Homeಮುಖಪುಟಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

- Advertisement -
- Advertisement -

ಅತ್ಯಾಚಾರ ಆರೋಪದ ಬಂಧನದಿಂದ ತಪ್ಪಿಸಿಕೊಳ್ಳಲು ರಕ್ಷಣೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಸರ್ಕಾರಿ ನೌಕರನನ್ನು ಅತ್ಯಾಚಾರದ ಆರೋಪ ಹೊರಿಸಿರುವ ಯುವತಿಯನ್ನು ಮದುವೆಯಾಗಲು ಕೇಳಿದ ಸುಪ್ರೀಂಕೋರ್ಟ್ ನಡೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಮಹಾರಾಷ್ಟ್ರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿಯಲ್ಲಿ ತಂತ್ರಜ್ಞನಾಗಿ ಕಾರ್ಯನಿರ್ವಹಿಸುತ್ತಿರುವ ಮೋಹಿತ್ ಸುಭಾಷ್ ಚೌವಾಣ್ ಜಾಮೀನು ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ’ಆಕೆಯನ್ನು ಮದುವೆಯಾಗುತ್ತೀರಾ..?’ ಎಂದು ಪ್ರಶ್ನೆ ಕೇಳಿತ್ತು. ಮೋಹಿತ್ ಸುಭಾಷ್ ಚೌವಾಣ್ ಮೇಲೆ ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪವಿದ್ದು, ಆತನ ಮೇಲೆ ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾನೂನಿನಡಿಯಲ್ಲಿ ದೂರು ದಾಖಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಹುಭಾಷಾ ನಟಿ ತಾಪ್ಸಿ ಪನ್ನು, ಗಾಯಕಿ ಸೋನಾ ಮೊಹಾಪಾತ್ರ, ಆಲ್ ಇಂಡಿಯಾ ಲಾಯರ್ಸ್‌ ಅಸೋಷಿಯೇಷನ್ ಫಾರ್‌ ಜಸ್ಟಿಸ್ (AILAJ) ಸಂಘಟನೆ ಕಿಡಿ ಕಾರಿದೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗಲು ಆರೋಪಿಯನ್ನೆ ಕೇಳಿದ ಸುಪ್ರೀಂ!

ಟ್ವಿಟರ್‌ನಲ್ಲಿ ತನ್ನ ಕೋಪವನ್ನು ಹೊರಹಾಕಿರುವ ನಟಿ ತಾಪ್ಸಿ, “ಯಾರಾದರೂ ಈ ಪ್ರಶ್ನೆಯನ್ನು ಹುಡುಗಿಗೆ ಕೇಳುತ್ತಾರ? ಆಕೆ ತನ್ನ ಅತ್ಯಾಚಾರಿಯನ್ನೇ ಮದುವೆಯಾಗಲು ಬಯಸುತ್ತಾಳೆಯೇ..!? ಅದು ಒಂದು ಪ್ರಶ್ನೆಯೇ..? ಇದು ಒಂದು ಪರಿಹಾರವೋ ಅಥವಾ ಶಿಕ್ಷೆಯೋ? ಇದೊಂದು ಅಸಹ್ಯ” ಎಂದು ಕಿಡಿಕಾರಿದ್ದಾರೆ.

ಇನ್ನೂ ಗಾಯಕ ಸೋನಾ ಮೊಹಾಪಾತ್ರ ಕೂಡ “ಇದು ಅನಾರೋಗ್ಯಕರ ಮತ್ತು ತೀವ್ರವಾಗಿ ಖಂಡಿಸುವಂತಹದ್ದು. ಅತ್ಯಾಚಾರ ಮಾಡಿದ ಆರೋಪಿ ಸಂತ್ರಸ್ತೆಯನ್ನು ಮದುವೆಯಾಗುವುದು ಈ ಹಿಂದೆ ಬಾಲಿವುಡ್‌ನಲ್ಲಿ ತೋರಿಸುತಿದ್ದ ಅಸಹ್ಯಕರ ಪರಿಹಾರವಾಗಿದೆ. ಭಾರತದ ಸುಪ್ರೀಂ ಕೋರ್ಟ್ ಈ ಮಟ್ಟಕ್ಕೆ ಹೇಗೆ ಇಳಿಯಬಹುದು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 8 ಹಂತಗಳಲ್ಲಿ ಪ.ಬಂಗಾಳ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ಇನ್ನು ವಕೀಲರ ಸಂಘಟನೆಯಾದ ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಷನ್ ಫಾರ್‌ ಜಸ್ಟಿಸ್ (AILAJ) ಕೂಡ ನ್ಯಾಯಮೂರ್ತಿಗಳ ನಡೆಯನ್ನು ಖಂಡಿಸಿದ್ದು, ನ್ಯಾಯಾಲಯದ ಘನತೆ ಉಳಿಸಿರಿ ಎಂದಿದ್ದಾರೆ.

2015ರ ಮಧ್ಯಪ್ರದೇಶ ವರ್ಸಸ್ ಮದನ್‌ಲಾಲ್ (7 SCC 681) ಪ್ರಕರಣವನ್ನು ಉಲ್ಲೇಖಿಸಿರುವ ಸಂಘವು “ಅತ್ಯಾಚಾರ ಅಥವಾ ಅತ್ಯಾಚಾರದ ಪ್ರಯತ್ನದಲ್ಲಿ, ಯಾವುದೇ ಸಂದರ್ಭದಲ್ಲೂ ರಾಜಿ ಮಾಡಿಕೊಳ್ಳುವ ಕಲ್ಪನೆಯನ್ನು ನಿಜವಾಗಿಯೂ ಯೋಚಿಸಲಾಗುವುದಿಲ್ಲ” ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಮತ್ತೆ ನೆನಪಿಸಿದೆ. ನ್ಯಾಯಾಲಯಗಳು ಸಂಪೂರ್ಣವಾಗಿ ಉಳಿಯಬೇಕು ಎಂದು ನಾವು ಒತ್ತು ನೀಡುತ್ತೇವೆ ಎಂದಿದೆ.

“ಸಿಜೆಐ ಹೇಳಿಕೆಗಳು ಸಮಾನತೆಯ ಸಾಂವಿಧಾನಿಕ ಖಾತರಿಗೆ ಧಕ್ಕೆ ತರುವಂತಿದೆ. ಮಹಿಳೆಯರನ್ನು ಕಡಿಮೆ ನಾಗರಿಕರ ಸ್ಥಾನಮಾನಕ್ಕೆ ಇಳಿಸಿದೆ. ಇದು ಮಹಿಳೆಯ ಹಕ್ಕಿನ ಸಮಗ್ರ ಉಲ್ಲಂಘನೆಯಾಗಿದೆ. ನಾವು ಸಮಾಜವಾಗಿ, ಅದರ ರೂಪಗಳು ಮತ್ತು ಅನ್ಯಾಯದ ಪ್ರಶ್ನೆಗಳಿಗೆ ಉತ್ತರ ಹುಡುಕಬೇಕು. ನಾವು ಅದನ್ನು ಮಾಡದಿದ್ದಲ್ಲಿ, ನಾವು ಸಮಾಜದ ಅನ್ಯಾಯಗಳಿಗೆ ಕಾರಣವಾಗುತ್ತೇವೆ. ಈ ಹೇಳಿಕೆಗಳಿಂದ, ಸುಪ್ರೀಂ ಕೋರ್ಟ್ ಈ ನಿಖರವಾದ ಅಪಾಯವನ್ನು ಎದುರಿಸುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕುರಿ, ಮೇಕೆಗಳು ಸತ್ತರೆ ಪರಿಹಾರ ನೀಡುವ ‘ಅನುಗ್ರಹ’ ಯೋಜನೆ ಮರುಜಾರಿಗೊಳಿಸಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...