Homeಮುಖಪುಟಚುನಾವಣಾ ಬಾಂಡ್‌‌ ಪ್ರಕರಣದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್‌; ಏನಿದು ಚುನಾವಣಾ ಬಾಂಡ್‌?

ಚುನಾವಣಾ ಬಾಂಡ್‌‌ ಪ್ರಕರಣದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್‌; ಏನಿದು ಚುನಾವಣಾ ಬಾಂಡ್‌?

- Advertisement -
- Advertisement -

ಚುನಾವಣಾ ಬಾಂಡ್‌ಗಳ ವಿತರಣೆಯ ಕಾನೂನುಗಳನ್ನು ಪ್ರಶ್ನಿಸುವ ಪ್ರಕರಣವನ್ನು ವಿಚಾರಣೆ ಮಾಡುವುದಾಗಿ ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಕಾನೂನು ಸುದ್ದಿ ವೆಬ್‌ಸೈಟ್ ಬಾರ್ ಆಂಡ್‌ ಬೆಂಚ್ ವರದಿ ಮಾಡಿದೆ.

“ಅಬಕಾರಿ ದರವನ್ನು ತಡೆಯಲು ಕಲ್ಕತ್ತಾ ಮೂಲದ ಕಂಪನಿಯೊಂದು ಎಲೆಕ್ಟೋರಲ್ ಬಾಂಡ್‌ಗಳ ಮೂಲಕ 40 ಕೋಟಿ ರೂಪಾಯಿ ಪಾವತಿಸಿದೆ” ಎಂಬ ವರದಿಯನ್ನು ಪ್ರಶಾಂತ್‌ ಭೂಷಣ್ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದು,ಚುನಾವಣಾ ಬಾಂಡ್‌ ಪ್ರಜಾಪ್ರಭುತ್ವವನ್ನು ವಿರೂಪಗೊಳಿಸುತ್ತಿದೆ ಎಂದು ಅವರು ನ್ಯಾಯಾಲಯದಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ರಮಣ, “ಅದನ್ನು ನಾನು ಪರಿಶೀಲಿಸುತ್ತೇನೆ. ಕೊರೊನಾ ಇಲ್ಲದಿದ್ದರೆ ಈ ಪ್ರಕರಣವನ್ನು ಕೈಗಿತ್ತಿಕೊಳ್ಳುತ್ತಿದ್ದೆ. ನೋಡೋಣ ಇದನ್ನು ವಿಚಾರಣೆ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಭಾವೈಕ್ಯತೆಯ ’ತಕ್ಕಡಿ’ಯಲ್ಲಿ ಭಿನ್ನ-ಭೇದವ ಮಾಡಬೇಡಿರೋ…!

ಇದಕ್ಕೆ ಉತ್ತರಿಸಿದ ಪ್ರಶಾಂತ್‌ ಭೂಷಣ್‌, “ಇದು ಬಹಳ ಗಂಭೀರ ವಿಷಯ” ಎಂದು ಪ್ರಕರಣವನ್ನು ಆಲಿಸುವಂತೆ ಒತ್ತಾಯಿಸಿದಾಗ, ನ್ಯಾಯಮೂರ್ತಿ ರಮಣ ಅವರು “ಹೌದು, ನಾವು ಪ್ರಕರಣವನ್ನು ಆಲಿಸುತ್ತೇವೆ” ಎಂದು ಪುನರುಚ್ಚರಿಸಿದ್ದಾರೆ.

ಏನಿದು ಚುನಾವಣಾ ಬಾಂಡ್‌?

ಚುಣಾವಣಾ ಬಾಂಡ್‌ಗಳನ್ನು 2017 ರ ಒಕ್ಕೂಟ ಸರ್ಕಾರದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈ ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣವನ್ನು ದೇಣಿಗೆ ನೀಡಲು ಬಳಸುವ ಬಡ್ಡಿ ಮುಕ್ತ ವ್ಯವಸ್ಥೆಯಾಗಿದೆ. ಇವುಗಳನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌(ಎಸ್‌ಬಿಐ) ನಿರ್ದಿಷ್ಟ ದಿನಗಳಂದು ವಿತರಣೆ ಮಾಡುತ್ತವೆ. ಒಂದು ಸಾವಿರ, 10 ಸಾವಿರ, ಒಂದು ಲಕ್ಷ, 10 ಲಕ್ಷ ಮತ್ತು ಒಂದು ಕೋಟಿ ರೂಗಳ ಚುನವಣಾ ಬಾಂಡ್‌ಗಳು ಇರುತ್ತವೆ.

2017 ರ ಬಜೆಟ್ ಭಾಷಣದಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇದನ್ನು ಮೊದಲು ಘೋಷಿಸಿದ್ದರು. ಆರಂಭದಲ್ಲಿ, ಚುನಾವಣಾ ಬಾಂಡ್‌ಗಳು ಕಂಪನಿಗಳು ತಮ್ಮ ಗುರುತನ್ನು ಬಹಿರಂಗಪಡಿಸದೆ ದೇಣಿಗೆ ನೀಡುವ ಮಾರ್ಗವಾಗಿ ಹೊರಹೊಮ್ಮಿದ್ದವು.

ಆದರೆ, ಈಗ ಅನಾಮಧೇಯ ವ್ಯಕ್ತಿಗಳು, ಜನರ ಗುಂಪುಗಳು, ಎನ್‌ಜಿಒಗಳು, ಧಾರ್ಮಿಕ ಮತ್ತು ಇತರ ಟ್ರಸ್ಟ್‌ಗಳು ತಮ್ಮ ವಿವರಗಳನ್ನು ಬಹಿರಂಗಪಡಿಸದೆ ಚುನಾವಣಾ ಬಾಂಡ್‌ಗಳ ಮೂಲಕ ಪಕ್ಷಗಳಿಗೆ ದೇಣಿಗೆ ನೀಡಲು ಅನುಮತಿಸಲಾಗಿದೆ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು, ಈ ಬಾಂಡ್‌‌ಗಳ ಮೂಲಕ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್‌ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು 76%ರಷ್ಟು ಹಣವನ್ನು ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ.

ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ ಮೂರನೇ ಎರಡಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...