Homeಕರ್ನಾಟಕಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ನಾಯಕರ ವಿರುದ್ಧದ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್‌ ತಡೆ

ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ನಾಯಕರ ವಿರುದ್ಧದ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್‌ ತಡೆ

- Advertisement -
- Advertisement -

ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್‌ ಇಂದು ತಡೆಯಾಜ್ಞೆ ವಿಧಿಸಿದೆ.

2022ರಲ್ಲಿ ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ ಎಸ್‌ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಸಿದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರಾದ ರಣದೀಪ್‌ ಸಿಂಗ್‌ ಸುರ್ಜೇವಾಲ, ರಾಮಲಿಂಗಾ ರೆಡ್ಡಿ, ಎಂ ಬಿ ಪಾಟೀಲ್‌ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ವಿಧಿಸಿದೆ.

ಹೃಷಿಕೇಶ್‌ ರಾಯ್‌ ಮತ್ತು ಪ್ರಶಾಂತ್‌ ಕುಮಾರ್‌ ಮಿಶ್ರಾ ನೇತೃತ್ವದ ಸುಪ್ರೀಂಕೋರ್ಟ್‌ ಪೀಠ, ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್‌ ನಾಯಕರ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್‌ ಹೊರಡಿಸಿದ ಆದೇಶದ ಬಗ್ಗೆ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

ಸಿದ್ದರಾಮಯ್ಯ ಪರ ವಕೀಲ ಡಾ ಅಭಿಷೇಕ್‌ ಮನು ಸಿಂಘ್ವಿ ಅವರು ಕೋರ್ಟ್‌ಗೆ ಹಾಜರಾಗಿದ್ದು, ಅದೊಂದು ರಾಜಕೀಯ ಪ್ರತಿಭಟನೆಯಾಗಿದ್ದು, ಅದಕ್ಕೆ ಕ್ರಿಮಿನಲ್‌ ಪ್ರಕರಣ ದಾಖಲಿಸುವುದು ಸಂವಿಧಾನದ ವಿಧಿ 19(1)(ಎ) ಅನ್ವಯ ಪ್ರತಿಭಟನೆಯ ಹಕ್ಕಿನ ಉಲ್ಲಂಘನೆಯಾಗಿದೆ. ಕ್ರಿಮಿನಲ್‌ ಉದ್ದೇಶವಿಲ್ಲದೆ ಶಾಂತಿಯುತವಾಗಿ ನಡೆಸಲಾದ ರಾಜಕೀಯ ಪ್ರತಿಭಟನೆಯನ್ನು ಹತ್ತಿಕ್ಕಲು ಶಿಕ್ಷಾರ್ಹ ನಿಬಂಧನೆಗಳನ್ನು ಬಳಸಬಾರದು ಎಂದು  ಕೋರ್ಟ್‌ ಗಮನಕ್ಕೆ ತಂದಿದ್ದರು.

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ 2022ರ ಎಪ್ರಿಲ್‌ 14ರಂದು ಅಂದಿನ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಹಿನ್ನೆಲೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಎಂ.ಬಿ‌. ಪಾಟೀಲ್, ರಾಮಲಿಂಗಾರೆಡ್ಡಿ, ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ​ ಕ್ರಿಮಿನಲ್‌ ಕೇಸ್ ದಾಖಲಿಸಲಾಗಿತ್ತು. ಸಿದ್ದರಾಮಯ್ಯ ಸಹಿತ 35ರಿಂದ 40 ಕಾಂಗ್ರೆಸ್‌ ಮುಖಂಡರಿದ್ದ ಗುಂಪು ಆಗಿನ ಸಚಿವ ಈಶ್ವರಪ್ಪ ಅವರ ನಿವಾಸದತ್ತ ಘೋಷಣೆಗಳನ್ನು ಕೂಗುತ್ತಾ ಸಾಗಿದ್ದರು.

ಸಂತೋಷ್‌ ಆತ್ಮಹತ್ಯೆ:

ಕಳೆದ ಬಿಜೆಪಿ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ಧ ಲಂಚ ಬೇಡಿಕೆ ಆರೋಪ ಮಾಡಿದ್ದ ಸರ್ಕಾರಿ ಕಾಮಗಾರಿಗಳ ಗುತ್ತಿಗೆದಾರ ಸಂತೋಷ ಕೆ. ಪಾಟೀಲ್‌ (37) ಉಡುಪಿಯ ಖಾಸಗಿ ಲಾಡ್ಜ್‌ ಒಂದರಲ್ಲಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ  ಮಾಡಿಕೊಂಡಿದ್ದರು. ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಈ ಘಟನೆ ನಡೆದಿದ್ದು, ತಮ್ಮ ಸಾವಿಗೆ ಸಚಿವ ಈಶ್ವರಪ್ಪ ನೇರ ಕಾರಣವೆಂದು ವಿವಿಧ ಮಾಧ್ಯಮ ಪ್ರತಿನಿಧಿಗಳಿಗೆ ಸಂತೋಷ್‌ ಕಳುಹಿಸಿದ ವಾಟ್ಸಾಫ್‌ ಮೆಸೇಜ್‌ ಬಯಲಾಗಿತ್ತು.

ಕಾಮಗಾರಿಯ ಹಣ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದಾಗ 40% ಕಮಿಷನ್‌ ಕೇಳುತ್ತಿದ್ದಾರೆ ಎಂದು  ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಪ್ರಧಾನಿ ಮೋದಿ ಹಾಗೂ ಇನ್ನಿತರೆ ಬಿಜೆಪಿ ವರಿಷ್ಠರಿಗೂ ಸಂತೋಷ್‌ ಪತ್ರ ಬರೆದಿದ್ದರು. ಘಟನೆ ಕರ್ನಾಟಕದ ಅಂದಿನ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರವನ್ನು ತರಿಸಿತ್ತು.

 ಇದನ್ನು ಓದಿ: ‘ಜೈ ಹಿಂದ್ ಟಿವಿ’ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ ಸೇಡು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...