Homeಮುಖಪುಟಚುನಾವಣಾ ಬಾಂಡ್‌‌ ಪ್ರಕರಣದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್‌; ಏನಿದು ಚುನಾವಣಾ ಬಾಂಡ್‌?

ಚುನಾವಣಾ ಬಾಂಡ್‌‌ ಪ್ರಕರಣದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್‌; ಏನಿದು ಚುನಾವಣಾ ಬಾಂಡ್‌?

- Advertisement -
- Advertisement -

ಚುನಾವಣಾ ಬಾಂಡ್‌ಗಳ ವಿತರಣೆಯ ಕಾನೂನುಗಳನ್ನು ಪ್ರಶ್ನಿಸುವ ಪ್ರಕರಣವನ್ನು ವಿಚಾರಣೆ ಮಾಡುವುದಾಗಿ ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಕಾನೂನು ಸುದ್ದಿ ವೆಬ್‌ಸೈಟ್ ಬಾರ್ ಆಂಡ್‌ ಬೆಂಚ್ ವರದಿ ಮಾಡಿದೆ.

“ಅಬಕಾರಿ ದರವನ್ನು ತಡೆಯಲು ಕಲ್ಕತ್ತಾ ಮೂಲದ ಕಂಪನಿಯೊಂದು ಎಲೆಕ್ಟೋರಲ್ ಬಾಂಡ್‌ಗಳ ಮೂಲಕ 40 ಕೋಟಿ ರೂಪಾಯಿ ಪಾವತಿಸಿದೆ” ಎಂಬ ವರದಿಯನ್ನು ಪ್ರಶಾಂತ್‌ ಭೂಷಣ್ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದು,ಚುನಾವಣಾ ಬಾಂಡ್‌ ಪ್ರಜಾಪ್ರಭುತ್ವವನ್ನು ವಿರೂಪಗೊಳಿಸುತ್ತಿದೆ ಎಂದು ಅವರು ನ್ಯಾಯಾಲಯದಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ರಮಣ, “ಅದನ್ನು ನಾನು ಪರಿಶೀಲಿಸುತ್ತೇನೆ. ಕೊರೊನಾ ಇಲ್ಲದಿದ್ದರೆ ಈ ಪ್ರಕರಣವನ್ನು ಕೈಗಿತ್ತಿಕೊಳ್ಳುತ್ತಿದ್ದೆ. ನೋಡೋಣ ಇದನ್ನು ವಿಚಾರಣೆ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಭಾವೈಕ್ಯತೆಯ ’ತಕ್ಕಡಿ’ಯಲ್ಲಿ ಭಿನ್ನ-ಭೇದವ ಮಾಡಬೇಡಿರೋ…!

ಇದಕ್ಕೆ ಉತ್ತರಿಸಿದ ಪ್ರಶಾಂತ್‌ ಭೂಷಣ್‌, “ಇದು ಬಹಳ ಗಂಭೀರ ವಿಷಯ” ಎಂದು ಪ್ರಕರಣವನ್ನು ಆಲಿಸುವಂತೆ ಒತ್ತಾಯಿಸಿದಾಗ, ನ್ಯಾಯಮೂರ್ತಿ ರಮಣ ಅವರು “ಹೌದು, ನಾವು ಪ್ರಕರಣವನ್ನು ಆಲಿಸುತ್ತೇವೆ” ಎಂದು ಪುನರುಚ್ಚರಿಸಿದ್ದಾರೆ.

ಏನಿದು ಚುನಾವಣಾ ಬಾಂಡ್‌?

ಚುಣಾವಣಾ ಬಾಂಡ್‌ಗಳನ್ನು 2017 ರ ಒಕ್ಕೂಟ ಸರ್ಕಾರದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈ ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣವನ್ನು ದೇಣಿಗೆ ನೀಡಲು ಬಳಸುವ ಬಡ್ಡಿ ಮುಕ್ತ ವ್ಯವಸ್ಥೆಯಾಗಿದೆ. ಇವುಗಳನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌(ಎಸ್‌ಬಿಐ) ನಿರ್ದಿಷ್ಟ ದಿನಗಳಂದು ವಿತರಣೆ ಮಾಡುತ್ತವೆ. ಒಂದು ಸಾವಿರ, 10 ಸಾವಿರ, ಒಂದು ಲಕ್ಷ, 10 ಲಕ್ಷ ಮತ್ತು ಒಂದು ಕೋಟಿ ರೂಗಳ ಚುನವಣಾ ಬಾಂಡ್‌ಗಳು ಇರುತ್ತವೆ.

2017 ರ ಬಜೆಟ್ ಭಾಷಣದಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇದನ್ನು ಮೊದಲು ಘೋಷಿಸಿದ್ದರು. ಆರಂಭದಲ್ಲಿ, ಚುನಾವಣಾ ಬಾಂಡ್‌ಗಳು ಕಂಪನಿಗಳು ತಮ್ಮ ಗುರುತನ್ನು ಬಹಿರಂಗಪಡಿಸದೆ ದೇಣಿಗೆ ನೀಡುವ ಮಾರ್ಗವಾಗಿ ಹೊರಹೊಮ್ಮಿದ್ದವು.

ಆದರೆ, ಈಗ ಅನಾಮಧೇಯ ವ್ಯಕ್ತಿಗಳು, ಜನರ ಗುಂಪುಗಳು, ಎನ್‌ಜಿಒಗಳು, ಧಾರ್ಮಿಕ ಮತ್ತು ಇತರ ಟ್ರಸ್ಟ್‌ಗಳು ತಮ್ಮ ವಿವರಗಳನ್ನು ಬಹಿರಂಗಪಡಿಸದೆ ಚುನಾವಣಾ ಬಾಂಡ್‌ಗಳ ಮೂಲಕ ಪಕ್ಷಗಳಿಗೆ ದೇಣಿಗೆ ನೀಡಲು ಅನುಮತಿಸಲಾಗಿದೆ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು, ಈ ಬಾಂಡ್‌‌ಗಳ ಮೂಲಕ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್‌ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು 76%ರಷ್ಟು ಹಣವನ್ನು ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ.

ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ ಮೂರನೇ ಎರಡಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...