತ್ತೆ ವಿಚಾರಣೆಗೆತ್ತಿಕೊಳ್ಳಲು ಮುಂದಾಗಿದೆ.

ಸಹಜವಾಗಿಯೇ ಇದು, ಸರ್ಕಾರಕ್ಕೆ ಮುಖ್ಯವಾಗಿ ನರೇಂದ್ರ ಮೋದಿಯವರಿಗೆ ಎರಡು ಕಾರಣಗಳಿಂದ ದೊಡ್ಡ ಹಿನ್ನಡೆ. ಮೊದಲನೆಯದು, ಕಾಂಗ್ರೆಸ್ ಮತ್ತು ದೂರುದಾರರು ಆರಂಭದಿಂದಲೂ ಆರೋಪಿಸುತ್ತಿರುವಂತೆ ದೇಶದ ಬೊಕ್ಕಸಕ್ಕೆ ಸುಮಾರು ಅರವತ್ತು ಸಾವಿರ ಕೋಟಿ ಲುಕ್ಸಾನು ಮಾಡಿದ ಈ ಹಗರಣದಲ್ಲಿ ಮೋದಿಯವರ ಕೈವಾಡ ಸಾಬೀತಾದರೆ ಅವರು ವೈಯಕ್ತಿಕವಾಗಿ ನ್ಯಾಯಾಂಗದ ಸಂಕಟಕ್ಕೆ ಈಡಾಗಬೇಕಾಗುತ್ತದೆ. ಎರಡನೆಯದು, ಇದು ಸಾರ್ವತ್ರಿಕ ಚುನಾವಣೆ ಸಮಯವಾಗಿರೋದರಿಂದ ಇಂಥಾ ಸಂದರ್ಭದಲ್ಲಿ ಹೊರಬಿದ್ದಿರುವ ಈ ಸುಪ್ರೀಂ ತೀರ್ಪು ಬಿಜೆಪಿಯನ್ನು ಮುತ್ತಿರುವ ಗಂಭೀರ ಆರೋಪವೊಂದರ ಗುಮಾನಿಯನ್ನು ಜನರ ಮನಸ್ಸಲ್ಲಿ ಮತ್ತಷ್ಟು ದಟ್ಟವಾಗಿಸಲಿದೆ. ಇದು ಫಲಿತಾಂಶದ ಮೇಲೆ ಖಂಡಿತ ಪ್ರಭಾವ ಬೀರಬಲ್ಲದು. ಅದಕ್ಕಿಂತಲೂ ಮುಖ್ಯವಾಗಿ, ಈ ಚುನಾವಣೆಯಲ್ಲಿ ಸಾಕಷ್ಟು ಆತ್ಮವಿಶ್ವಾಸದ ಕೊರತೆ ಅನುಭವಿಸುತ್ತಿರುವ ಬಿಜೆಪಿ ವಲಯವನ್ನು ಇದು ಇನ್ನಷ್ಟು ಅಧೀರರನ್ನಾಗಿಸುವ ಸಾಧ್ಯತೆ ಇದೆ.

ಇದೇ ಏಪ್ರಿಲ್ 4ರಂದು, ಬಿಜೆಪಿಯ ಮಾತೃಭೂಮಿಯಾದ ನಾಗ್ಪುರದ ರ್ಯಾಲಿಯೊಂದರಲ್ಲಿ ಮಾತನಾಡುತ್ತಾ ಕಾಂಗ್ರೆಸ್‌ನ ರಾಹುಲ್ ಗಾಂಧಿಯವರು ‘ತಾವು ಅಧಿಕಾರಕ್ಕೆ ಬಂದದ್ದೇ ಆದಲ್ಲಿ, ರಫೇಲ್ ಹಗರಣವನ್ನು ವಿಚಾರಣೆಗೊಳಪಡಿಸಿ ಮೋದಿಯವರನ್ನು ಜೈಲಿಗೆ ಕಳಿಸುತ್ತೇವೆ’ ಎಂಬ ಹೇಳಿಕೆ ನೀಡಿದ್ದರು. ಇದಾದ ನಂತರ ಮೋದಿಯವರು ಹಲವು ಚುನಾವಣಾ ರ‍್ಯಾಲಿಗಳಲ್ಲಿ ಭಾಗವಹಿಸಿದ್ದಾರೆ. ಕರ್ನಾಟಕದ್ದೇ ನೆಲದಲ್ಲಿ ಭಾಷಣ ಮಾಡಿದ್ದಾರೆ. ಅಲ್ಲೆಲ್ಲ ತಮ್ಮ ಯಥಾ ಧಾಟಿಯ ಹಿಂದೂತ್ವ, ಪಾಕಿಸ್ತಾನ, ಭಯೋತ್ಪಾದನೆ, ಸೈನಿಕರು ಎಂಬ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆಯೇ ವಿನಾಃ ರಾಹುಲ್ ಮಾಡಿದ ಗಂಭೀರ ಸ್ಟೇಟ್‌ಮೆಂಟ್‌ಗೆ ತಿರುಗೇಟು ನೀಡಲಿಲ್ಲ. ಮೋದಿ ಮಾತ್ರವಲ್ಲ, ಬಿಜೆಪಿಯ ಯಾವ ನಾಯಕರೂ ತಮ್ಮ ಪರಮೋಚ್ಛ ನಾಯಕನನ್ನು ಜೈಲಿಗಟ್ಟುವ ಗಂಭೀರ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿಲ್ಲ. ಇನ್ನು ರಾಹುಲ್ ಹೇಳಿಕೆಯ ಮಾರನೇ ದಿನವೇ ಎಬಿಪಿ ನ್ಯೂಸ್ ಚಾನೆಲ್‌ಗೆ ಮೋದಿಯವರು ಒಂದು ಅಪರೂಪದ(!) ಸಂದರ್ಶನ ಕೊಟ್ಟರು. ಆ ಸಂದರ್ಶನದ ವೈಖರಿಯನ್ನು ಗಮನಿಸಿದವರು ಸಂದರ್ಶನದ ಪತ್ರಿಕೋದ್ಯಮ ಪ್ರಾಮಾಣಿಕತೆಯನ್ನೇ ಪ್ರಶ್ನಿಸುತ್ತಿದ್ದಾರಾದರು, ನೆಪಕ್ಕೂ ಸಹಾ ಅಲ್ಲಿ ರಫೇಲ್ ಪ್ರಶ್ನೆ, ರಾಹುಲ್ ಕಮೆಂಟ್ ನುಸುಳಲೇ ಇಲ್ಲ. ಇದರಿಂದ ಒಂದು ಅಂಶವಂತೂ ಸ್ಪಷ್ಟವಾಗುತ್ತದೆ, ಏನೆಂದರೆ ಈ ಚುನಾವಣೆಯ ಸಂದರ್ಭದಲ್ಲಿ ಯಾವ ಕಾರಣಕ್ಕೂ ರಫೇಲ್ ಚರ್ಚೆಯನ್ನು ಬೆಳೆಸದಿರಲು ಬಿಜೆಪಿ ದೃಢವಾಗಿ ನಿರ್ಧರಿಸಿದೆ. ಆರೋಪ-ಪ್ರತ್ಯಾರೋಪಗಳು ಮುಗಿಲುಮುಟ್ಟಬೇಕಾದ ಚುನಾವಣೆಯ ಹೊತ್ತಿನಲ್ಲಿ ಬಿಜೆಪಿ ರಫೇಲ್ ಚರ್ಚೆಯನ್ನು isolate ಮಾಡಲು ಯತ್ನಿಸುತ್ತಿರುವುದು ಯಾಕಿರಬಹುದು?
ಈ ಪ್ರಕರಣವನ್ನು ಸಿಬಿಐ ಮತ್ತು ನ್ಯಾಯಾಲಯದ ಕಟಕಟೆಗೆ ಒಯ್ದಿರುವ ಬಿಜೆಪಿಯ ಹಿರಿಯ ನಾಯಕರುಗಳಾದ ಯಶವಂತ್ ಸಿನ್ಹಾ, ಅರುಣ್ ಶೌರಿ ಮತ್ತು ಸುಪ್ರೀಂಕೋರ್ಟ್‌ನ ನ್ಯಾಯವಾದಿ ಪ್ರಶಾಂತ್ ಭೂಷಣ್ ಹಾಗೂ ರಫೇಲ್ ವ್ಯವಹಾರದ ಮೇಲೆಬಿದ್ದು ದಿನಕ್ಕೊಂದು ಅಚ್ಚರಿ ಹೊರಗೆಡವುತ್ತಿರುವ ‘ದಿ ಹಿಂದೂ’ ಪತ್ರಿಕೆಯ ಆತ್ಮವಿಶ್ವಾಸ ಮತ್ತು ಬದ್ಧತೆಯನ್ನು ಗಮನಿಸಿದರೆ ಪ್ರಧಾನಿಯವರು ಮತ್ತು ಅವರ ಆಪ್ತರು ಈ ಕೇಸಿನಲ್ಲಿ ಭಾಗಿಯಾಗಿರುವುದಕ್ಕೆ ಸಾಕಷ್ಟು ಸಮರ್ಥ ಪುರಾವೆಗಳನ್ನು ಒಟ್ಟಾಗಿಸಿಕೊಂಡೇ ಹೋರಾಟಕ್ಕಿಳಿದಂತೆ ಕಾಣುತ್ತಿದೆ. ರಕ್ಷಣಾ ಇಲಾಖೆಯ ಒಪ್ಪಂದದಕ್ಕು ಪ್ರಧಾನಿಯವರು ಹಸ್ತಕ್ಷೇಪ ಮಾಡಿದ್ದಾಗಲಿ, ಅನುಭವಿ ಎಚ್.ಎ.ಎಲ್. ಅನ್ನು ಹೊರಗಿಟ್ಟು ಆಗಷ್ಟೇ ಹುಟ್ಟಿಕೊಂಡ ಗೆಳೆಯ ಅನಿಲ್ ಅಂಬಾನಿಯ ರಿಲಾಯನ್ಸ್ ಏರೋಸ್ಟ್ರಕ್ಚರ್ ಲಿಮಿಟೆಡ್ ಕಂಪನಿಗೆ ಆಫ್‌ಸೆಟ್ ಪಾಲುದಾರನ ಸ್ಥಾನ ಸಿಗುವಂತೆ ಮಾಡಿದ್ದಾಗಲಿ, ತಂತ್ರಜ್ಞಾನ ಸಮೇತ 126 ಯುದ್ಧ ವಿಮಾನಗಳನ್ನು ತಲಾ ಅಂದಾಜು 550-600 ಕೋಟಿಗೆ ಖರೀದಿಸಲು ಯುಪಿಎ ಮಾಡಿಕೊಳ್ಳು ಅಂತಿಮಗೊಳಿಸಿದ್ದ ಒಪ್ಪಂದವನ್ನು ಏಕಪಕ್ಷೀಯವಾಗಿ ರದ್ದುಗೊಳಿಸಿ ಕೇವಲ 36 ವಿಮಾನಗಳನ್ನು ಅದೂ ತಂತ್ರಜ್ಞಾನವಿಲ್ಲದೆ ಮೂರುಪಟ್ಟು ಹೆಚ್ಚು ಹಣ ತೆತ್ತು ಕೊಂಡುಕೊಳ್ಳುವ ನಿರ್ಧಾರ ಪ್ರಕಟಿಸಿದ್ದಾಗಲಿ, ಫ್ರಾನ್ಸ್‌ನ ಡೆಸ್ಸಾಲ್ಟ್ ಕಂಪನಿಯಿಂದ ಬ್ಯಾಂಕ್ ಖಾತ್ರಿ ಅಥವಾ ಆ ದೇಶದ ‘ಸಾವರೀನ್ ಗ್ಯಾರಂಟಿ’ಯನ್ನೂ ಪಡೆದುಕೊಳ್ಳದೆ ದೇಶದ ಬೊಕ್ಕಸಕ್ಕೆ ಲುಕ್ಸಾನು ಮಾಡಿದ್ದಾಗಲಿ…. ಹೀಗೆ ಯಾವಯಾವ ಆರೋಪಗಳನ್ನು ದೂರುದಾರರು ಲಿಖಿತ ರೂಪದಲ್ಲಿ ದಾಖಲಿಸಿದ್ದಾರೊ ಅವುಗಳೆಲ್ಲವನ್ನೂ ಅವರು ದಾಖಲೆಸಹಿತ ಜನರ ಮುಂದಿಡುತ್ತಿದ್ದಾರೆ ಮತ್ತು ಅವೇ ದಾಖಲೆಗಳನ್ನು ನ್ಯಾಯಾಲಯಕ್ಕೂ ಸಲ್ಲಿಸಿದ್ದಾರೆ. ಹಾಗಾಗಿ ರಫೇಲ್ ಹಗರಣದ ಆರೋಪ ಗಾಳಿಯಲ್ಲಿ ಕಲ್ಲು ಎಸೆದಂತ ಒಂದು ಬೇಕಾರ್ ಆರೋಪವಾಗಿರದೆ ಒಂದು ವ್ಯವಸ್ಥಿತ ಆರೋಪವಾಗಿದೆ. ಇದು ಬಿಜೆಪಿಗೆ ಮನದಟ್ಟಾಗಿರುವುದರಿಂದಲೇ, ಚರ್ಚೆ ಬೆಳೆಸಿ ಖೆಡ್ಡಾಕ್ಕೆ ಬೀಳುವ ಬದಲು, ಆ ಬಗ್ಗೆ ಬರುವ ಎಂಥದೇ ಗಂಭೀರ ಹೇಳಿಕೆಗೂ ಪ್ರತ್ಯುತ್ತರ ನೀಡಬಾರದು ಎಂದು ಬಿಜೆಪಿ ನಿರ್ಧರಿಸಿಕೊಂಡಿದೆಯಾ ಎಂಬ ಅನುಮಾನ ಖಂಡಿತ ಕಾಡುತ್ತದೆ.
ಕೇವಲ ನ್ಯಾಯಾಲಯದ ಅಂಗಳದ ಹೋರಾಟ ಮಾತ್ರವಾಗಿರದೆ ‘ರಫೇಲ್’ ಜನರ ನಡುವಿನ ಟ್ರೆಂಡಿಂಗ್ ಚರ್ಚೆಯಾಗಿ ಬೆಳೆದಿರುವುದು ಸಹಾ ಬಿಜೆಪಿಯನ್ನು ಕಂಗಾಲು ಮಾಡಿರಲಿಕ್ಕೆ ಸಾಕು. ರಾಜಸ್ಥಾನದ ಪೋಖ್ರಾನ್‌ನಲ್ಲಿ ರಾಹುಲ್ ಗಾಂಧಿಯವರು ರಫೇಲ್ ಹಗರಣವನ್ನು ಪರಿಗಣಿಸಿ ಮೊದಲ ಬಾರಿ ಉಲ್ಲೇಖಿಸಿದ ‘ಚೌಕಿದಾರ್ ಚೋರ್ ಹೈ’ ಸ್ಲೋಗನ್ ಯಾವ ಪರಿ ಜನರ ನಡುವೆ ವ್ಯಾಪಿಸಿದೆಯೆಂದರೆ, ಇದನ್ನು ಮಟ್ಟಹಾಕುವುದಕ್ಕೆಂದೇ ವ್ಯಾಪಕ ಐಟಿ ಜಾಲ ಮತ್ತು ಪೇಯ್ಡ್ ಮೀಡಿಯಾಗಳ ನೆರವಿನಿಂದ ಮೋದಿಯವರು ಕರೆಕೊಟ್ಟ ‘ಮೈ ಭೀ ಚೌಕಿದಾರ್’ ಅಭಿಯಾನ ಕೂಡಾ ಬಿಜೆಪಿ ಮತ್ತು ಸಂಘ ಪರಿವಾರದ ವ್ಯಾಪ್ತಿ ಬಿಟ್ಟು ಹೊರಬರಲಿಲ್ಲ. ಸ್ವತಃ ಬಿಜೆಪಿಯ ಸುಬ್ರಹ್ಮಣಿಯನ್ ಸ್ವಾಮಿಯೇ ‘ನಾನು ಬ್ರಾಹ್ಮಣ. ಚೌಕಿದಾರನಾಗುವುದಿಲ್ಲ’ ಎಂದದ್ದು ಮೋದಿಯವರ ಅಭಿಯಾನಕ್ಕೆ ದೊಡ್ಡ ಹಿನ್ನಡೆ ಮಾತ್ರವಲ್ಲ, ಆ ಅಭಿಯಾನದ ಯಶಸಿನ ಮಿತಿಯನ್ನೂ ತೋರಿಸುವಂತಿತ್ತು. ಇದಕ್ಕೆ ಪ್ರತಿಯಾಗಿ ‘ಚೌಕಿದಾರ್ ಚೋರ್ ಹೈ’ ಕೂಗು ಈಗ ನಡೆಯುತ್ತಿರುವ ಐಪಿಎಲ್ ಕ್ರೀಡಾಂಗಣಗಳಲ್ಲೂ ಮೊಳಗುತ್ತಿದೆ. ಈ ಎಲ್ಲಾ ಕಾರಣಗಳಿಂದ ರಫೇಲ್ ಚರ್ಚೆಯಿಂದ ಬಿಜೆಪಿ ದೂರವುಳಿಯಲು ಯತ್ನಿಸುತ್ತಿರುವಂತಿದೆ.
ಆದರೆ ಸುಪ್ರೀಂ ಕೋರ್ಟ್‌ನ ಹೊಸ ತೀರ್ಪು ಆ ರಫೇಲ್ ವಿವಾದವನ್ನು ಚುನಾವಣೆಯ ನಡುವೆ ಚರ್ಚೆಗೆ ತರಲು ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ಚುನಾವಣಾ ರಾಜಕಾರಣದಲ್ಲಿ ಮೋದಿವರಿಗೆ ಮತ್ತು ಬಿಜೆಪಿಗೆ ದೊಡ್ಡ ಏಟನ್ನೇ ನೀಡಲಿದೆ.
ಸಿಜೆಐ ರಂಜನ್ ಗೊಗಾಯ್, ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಸಂಜಯ್ ಕಿಶನ್ ಕೌಲ್ ಅವರಿರುವ ತ್ರಿಸದಸ್ಯ ಪೀಠವು ಸರ್ಕಾರದ ಆಕ್ಷೇಪಣೆಯನ್ನು ಪಕ್ಕಕ್ಕೆ ತಳ್ಳಿ, ದೂರುದಾರರು ಸಲ್ಲಿಸಿರುವ ದಾಖಲೆಗಳ ಮೇಲೆ ವಿಚಾರಣೆ ನಡೆಸಲು ನಿರ್ಧರಿಸಿರುವುದರಿಂದ ವೈಯಕ್ತಿಕವಾಗಿ ಮೋದಿಯವರ ಸಂಕಟ ಮತ್ತಷ್ಟು ಹೆಚ್ಚಾಗಿದೆ.
ಇಲ್ಲೊಂದು ವಿಚಾರವನ್ನು ನಾವು ಗಮನಿಸಲೇಬೇಕು, 2019ರ ಈ ಚುನಾವಣೆ ಯಾರು ಪ್ರಧಾನಿಯಾಗುತ್ತಾರೆ ಎಂಬುದನ್ನು ನಿರ್ಧರಿಸುವುದಕ್ಕಿಂತಲೂ ಹೆಚ್ಚಾಗಿ, ಫಲಿತಾಂಶದ ನಂತರ ಮೋದಿ ಎಷ್ಟು ಪ್ರಭಾವಿಯಾಗಿ ಉಳಿಯುತ್ತಾರೆ, ರಾಜಕೀಯವಾಗಿ ಎಷ್ಟು ದುರ್ಬಲರಾಗುತ್ತಾರೆ ಎಂಬುದನ್ನು ನಿರ್ಧರಿಸುವ ಮಾನದಂಡವಾಗಿದೆ. ಪ್ರಸ್ತುತ ಸರ್ಕಾರದ ವಿರುದ್ಧ ಜನರ ಮನದಲ್ಲಿ ಆಡಳಿತವಿರೋಧಿ ಅಲೆ ಇದ್ದಾಗ್ಯೂ, ಕಾಂಗ್ರೆಸ್ ಪಕ್ಷವಾಗಲಿ ಅಥವಾ ಅದರ ಯುಪಿಎ ಸಂರಚನೆಯಾಗಲಿ ಅಥವಾ ತೃತೀಯ ಶಕ್ತಿಗಳಾಗಲಿ ಎನ್‌ಡಿಎ ಕೂಟವನ್ನು ಓವರ್‌ಟೇಕ್ ಮಾಡಿಬಿಡುವಂತ ರಾಜಕೀಯ ಸನ್ನಿವೇಶ ಸದ್ಯದಲ್ಲಿ ಇಲ್ಲ. ಎನ್‌ಡಿಎ ದೊಡ್ಡ ಮೈತ್ರಿಕೂಟವಾಗಿ ಹೊರಹೊಮ್ಮಿದರೂ ಇತರೆ ಸಣ್ಣಪುಟ್ಟ ಪ್ರಾದೇಶಿಕ ಪಕ್ಷಗಳ (ಎನ್‌ಡಿಯ ಮೈತ್ರಿಕೂಟದಲ್ಲಿಲ್ಲದ) ನೆರವಿನೊಂದಿಗೆ ಬಹು ಪ್ರಯಾಸದಿಂದ ಸರ್ಕಾರ ರಚಿಸಬೇಕಾದ ಸಾಧ್ಯತೆಯೇ ದಟ್ಟವಾಗಿ ಕಾಣುತ್ತಿದೆ. ಅಂಥಾ ಸಂದರ್ಭದಲ್ಲಿ ತಾನೇ ತಾನಾಗಿ ಸೃಷ್ಟಿಸಿಕೊಂಡಿರುವ ‘attitude nature’ನಿಂದ ಬಹುಪಾಲ ರಾಜಕೀಯ ನಾಯಕರಿಗೆ ಬೇಡವಾಗಿರುವ ಮೋದಿಯನ್ನು ಪಕ್ಕಕ್ಕೆ ಸರಿಸಲು ಪಕ್ಷದೊಳಗೇ ಇರುವ ಮೋದಿ-ವಿರೋಧಿಗಳಿಗೆ ಈ ರಫೇಲ್ ಹಗರಣ ಮತ್ತು ಸುಪ್ರೀಂ ಕೋರ್ಟ್‌ನ ಈ ತೀರ್ಪು ದೊಡ್ಡ ಅಸ್ತ್ರಗಳಾಗಿ ಬಳಕೆಯಾಗುವ ಸಾಧ್ಯತೆಯುಂಟು.
ಇನ್ನು ಕೊನೆಯದಾಗಿ, ಸುಪ್ರೀಂ ಕೋರ್ಟ್‌ನ ಈ ತೀರ್ಪಿನಿಂದಾಗಿ ವಿಚಾರಣೆ ದೂರುದಾರರ ಪರವಾಗಿಯೇ ಸಾಗಿ ಆರೋಪಿಗಳಿಗೆ ಶಿಕ್ಷೆ ಆಗಿಯೇ ಬಿಡುತ್ತೆ ಎಂಬ ಅತೀ-ಕಲ್ಪನೆಯೂ ಸಲ್ಲದು. ಯಾಕೆಂದರೆ ಬೋಫೋರ್ಸ್ ಹಗರಣದಿಂದ, ಬಾಬ್ರಿ ಮಸೀದಿ ಧ್ವಂಸದವರೆಗೆ ಈ ದೇಶ ಕಂಡ ಘನಘೋರ ಪ್ರಕರಣಗಳ ವಿಚಾರಣೆ ಸಾಗುತ್ತಿರುವ ವೇಗ ನೋಡಿದರೆ ಅಥವಾ ಜನರೇ ದಿಗ್ಭ್ರಮೆಗೊಳ್ಳುವಂಥಾ ಅಚಾನಕ್ ತೀರ್ಪುಗಳು ಹೊರಬಿದ್ದ ನಿದರ್ಶನಗಳನ್ನು ನೋಡಿದರೆ ಯಾವುದನ್ನೂ ಹೀಗೇ ಎಂದು ಊಹಿಸುವುದು ಕಷ್ಟ. ಆದರೆ ಒಂದಂತೂ ಸತ್ಯ, ಕಳೆದ ವರ್ಷ ಡಿಸೆಂಬರ್ 14ರಂದು ಇದೇ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ನೋಡಿ ನ್ಯಾಯಾಂಗದ ಮೇಲೆ ವಿಶ್ವಾಸವನ್ನೇ ಕಳೆದುಕೊಂಡಿದ್ದವರಿಗೆ ನ್ಯಾಯಾಂಗದ ಮೇಲೆ ಮತ್ತೆ ವಿಶ್ವಾಸ ಮೂಡಿದೆ, ಮುಖ್ಯವಾಗಿ ರಫೇಲ್ ದೂರುದಾರರ ಹುಮ್ಮಸ್ಸು ಎಷ್ಟರಮಟ್ಟಿಗೆ ಹೆಚ್ಚಾಗಿದೆಯೆಂದರೆ, ಈ ವಿಚಾರಣೆಯಲ್ಲೂ ತಮಗೆ ವ್ಯತಿರಕ್ತ ತೀರ್ಪು ಹೊರಬಂದರೂ, ಮತ್ತೊಮ್ಮೆ ಮೇಲ್ಮನವಿಗೆ ಹೋಗುವಷ್ಟು ಚೈತನ್ಯ ಅವರ ಮಾತುಗಳಲ್ಲಿ ಕಾಣುತ್ತಿದೆ. ಅಷ್ಟರಲ್ಲಾಗಲೆ, ಬಹುಶಃ ಅಧಿಕಾರದಿಂದ ದೂರವಾಗಿಸಲ್ಪಟ್ಟ ಅಥವಾ ದುರ್ಬಲ ಅಧಿಕಾರಸ್ಥನ ಸ್ಥಾನದಲ್ಲಿ ಪ್ರತಿಷ್ಟಾಪಿಸಲ್ಪಟ್ಟ ಮೋದಿಯವರ ಸಂಕಟದ ಅಸಲೀ ಕಾರಣಗಳಿರುವುದೇ ಅವರ ಆ ಚೈತನ್ಯಗಳಲ್ಲಿ!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...