Homeಮುಖಪುಟಸುಪ್ರೀಂ ನೇಮಿಸಿದ ಸಮಿತಿಯಲ್ಲಿನ ಸದಸ್ಯರೆಲ್ಲರೂ ಕೃಷಿ ಕಾಯ್ದೆ ಸಮರ್ಥಕರು!: ಭುಗಿಲೆದ್ದ ಆಕ್ರೋಶ

ಸುಪ್ರೀಂ ನೇಮಿಸಿದ ಸಮಿತಿಯಲ್ಲಿನ ಸದಸ್ಯರೆಲ್ಲರೂ ಕೃಷಿ ಕಾಯ್ದೆ ಸಮರ್ಥಕರು!: ಭುಗಿಲೆದ್ದ ಆಕ್ರೋಶ

- Advertisement -
- Advertisement -

ಕೃಷಿ ಕಾಯ್ದೆಗಳ ಜಾರಿಯನ್ನು ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ಅಮಾನತು ಮಾಡಿರುವ ಸುಪ್ರೀಂ ಕೋರ್ಟ್‌ ರೈತರ ಆಕ್ಷೇಪಗಳನ್ನು ಆಲಿಸಲು ನಾಲ್ವರ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಆದರೆ ಸಮಿತಿಯಲ್ಲಿನ ನಾಲ್ವರು ಸದಸ್ಯರು ಕೂಡ ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳ ಸಮರ್ಥಕರೆ ಆಗಿದ್ದಾರೆ. ಹಾಗಾಗಿ ಸಮಿತಿ ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಲು ಸಾಧ್ಯವಿಲ್ಲ ಎಂಬ ಆಕ್ರೋಶ ಕೇಳಿಬಂದಿದೆ.

ಸಮಿತಿಯಲ್ಲಿ ಭೂಪಿಂದರ್ ಸಿಂಗ್ ಮಾನ್, ಡಾ. ಪ್ರಮೋದ್ ಕುಮಾರ್ ಜೋಷಿ, ಅಶೋಕ್‌ ಗುಲಾಟಿ, ಮತ್ತು ಅನಿಲ್ ಘನ್ವತ್ ಇದ್ದು ಇವರೆಲ್ಲರೂ ಈಗಾಗಲೇ ಒಂದಲ್ಲ ಒಂದು ರೀತಿಯಲ್ಲಿ ಕಾಯ್ದೆಯ ಪರವಾಗಿರುವವರು ಎಂದು ಆರೋಪಿಸಲಾಗಿದೆ. ಇದಕ್ಕೆ ಆಧಾರವೆಂಬುವಂತೆ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವ ಇವರ ಹೇಳಿಕೆಗಳು, ಲೇಖನಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಮಿತಿಯ ಒಬ್ಬೊಬ್ಬರು ಕೃಷಿ ಕಾಯ್ದೆಗಳ ಕುರಿತು ಏನೇನು ಹೇಳಿದ್ದಾರೆ ಎಂಬುದನ್ನು ನೋಡೋಣ.

ಅಶೋಕ್ ಗುಲಾಟಿ

ಈ ಶಾಸನಗಳ ಆರ್ಥಿಕ ತಾರ್ಕಿಕತೆಯೆಂದರೆ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮತ್ತು ಖರೀದಿದಾರರಿಗೆ ಖರೀದಿಸಲು ಮತ್ತು ಸಂಗ್ರಹಿಸಲು ಹೆಚ್ಚಿನ ಆಯ್ಕೆ ಮತ್ತು ಸ್ವಾತಂತ್ರ್ಯವನ್ನು ಒದಗಿಸುವುದು, ಇದರಿಂದಾಗಿ ಕೃಷಿ ವ್ಯಾಪಾರೋದ್ಯಮದಲ್ಲಿ ಸ್ಪರ್ಧೆಯನ್ನು ಸೃಷ್ಟಿಸುತ್ತದೆ. ಈ ಸ್ಪರ್ಧೆಯು ಮಾರ್ಕೆಟಿಂಗ್ ವೆಚ್ಚವನ್ನು ಕಡಿಮೆ ಮಾಡುವುದರ ಮೂಲಕ, ಉತ್ತಮ ಬೆಲೆ ಆವಿಷ್ಕಾರವನ್ನು ಶಕ್ತಗೊಳಿಸುವ ಮೂಲಕ, ರೈತರಿಗೆ ಬೆಲೆ ಸಾಕ್ಷಾತ್ಕಾರವನ್ನು ಸುಧಾರಿಸುವ ಮೂಲಕ ಮತ್ತು ಅದೇ ಸಮಯದಲ್ಲಿ ಗ್ರಾಹಕರು ಪಾವತಿಸುವ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಕೃಷಿಯಲ್ಲಿ ಹೆಚ್ಚು ಪರಿಣಾಮಕಾರಿ ಮೌಲ್ಯ ಸರಪಳಿಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಅಶೋಕ್ ಗುಲಾಟಿಯವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಲೇಖನ ಬರೆದಿದ್ದಾರೆ. ಅದರಲ್ಲಿ ಅವರು ಪ್ರತಿಪಕ್ಷವು ದಾರಿ ತಪ್ಪಿದೆ ಆದರೆ ಸರ್ಕಾರವು ತನ್ನ ಕಾರ್ಯವನ್ನು ಒಟ್ಟುಗೂಡಿಸಬೇಕು ಎಂದು ಪ್ರತಿಪಾದಿಸಿದ್ದಾರೆ.

ಪ್ರಮೋದ್ ಕುಮಾರ್ ಜೋಷಿ

ನಿಜವಾದ ಬೇಡಿಕೆಗಳನ್ನು ಪರಿಗಣಿಸುವ ಬಗ್ಗೆ ಕೇಂದ್ರದ ಸಕಾರಾತ್ಮಕ ಪ್ರತಿಕ್ರಿಯೆಯ ಹೊರತಾಗಿಯೂ, ರೈತರ ಆಂದೋಲನವನ್ನು ಇನ್ನೂ ಬಗೆಹರಿಸಲಾಗಿಲ್ಲ ಎಂಬುದು ವಿಷಾದನೀಯ. ಪ್ರತಿ ಮಾತುಕತೆಗೆ ಮುಂಚಿತವಾಗಿ ರೈತರು ಗೋಲ್‌ಪೋಸ್ಟ್‌ಗಳನ್ನು ಬದಲಾಯಿಸುತ್ತಿರುವುದು ದುರದೃಷ್ಟಕರ. ಆರಂಭದಲ್ಲಿ, ರೈತರು ಮತ್ತು ರೈತ ಸಂಘಟನೆಗಳನ್ನು ಸಂಪರ್ಕಿಸದೆ ಕಾನೂನುಗಳನ್ನು ರೂಪಿಸಲಾಗಿದೆ ಎಂದು ಹೇಳಲಾಗಿತ್ತು; ಇದು ಅನ್ಯಾಯದ ಹಕ್ಕು. ಕೃಷಿ ಮಾರುಕಟ್ಟೆಗಳನ್ನು ಅನಿಯಂತ್ರಣಗೊಳಿಸುವ ವಿಷಯವು ಚರ್ಚೆಯಲ್ಲಿದೆ ಮತ್ತು ಕಳೆದ ಎರಡು ದಶಕಗಳಿಂದ ಚರ್ಚೆಯಾಗಿದೆ ಎಂದು ಪಿ.ಕೆ ಜೋಶಿಯವರು ಫೈನಾನ್ಷಿಯಲ್ ಎಕ್ಸ್‌ಪ್ರೆಸ್‌ಗೆ ಲೇಖನ ಬರೆದಿದ್ದಾರೆ.

ಭೂಪಿಂದರ್ ಸಿಂಗ್ ಮಾನ್

AIKCC ಎಂಬ ಒಕ್ಕೂಟದ ಅಧ್ಯಕ್ಷರಾದ ಇವರು 2020ರ ಡಿಸೆಂಬರ್‍ 14 ರಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ, ವಿರೋಧಗಳಿಗೆ ತಲೆಬಾಗಬೇಡಿ, ಕಾನೂನುಗಳನ್ನು ಜಾರಿಗೆ ತನ್ನಿ‌ ಎಂದು ಮನವಿ ಪತ್ರ ನೀಡಿದ್ದರು. ಅದರ ಸುದ್ದಿ ವರದಿ ಇಲ್ಲಿದೆ.

ಅನಿಲ್ ಘನ್ವತ್

ಮಹಾರಾಷ್ಟ್ರದ ಶೇತ್ಕಾರಿ ಸಂಘಟನ್‌ನ ಅಧ್ಯಕ್ಷರಾದ ಇವರು “ಸರ್ಕಾರವು ಕಾನೂನುಗಳ ಅನುಷ್ಠಾನವನ್ನು ನಿಲ್ಲಿಸಿ, ರೈತರೊಂದಿಗೆ ಚರ್ಚಿಸಿದ ನಂತರ ಅವುಗಳನ್ನು ತಿದ್ದುಪಡಿ ಮಾಡಬಹುದು. ಆದರೆ ರೈತರಿಗೆ ಅವಕಾಶಗಳನ್ನು ತೆರೆದಿರುವ ಈ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ಪ್ರತಿಪಾದಿಸಿದವರು. ಅದ ವರದಿ ಇಲ್ಲಿದೆ.

ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿದ ನಾಲ್ಕು ಸದಸ್ಯರ ಸಮಿಯಲ್ಲಿರುವ ಪ್ರಮೋದ್ ಜೋಶಿಯವರ ಈ ಕೃಷಿ ಮಸೂದೆ ಪರವಾದ ನಿಲುವುಗಳ ಈ ಲೇಖನ ನೋಡಿ. ಇನ್ನು ಅಶೋಕ್ ಗುಲಾಟಿ ಮಸೂದೆಗಳ ಪರ ಪುಂಖಾನಪುಂಖವಾಗಿ ಲೇಖನಗಳನ್ನು ಬರೆದಿದ್ದಾರೆ. ಇದು ಮೋದಿ ಸರಕಾರ ನೇಮಿಸಿದ ಸಮಿತಿ ಎಂದು ಬಿ.ಶ್ರೀಪಾದ್ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಸ್ಥಾಪಿಸಿರುವ ಕಮಿಟಿಯ ಸದಸ್ಯರನ್ನು ನೋಡಿ. ಭೂಪಿಂದರ್ ಸಿಂಗ್ ಮಾನ್ ತಿದ್ದುಪಡಿಗಳೊಂದಿಗೆ ಈ ಕಾಯಿದೆ ಒಪ್ಪಿಕೊಳ್ಳಲು ಸಿದ್ಧ ಅಂದಿದ್ದರು. ಅಶೋಕ್ ಗುಲಾಟಿ ನೋಟು ರದ್ಧತಿ ಮಹಾನ್ ಕ್ರಾಂತಿಕಾರಿ ಹೆಜ್ಜೆ ಎಂದು ಹಾಡಿ ಹೊಗಳಿದ್ದ ಆಸಾಮಿ. ಅನಿಲ್ ಘನ್ವತ್ ಈ ಕಾಯಿದೆಗಳನ್ನು ಬೆಂಬಲಿಸಿದ್ದರು. ಪಿಕೆ ಜೋಷಿ ವಿಶ್ವ ಬ್ಯಾಂಕಿನ ಅರ್ಥ ಶಾಸ್ತ್ರಜ್ಞ. ಅರ್ಥಾತ್ ಈ ಅಡುಗೆ ಚೌಕಿದಾರನೇ ಸಿದ್ಧಮಾಡಿ ಬೊಬ್ಡೆ ಮೂಲಕ ಸರ್ವ್ ಮಾಡಿರೋದು ಎಂಬುದರ ಬಗ್ಗೆ ಸಂಶಯ ಬೇಡ ಎಂದು ಸುರೇಶ್ ಕಂಜರ್ಪಣೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಖ್ಯಾತ ಯೂಟ್ಯೂಬರ್‍ ಧೃವ್ ರಾಠೀ ಟ್ವೀಟ್‌ ಮಾಡಿ “ಬಹಿರಂಗವಾಗಿ ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ನಾಲ್ಕು ವ್ಯಕ್ತಿಗಳನ್ನು ಸಮಿತಿಗೆ ಸುಪ್ರೀಂ ಕೋರ್ಟ್‌ ನೇಮಿಸಿದೆ. ಇದು ಹೇಗಿದೆಯೆಂದರೆ ವಿಶ್ವದ ಅತ್ಯುತ್ತಮ ಪ್ರಧಾನಿ ಯಾರೆಂದು ನಿರ್ಧರಿಸಲು ಸಂಬಿತ್ ಪಾತ್ರ, ಕಂಗನಾ ರಾಣಾವತ್, ಅರ್ನಾಬ್ ಗೋಸ್ವಾಮಿ ಮತ್ತು ರಜತ್ ಶರ್ಮಾರನ್ನು ನೇಮಿಸಿದಂತಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಈ ಎಲ್ಲಾ ಕಾರಣಗಳಿಗಾಗಿಯೇ ಹೋರಾಟನಿರತ ರೈತ ಮುಖಂಡರು ಸಮಿತಿ ರಚನೆಯನ್ನು ವಿರೋಧಿಸಿದ್ದರು. “ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ” ಎಂದು ನಿನ್ನೆಯೇ ಸ್ಪಷ್ಟಪಡಿಸಿದ್ದರು.


ಇದನ್ನೂ ಓದಿ: ಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತರ ಬಗ್ಗೆ ತಿಳಿದಿರುವವರ ಬಗ್ಗೆ – ಪುಸ್ತಕದ, ಬಾಟಲಿಯ ಬದನೆಕಾಯಿ ಮಂದಿ ಇಷ್ಟು ಬರೀತಾರಲ್ಲ !!? ನಿಮ್ಮ ಯೋಗ್ಯತೆಗೆ ಇಷ್ಟು ಬೆಂಕಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...