Homeಮುಖಪುಟಚುನಾವಣಾ ಬಾಂಡ್‌‌ ಪ್ರಕರಣದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್‌; ಏನಿದು ಚುನಾವಣಾ ಬಾಂಡ್‌?

ಚುನಾವಣಾ ಬಾಂಡ್‌‌ ಪ್ರಕರಣದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್‌; ಏನಿದು ಚುನಾವಣಾ ಬಾಂಡ್‌?

- Advertisement -
- Advertisement -

ಚುನಾವಣಾ ಬಾಂಡ್‌ಗಳ ವಿತರಣೆಯ ಕಾನೂನುಗಳನ್ನು ಪ್ರಶ್ನಿಸುವ ಪ್ರಕರಣವನ್ನು ವಿಚಾರಣೆ ಮಾಡುವುದಾಗಿ ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಕಾನೂನು ಸುದ್ದಿ ವೆಬ್‌ಸೈಟ್ ಬಾರ್ ಆಂಡ್‌ ಬೆಂಚ್ ವರದಿ ಮಾಡಿದೆ.

“ಅಬಕಾರಿ ದರವನ್ನು ತಡೆಯಲು ಕಲ್ಕತ್ತಾ ಮೂಲದ ಕಂಪನಿಯೊಂದು ಎಲೆಕ್ಟೋರಲ್ ಬಾಂಡ್‌ಗಳ ಮೂಲಕ 40 ಕೋಟಿ ರೂಪಾಯಿ ಪಾವತಿಸಿದೆ” ಎಂಬ ವರದಿಯನ್ನು ಪ್ರಶಾಂತ್‌ ಭೂಷಣ್ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದು,ಚುನಾವಣಾ ಬಾಂಡ್‌ ಪ್ರಜಾಪ್ರಭುತ್ವವನ್ನು ವಿರೂಪಗೊಳಿಸುತ್ತಿದೆ ಎಂದು ಅವರು ನ್ಯಾಯಾಲಯದಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ರಮಣ, “ಅದನ್ನು ನಾನು ಪರಿಶೀಲಿಸುತ್ತೇನೆ. ಕೊರೊನಾ ಇಲ್ಲದಿದ್ದರೆ ಈ ಪ್ರಕರಣವನ್ನು ಕೈಗಿತ್ತಿಕೊಳ್ಳುತ್ತಿದ್ದೆ. ನೋಡೋಣ ಇದನ್ನು ವಿಚಾರಣೆ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಭಾವೈಕ್ಯತೆಯ ’ತಕ್ಕಡಿ’ಯಲ್ಲಿ ಭಿನ್ನ-ಭೇದವ ಮಾಡಬೇಡಿರೋ…!

ಇದಕ್ಕೆ ಉತ್ತರಿಸಿದ ಪ್ರಶಾಂತ್‌ ಭೂಷಣ್‌, “ಇದು ಬಹಳ ಗಂಭೀರ ವಿಷಯ” ಎಂದು ಪ್ರಕರಣವನ್ನು ಆಲಿಸುವಂತೆ ಒತ್ತಾಯಿಸಿದಾಗ, ನ್ಯಾಯಮೂರ್ತಿ ರಮಣ ಅವರು “ಹೌದು, ನಾವು ಪ್ರಕರಣವನ್ನು ಆಲಿಸುತ್ತೇವೆ” ಎಂದು ಪುನರುಚ್ಚರಿಸಿದ್ದಾರೆ.

ಏನಿದು ಚುನಾವಣಾ ಬಾಂಡ್‌?

ಚುಣಾವಣಾ ಬಾಂಡ್‌ಗಳನ್ನು 2017 ರ ಒಕ್ಕೂಟ ಸರ್ಕಾರದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈ ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣವನ್ನು ದೇಣಿಗೆ ನೀಡಲು ಬಳಸುವ ಬಡ್ಡಿ ಮುಕ್ತ ವ್ಯವಸ್ಥೆಯಾಗಿದೆ. ಇವುಗಳನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌(ಎಸ್‌ಬಿಐ) ನಿರ್ದಿಷ್ಟ ದಿನಗಳಂದು ವಿತರಣೆ ಮಾಡುತ್ತವೆ. ಒಂದು ಸಾವಿರ, 10 ಸಾವಿರ, ಒಂದು ಲಕ್ಷ, 10 ಲಕ್ಷ ಮತ್ತು ಒಂದು ಕೋಟಿ ರೂಗಳ ಚುನವಣಾ ಬಾಂಡ್‌ಗಳು ಇರುತ್ತವೆ.

2017 ರ ಬಜೆಟ್ ಭಾಷಣದಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇದನ್ನು ಮೊದಲು ಘೋಷಿಸಿದ್ದರು. ಆರಂಭದಲ್ಲಿ, ಚುನಾವಣಾ ಬಾಂಡ್‌ಗಳು ಕಂಪನಿಗಳು ತಮ್ಮ ಗುರುತನ್ನು ಬಹಿರಂಗಪಡಿಸದೆ ದೇಣಿಗೆ ನೀಡುವ ಮಾರ್ಗವಾಗಿ ಹೊರಹೊಮ್ಮಿದ್ದವು.

ಆದರೆ, ಈಗ ಅನಾಮಧೇಯ ವ್ಯಕ್ತಿಗಳು, ಜನರ ಗುಂಪುಗಳು, ಎನ್‌ಜಿಒಗಳು, ಧಾರ್ಮಿಕ ಮತ್ತು ಇತರ ಟ್ರಸ್ಟ್‌ಗಳು ತಮ್ಮ ವಿವರಗಳನ್ನು ಬಹಿರಂಗಪಡಿಸದೆ ಚುನಾವಣಾ ಬಾಂಡ್‌ಗಳ ಮೂಲಕ ಪಕ್ಷಗಳಿಗೆ ದೇಣಿಗೆ ನೀಡಲು ಅನುಮತಿಸಲಾಗಿದೆ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು, ಈ ಬಾಂಡ್‌‌ಗಳ ಮೂಲಕ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್‌ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು 76%ರಷ್ಟು ಹಣವನ್ನು ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ.

ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ ಮೂರನೇ ಎರಡಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...