Homeಮುಖಪುಟಸುಪ್ರೀಂ ನೇಮಿಸಿದ ಸಮಿತಿಯಲ್ಲಿನ ಸದಸ್ಯರೆಲ್ಲರೂ ಕೃಷಿ ಕಾಯ್ದೆ ಸಮರ್ಥಕರು!: ಭುಗಿಲೆದ್ದ ಆಕ್ರೋಶ

ಸುಪ್ರೀಂ ನೇಮಿಸಿದ ಸಮಿತಿಯಲ್ಲಿನ ಸದಸ್ಯರೆಲ್ಲರೂ ಕೃಷಿ ಕಾಯ್ದೆ ಸಮರ್ಥಕರು!: ಭುಗಿಲೆದ್ದ ಆಕ್ರೋಶ

- Advertisement -
- Advertisement -

ಕೃಷಿ ಕಾಯ್ದೆಗಳ ಜಾರಿಯನ್ನು ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ಅಮಾನತು ಮಾಡಿರುವ ಸುಪ್ರೀಂ ಕೋರ್ಟ್‌ ರೈತರ ಆಕ್ಷೇಪಗಳನ್ನು ಆಲಿಸಲು ನಾಲ್ವರ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಆದರೆ ಸಮಿತಿಯಲ್ಲಿನ ನಾಲ್ವರು ಸದಸ್ಯರು ಕೂಡ ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳ ಸಮರ್ಥಕರೆ ಆಗಿದ್ದಾರೆ. ಹಾಗಾಗಿ ಸಮಿತಿ ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಲು ಸಾಧ್ಯವಿಲ್ಲ ಎಂಬ ಆಕ್ರೋಶ ಕೇಳಿಬಂದಿದೆ.

ಸಮಿತಿಯಲ್ಲಿ ಭೂಪಿಂದರ್ ಸಿಂಗ್ ಮಾನ್, ಡಾ. ಪ್ರಮೋದ್ ಕುಮಾರ್ ಜೋಷಿ, ಅಶೋಕ್‌ ಗುಲಾಟಿ, ಮತ್ತು ಅನಿಲ್ ಘನ್ವತ್ ಇದ್ದು ಇವರೆಲ್ಲರೂ ಈಗಾಗಲೇ ಒಂದಲ್ಲ ಒಂದು ರೀತಿಯಲ್ಲಿ ಕಾಯ್ದೆಯ ಪರವಾಗಿರುವವರು ಎಂದು ಆರೋಪಿಸಲಾಗಿದೆ. ಇದಕ್ಕೆ ಆಧಾರವೆಂಬುವಂತೆ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವ ಇವರ ಹೇಳಿಕೆಗಳು, ಲೇಖನಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಮಿತಿಯ ಒಬ್ಬೊಬ್ಬರು ಕೃಷಿ ಕಾಯ್ದೆಗಳ ಕುರಿತು ಏನೇನು ಹೇಳಿದ್ದಾರೆ ಎಂಬುದನ್ನು ನೋಡೋಣ.

ಅಶೋಕ್ ಗುಲಾಟಿ

ಈ ಶಾಸನಗಳ ಆರ್ಥಿಕ ತಾರ್ಕಿಕತೆಯೆಂದರೆ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮತ್ತು ಖರೀದಿದಾರರಿಗೆ ಖರೀದಿಸಲು ಮತ್ತು ಸಂಗ್ರಹಿಸಲು ಹೆಚ್ಚಿನ ಆಯ್ಕೆ ಮತ್ತು ಸ್ವಾತಂತ್ರ್ಯವನ್ನು ಒದಗಿಸುವುದು, ಇದರಿಂದಾಗಿ ಕೃಷಿ ವ್ಯಾಪಾರೋದ್ಯಮದಲ್ಲಿ ಸ್ಪರ್ಧೆಯನ್ನು ಸೃಷ್ಟಿಸುತ್ತದೆ. ಈ ಸ್ಪರ್ಧೆಯು ಮಾರ್ಕೆಟಿಂಗ್ ವೆಚ್ಚವನ್ನು ಕಡಿಮೆ ಮಾಡುವುದರ ಮೂಲಕ, ಉತ್ತಮ ಬೆಲೆ ಆವಿಷ್ಕಾರವನ್ನು ಶಕ್ತಗೊಳಿಸುವ ಮೂಲಕ, ರೈತರಿಗೆ ಬೆಲೆ ಸಾಕ್ಷಾತ್ಕಾರವನ್ನು ಸುಧಾರಿಸುವ ಮೂಲಕ ಮತ್ತು ಅದೇ ಸಮಯದಲ್ಲಿ ಗ್ರಾಹಕರು ಪಾವತಿಸುವ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಕೃಷಿಯಲ್ಲಿ ಹೆಚ್ಚು ಪರಿಣಾಮಕಾರಿ ಮೌಲ್ಯ ಸರಪಳಿಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಅಶೋಕ್ ಗುಲಾಟಿಯವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಲೇಖನ ಬರೆದಿದ್ದಾರೆ. ಅದರಲ್ಲಿ ಅವರು ಪ್ರತಿಪಕ್ಷವು ದಾರಿ ತಪ್ಪಿದೆ ಆದರೆ ಸರ್ಕಾರವು ತನ್ನ ಕಾರ್ಯವನ್ನು ಒಟ್ಟುಗೂಡಿಸಬೇಕು ಎಂದು ಪ್ರತಿಪಾದಿಸಿದ್ದಾರೆ.

ಪ್ರಮೋದ್ ಕುಮಾರ್ ಜೋಷಿ

ನಿಜವಾದ ಬೇಡಿಕೆಗಳನ್ನು ಪರಿಗಣಿಸುವ ಬಗ್ಗೆ ಕೇಂದ್ರದ ಸಕಾರಾತ್ಮಕ ಪ್ರತಿಕ್ರಿಯೆಯ ಹೊರತಾಗಿಯೂ, ರೈತರ ಆಂದೋಲನವನ್ನು ಇನ್ನೂ ಬಗೆಹರಿಸಲಾಗಿಲ್ಲ ಎಂಬುದು ವಿಷಾದನೀಯ. ಪ್ರತಿ ಮಾತುಕತೆಗೆ ಮುಂಚಿತವಾಗಿ ರೈತರು ಗೋಲ್‌ಪೋಸ್ಟ್‌ಗಳನ್ನು ಬದಲಾಯಿಸುತ್ತಿರುವುದು ದುರದೃಷ್ಟಕರ. ಆರಂಭದಲ್ಲಿ, ರೈತರು ಮತ್ತು ರೈತ ಸಂಘಟನೆಗಳನ್ನು ಸಂಪರ್ಕಿಸದೆ ಕಾನೂನುಗಳನ್ನು ರೂಪಿಸಲಾಗಿದೆ ಎಂದು ಹೇಳಲಾಗಿತ್ತು; ಇದು ಅನ್ಯಾಯದ ಹಕ್ಕು. ಕೃಷಿ ಮಾರುಕಟ್ಟೆಗಳನ್ನು ಅನಿಯಂತ್ರಣಗೊಳಿಸುವ ವಿಷಯವು ಚರ್ಚೆಯಲ್ಲಿದೆ ಮತ್ತು ಕಳೆದ ಎರಡು ದಶಕಗಳಿಂದ ಚರ್ಚೆಯಾಗಿದೆ ಎಂದು ಪಿ.ಕೆ ಜೋಶಿಯವರು ಫೈನಾನ್ಷಿಯಲ್ ಎಕ್ಸ್‌ಪ್ರೆಸ್‌ಗೆ ಲೇಖನ ಬರೆದಿದ್ದಾರೆ.

ಭೂಪಿಂದರ್ ಸಿಂಗ್ ಮಾನ್

AIKCC ಎಂಬ ಒಕ್ಕೂಟದ ಅಧ್ಯಕ್ಷರಾದ ಇವರು 2020ರ ಡಿಸೆಂಬರ್‍ 14 ರಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ, ವಿರೋಧಗಳಿಗೆ ತಲೆಬಾಗಬೇಡಿ, ಕಾನೂನುಗಳನ್ನು ಜಾರಿಗೆ ತನ್ನಿ‌ ಎಂದು ಮನವಿ ಪತ್ರ ನೀಡಿದ್ದರು. ಅದರ ಸುದ್ದಿ ವರದಿ ಇಲ್ಲಿದೆ.

ಅನಿಲ್ ಘನ್ವತ್

ಮಹಾರಾಷ್ಟ್ರದ ಶೇತ್ಕಾರಿ ಸಂಘಟನ್‌ನ ಅಧ್ಯಕ್ಷರಾದ ಇವರು “ಸರ್ಕಾರವು ಕಾನೂನುಗಳ ಅನುಷ್ಠಾನವನ್ನು ನಿಲ್ಲಿಸಿ, ರೈತರೊಂದಿಗೆ ಚರ್ಚಿಸಿದ ನಂತರ ಅವುಗಳನ್ನು ತಿದ್ದುಪಡಿ ಮಾಡಬಹುದು. ಆದರೆ ರೈತರಿಗೆ ಅವಕಾಶಗಳನ್ನು ತೆರೆದಿರುವ ಈ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ಪ್ರತಿಪಾದಿಸಿದವರು. ಅದ ವರದಿ ಇಲ್ಲಿದೆ.

ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿದ ನಾಲ್ಕು ಸದಸ್ಯರ ಸಮಿಯಲ್ಲಿರುವ ಪ್ರಮೋದ್ ಜೋಶಿಯವರ ಈ ಕೃಷಿ ಮಸೂದೆ ಪರವಾದ ನಿಲುವುಗಳ ಈ ಲೇಖನ ನೋಡಿ. ಇನ್ನು ಅಶೋಕ್ ಗುಲಾಟಿ ಮಸೂದೆಗಳ ಪರ ಪುಂಖಾನಪುಂಖವಾಗಿ ಲೇಖನಗಳನ್ನು ಬರೆದಿದ್ದಾರೆ. ಇದು ಮೋದಿ ಸರಕಾರ ನೇಮಿಸಿದ ಸಮಿತಿ ಎಂದು ಬಿ.ಶ್ರೀಪಾದ್ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಸ್ಥಾಪಿಸಿರುವ ಕಮಿಟಿಯ ಸದಸ್ಯರನ್ನು ನೋಡಿ. ಭೂಪಿಂದರ್ ಸಿಂಗ್ ಮಾನ್ ತಿದ್ದುಪಡಿಗಳೊಂದಿಗೆ ಈ ಕಾಯಿದೆ ಒಪ್ಪಿಕೊಳ್ಳಲು ಸಿದ್ಧ ಅಂದಿದ್ದರು. ಅಶೋಕ್ ಗುಲಾಟಿ ನೋಟು ರದ್ಧತಿ ಮಹಾನ್ ಕ್ರಾಂತಿಕಾರಿ ಹೆಜ್ಜೆ ಎಂದು ಹಾಡಿ ಹೊಗಳಿದ್ದ ಆಸಾಮಿ. ಅನಿಲ್ ಘನ್ವತ್ ಈ ಕಾಯಿದೆಗಳನ್ನು ಬೆಂಬಲಿಸಿದ್ದರು. ಪಿಕೆ ಜೋಷಿ ವಿಶ್ವ ಬ್ಯಾಂಕಿನ ಅರ್ಥ ಶಾಸ್ತ್ರಜ್ಞ. ಅರ್ಥಾತ್ ಈ ಅಡುಗೆ ಚೌಕಿದಾರನೇ ಸಿದ್ಧಮಾಡಿ ಬೊಬ್ಡೆ ಮೂಲಕ ಸರ್ವ್ ಮಾಡಿರೋದು ಎಂಬುದರ ಬಗ್ಗೆ ಸಂಶಯ ಬೇಡ ಎಂದು ಸುರೇಶ್ ಕಂಜರ್ಪಣೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಖ್ಯಾತ ಯೂಟ್ಯೂಬರ್‍ ಧೃವ್ ರಾಠೀ ಟ್ವೀಟ್‌ ಮಾಡಿ “ಬಹಿರಂಗವಾಗಿ ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ನಾಲ್ಕು ವ್ಯಕ್ತಿಗಳನ್ನು ಸಮಿತಿಗೆ ಸುಪ್ರೀಂ ಕೋರ್ಟ್‌ ನೇಮಿಸಿದೆ. ಇದು ಹೇಗಿದೆಯೆಂದರೆ ವಿಶ್ವದ ಅತ್ಯುತ್ತಮ ಪ್ರಧಾನಿ ಯಾರೆಂದು ನಿರ್ಧರಿಸಲು ಸಂಬಿತ್ ಪಾತ್ರ, ಕಂಗನಾ ರಾಣಾವತ್, ಅರ್ನಾಬ್ ಗೋಸ್ವಾಮಿ ಮತ್ತು ರಜತ್ ಶರ್ಮಾರನ್ನು ನೇಮಿಸಿದಂತಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಈ ಎಲ್ಲಾ ಕಾರಣಗಳಿಗಾಗಿಯೇ ಹೋರಾಟನಿರತ ರೈತ ಮುಖಂಡರು ಸಮಿತಿ ರಚನೆಯನ್ನು ವಿರೋಧಿಸಿದ್ದರು. “ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ” ಎಂದು ನಿನ್ನೆಯೇ ಸ್ಪಷ್ಟಪಡಿಸಿದ್ದರು.


ಇದನ್ನೂ ಓದಿ: ಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತರ ಬಗ್ಗೆ ತಿಳಿದಿರುವವರ ಬಗ್ಗೆ – ಪುಸ್ತಕದ, ಬಾಟಲಿಯ ಬದನೆಕಾಯಿ ಮಂದಿ ಇಷ್ಟು ಬರೀತಾರಲ್ಲ !!? ನಿಮ್ಮ ಯೋಗ್ಯತೆಗೆ ಇಷ್ಟು ಬೆಂಕಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...