Homeಮುಖಪುಟಚುನಾವಣಾ ಬಾಂಡ್‌‌ ಪ್ರಕರಣದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್‌; ಏನಿದು ಚುನಾವಣಾ ಬಾಂಡ್‌?

ಚುನಾವಣಾ ಬಾಂಡ್‌‌ ಪ್ರಕರಣದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್‌; ಏನಿದು ಚುನಾವಣಾ ಬಾಂಡ್‌?

- Advertisement -
- Advertisement -

ಚುನಾವಣಾ ಬಾಂಡ್‌ಗಳ ವಿತರಣೆಯ ಕಾನೂನುಗಳನ್ನು ಪ್ರಶ್ನಿಸುವ ಪ್ರಕರಣವನ್ನು ವಿಚಾರಣೆ ಮಾಡುವುದಾಗಿ ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಕಾನೂನು ಸುದ್ದಿ ವೆಬ್‌ಸೈಟ್ ಬಾರ್ ಆಂಡ್‌ ಬೆಂಚ್ ವರದಿ ಮಾಡಿದೆ.

“ಅಬಕಾರಿ ದರವನ್ನು ತಡೆಯಲು ಕಲ್ಕತ್ತಾ ಮೂಲದ ಕಂಪನಿಯೊಂದು ಎಲೆಕ್ಟೋರಲ್ ಬಾಂಡ್‌ಗಳ ಮೂಲಕ 40 ಕೋಟಿ ರೂಪಾಯಿ ಪಾವತಿಸಿದೆ” ಎಂಬ ವರದಿಯನ್ನು ಪ್ರಶಾಂತ್‌ ಭೂಷಣ್ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದು,ಚುನಾವಣಾ ಬಾಂಡ್‌ ಪ್ರಜಾಪ್ರಭುತ್ವವನ್ನು ವಿರೂಪಗೊಳಿಸುತ್ತಿದೆ ಎಂದು ಅವರು ನ್ಯಾಯಾಲಯದಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ರಮಣ, “ಅದನ್ನು ನಾನು ಪರಿಶೀಲಿಸುತ್ತೇನೆ. ಕೊರೊನಾ ಇಲ್ಲದಿದ್ದರೆ ಈ ಪ್ರಕರಣವನ್ನು ಕೈಗಿತ್ತಿಕೊಳ್ಳುತ್ತಿದ್ದೆ. ನೋಡೋಣ ಇದನ್ನು ವಿಚಾರಣೆ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಭಾವೈಕ್ಯತೆಯ ’ತಕ್ಕಡಿ’ಯಲ್ಲಿ ಭಿನ್ನ-ಭೇದವ ಮಾಡಬೇಡಿರೋ…!

ಇದಕ್ಕೆ ಉತ್ತರಿಸಿದ ಪ್ರಶಾಂತ್‌ ಭೂಷಣ್‌, “ಇದು ಬಹಳ ಗಂಭೀರ ವಿಷಯ” ಎಂದು ಪ್ರಕರಣವನ್ನು ಆಲಿಸುವಂತೆ ಒತ್ತಾಯಿಸಿದಾಗ, ನ್ಯಾಯಮೂರ್ತಿ ರಮಣ ಅವರು “ಹೌದು, ನಾವು ಪ್ರಕರಣವನ್ನು ಆಲಿಸುತ್ತೇವೆ” ಎಂದು ಪುನರುಚ್ಚರಿಸಿದ್ದಾರೆ.

ಏನಿದು ಚುನಾವಣಾ ಬಾಂಡ್‌?

ಚುಣಾವಣಾ ಬಾಂಡ್‌ಗಳನ್ನು 2017 ರ ಒಕ್ಕೂಟ ಸರ್ಕಾರದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈ ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣವನ್ನು ದೇಣಿಗೆ ನೀಡಲು ಬಳಸುವ ಬಡ್ಡಿ ಮುಕ್ತ ವ್ಯವಸ್ಥೆಯಾಗಿದೆ. ಇವುಗಳನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌(ಎಸ್‌ಬಿಐ) ನಿರ್ದಿಷ್ಟ ದಿನಗಳಂದು ವಿತರಣೆ ಮಾಡುತ್ತವೆ. ಒಂದು ಸಾವಿರ, 10 ಸಾವಿರ, ಒಂದು ಲಕ್ಷ, 10 ಲಕ್ಷ ಮತ್ತು ಒಂದು ಕೋಟಿ ರೂಗಳ ಚುನವಣಾ ಬಾಂಡ್‌ಗಳು ಇರುತ್ತವೆ.

2017 ರ ಬಜೆಟ್ ಭಾಷಣದಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇದನ್ನು ಮೊದಲು ಘೋಷಿಸಿದ್ದರು. ಆರಂಭದಲ್ಲಿ, ಚುನಾವಣಾ ಬಾಂಡ್‌ಗಳು ಕಂಪನಿಗಳು ತಮ್ಮ ಗುರುತನ್ನು ಬಹಿರಂಗಪಡಿಸದೆ ದೇಣಿಗೆ ನೀಡುವ ಮಾರ್ಗವಾಗಿ ಹೊರಹೊಮ್ಮಿದ್ದವು.

ಆದರೆ, ಈಗ ಅನಾಮಧೇಯ ವ್ಯಕ್ತಿಗಳು, ಜನರ ಗುಂಪುಗಳು, ಎನ್‌ಜಿಒಗಳು, ಧಾರ್ಮಿಕ ಮತ್ತು ಇತರ ಟ್ರಸ್ಟ್‌ಗಳು ತಮ್ಮ ವಿವರಗಳನ್ನು ಬಹಿರಂಗಪಡಿಸದೆ ಚುನಾವಣಾ ಬಾಂಡ್‌ಗಳ ಮೂಲಕ ಪಕ್ಷಗಳಿಗೆ ದೇಣಿಗೆ ನೀಡಲು ಅನುಮತಿಸಲಾಗಿದೆ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು, ಈ ಬಾಂಡ್‌‌ಗಳ ಮೂಲಕ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್‌ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು 76%ರಷ್ಟು ಹಣವನ್ನು ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ.

ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ ಮೂರನೇ ಎರಡಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...